ಧಾರವಾಡ: ಉತ್ತರ ಕರ್ನಾಟಕದಲ್ಲಿ ಜಾತ್ರಾ ಸಂಭ್ರಮವಿದೆ. ಅದರಲ್ಲೂ ಗ್ರಾಮೀಣ ಭಾಗದಲ್ಲಿ ಗ್ರಾಮದೇವಿಯರ ಜಾತ್ರೆಗಳು ಅದ್ಧೂರಿಯಾಗಿ ನಡೆಯುತ್ತಿವೆ. ಧಾರವಾಡದ ತಾಲೂಕಿನ ಯಾದವಾಡ ಗ್ರಾಮದಲ್ಲಿ 21 ವರ್ಷಗಳ ಬಳಿಕ ಜಾತ್ರೆ ನಡೆಯುತ್ತಿದೆ. ಗ್ರಾಮದೇವತೆಗಳ ಜಾತ್ರೋತ್ಸವದ ಸಂಭ್ರಮ ಮನೆಮಾಡಿದ್ದು, ಇಂದು ಬೀದಿಬೀದಿಗಳಲ್ಲಿ ನಡೆದ ಹೊನ್ನಾಟ ಇಡೀ ಗ್ರಾಮವನ್ನೇ ಭಂಡಾರಮಯಗೊಳಿಸಿತು. ಯಾವುದೇ ರೀತಿಯ ಭೇದಭಾವವಿಲ್ಲದೆ ಗ್ರಾಮಸ್ಥರೆಲ್ಲರೂ ಸಡಗರದಲ್ಲಿ ಪಾಲ್ಗೊಂಡು ಗಮನ ಸೆಳೆದರು. 21 ವರ್ಷಗಳ ಗ್ರಾಮದೇವತೆಗಳಾದ ದ್ಯಾಮವ್ವ-ದುರ್ಗವ್ವ ದೇವತೆಗಳ ಜಾತ್ರೆ ನಡೆಯುತ್ತಿರುವುದರಿಂದ ಗ್ರಾಮದಲ್ಲಿ ವಿಶೇಷ ಸಂಭ್ರಮ …
Read More »Monthly Archives: ಮೇ 2025
ಕಾರವಾರ: ಪಹಲ್ಗಾಮ್ ದಾಳಿಗೆ ಮರುಗಿದ ಪುಟಾಣಿಗಳು; ಸ್ಕೇಟಿಂಗ್, ಮೊಂಬತ್ತಿ ಹಿಡಿದು ಶ್ರದ್ಧಾಂಜಲಿ
ಕಾರವಾರ (ಉತ್ತರಕನ್ನಡ): ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಬಲಿಯಾದ ಪ್ರವಾಸಿಗರ ಆತ್ಮಕ್ಕೆ ಶಾಂತಿ ಕೋರಿ ಎರಡು ಗಂಟೆಗಳ ಕಾಲ ನಗರದ ಮಿತ್ರ ಸಮಾಜದ ಆವರಣದಲ್ಲಿ ಭಾನುವಾರ ಪುಟಾಣಿಗಳು ಸ್ಕೇಟಿಂಗ್ ಮಾಡಿದರು. ಹಣಬರ್ ಸ್ಕೇಟಿಂಗ್ ಕ್ಲಬ್ನ ವತಿಯಿಂದ ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಮೃತಪಟ್ಟವರನ್ನು ಸ್ಮರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕ್ಲಬ್ನ ಸುಮಾರು 200 ಮಕ್ಕಳು ಕ್ಯಾಂಡಲ್ ಹಿಡಿದು ಭಾರತದ ಭೂಪಟ ರಚನೆ ಮಾಡಿ, ಅದರ ಸುತ್ತ ಸ್ಕೇಟಿಂಗ್ ಮಾಡುವ ಮೂಲಕ ಮೃತರನ್ನು ಸ್ಮರಿಸಿದರು.ಕಾರ್ಯಕ್ರಮಕ್ಕೆ ಕಾರವಾರ-ಅಂಕೋಲಾ …
Read More »ಸಂಕ್ರಾಂತಿಯವರೆಗೆ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಇಲ್ಲ, ರಾಜಕೀಯ ನಾಯಕರಿಗೆ ಅಪಮೃತ್ಯು : ಕೋಡಿಮಠದ ಶ್ರೀ ಭವಿಷ್ಯ
