Breaking News

Daily Archives: ಜೂನ್ 17, 2025

ನಿಗಮದ ಹಣ ದುರುಪಯೋಗ ಮಾಡಿಕೊಂಡು ಕಾಂಗ್ರೆಸ್ ಬಳ್ಳಾರಿ ಲೋಕಸಭಾ ಕ್ಷೇತ್ರ ಗೆದ್ದಿದೆ: ಜನಾರ್ದನ ರೆಡ್ಡಿ

ಗಂಗಾವತಿ(ಕೊಪ್ಪಳ): ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಮಾಡಿಕೊಂಡೇ ಬಳ್ಳಾರಿ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಗೆದ್ದಿದೆ ಎಂದು ಶಾಸಕ ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆಯಲ್ಲಿ ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ. ಬಳ್ಳಾರಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಚುನಾಯಿತ ಪ್ರತಿನಿಧಿಗಳು ಜನಸಾಮಾನ್ಯರು, ರೈತಾಪಿ ವರ್ಗದವರಿಂದ ನಗದು ಹಣ ಪಡೆದುಕೊಂಡು ನಿಗಮದ ಹಣವನ್ನು ಅವರ ಖಾತೆಗೆ …

Read More »

ಶಕ್ತಿ ಯೋಜನೆ ಹೊರೆಯ ನಡುವೆಯೂ ಲಾಭದತ್ತ KSRTC

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಇತರೆ ಮೂಲಗಳಿಂದ ಸಂಗ್ರಹಿಸುವ ಆದಾಯ ಪ್ರಮಾಣ ಏರಿಕೆ ಆಗಿದೆ. ಶಕ್ತಿ ಯೋಜನೆಯ ಹೊರತಾಗಿಯೂ ಸಂಸ್ಥೆ ತನ್ನ ಕಾಲ ಮೇಲೆ ತಾನು ನಿಲ್ಲುವಷ್ಟರ ಮಟ್ಟಿಗೆ ಸಶಕ್ತವಾಗುವತ್ತ ಸಾಗಿದೆ. ಹೌದು, ಶಕ್ತಿ ಯೋಜನೆ ಆರಂಭವಾದಾಗಿನಿಂದ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. ಇದು ಸಾರಿಗೆ ಸಂಸ್ಥೆಯ ಲಾಭದತ್ತ ಸಾಗಲು ಮುನ್ನುಡಿ ಬರೆದಿದೆ. 2023–24 ಹಣಕಾಸು ವರ್ಷದಲ್ಲಿ ಸಾರಿಗೆಯಿಂದ ₹2,069 ಕೋಟಿ ಮತ್ತು ಸರಕು ಸಾಗಣೆ, ಬಾಡಿಗೆ …

Read More »

ನೀಟ್‌ ಸೀಟು: ದಲ್ಲಾಳಿಗಳ ಮೋಸಕ್ಕೆ ಬಲಿಯಾಗಬೇಡಿ- ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು : ವೈದ್ಯರಾಗಬೇಕೆಂಬ ಭವ್ಯ ಭವಿಷ್ಯದ ಕನಸು ಹೊತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೋಸದ ಜಾಲಕ್ಕೆ ಬೀಳಬಾರದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಾ. ಶರಣಪ್ರಕಾಶ್ ಪಾಟೀಲ್ ಸಲಹೆ ನೀಡಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, ಅತ್ಯುತ್ತಮವಾಗಿ ಓದಿ, ಪರೀಕ್ಷೆ ಬರೆದಿರುವ ಆಕಾಂಕ್ಷಿಗಳು, …

Read More »

ಮಳೆಗಾಲ ವೇಳೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ- ಸಚಿವ ಲಾಡ್‌

ಮಳೆಗಾಲ ವೇಳೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ- ಸಚಿವ ಲಾಡ್‌ ಧಾರವಾಡ: ಮಳೆಗಾಲದ ಸಂಕಷ್ಟ ಸಂದರ್ಭದಲ್ಲಿಯೂ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಾರ್ವಜನಿಕ ಸ್ನೇಹಿಯಾಗಿ ನಿರ್ವಹಿಸಬೇಕು. ನಿಮ್ಮ ಇಲಾಖೆ ಕರ್ತವ್ಯಗಳಿಂದ ವಿಮುಖರಾಗಬೇಡಿ. ಯಾವುದೇ ಅಧಿಕಾರಿ, ಸಿಬ್ಬಂದಿ ಕರ್ತವ್ಯ ನಿರ್ಲಕ್ಷ್ಯದಿಂದ ಜೀವ ಹಾನಿ ಉಂಟಾದರೆ, ಆಯಾ ಅಧಿಕಾರಿಯನ್ನು ಜವಾಬ್ದಾರಗೊಳಿಸಿವುದರ ಜತೆಗೆ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಖಡಕ್ ಎಚ್ಚರಿಕೆ ನೀಡಿದ್ದಾರೆ. …

