Breaking News

Daily Archives: ಜೂನ್ 6, 2025

ಶೋಭಾ ಕರಂದ್ಲಾಜೆ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಶೋಭಾ ಕರಂದ್ಲಾಜೆ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಆಯ್ಕೆಯನ್ನು ರದ್ದು ಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ. ನಗರದ ನಂದಿನಿ ಲೇಔಟ್ ನಿವಾಸಿ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮತದಾರ ಬಿ. ಮೋಹನ್ ಕುಮಾರ್ ಎಂಬುವರು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. …

Read More »

ಕಾಲ್ತುಳಿತ ದುರಂತ: ಪೊಲೀಸ್​ ಆಯುಕ್ತ ಬಿ.ದಯಾನಂದ್ ಸೇರಿ ಐವರು ಅಧಿಕಾರಿಗಳು ಅಮಾನತು

ಬೆಂಗಳೂರು: ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡವು ಐಪಿಎಲ್​ ಚಾಂಪಿಯನ್​ ಆದ ಹಿನ್ನೆಲೆಯಲ್ಲಿ ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆಯುತ್ತಿದ್ದ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ಸಂಬಂಧ ನಗರ ಪೊಲೀಸ್ ಆಯುಕ್ತರು ಸೇರಿದಂತೆ ಐವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿದೆ.‌ ಭದ್ರತೆ ನಿರ್ವಹಣೆ ವೈಫಲ್ಯ ಹಿನ್ನೆಲೆಯಲ್ಲಿ ಐವರು ಅಧಿಕಾರಿಗಳ ತಲೆದಂಡವಾಗಿದೆ. ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್​, ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್, ಕೇಂದ್ರ ವಿಭಾಗದ ಡಿಸಿಪಿ ಶೇಖರ್ …

Read More »

ವಿದ್ಯುತ್ ತಂತಿ ತಗುಲಿ ಟಿಪ್ಪರ್ ಗೆ ಆವರಿಸಿದ ಬೆಂಕಿ

ವಿದ್ಯುತ್ ತಂತಿ ತಗುಲಿ ಟಿಪ್ಪರ್ ಗೆ ಆವರಿಸಿದ ಬೆಂಕಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಟಿಪ್ಪರ್ ಚಾಲಕನ ದುರ್ಮರಣ ರೇವಣಸಿದ್ದಪ್ಪ ಗಂಜಿಹಾಳ (೩೬) ಮೃತ ಚಾಲಕ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ ಗ್ರಾಮದ ನಿವಾಸಿ ಮಣ್ಣು ಲಿಪ್ಟ್ ಮಾಡಿ ಇಳಿಸುವ ವೇಳೆ ಟಿಪ್ಪರ್ ಗೆ ತಗುಲಿದ ವಿದ್ಯುತ್ ತಂತಿ ನೋಡ ನೋಡುತ್ತಿದ್ದಂತೆ ಟಿಪ್ಪರ್ ಗೆ ಹೊತ್ತಿಕೊಂಡ ಬೆಂಕಿ ಬಾಗಲಕೋಟೆಯ ರೋಟರಿ ಸರ್ಕಲ್ ಬಳಿ ಘಟನೆ ಸ್ಥಳಕ್ಕೆ ಬಾಗಲಕೋಟೆ ಅಗ್ನಿಶಾಮಕ ಸಿಬ್ಬಂದಿ …

Read More »