ಬೆಂಗಳೂರು: ವೈದ್ಯಕೀಯ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವತಿಯಿಂದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್-ಯುಜಿ) ಭಾನುವಾರ ನಡೆಯಲಿದ್ದು, ಈ ಸಂಬಂಧ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆ ವಿಧಿಸಿ ಹೊರಡಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಒಟ್ಟು 65 ಪರೀಕ್ಷಾ ಕೇಂದ್ರಗಳಲ್ಲಿ ನೀಟ್ ಪರೀಕ್ಷೆ ನಡೆಯಲಿದೆ. ದೋಷರಹಿತ ಹಾಗೂ ಸುಸೂತ್ರವಾಗಿ ಪರೀಕ್ಷೆ ನಡೆಸುವ ದೃಷ್ಟಿಯಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್ಎಸ್ಎಸ್) ಕಲಂ 163ರಡಿ ಪರೀಕ್ಷಾ ಕೇಂದ್ರಗಳ …
Read More »Monthly Archives: ಮೇ 2025
ಕೆಎಸ್ಆರ್ಟಿಸಿ ಬಸ್ -ಆಟೋ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು
ನೆಲಮಂಗಲ (ಬೆಂಗಳೂರು ಗ್ರಾಮಾಂತರ) : ಕೆಎಸ್ಆರ್ಟಿಸಿ ಬಸ್ ಮತ್ತು ಆಟೋ ನಡುವಿನ ಭೀಕರ ಅಪಘಾತದಿಂದ ಆಟೋದಲ್ಲಿದ್ದ 6 ಜನರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನೆಲಮಂಗದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 75 ಕುಣಿಗಲ್ ರಸ್ತೆಯ ನೆಲಮಂಗಲದ ಮಲ್ಲರಬಾಣವಾಡಿ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ತಾಲ್ಲೂಕಿನ ಶಾಂತಿನಗರ ನಿವಾಸಿ ಹಾಗೂ ಆಟೋ ಚಾಲಕ ಶ್ರೀನಿವಾಸ್ (45), ಪುಟ್ಟಮ್ಮ (55), 13 ವರ್ಷದ ಬಾಲಕಿ ಮೃತರು. …
Read More »ಆರ್ಸಿಬಿ – ಸಿಎಸ್ಕೆ ಪಂದ್ಯ: 1200 ರೂ. ಮುಖಬೆಲೆಯ ಟಿಕೆಟ್ ₹12 ಸಾವಿರಕ್ಕೆ ಮಾರಾಟ, ನಾಲ್ವರ ಬಂಧನ
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂದಿನ ಆರ್ಸಿಬಿ ಹಾಗೂ ಸಿಎಸ್ಕೆ ನಡುವಿನ ಜಿದ್ದಾಜಿದ್ದಿನ ಪಂದ್ಯಕ್ಕೆ ಕಾಳಸಂತೆಯಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಚರಣ್ ರಾಜ್, ಹರ್ಷವರ್ಧನ್, ವಿನಯ್ ಹಾಗೂ ವೆಂಕಟಸ್ವಾಮಿ ಎಂಬುವರನ್ನು ಬಂಧಿಸಿ 38,400 ಮೌಲ್ಯದ 32 ಐಪಿಎಲ್ ಟಿಕೆಟ್ಗಳು ಹಾಗೂ ನಾಲ್ಕು ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.ಯಶವಂತಪುರದಲ್ಲಿ ಚರಣ್ ರಾಜ್ ಹಾಗೂ ಇನ್ನಿತರ ಆರೋಪಿಗಳು ಮಿಲ್ಲರ್ ರಸ್ತೆಯಲ್ಲಿ ಟಿಕೆಟ್ಗಳನ್ನು ಮಾರಾಟ …
Read More »ನಿಮಗೆ ವಾಹನ, ಸಿಬ್ಬಂದಿ ಅಗತ್ಯವಿದ್ದರೆ ಕೊಡ್ತೇವೆ: ಆದರೆ, ತೆರಿಗೆ ಸಂಗ್ರಹ ಗುರಿ ಮುಟ್ಟಲೇಬೇಕು – ಸಿಎಂ