Read More »

ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಪ್ರತಿಭಟನೆ: ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು….‌

ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಪ್ರತಿಭಟನೆ: ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು….‌ ಸಿಎಂ, ಡಿಸಿಎಂ ರಾಜೀನಾಮೆಗೆ ಅಗ್ರಹಿಸಿದ ವಿಜಯೇಂದ್ರ ಹಾಗೂ ಆರ್ ಅಶೋಕ ಆರ್ಸಿಬಿ ವಿಜಯೋತ್ಸವ ಕಾಲ್ತುಳಿತದಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಇಂದು ಬಿಜೆಪಿ ಪ್ರತಿಭಟನೆ ನಡೆಸಿತು.ಆರ್ಸಿಬಿ ತಂಡ ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಮತ್ತು ಮುಖ್ಯಮಂತ್ರಿ, ಡಿಸಿಎಂ ಹಾಗೂ ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿ, ನಗರದ …

Read More »

ಮುಧೋಳ ತಾಲೂಕಿನಲ್ಲಿ ನರೇಗಾ ಯೋಜನೆಯಲ್ಲಿ ಗೋಲ್ ಮಾಲ್ !!??

ಮುಧೋಳ ತಾಲೂಕಿನಲ್ಲಿ ನರೇಗಾ ಯೋಜನೆಯಲ್ಲಿ ಗೋಲ್ ಮಾಲ್ !!?? ಕಾರ್ಮಿಕರಿಲ್ಲದೇ…ಮಷೀನ್ ಬಳಸಿ ಕೆಲಸ…ಸರ್ಕಾರದ ಕಣ್ಣಿಗೆ ಮಣ್ಣೆರೆಚಿದ್ರಾ ಅಧಿಕಾರಿಗಳು!!! ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಗುಲಗಾಲ‌ಜಂಬಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮಾ ಗಾಂಧೀಜಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಗೋಲ್’ಮಾಲ್ ನಡೆದಿರುವ ಆರೋಪ ಕೇಳಿ ಬಂದಿದೆ. ನರೇಗಾ ಕೆಲಸಕ್ಕೆ ಯಂತ್ರೋಪಕರಣಗಳ ಬಳಕೆ ಮಾಡಲಾಗಿದ್ದು,. ಗ್ರಾಮೀಣ ಜನರಿಗೆ ಜೀವನಭದ್ರತೆ ಒದಗಿಸುವ ನರೇಗಾ ಯೋಜನೆಯಲ್ಲಿ ಅವ್ಯವಹಾರ ನಡೆದಿದ್ದು, ಕಾರ್ಮಿಕರಿಗೆ ಕೆಲಸ ನೀಡುವ ಬದಲಿಗೆ ಯಂತ್ರೋಪಕರಣ ಬಳಕೆ …

Read More »

ಕಾಲ್ತುಳಿತ ಪ್ರಕರಣ, ಸಿಎಂ ಡಿಸಿಎಂ ಹೊಣೆ ಹೊರಬೇಕೆಂಬ ಬಿಜೆಪಿಗೆ ಡಿಕೆಶಿ ಟಾಂಗ್….

ಕಾಲ್ತುಳಿತ ಪ್ರಕರಣ, ಸಿಎಂ ಡಿಸಿಎಂ ಹೊಣೆ ಹೊರಬೇಕೆಂಬ ಬಿಜೆಪಿಗೆ ಡಿಕೆಶಿ ಟಾಂಗ್…. ಬಿಜೆಪಿಗರನ್ನೇ ಹೊತ್ತು ಮೆರವಣಿಗೆ ಮಾಡೋಣ : ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿ ಸಿಎಂ, ಡಿಸಿಎಂ ಹೊಣೆ ಹೊರಬೇಕೆಂಬ ಬಿಜೆಪಿಯವರ ಆರೋಪಕ್ಕೆ ಹೆಣಗಳ ಮೇಲೆ ರಾಜಕೀಯ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರನ್ನೇ ಹೆಗಲ ಮೇಲೆ ಕೂರಿಸಿಕೊಂಡು ಮೆರವಣಿಗೆ ಮಾಡೋಣ. ಅವರು …

Read More »

ಹುಬ್ಬಳ್ಳಿ: ಪಾಲಿಕೆಯ ನಿರ್ಲಕ್ಷ್ಯಕ್ಕೆ ಹಾವು ಕಡಿದು ವ್ಯಕ್ತಿ ಸಾವು: ಕಣ್ಣೀರನಲ್ಲಿಯೇ ಆಡಳಿತ ವ್ಯವಸ್ಥೆ ವಿರುದ್ಧ ಆರೋಪ..!

