Breaking News

Monthly Archives: ಮೇ 2025

ಪೊಲೀಸರ ಮೇಲೆ ಹಲ್ಲೆಗೈದ ಆರೋಪಿ ಕಾಲಿಗೆ ಗುಂಡೇಟು

ಬೀದರ್​: ನಗರದ ಓಲ್ಡ್​​​​ ಆದರ್ಶ ಕಾಲೋನಿಯಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ವೇಳೆ ಹಲ್ಲೆ ನಡೆಸಿದ ಓರ್ವನ ಕಾಲಿಗೆ ಪೊಲೀಸರು ಗುಂಡು ಹಾರಿಸಿ​ ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಪೊಲೀಸ್​ ಸಿಬ್ಬಂದಿಗೂ ಗಾಯಗಳಾಗಿದೆ. ಮಹಾರಾಷ್ಟ್ರದ ಬೀಡ್​ ಜಿಲ್ಲೆಯ ಪರಳಿಯ ಕರ್ತಾರ್‍ಸಿಂಗ್​​​, ಆತನ ಸಹೋದರನಾದ ಬೀದರ್​​​ ನಿವಾಸಿ ಜಗಜೀತ್‍ಸಿಂಗ್​ ಹಾಗೂ ಪುಣೆಯ ಅಕ್ಷಯ ಬಂಧಿತರು. ಇಲ್ಲಿನ ಓಲ್ಡ್​ ಆದರ್ಶ ಬಡಾವಣೆಯಲ್ಲಿ ಏಪ್ರಿಲ್​ 26ರಂದು ಬೆಳಗ್ಗಿನಜಾವ ಮನೆ ಕಳ್ಳತನ …

Read More »

ಹೆಬ್ಬಾಳ್ಕರ್​ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪ: ಸಿ.ಟಿ ರವಿಗೆ ಹೈಕೋರ್ಟ್​ನಲ್ಲಿ ಹಿನ್ನಡೆ

ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ ಕಾಂಗ್ರೆಸ್​ ಪಕ್ಷದ ಶಾಸಕಿ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಅವರ ವಿರುದ್ಧ ಅವಹೇಳನಾಕಾರಿ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ವಿಧಾನ ಪರಿಷತ್​ ಸದಸ್ಯ ಸಿ.ಟಿ.ರವಿ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್​ ನಿರಾಕರಿಸಿದೆ. ಈ ಆದೇಶದಿಂದಾಗಿ ಸಿ.ಟಿ. ರವಿ ಅವರಿಗೆ ಹಿನ್ನಡೆಯಾಗಿದ್ದು, ಇದೀಗ ಪ್ರಕರಣದ ವಿಚಾರಣೆ ಎದುರಿಸುವ ಅನಿವಾರ್ಯತೆ ಉಂಟಾಗಿದೆ. ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಕೋರಿ …

Read More »

ಲವ್ವರ್ ಜೊತೆ ಸಿಕ್ಕಿಬಿದ್ದ ಪತ್ನಿ – ಸಿಟ್ಟಿಗೆದ್ದ ಪತಿಯಿಂದ ಡಬಲ್ ಮರ್ಡರ್

ಕಲಬುರಗಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಪತ್ನಿಯು ಪರ ಪುರುಷನೊಂದಿಗೆ ಒಟ್ಟಿಗೆ ಇದ್ದುದನ್ನು ಕಣ್ಣಾರೆ ಕಂಡ ಪತಿ ಮಾರಕಾಸ್ತ್ರಗಳಿಂದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಚ್ಚಿ ಕೊಂದಿರುವ ಘಟನೆ ಕಲಬುರಗಿಯ (Kalaburagi) ಆಳಂದ ತಾಲೂಕಿನ ಮಾದನಹಿಪ್ಪರಗಾ (Madanahipparaga) ಗ್ರಾಮದಲ್ಲಿ ನಡೆದಿದೆ.ಸೃಷ್ಟಿ(22), ಖಾಜಪ್ಪ(23) ಮೃತರು. ಆರೋಪಿ ಶ್ರೀಮಂತ ಕೊಲೆ ಮಾಡಿ, ಮಾದನಹಿಪ್ಪರಗಾ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.  2 ವರ್ಷಗಳ ಹಿಂದೆ ಸೃಷ್ಟಿಯು ಶ್ರೀಮಂತನನ್ನು ಮದುವೆಯಾಗಿದ್ದಳು. ಗುರುವಾರ ಊರಿಗೆ ತೆರಳಿದ್ದ ಶ್ರೀಮಂತ, ರಾತ್ರಿ …