ಬೆಂಗಳೂರು: ನಿಮಗೆ ವಾಹನ, ಸಿಬ್ಬಂದಿ ಅಗತ್ಯವಿದ್ದರೆ ಕೊಡುತ್ತೇವೆ. ಆದರೆ, ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗಬಾರದು ಎಂದು ಸಿಎಂ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ. ಶನಿವಾರ ಬ್ಯಾಂಕ್ವೆಂಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್ಥಿಕ ಇಲಾಖೆ ವತಿಯಿಂದ ಹೊಸ ವಾಹನಗಳಿಗೆ ಚಾಲನೆ ನೀಡಿ, ಅನುಕಂಪ ಆಧಾರಿತ ನೇಮಕಾತಿ ಆದೇಶ ವಿತರಿಸಿ ಮಾತನಾಡಿದ ಅವರು, ವೇತನ ಆಯೋಗ ಶಿಫಾರಸು ಮಾಡಿದ ವೇತನದಲ್ಲಿ ನಯಾಪೈಸೆ ಚೌಕಾಸಿ ಮಾಡದೇ ಅಷ್ಟೂ ವೇತನ ನೀಡಿದ್ದೇವೆ. ಸರ್ಕಾರಿ ನೌಕರರಿಂದಲೂ …
Read More »ಕಿತ್ತೂರು ಚೆನ್ನಮ್ಮ ಮೃಗಾಲಯಕ್ಕೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಭೇಟಿ
ಕಿತ್ತೂರು ಚೆನ್ನಮ್ಮ ಮೃಗಾಲಯಕ್ಕೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಭೇಟಿ * ನಿತ್ಯ ಹೆಸರಿನ ಹೆಣ್ಣು ಹುಲಿ-ಬೃಂಗಾ ಹೆಸರಿನ ಹೆಣ್ಣು ಸಿಂಹಿಣಿಯನ್ನು ಪ್ರಾಣಿ ಸಂಗ್ರಹಾಲಯಕ್ಕೆ ಬಿಡುಗಡೆ ಮಾಡಿದ ಸಂಸದೆ ಬೆಳಗಾವಿ: ಭುತರಾಮನಹಟ್ಟಿಯ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿರುವ ನಿತ್ಯ ಹೆಸರಿನ ಹೆಣ್ಣು ಹುಲಿ ಮತ್ತು ಬೃಂಗಾ ಹೆಸರಿನ ಹೆಣ್ಣು ಸಿಂಹಿಣಿಯನ್ನು ಸಂಸದೆ ಪ್ರಿಯಂಕಾ ಜಾರಕಿಹೊಳಿ ಪ್ರಾಣಿ ಸಂಗ್ರಹಾಲಯಕ್ಕೆ ಬಿಡುಗಡೆ ಮಾಡಿದರು. ಇತ್ತೀಚಿಗೆ ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ‘ನಿರುಪಮಾ’ ಎಂಬ …
Read More »5 ಲಕ್ಷ ರೂ ಪರಿಹಾರ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
5 ಲಕ್ಷ ರೂ ಪರಿಹಾರ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ : ಇತ್ತೀಚೆಗೆ ಸಿಡಿಲು ಬಡಿದು ಮೃತಪಟ್ಟ ಬಾಲಕಿಯ ಕುಟುಂಬಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 5 ಲಕ್ಷ ರೂ. ಪರಿಹಾರ ವಿತರಿಸಿದರು. ಖನಗಾಂವ ಬಿಕೆ ಗ್ರಾಮದ ಬಾಲಕಿ ಅಕ್ಸಾ ಜಮಾದಾರ್ ಸಿಡಿಲು ಬಡಿತದಿಂದ ಇತ್ತೀಚಿಗೆ ಮೃತಪಟ್ಟಿದ್ದಳು. ಈ ಹಿನ್ನೆಲೆಯಲ್ಲಿ ಇಂದು ಮೃತ ಬಾಲಕಿಯ ಮನೆಗೆ ಭೇಟಿ ನೀಡಿದ ಸಚಿವರು, ಅವಳ ತಂದೆ-ತಾಯಿ, ಕುಟುಂಬದ …
Read More »ಲೋಕಮಾತೆ ಅಹಿಲ್ಯಾಬಾಯಿ ಹೊಳ್ಕರ್ ಅವರ ಪುಸ್ತಕ ಬಿಡುಗಡೆ
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ಉತ್ತರ ವತಿಯಿಂದ ಬೆಳಗಾವಿಯ ಅಂಗಡಿ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಲೋಕಮಾತೆ ಅಹಿಲ್ಯಾಬಾಯಿ ಹೊಳ್ಕರ್ ಅವರ ಪುಸ್ತಕ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಎಬಿವಿಪಿ ರಾಷ್ಟೀಯ ಉಪಾಧ್ಯಕ್ಷರಾದ ಪ್ರೊ.ಮಂದಾರ ಭಾನುಷೆ ಹಾಗೂ ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀಮತಿ ಶುಭಾ ಬಿ ಅವರು ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಪುಸ್ತಕ ಪರಿಚಯವನ್ನು ಪುಸ್ತಕದ ಅನುವಾದಕರಾದ ಶ್ರೀ ಬೇಳೂರು ಸುದರ್ಶನ ಅವರು ಮಾಡಿದರು. ಎಬಿವಿಪಿ ಕರ್ನಾಟಕ ಉತ್ತರ ಪ್ರಾಂತ …
