Breaking News

Daily Archives: ಜೂನ್ 2, 2025

ಮಹದಾಯಿಗೆ ಒಳ್ಳೆಯದಾಗಿದ್ದು ನಮ್ಮಿಂದ,:ಜೋಶಿ

ಮಹದಾಯಿಗೆ ಒಳ್ಳೆಯದಾಗಿದ್ದು ನಮ್ಮಿಂದ,   ಧಾರವಾಡ: ಮಹದಾಯಿ ವಿಚಾರವಾಗಿ ಎಲ್ಲ ಕ್ಲಿಯರೆನ್ಸ್​ ನಾವು ಮಾಡಿಸಿದ್ದೇವೆ. ಬೇರೆ ಯಾರ ಕಾಲದಲ್ಲೂ ಯೋಜನೆಗಾಗಿ ಒಂದು ಪೈಸೆ ಕೆಲಸ ಆಗಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ಭಾಷಣ ಮಾಡೋರು ಮಾಡಲಿ, ಅದಕ್ಕೆ ನನ್ನ ತಕರಾರಿಲ್ಲ. ಹಿಂದೆ ಮನಮೋಹನ್ ಸಿಂಗ್, ಸೋನಿಯಾ ಅವರ ಸರ್ಕಾರ ಇದ್ದಾಗ ಅದನ್ನು ಟ್ರಿಬ್ಯುನಲ್​ಗೆ ಕೊಡಲಾಗಿತ್ತು. ಆಗ ನಾವು ಅದನ್ನು ಬೇಡ ಎಂದಿದ್ವಿ. ಟ್ರಿಬ್ಯುನಲ್​ಗೆ ಕೊಡುವುದಾದರೆ …

Read More »

I PL ಫೈನಲ್ ಮೇನಿಯಾ: ದುಬಾರಿಕಾರಿಗೆ ವಿಶೇಷ ಅಲಂಕಾರ ಮಾಡಿದ ಆರ್‌ಸಿಬಿ ಫ್ಯಾನ್ಸ್‌

ಮೈಸೂರು: ಐಪಿಎಲ್ ಫೈನಲ್ ಗೆಲ್ಲಲು ಪಂಜಾಬ್​ ಕಿಂಗ್ಸ್ ಮತ್ತು ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡಗಳು ಸೆಣಸಲಿವೆ. ಅಂತಿಮ ಘಟ್ಟದಲ್ಲಿ ಬೆಂಗಳೂರು ತಂಡ ಗೆಲುವು ಸಾಧಿಸಲೆಂದು ಮೈಸೂರಿನ ಉದ್ಯಮಿಯೊಬ್ಬರು ತಮ್ಮ ದುಬಾರಿ ಬೆಲೆಯ ಕಾರಿಗೆ RCB ತಂಡದ ಆಟಗಾರರ ಪೋಸ್ಟರ್‌ಗಳನ್ನು ಹಾಕುವ ಮೂಲಕ ಗಮನ ಸೆಳೆದಿದ್ದಾರೆ. ಗುಜರಾತ್‌ನ ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ RCB ತಂಡ ಪಂಜಾಬ್​ ಕಿಂಗ್ಸ್ ವಿರುದ್ಧ ಗೆಲ್ಲಲೆಂದು ಚಾಮುಂಡಿ ಬೆಟ್ಟಕ್ಕೆ ಹೋಗಿ ನಾಡಿನ …

Read More »

ಕಮಲ್ ಹಾಸನ್ ವಿವಾದಿತ ಹೇಳಿಕೆ: ಬೂಕರ್ ಪುರಸ್ಕೃತೆ ಬಾನು ಮುಷ್ತಾಕ್, ದೀಪಾ ಭಾಸ್ತಿ ಹೇಳುವುದೇನು?