Read More »

114 ಹಳ್ಳಿ, 140 ಮಂದಿರ ಜೀರ್ಣೋದ್ಧಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದಲ್ಲಿ 114 ಹಳ್ಳಿಗಳಿದ್ದು ಇವುಗಳಲ್ಲಿ 140 ಮಂದಿರಗಳನ್ನು ಕಳೆದ 7 ವರ್ಷದಲ್ಲಿ ಜೀರ್ಣೋದ್ಧಾರ ಮಾಡಲಾಗಿದೆ ಎಂದು ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ತುರಮುರಿ ಗ್ರಾಮದಲ್ಲಿ ಶುಕ್ರವಾರ ನೂತನ ಶ್ರೀ ಜ್ಯೋತಿರ್ಲಿಂಗ ಮಂದಿರದ ವಾಸ್ತುಶಾಂತಿ, ಮೂರ್ತಿ ಪ್ರತಿಷ್ಟಾಪನೆ ಮತ್ತು ಕಳಸಾರೋಹಣ ಸೋಹಳಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಯಾವುದೇ ಜಾತಿ, ಭಾಷೆ, ಧರ್ಮ …

Read More »

ಕಾಂಗ್ರೆಸ್‍ನವರು ಪಾಕಿಸ್ತಾನದಲ್ಲಿ ಹೀರೋಗಳಾಗಿದ್ದಾರೆ:ಜೋಶಿ

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಯನ್ನು ಪಾಕಿಸ್ತಾನದಲ್ಲಿ ಸಂಭ್ರಮಿಸಿದ್ದಾರೆ. ದೇಶದ ಭದ್ರತೆಯ ವಿಚಾರದಲ್ಲಿ ಹೇಳಿಕೆ ನೀಡಿದ ಕಾಂಗ್ರೆಸ್‍ನವರೆಲ್ಲ ಪಾಕಿಸ್ತಾನದಲ್ಲಿ ಹೀರೋ ಆಗಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಸ್ವಲ್ಪವಾದರೂ ಮರ್ಯಾದೆ ಬೇಡವೇ? ಎಂದು ಕೇಂದ್ರ ಸಚಿವ ಪ್ರಲ್ಹಾದ್ ‌ಜೋಶಿ ಟೀಕಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ್ ಜಿಂದಾಬಾದ್ ಎನ್ನಲು ನೂರಾರು ಕಾರಣ ಎಂದು ರಾಜ್ಯದ ಸಚಿವರು ಹೇಳುತ್ತಾರೆ. ಇದು ದೇಶದ್ರೋಹ ಅಲ್ಲವೇ? ನೀವು ಯಾರನ್ನು ಬೆಂಬಲಿಸುತ್ತಿದ್ದೀರಿ? ಎಂದು ಅವರು ಪ್ರಶ್ನಿಸಿದರು. ಕರ್ನಾಟಕದಲ್ಲಿ ಹಾಲಿನಿಂದ ಆಲ್ಕೋಹಾಲ್​ವರೆಗೆ …

Read More »

SSLC: ಆರ್ ಟಿಇಯಡಿ ಸೀಟು ಪಡೆದ ಶೇ 75ರಷ್ಟು ವಿದ್ಯಾರ್ಥಿಗಳು ಪಾಸ್; 50 ವಿದ್ಯಾರ್ಥಿಗಳಿಗೆ 620ಕ್ಕಿಂತ ಹೆಚ್ಚು ಮಾರ್ಕ್ಸ್ – SSLC RESULT 2025