ಬಾಗಲಕೋಟೆ : ರಾಜ್ಯ ರಾಜಕೀಯದಲ್ಲಿ ಸಂಕ್ರಾಂತಿಯವರೆಗೆ ಯಾವುದೇ ಬದಲಾವಣೆ ಆಗಲ್ಲ. ವಾಯು, ಭೂ, ಜಲ, ಅಗ್ನಿ ಸುನಾಮಿಗಳು ಸಂಭವಿಸಲಿವೆ. ಹಿಮಾಲಯದಲ್ಲಿ ಸುನಾಮಿ ಆಗುತ್ತೆ, ಅಲ್ಲಿಂದ ಅದು ಡೆಲ್ಲಿಗೆ ಬರುತ್ತದೆ. ಜಗತ್ತಿನ ಎರಡು ಮೂರು ಜನ ಮಹಾನ್ ರಾಜಕೀಯ ನಾಯಕರಿಗೆ ಅಪಮೃತ್ಯುವಿದೆ (ಅಕಾಲಿಕ ಸಾವು) ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಅವರು ನವನಗರದ ಸೆಕ್ಟರ್ ನಂಬರ್ 25ರಲ್ಲಿ ಕೃಷಿಯೇತರ ಪತ್ತಿನ ಸಹಕಾರಿ ಸಂಘದ ಬ್ಯಾಂಕಿನ ನೂತನ …
Read More »ರಸ್ತೆಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಖಾಸಗಿ ಕಂಪನಿ ಉದ್ಯೋಗಿ ಬಂಧನ
ಬೆಂಗಳೂರು: ಹಿಂದಿನಿಂದ ದ್ವಿಚಕ್ರ ವಾಹನದಲ್ಲಿ ಬಂದು ರಸ್ತೆಯಲ್ಲಿ ಸಾಗುತ್ತಿದ್ದ ಯುವತಿಯನ್ನು ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಮಾರತ್ ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಕಂಪನಿಯೊಂದರ ಉದ್ಯೋಗಿ ಶ್ರೀಕಾಂತ್ (32) ಬಂಧಿತ ಆರೋಪಿ. ಏಪ್ರಿಲ್ 30ರಂದು ರಾತ್ರಿ 11:30ರ ಸುಮಾರಿಗೆ ಇಕೋ ವರ್ಲ್ಡ್ ಮೇನ್ ಗೇಟ್ ಬಳಿ ಯುವತಿಯನ್ನು ಆರೋಪಿ ಹಿಂದಿನಿಂದ ಸ್ಪರ್ಶಿಸಿದ್ದಾನೆ. ಈ ಕುರಿತು 23 ವರ್ಷದ ಯುವತಿ ನೀಡಿದ್ದ ದೂರಿನನ್ವಯ ಮಾರತ್ ಹಳ್ಳಿ ಠಾಣೆಯಲ್ಲಿ ಪ್ರಕರಣ …
Read More »ನೀಟ್ ಪರೀಕ್ಷೆಯಲ್ಲೂ ಜನಿವಾರ ತೆಗೆಸಿದ ಆರೋಪ: ಕಲಬುರಗಿಯಲ್ಲಿ ರಸ್ತೆಯಲ್ಲೇ ಕುಳಿತು ಆಕ್ರೋಶ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ
ಕಲಬುರಗಿ: ಬೀದರ್ನಲ್ಲಿ ಇತ್ತೀಚೆಗೆ ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗೆ ಜನಿವಾರ ತೆಗೆಸಿದ್ದ ಪ್ರಕರಣ ಮಾಸುವ ಮುನ್ನವೇ ಕಲಬುರಗಿಯಲ್ಲಿ ಅದೇ ರೀತಿಯ ಆರೋಪ ಕೇಳಿಬಂದಿದೆ. ಭಾನುವಾರ ನೀಟ್ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗೆ ಜನಿವಾರ ತೆಗೆಯುವಂತೆ ಹೇಳಲಾಗಿದೆ ಎಂದು ಆರೋಪಿಸಲಾಗಿದೆ. ಬೇಕೇ ಬೇಕು.. ನ್ಯಾಯ ಬೇಕು ಅಂತ ಘೋಷಣೆ ಕೂಗುತ್ತ ನಿಂತಿರೋ ಹಿಂದೂ ಕಾರ್ಯಕರ್ತರು.. ಮತ್ತೊಂದೆಡೆ, ಜನಿವಾರವನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ವಿದ್ಯಾರ್ಥಿಯ ತಂದೆ.. ಈ ದೃಶ್ಯ ಕಂಡು ಬಂದಿದ್ದು …