ಬೆಂಗಳೂರು: ಕನ್ನಡಕ್ಕೆ 8 ಜ್ಞಾನ ಪೀಠ ಪ್ರಶಸ್ತಿ, ಒಂದು ಬೂಕರ್ ಪ್ರಶಸ್ತಿ ಸಿಕ್ಕಿದೆ. ಅದೇ ಅದಕ್ಕೆ ಉತ್ತರ ಎಂದು ಕಮಲ್ ಹಾಸನ್ ಹೇಳಿಕೆಗೆ ಬಾನು ಮುಷ್ತಾಕ್ ಪರೋಕ್ಷವಾಗಿ ಪ್ರತಿಕ್ರಿಯಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬೂಕರ್ ಪ್ರಶಸ್ತಿ ನನ್ನೊಬ್ಬಳಿಗೆ ಸಿಕ್ಕಿದ್ದು ಅಲ್ಲ, ಕನ್ನಡಕ್ಕೆ ಮತ್ತು ಕನ್ನಡದ ಜನತೆಗೆ ಸಿಕ್ಕಿದೆ. ಸರ್ಕಾರ ಅದಕ್ಕೆ ಅಭಿನಂದನೆ ಸಲ್ಲಿಸಿದೆ.‌ ಕಮಲ್ ಹಾಸನ್ ಹೇಳಿಕೆ ಸಂಬಂಧ ನಾನು ಉತ್ತರ ಹೇಳಿದ್ದೇನೆ. ಕನ್ನಡಕ್ಕೆ 8 ಜ್ಞಾನ ಪೀಠ ಪ್ರಶಸ್ತಿ, ಒಂದು …

Read More »

ಹಿಂದೂ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲು ಟಾಸ್ಕ್ ಫೋರ್ಸ್ ರಚನೆ: ಆರ್‌.ಅಶೋಕ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟಾಸ್ಕ್‌ ಫೋರ್ಸ್‌ ಮಾಡಿ, ಹಿಂದೂ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಇದು ಕೋಮುವಾದದ ವಿರುದ್ಧ ಅಲ್ಲ, ಹಿಂದೂಗಳ ವಿರುದ್ಧ ಇರುವ ಫೋರ್ಸ್‌ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಇದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಅವರಿಗೆ ಬೇಕಾದ ಅಧಿಕಾರಿಗಳನ್ನು ನೇಮಿಸಿಕೊಂಡಿದ್ದಾರೆ. ಘಟನೆ ನಡೆದು ಎಷ್ಟೋ ದಿನಗಳಾದ ನಂತರ ಪ್ರಕರಣ ದಾಖಲಿಸಲಾಗುತ್ತಿದೆ. ಸುಳ್ಳು ಆಪಾದನೆ ಮಾಡಿ ಹಿಂದೂ ಕಾರ್ಯಕರ್ತರ …

Read More »

ಪುನೀತ್ ರಾಜ್​ಕುಮಾರ್ ಮೂರ್ತಿಗೆ ಪೂಜೆ ಸಲ್ಲಿಸಿ, ಆರ್‌ಸಿಬಿ ಗೆಲುವಿಗೆ ಪ್ರಾರ್ಥನೆ

ಹಾವೇರಿ: ದಿವಂಗತ ಪುನೀತ್ ರಾಜ್​ಕುಮಾರ್ ಅವರು ಐಪಿಎಲ್‌ನಲ್ಲಿ ಆರ್‌ಸಿಬಿ ಕಪ್ ಗೆಲ್ಲುವ ಕನಸು ಕಂಡಿದ್ದರು. ನಮ್ಮ ತಂಡ ಫೈನಲ್ ಪ್ರವೇಶಿಸಬೇಕು, ಮೈದಾನದಲ್ಲಿ ಫೈನಲ್ ಪಂದ್ಯವನ್ನು ಕುಳಿತು ನೋಡಬೇಕು ಎಂದು ಅವರು ಹೇಳುತ್ತಿದ್ದರು. ಆದರೆ, ಆ ಆಸೆ ಈಡೇರಲಿಲ್ಲ. ಇದೀಗ ಆರ್‌ಸಿಬಿ ಫೈನಲ್ ತಲುಪಿದೆ. ನಾಳೆ ಸಂಜೆ ನಡೆಯುವ ಪಂದ್ಯದಲ್ಲಿ ಎದುರಾಳಿ ಪಂಜಾಬ್ ಕಿಂಗ್ಸ್ ಜೊತೆ ಸೆಣಸಲಿದೆ. ಈ ಮಧ್ಯೆ ಹಾವೇರಿ ತಾಲೂಕು ಯಲಗಚ್ಚ ಗ್ರಾಮದಲ್ಲಿ ಪುನೀತ್​ ರಾಜ್​ಕುಮಾರ್ ದೇವಾಲಯ ಕಟ್ಟಿಸಿರುವ ಪ್ರಕಾಶ್ …

Read More »

ಬೆಳಗಾವಿ ಸುಪ್ರಸಿದ್ಧ ಆಪ್ಟೆಕ್ ಇನ್ನೋವ್ಹೇಷನ್’ನ ಇಬ್ಬರು ವಿದ್ಯಾರ್ಥಿನಿಯರು ಬೆಂಗಳೂರು ಮತ್ತು ಗೋವಾ ವಿಮಾನ ನಿಲ್ದಾಣದಲ್ಲಿ ಸೇವೆ ಸಲ್ಲಿಸಲು ಆಯ್ಕೆ