Read More »ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಝಳಪಿಸಿದ ಇಬ್ಬರು ಯುವಕರು ಅಂದರ್… ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಝಳಪಿಸಿದ ಇಬ್ಬರು ಯುವಕರು
ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಝಳಪಿಸಿದ ಇಬ್ಬರು ಯುವಕರು ಅಂದರ್… ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಝಳಪಿಸಿದ ಇಬ್ಬರು ಯುವಕರು ಇಬ್ಬರನ್ನು ವಶಕ್ಕೆ ಪಡೆದ ಯಮಕನಮರ್ಡಿ ಪೊಲೀಸರು ಶಾಂತಿಭಂಗಕ್ಕೆ ಯತ್ನಿಸಿದ ಆರೋಪ ಯಮಕನಮರ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರಗಳನ್ನು ಝಳಪಿಸಿ ಶಾಂತಿಭಂಗಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಯಮಕನಮರ್ಡಿ ಪೊಲೀಸರು ಬಂಧಿಸಿದ್ದಾರೆ. ಯಮಕನಮರ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಿಕ್ಕಲದಿನ್ನಿ ಗ್ರಾಮದ ಹಾಲಪ್ಪ ಕಾಟಾಬಳಿ ಮತ್ತು ನಾಗರಾಜ್ ಕಾಟಾಬಳಿ ಹುಕ್ಕೇರಿಯ ಶಹಾಬಂದರ ಕ್ರಾಸ್ …
Read More »ವಿಜಯಪುರದಲ್ಲಿ ಯತ್ನಾಳಗೆ ತಕ್ಕ ಪಾಠ ಕಲಿಸ್ತೇವೆ; ಕಾಶಪ್ಪನವರ ತಿರುಗೇಟು…
ತಾಕತ್ ಇದ್ರೆ ಹುನಗುಂದಕ್ಕೆ ಬರ್ಲಿ, ನಾನೇನು ಅಂತ ತೋರಸ್ತೀನಿ… ವಿಜಯಪುರದಲ್ಲಿ ಯತ್ನಾಳಗೆ ತಕ್ಕ ಪಾಠ ಕಲಿಸ್ತೇವೆ; ಕಾಶಪ್ಪನವರ ತಿರುಗೇಟು… ನಾನು ಬರ್ತಿನೋ, ಸಚಿವ ಶಿವಾನಂದ ಪಾಟೀಲ ಬರ್ತಾರೋ, ಒಟ್ಟಾರೆ ಯತ್ನಾಳಗೆ ವಿಜಯಪುರದಲ್ಲೇ ತಕ್ಕಪಾಠ ಕಲಿಸ್ತೀವಿ, ಕಾಯ್ದು ನೋಡಿ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ತಿರುಗೇಟು ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಇಳಕಲ್ಲ ಪಟ್ಟಣದಲ್ಲಿ ಶುಕ್ರವಾರ ಮಾಧ್ಯಮಗಾರರೊಂದಿಗೆ ಅವರು ಮಾತನಾಡಿದರು. ತಾಕತ್ ಇದ್ರೆ ಹುನಗುಂದಕ್ಕೆ ಬರ್ಲಿ, ನಾನೇನು ಅಂತ ತೋರಸ್ತೀನಿ. ಈಗಾಗಲೇ …
Read More »ಹಜ್ ಯಾತ್ರೆಗೆ ತೆರಳುತ್ತಿರುವ ಮುಸ್ಲಿಂ ಬಾಂಧವರನ್ನು ಶುಭ ಹಾರೈಸಿ ಬೀಳ್ಕೊಟ್ಟ ಪಿಎಸ್ಐ ಹಾಗೂ ವಿವಿಧ ಮುಖಂಡರು
ಖಾನಾಪೂರ : ಹಜ್ ಯಾತ್ರೆಗೆ ತೆರಳುತ್ತಿರುವ ಮುಸ್ಲಿಂ ಬಾಂಧವರನ್ನು ಶುಭ ಹಾರೈಸಿ ಬೀಳ್ಕೊಟ್ಟ ಪಿಎಸ್ಐ ಹಾಗೂ ವಿವಿಧ ಮುಖಂಡರು ಹೌದು ಶಾಂತಿ ಸೌಹಾರ್ದತೆ ಮತ್ತು ನಮ್ಮ ದೇಶದ ಭಾವೈಕ್ಯತೆಯ ಬಗ್ಗೆ ಬೇಡಿಕೊಂಡು ಜನರಲ್ಲಿ ಪ್ರೀತಿ ಪ್ರೇಮದಿಂದ ಜೀವನ ಸಾಗಿಸಲು ಆ ಅಲ್ಲಾಹನ ಬಳಿ ಬೇಡಿಕೊಂಡು ಬನ್ನಿ ಎಂದು ನಂದಗಡ ಪೋಲಿಸ್ ಠಾಣೆಯ ಪಿಎಸ್ಐ ಬಾದಾಮಿ ಅವರು ಹಜ್ ಯಾತ್ರೆಗೆ ತೆರಳಿದ ಮುಸ್ಲಿಂ ಬಂಧು, ಸಹೋದರಿಯರಲ್ಲಿ ಕೇಳಿಕೊಂಡರು ನಂದಗಡದ ಗ್ರಾಮ ಪಂಚಾಯಿತಿ …
Read More »