Read More »ಇಂದಿನಿಂದ ಮೇ 17ರ ವರೆಗೆ ಮನೆ ಮನೆಗೆ ತೆರಳಿ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಸಮೀಕ್ಷೆ ಆರಂಭ
ಬೆಂಗಳೂರು: ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಸಮೀಕ್ಷೆ ಇಂದಿನಿಂದ (ಸೋಮವಾರ) ಆರಂಭವಾಗಲಿದೆ. ಮೇ 17ರ ವರೆಗೆ ಮನೆ ಮನೆಗೆ ತೆರಳಿ ಸರ್ಕಾರಿ ಶಾಲಾ ಶಿಕ್ಷಕರು ಸಮೀಕ್ಷೆ ಕಾರ್ಯ ನಡೆಸಲಿದ್ದಾರೆ. ರಾಜ್ಯಾದ್ಯಂತ ಸುಮಾರು 58,960 ಗಣತಿದಾರರು (Enumerators) ಸಮೀಕ್ಷೆ ಕಾರ್ಯ ನಡೆಸಲಿದ್ದಾರೆ. ಸುಮಾರು 6,000 ಸೂಪರ್ ವೈಸರ್ಸ್ ಗಳನ್ನು ನಿಯೋಜಿಸಲಾಗಿದೆ. ಇವರು ಸಮೀಕ್ಷೆಯ ಮೇಲೆ ನಿಗಾ ವಹಿಸಲಿದ್ದಾರೆ. ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಒಟ್ಟು 101 ಜಾತಿಗಳಿವೆ. ಈ ಪೈಕಿ ಆದಿ ಕರ್ನಾಟಕ, ಆದಿ …
Read More »ಗೋವಾಕ್ಕೆ ಹೆದರಿ ಮೋದಿಯವರು ಮಹದಾಯಿಗೆ ಅನುಮತಿ ಕೊಡಿಸುತ್ತಿಲ್ಲ
ಹುಬ್ಬಳ್ಳಿ: ಗೋವಾ ರಾಜ್ಯಕ್ಕೆ ಹೆದರಿಕೊಂಡು ಪ್ರಧಾನಮಂತ್ರಿ ನರೇಂದ್ರ ಮೋದಿ ಮಹದಾಯಿಗೆ ಅನುಮತಿ ಕೊಡಿಸುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಗಂಭೀರ ಆರೋಪ ಮಾಡಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆ.ಪಿ.ಎಸ್.ಸಿ ಯಲ್ಲಿ ಅವ್ಯವಸ್ಥೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆಗೆ ಸಿಡಿಮಿಡಿಗೊಂಡ ಸಿಎಂ, ಪ್ರಲ್ಹಾದ್ ಜೋಶಿ ಮೊದಲು ಮಹದಾಯಿ ಬಗ್ಗೆ ಮಾತಾಡಲಿ ಎಂದು ಕಿಡಿಕಾರಿದರು. ಮಹದಾಯಿ ಯೋಜನೆಗೆ ಎನ್ವಿರಾನ್ಮೆಂಟ್ ಕ್ಲಿಯರೆನ್ಸ್ ಯಾಕೆ ಕೊಡಿಸ್ತಿಲ್ಲಾ..? ಗೋವಾಕ್ಕೆ …
Read More »ಕಲುಷಿತ ನೀರು ಪೂರೈಸುವ ಸ್ಥಳೀಯ ಸಂಸ್ಥೆಗೆ ನೋಟಿಸ್ – ಖಂಡ್ರೆ