ಬೆಳಗಾವಿ ಸುಪ್ರಸಿದ್ಧ ಆಪ್ಟೆಕ್ ಇನ್ನೋವ್ಹೇಷನ್’ನ ಇಬ್ಬರು ವಿದ್ಯಾರ್ಥಿನಿಯರು ಬೆಂಗಳೂರು ಮತ್ತು ಗೋವಾ ವಿಮಾನ ನಿಲ್ದಾಣದಲ್ಲಿ ಸೇವೆ ಸಲ್ಲಿಸಲು ಆಯ್ಕೆ ಬೆಳಗಾವಿ ಸುಪ್ರಸಿದ್ಧ ಆಪ್ಟೆಕ್ ಇನ್ನೋವ್ಹೇಷನ್’ನ ಇಬ್ಬರು ವಿದ್ಯಾರ್ಥಿನಿಯರು ಬೆಂಗಳೂರು ಮತ್ತು ಗೋವಾ ವಿಮಾನ ನಿಲ್ದಾಣದಲ್ಲಿ ಸೇವೆ ಸಲ್ಲಿಸಲು ಆಯ್ಕೆಯಾಗಿದ್ದಾರೆ. ಬೆಳಗಾವಿ ನಗರದ ಆಪ್ಟೆಕ್ ಸಂಸ್ಥೆಯ ಇಬ್ಬರು ವಿದ್ಯಾರ್ಥಿನಿಯರಾದ ಬೆಳಗಾವಿಯ ಕರುಣಾ ಭೂದರ್ಗಡೆ ಮತ್ತು ದಾಂಡೇಲಿಯ ನೇಹಾ ನಾಯರ್ ದಾಂಡೇಲಿ ಗೋವಾ ಮತ್ತು ಬೆಂಗಳೂರಿನ ವಿಮಾನ ನಿಲ್ದಾಣಗಳಲ್ಲಿ ಸೇವೆ ಸಲ್ಲಿಸಲು ಆಯ್ಕೆಯಾಗಿದ್ದಾರೆ. …

Read More »

ಕ್ವೀಕ್ ಆಕ್ಷನ್…ಸಂತಿಬಸ್ತವಾಡಕ್ಕೆ ಸಿಐಡಿ ತಂಡ… ಧರ್ಮಗ್ರಂಥ ಸುಟ್ಟ ಪ್ರಕರಣದ ತನಿಖೆ ಆರಂಭ

ಕ್ವೀಕ್ ಆಕ್ಷನ್…ಸಂತಿಬಸ್ತವಾಡಕ್ಕೆ ಸಿಐಡಿ ತಂಡ… ಧರ್ಮಗ್ರಂಥ ಸುಟ್ಟ ಪ್ರಕರಣದ ತನಿಖೆ ಆರಂಭ ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ಧರ್ಮಗ್ರಂಥ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳ ತಂಡದಿಂದ ಆರೋಪಿಗಳ ಪತ್ತೆಗೆ ತನಿಖೆ ಪ್ರಾರಂಭವಾಗಿದೆ. ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ಧರ್ಮಗ್ರಂಥ ಸುಟ್ಟ ಪ್ರಕರಣ ಪೊಲೀಸರಿಗೆ ತಲೆ ದಂಡವಾಗಿ ಪರಿಣಮಿಸಿದೆ. ನಿನ್ನೆಯಷ್ಟೇ ಕಮಿಷ್ನರ್ ಭೂಷಣ್ ಬೋರಸೆ ಅವರು ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಮಾಧ್ಯಮಗೋಷ್ಟಿ ನಡೆಸ ಮಾಹಿತಿಯನ್ನು ನೀಡಿದ್ದರು. ಇಂದು …

Read More »

ಬಾಗಲಕೋಟೆ ಜಿಲ್ಲೆಯಲ್ಲಿ ಬಿತ್ತನೆ ಆರಂಭದಲ್ಲಿ ರೈತರಿಗೆ ಬಿಗ್ ಶಾಕ್ !