ಹುಬ್ಬಳ್ಳಿ: ಪಾಲಿಕೆಯ ನಿರ್ಲಕ್ಷ್ಯಕ್ಕೆ ಹಾವು ಕಡಿದು ವ್ಯಕ್ತಿ ಸಾವು: ಕಣ್ಣೀರನಲ್ಲಿಯೇ ಆಡಳಿತ ವ್ಯವಸ್ಥೆ ವಿರುದ್ಧ ಆರೋಪ..! ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಅದೆಷ್ಟೋ ಸಮಸ್ಯೆಗಳಿದ್ದರೂ ಪಾಲಿಕೆ ಮಾತ್ರ ಸಾಕಷ್ಟು ನಿರ್ಲಕ್ಷ್ಯ ವಹಿಸುತ್ತಿದೆ. ಈಗ ಪಾಲಿಕೆಯ ನಿರ್ಲಕ್ಷ್ಯದಿಂದ ವ್ಯಕ್ತಿಯೊಬ್ಬ ಜೀವ ಕಳೆದುಕೊಂಡಿರುವ ಆರೋಪ ಈಗ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಹುಟ್ಟು ಹಾಕಿದೆ. ಸುಮಾರು ಬಾರಿ ಮನವಿ ಸಲ್ಲಿಸಿದರೂ ಕೂಡ ಪಾಲಿಕೆ ಕ್ರಮ ಕೈಗೊಳ್ಳದೇ ಇರುವುದು ವ್ಯಕ್ತಿ ಸಾವಿಗೆ ಕಾರಣವೆಂದು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ. …

Read More »

3 ದಿನ ಹಿಂದೆ ಮೃತಪಟ್ಟ ಮರಿ ಆನೆ ಜೊತೆ ಅಲೆದಾಡುತ್ತಿರುವ ತಾಯಿ ಆನೆ

3 ದಿನ ಹಿಂದೆ ಮೃತಪಟ್ಟ ಮರಿ ಆನೆ ಜೊತೆ ಅಲೆದಾಡುತ್ತಿರುವ ತಾಯಿ ಆನೆ ಹಾಸನ: ಆನೆಗಳು ತಮ್ಮ ಮರಿಗಳ ಬಗ್ಗೆ ಅದೆಷ್ಟು ಪ್ರೀತಿ ಹೊಂದಿರುತ್ತವೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಮರಿ ಆನೆ ಮೃತಪಟ್ಟು ಮೂರು ದಿನ ಕಳೆದಿದೆ. ಆದರೆ, ಇದನ್ನು ತಿಳಿಯದ ತಾಯಿ ಆನೆ ತನ್ನ ಮರಿಯ ಕಳೆಬರಹವನ್ನು ತಾನು ಹೋದ ಕಡೆಗೆಲ್ಲಾ ಎಳೆದುಕೊಂಡು ಹೋಗುತ್ತಿದೆ. ಈ ಘಟನೆ ನಡೆದಿದ್ದು, ಹಾಸನದ ಬೇಲೂರು ತಾಲೂಕು ಅರೇಹಳ್ಳಿ ಹೋಬಳಿಯ ಶಿರಗುರ ಗ್ರಾಮದ …

Read More »

ವಂಚನೆ, ಅಕ್ರಮ ಹಣ ವರ್ಗಾವಣೆ ಆರೋಪ: ಐಶ್ವರ್ಯಾ ಗೌಡಗೆ ಷರತ್ತು ಬದ್ಧ ಜಾಮೀನು

ಬೆಂಗಳೂರು: ಚಿನ್ನದ ವ್ಯಾಪಾರಿಗೆ 9.82 ಕೋಟಿ ರೂಪಾಯಿ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ)ದಿಂದ ಬಂಧನಕ್ಕೊಳಗಾಗಿದ್ದ ಐಶ್ವರ್ಯಾ ಗೌಡ ಅವರಿಗೆ ಬೆಂಗಳೂರಿನ 1ನೇ ಸಿಸಿಹೆಚ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಐಶ್ವರ್ಯಾ ಗೌಡ ಪರ ವಾದ ಮಂಡಿಸಿದ್ದ ವಕೀಲ ಎಸ್. ಸುನೀಲ್ ಅವರು, “ಅನುಸೂಚಿತ ಪ್ರಕರಣವಲ್ಲದಿದ್ದರೂ ಇ.ಡಿ ಅಧಿಕಾರಿಗಳು ಐಶ್ವರ್ಯಾ ಗೌಡ ಅವರನ್ನು ಬಂಧಿಸಿದ್ದಾರೆ ಹಾಗೂ ಮಹಿಳೆಗೆ ಬಂಧನದಿಂದ ವಿಶೇಷ ವಿನಾಯಿತಿ ಇದೆ” …

Read More »