ದಾವಣಗೆರೆ : ಪ್ರಸಕ್ತ ವರ್ಷದ ಮುಂಗಾರಿನಲ್ಲಿ ಅರಣ್ಯ ಇಲಾಖೆ ನಡೆಸುವ ವನಮಹೋತ್ಸವದಲ್ಲಿ ರಸ್ತೆಯ ಬದಿಗಳಲ್ಲಿ ಎತ್ತರದ ಸಸಿಗಳನ್ನು ನೆಡಲು ಆದ್ಯತೆ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ದಾವಣಗೆರೆಯಲ್ಲಿಂದು ಅರಣ್ಯ ಮತ್ತು ಪರಿಸರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದ ಸಚಿವರು, ಎತ್ತರದ ಸಸಿಗಳನ್ನು ನೆಟ್ಟರೆ, ಅವು ಬದುಕುಳಿಯುವ ಸಾಧ್ಯತೆ ಹೆಚ್ಚಿರುತ್ತದೆ. ಇದು ಹಸಿರು ವಲಯ ಹೆಚ್ಚಳಕ್ಕೆ …
Read More »ಸಚಿವ ಶರಣಪ್ರಕಾಶ್ ಪಾಟೀಲ್, ಕಾಂಗ್ರೆಸ್ ಮುಖಂಡನ ನಡುವೆ ಮಾತಿನ ಚಕಮಕಿ
ರಾಯಚೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹಾಗೂ ಕಾಂಗ್ರೆಸ್ ಮುಖಂಡನ ನಡುವೆ ಲಿಂಗಸುಗೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ತೀವ್ರ ವಾಗ್ವಾದ ನಡೆದಿದೆ. ಮಾನವಿ ತಾಲೂಕಿನ ಉಟಕನೂರು ಗ್ರಾಮದಲ್ಲಿನ ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳುವ ಮಾರ್ಗಮಧ್ಯೆ ಲಿಂಗಸುಗೂರು ಪಟ್ಟಣದ ಪ್ರವಾಸ ಮಂದಿರದಲ್ಲಿ ಕೆಲ ಮುಖಂಡರೊಂದಿಗೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಂಗಿದ್ದರು. ಈ ವೇಳೆ ಕಾಂಗ್ರೆಸ್ ಮುಖಂಡ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ನಾಮನಿರ್ದೇಶನ ಸದಸ್ಯ ಗದ್ದೆನಗೌಡ ಪಾಟೀಲ್ ನಡುವೆ ಮಾತಿನ …
Read More »ಹುಬ್ಬಳ್ಳಿಯ ಬಾಲಕಿ ಅತ್ಯಾಚಾರ ಪ್ರಕರಣ: ಎನ್ಕೌಂಟರ್ಗೆ ಬಲಿಯಾದ ಆರೋಪಿಯ ಅಂತ್ಯಸಂಸ್ಕಾರ
ಹುಬ್ಬಳ್ಳಿ: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನಕ್ಕೆ ಮುಂದಾಗಿ ಬಳಿಕ ಹತ್ಯೆಗೈದು ಪೊಲೀಸ್ ಎನ್ಕೌಂಟರ್ಗೆ ಬಲಿಯಾದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಅಂತ್ಯಸಂಸ್ಕಾರ ಇಂದು ನಡೆಯಿತು. ಸಿಐಡಿ ಎಸ್ಪಿ ವೆಂಕಟೇಶ ಎನ್ ಸಮ್ಮುಖದಲ್ಲಿ ಬಿಡನಾಳ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನಡೆದಿದ್ದು, ಸಿಐಡಿ ಅಧಿಕಾರಿಗಳು ವಿಡಿಯೋ ರೆಕಾರ್ಡ್ ಮಾಡಿಕೊಂಡರು. ಏ. 13ರಂದು ರಿತೇಶ್ ಕುಮಾರ್ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಬಳಿಕ ಆಕೆಯನ್ನು ನಿರ್ಮಾಣ ಹಂತದ ಕಟ್ಟಡದ …
Read More »