ಬೆಂಗಳೂರು: ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009ರಡಿ (ಆರ್​ಟಿಇ) ಮೊದಲ ಬಾರಿಗೆ ಎಸ್​ಎಸ್​ಎಲ್​ಸಿಯಲ್ಲಿ ಪರೀಕ್ಷೆ ಎದುರಿಸಿದ್ದ ವಿದ್ಯಾರ್ಥಿಗಳ ಪೈಕಿ ಶೇ.75ರಷ್ಟು ಮಂದಿ ಉತ್ತೀರ್ಣರಾಗಿದ್ಧಾರೆ. 25,453 ವಿದ್ಯಾರ್ಥಿಗಳ ಪೈಕಿ 19,235 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 2009ರಲ್ಲಿ ಆರ್​ಟಿಇ ಕಾಯ್ದೆ ಬಂದಿತ್ತು. 2013-14ನೇ ಶೈಕ್ಷಣಿಕ ಸಾಲಿನಲ್ಲಿ ಎಲ್​ಕೆಜಿ ಅಥವಾ 1ನೇ ತರಗತಿಗೆ ಕಾಯ್ದೆಯಡಿ ಖಾಸಗಿ ಅನುದಾನಿತ ಶಾಲೆಗಳಲ್ಲಿ ಶೇ.25ರಷ್ಟು ದಾಖಲಾತಿ ಪಡೆದಿದ್ದ ವಿದ್ಯಾರ್ಥಿಗಳು ಮೊದಲ ಬಾರಿ ಈ ಬಾರಿ ಪರೀಕ್ಷೆ ಎದುರಿಸಿದ್ದರು. ಉತ್ತೀರ್ಣರಾದ 19,235 ವಿದ್ಯಾರ್ಥಿಗಳ ಪೈಕಿ …

Read More »

ಹಣಕಾಸು ವಿಚಾರಕ್ಕಾಗಿ ವೈಷಮ್ಯ: ನೈಜೀರಿಯಾ ಯುವತಿ ಹತ್ಯೆಗೈದ ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಹಣಕಾಸಿನ ವಿಚಾರಕ್ಕಾಗಿ ವಿದೇಶಿ ಯುವತಿಯನ್ನು ಕೊಲೆಗೈದ ಆರೋಪದಡಿ ಘಾನಾ ದೇಶದ ಪ್ರಜೆಯನ್ನ ಚಿಕ್ಕಜಾಲ ಠಾಣೆ ಪೊಲೀಸರು ಸೆರೆಹಿಡಿದಿದ್ದಾರೆ. ನೈಜೀರಿಯಾ ಮೂಲದ ಲೋವಿತ್ (28) ಎಂಬ ಯುವತಿಯನ್ನು ಹತ್ಯೆಗೈದ ಆರೋಪದಡಿ ಸ್ಯಾಮನ್ಸ್ ಬಪುಂಗಾ ಎಂಬಾತನನ್ನ ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ. ಏ.30ರಂದು ಬೆಟ್ಟಹಲಸೂರು ಮುಖ್ಯರಸ್ತೆಯ ತರಹುಣಸೆ ಗ್ರಾಮದ ನಿರ್ಜನ ಪ್ರದೇಶದಲ್ಲಿ ಯುವತಿ ಶವ ಪತ್ತೆಯಾಗಿತ್ತು. ಹತ್ಯೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು, ಆರೋಪಿಯನ್ನ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಗರದ …

Read More »

ದಶಕಗಳ ಬಳಿಕ ಗೋಲಿಸೋಡಕ್ಕೆ ಮತ್ತೆ ಡಿಮ್ಯಾಂಡ್

ಮಂಗಳೂರು: ಮೂರು ದಶಕಗಳ ಹಿಂದೆ ತಂಪು ಪಾನೀಯ ಎಂದರೆ ಅದು ಗೋಲಿಸೋಡ. ಸ್ಥಳೀಯವಾಗಿ ತಯಾರಾಗುತ್ತಿದ್ದ ಗೋಲಿಸೋಡಕ್ಕೆ ವಿಪರೀತ ಡಿಮ್ಯಾಂಡ್ ಇತ್ತು. ಆಗಿನ ಕಾಲದ ಗೋಲಿಸೋಡ ಕ್ರಮೇಣ ನೇಪಥ್ಯಕ್ಕೆ ಸರಿದಿತ್ತು. ಆದರೆ ಮೂರು ದಶಕಗಳ ಬಳಿಕ ಮತ್ತೆ ಈ ಗೋಲಿಸೋಡಕ್ಕೆ ಡಿಮ್ಯಾಂಡ್ ಬಂದಿದೆ. ಮೂರು ಫ್ಲೇವರ್​ಗಳಾದ ಆರೆಂಜ್, ಜಿಂಜರ್ ಮತ್ತು ಸಪ್ಪೆಯಲ್ಲಿ ಇರುತ್ತಿದ್ದ ಗೋಲಿಸೋಡಕ್ಕೆ ಕ್ರಮೇಣ ಬೇಡಿಕೆ ಕಡಿಮೆಯಾಗುತ್ತಾ ಬಂತು. ವಿವಿಧ ಕಂಪೆನಿಗಳ ತಂಪು ಪಾನೀಯಗಳು ಮಾರುಕಟ್ಟೆಗೆ ಬರುತ್ತಿದ್ದಂತೆ ಗೋಲಿಸೋಡಕ್ಕೆ ಬೇಡಿಕೆ ಕಡಿಮೆಯಾಯಿತು. …