ಬಾಗಲಕೋಟೆ ಜಿಲ್ಲೆಯಲ್ಲಿ ಬಿತ್ತನೆ ಆರಂಭದಲ್ಲಿ ರೈತರಿಗೆ ಬಿಗ್ ಶಾಕ್ ! ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ನಕಲಿ ಗೊಬ್ಬರ ಸರಬರಾಜು ಮಾಡೋ ಜಾಲ..!! ಬಾಗಲಕೋಟೆ ತಾಲ್ಲೂಕಿನ ‌ಸೀಮಿಕೇರಿ ಗ್ರಾಮದಲ್ಲಿ ನಕಲಿ ರಸಗೊಬ್ಬರ ಮಾರಾಟದ ಶಂಕೆ ವ್ಯಕ್ತವಾಗಿದೆ. ಬಾಗಲಕೋಟೆ ತಾಲ್ಲೂಕಿನ ‌ಸೀಮಿಕೇರಿ ಗ್ರಾಮದ ಗುರು ಫರ್ಟಿಲೈಜರ್ನ ಗೋದಾಮಿನಲ್ಲಿ ಗೊಬ್ಬರವನ್ನು ಇಳಿಸಲು ಬಂದಿದ್ದ ಲಾರಿಯನ್ನು ಕೃಷಿ ಇಲಾಖೆ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಕಪ್ಪು ಬಣ್ಣದ‌, ಹಿಸುಕಿದರೆ ಬೂದಿಯಾಗುವ ನಕಲಿ ಡಿಎಪಿ ಪತ್ತೆಯಾಗಿದೆ. ಈ ನಕಲಿ ಗೊಬ್ಬರವನ್ನು ಓರಿಜಿನಲ್‌ …

Read More »

ಅಧಿಕಾರಿಯ ಪ್ರತಿಕೃತಿಗೆ ಹಾಲು ತುಪ್ಪದ ಅಭಿಷೇಕ

ದೊಡ್ಡಬಳ್ಳಾಪುರ: ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ದೊಡ್ಡಬಳ್ಳಾಪುರಕ್ಕೆ ಸ್ಥಳಾಂತರಿಸುವಂತೆ ಆಗ್ರಹಿಸಿ ಅರ್ಕಾವತಿ ನದಿ ಹೋರಾಟ ಸಮಿತಿ ವಿನೂತನ ಪ್ರತಿಭಟನೆ ಮೂಲಕ ಗಮನ ಸೆಳೆದಿದೆ. ಕೆರೆಯ ದಂಡೆಯ ಮೇಲೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಯ ಪ್ರತಿಕೃತಿಗೆ ಹಾಲು, ತುಪ್ಪ ಮತ್ತು ಗಂಧದ ಅಭಿಷೇಕ ಮಾಡುವ ಮೂಲಕ ಗ್ರಾಮಸ್ಥರಿಗೆ ಶುದ್ಧ ನೀರು ಪೂರೈಸುವಂತೆ ಪ್ರತಿಭಟನೆ ಮಾಡಿದರು ದೊಡ್ಡಬಳ್ಳಾಪುರ ತಾಲೂಕು ಚಿಕ್ಕತುಮಕೂರು ಕೆರೆಯ ದಂಡೆಯ ಮೇಲೆ ಅಭಿಷೇಕ ಮತ್ತು ಪೂಜಾ ಕಾರ್ಯಕ್ರಮವನ್ನು ಅರ್ಕಾವತಿ ನದಿ ಹೋರಾಟ ಸಮಿತಿ …

Read More »

ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ದೂರು ಸಲ್ಲಿಸಿದ ಹಿಂದೂ ಸಂಘಟನೆಗಳ ನಿಯೋಗ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಇತ್ತೀಚಿಗೆ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಸೇಡಿನಿಂದ ಆದದ್ದಲ್ಲ, ಮರಳು ಮಾಫಿಯಾದಿಂದ ಆಗಿರುವಂಥದ್ದು. ಸರ್ಕಾರ ಇದಕ್ಕೆ ಬಣ್ಣ ಕಟ್ಟುವ ಮೂಲಕ ಹಿಂದೂ ನಾಯಕರನ್ನು ಹತ್ತಿಕ್ಕಲು ಯತ್ನಿಸುತ್ತಿದೆ ಎಂದು ಹಿಂದೂ ಮುಖಂಡ ಹಾಗೂ ಶ್ರೀರಾಮಸೇನೆ ಸಂಘಟನೆಯ ರಾಷ್ಟ್ರಾಧ್ಯಕ್ಷ ಪ್ರಮೋದ್ ಮುತಾಲಿಕ್ ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ವಿರೋಧಿ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳ ನಿಯೋಗ ಇಂದು ನೃಪತುಂಗ ರಸ್ತೆಯಲ್ಲಿರುವ ರಾಜ್ಯ ಪೊಲೀಸ್ …

Read More »