ಬೆಂಗಳೂರು: ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ-2025 ರ ಸಮೀಕ್ಷಾ ಕಾರ್ಯಾವಧಿಯನ್ನು ಅಂತಿಮವಾಗಿ ವಿಸ್ತರಿಸಲಾಗಿದೆ. ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ, ಪರಿಶಿಷ್ಟ ಜಾತಿ ಸಮೀಕ್ಷೆಯನ್ನು ನಡೆಸುವ ಜವಾಬ್ದಾರಿಯನ್ನು ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗಕ್ಕೆ ವಹಿಸಿದೆ. ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿನ 101 ಜಾತಿಗಳಿಗೆ ಸೇರಿದವರ ಪ್ರಾತಿನಿದ್ಯತೆ ಕುರಿತು ವೈಜ್ಞಾನಿಕ ದತ್ತಾಂಶವನ್ನು (Emperical Data) ಸಂಗ್ರಹಿಸಲು 05-05-2025 ರಿಂದ ಮನೆ-ಮನೆ ಭೇಟಿ …
Read More »Daily Archives: ಜೂನ್ 23, 2025
ಶಾಸಕ ಬಿ.ಆರ್.ಪಾಟೀಲ್ ಆರೋಪ ಸುಳ್ಳು: ಡಿಸಿಎಂ
ರಾಮನಗರ: ಹಣ ಪಡೆದು ಮನೆ ನೀಡಿದ್ದಾರೆ ಎಂಬ ಶಾಸಕ ಬಿ.ಆರ್.ಪಾಟೀಲ್ ಅವರ ಆರೋಪ ಸುಳ್ಳು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಕನಕಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರೋ ಒಬ್ಬ ಹೇಳಿದರೆ ಇದೆಲ್ಲವೂ ಆಗುತ್ತದೆಯೇ?. ನಾನು ಅಥವಾ ನೀವು ಬಂದು ಗ್ರಾಮ ಸಭೆಯಲ್ಲಿ ಮನೆ ಕೇಳಿದ ತಕ್ಷಣ ಕೊಡಲು ಆಗುತ್ತದೆಯೇ? ಎಂದು ಪ್ರಶ್ನಿಸಿದರು. ಮನೆ ನೀಡಲು ತೀರ್ಮಾನ ಮಾಡುವವರು ಗ್ರಾಮ ಪಂಚಾಯಿತಿ, ಮುನಿಸಿಪಾಲಿಟಿ ಸೇರಿದಂತೆ ಎಲ್ಲೆಲ್ಲಿ ಮನೆ ನಿಡಬೇಕೋ ಆಯಾ ಸ್ಥಳೀಯ …
Read More »ಧಾರವಾಡ ಐಐಟಿಗೆ ₹2000 ಕೋಟಿ ಹೆಚ್ಚುವರಿ ಅನುದಾನ:ಪ್ರಲ್ಹಾದ ಜೋಶಿ
ಹುಬ್ಬಳ್ಳಿ: ಧಾರವಾಡದ ಐಐಟಿಗೆ ಕೇಂದ್ರ ಸರ್ಕಾರ ₹2000 ಕೋಟಿ ಹೆಚ್ಚುವರಿ ಹಣ ನೀಡುತ್ತಿದೆ. ದೇಶದ ಎಲ್ಲಾ ಐಐಟಿಗಳಂತೆ ಇದೂ ಉನ್ನತ ಅಭಿವೃದ್ಧಿ ಕಾಣುತ್ತದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಭಾನುವಾರ, ಸರ್ಕಾರಿ ಹಾಗೂ ಅನುದಾನಿತ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕರ ಸಂಘ ಆಯೋಜಿಸಿದ್ದ ‘ಭಾರತದ ಶಿಕ್ಷಣ ಮತ್ತು ಶಿಕ್ಷಕರ ಪಾತ್ರ’ (Indian Education and the True Role …
Read More »ಗಾಯಕನಿಂದ 3 ಲಕ್ಷಕ್ಕೂ ಹೆಚ್ಚು ಹಣ ಪಡೆದು ವಂಚಿಸಿದ ಮಹಿಳೆಯ ವಿರುದ್ಧ
ಮಂಗಳೂರು: ನ್ಯಾಯಾಲಯದಲ್ಲಿರುವ ಪ್ರಕರಣವನ್ನು ಹೈಕೋರ್ಟ್ನಲ್ಲಿ ವಕೀಲರ ಮೂಲಕ ಕ್ವಾಷ್ ಮಾಡಿ ಬಗೆಹರಿಸುತ್ತೇನೆ ಎಂದು ನಂಬಿಸಿ ಗಾಯಕರೊಬ್ಬರಿಂದ 3.20 ಲಕ್ಷ ರೂ ಪಡೆದು ವಂಚಿಸಿದ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ಎಂಬ ಮಹಿಳೆಯ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏನಿದು ಪ್ರಕರಣ?: ಬೆಳ್ತಂಗಡಿಯ ಮಡಂತ್ಯಾರ್ ನಿವಾಸಿ, ಗಾಯಕ ರಾಜೇಶ್.ಕೆ. (43) ಎಂಬವರಿಗೆ 2024ರಲ್ಲಿ ಫೇಸ್ಬುಕ್ ಮೂಲಕ ಆರೋಪಿತೆ ಸಂಧ್ಯಾ ಪವಿತ್ರ ನಾಗರಾಜ್ ಎಂಬಾಕೆಯ ಪರಿಚಯವಾಗಿತ್ತು. ಆಕೆಯೊಂದಿಗೆ ಮೊಬೈಲ್ ಮೂಲಕ ಸಂಪರ್ಕದಲ್ಲಿದ್ದರು. ಆರೋಪಿತೆಯು ರಾಜೇಶ್ …
Read More »