Read More »

ಶಿರಸಿಯ ಸರ್ಕಾರಿ ಉರ್ದು ಶಾಲೆಯ ವಿದ್ಯಾರ್ಥಿನಿಗೆ SSLC ಪರೀಕ್ಷೆಯಲ್ಲಿ 625 ಅಂಕ

ಶಿರಸಿ(ಉತ್ತರ ಕನ್ನಡ): ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟಗೊಂಡಿದ್ದು, ಶಿರಸಿಯ ಸರ್ಕಾರಿ ಉರ್ದು ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ಶಗುಫ್ತಾ ಅಂಜುಮ್ ಪೂರ್ಣಾಂಕ (625) ಪಡೆದು ವಿಶೇಷ ಸಾಧನೆ ತೋರಿದ್ದಾರೆ. ಒಟ್ಟು ಫಲಿತಾಂಶದಲ್ಲಿ ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲೆ ರಾಜ್ಯದಲ್ಲಿ 7ನೇ ಸ್ಥಾನ ಪಡೆದುಕೊಂಡಿದೆ. ಬಿಹಾರ ಮೂಲದ ಶಗುಫ್ತಾ ಐದು ವರ್ಷಗಳಿಂದ ಶಿರಸಿಯ ಸರ್ಕಾರಿ ಉರ್ದು ಶಿಕ್ಷಣ ಸಂಸ್ಥೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಈಕೆ ಬಿಹಾರದಲ್ಲಿ ಮೌಲ್ವಿಯಾಗಿ ಕಾರ್ಯನಿರ್ವಹಿಸಿದ್ದ ಮೌಲಾನಾ ಅವರ …

Read More »

ಸುಹಾಸ್ ಶೆಟ್ಟಿ ಅಂತ್ಯಕ್ರಿಯೆಯಲ್ಲಿ ವಿಜಯೇಂದ್ರ, ಆರ್ ಅಶೋಕ್ ಭಾಗಿ; ಬಿಜೆಪಿಯಿಂದ 25 ಲಕ್ಷ ರೂ ಪರಿಹಾರ ಘೋಷಣೆ

ಬಂಟ್ವಾಳ (ದ.ಕ): ದುಷ್ಕರ್ಮಿಗಳ ದಾಳಿಯಿಂದ ಹತ್ಯೆಗೊಳಗಾದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಅಂತ್ಯಕ್ರಿಯೆ ಕಾರಿಂಜದಲ್ಲಿ ಶುಕ್ರವಾರ ಸಂಜೆ ನಡೆಯಿತು. ಅದಕ್ಕೂ ಮುನ್ನ ಅವರ ಅಂತಿಮ ಯಾತ್ರೆಯನ್ನು ನಡೆಸಲಾಯಿತು. ಮಂಗಳೂರಿನ ಆಸ್ಪತ್ರೆಯಿಂದ ಕಾರಿಂಜದವರೆಗೆ ನಡೆದ ಅಂತಿಮ ಯಾತ್ರೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು. ಬಜರಂಗದಳದ ಆಂಬ್ಯುಲೆನ್ಸ್​ನಲ್ಲಿ ಅವರ ಶವವನ್ನು ಕರೆತಂದ ಸಂದರ್ಭ ದಾರಿಯುದ್ದಕ್ಕೂ ಹಿಂದೂ ಸಂಘಟನೆ ಕಾರ್ಯಕರ್ತರು ಪುಷ್ಪನಮನ ಸಲ್ಲಿಸಿದರು. ಫರಂಗಿಪೇಟೆ, ತುಂಬೆ ಕಡೆಗೋಳಿ, ಬಿ.ಸಿ.ರೋಡ್, ಬಂಟ್ವಾಳ, ವಗ್ಗ ಮೂಲಕ ಕಾರಿಂಜದ ಅವರ …

Read More »