Breaking News

Daily Archives: ಜೂನ್ 30, 2025

ಮೂಡಲಗಿ , ಗೋಕಾಕ ತಾಲ್ಲೂಕು ಸೇರಿ ೫೧೯.೭೨ ಕೋಟಿ ರೂಪಾಯಿಗಳನ್ನು ಶೂನ್ಯ ಬಡ್ಡಿದರದಲ್ಲಿ ರೈತರಿಗೆ ವಿತರಿಸಿದ DCCBANK: ಬಾಲಚಂದ್ರ ಜಾರಕಿಹೊಳಿ

ಗೋಕಾಕ – ರೈತರ ಶ್ರೆಯೋಭಿವೃದ್ಧಿಗಾಗಿ ರೈತಮಿತ್ರನಾಗಿ ಕೆಲಸ ಮಾಡುತ್ತಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕು ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಸೇರಿ ೫೧೯.೭೨ ಕೋಟಿ ರೂಪಾಯಿಗಳನ್ನು ಶೂನ್ಯ ಬಡ್ಡಿದರದಲ್ಲಿ ರೈತರಿಗೆ ವಿತರಿಸಿದೆ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಸೋಮವಾರದಂದು ನಗರದ ಹೊರ ವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾ ಭವನದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲ್ಲೂಕುಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು …

Read More »

ನೂತನವಾಗಿ ನಿರ್ಮಿಸಲಾಗುತ್ತಿರುವ ತಾಲೂಕಾ ಮಟ್ಟದ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ನೂತನ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದ ರಮೇಶ ಜಾರಕಿಹೊಳಿ

ಗೋಕಾಕ ತಾಲೂಕಾ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ತಾಲೂಕಾ ಮಟ್ಟದ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ನೂತನ ಕಟ್ಟಡ ಗುದ್ದಲಿ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಗೋಕಾಕ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರು ಭಾಗವಹಿಸಿ ಗುದ್ದಲಿ ಪೂಜೆ ನೆರವೇರಿಸಿ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬೀಮ್ಸ ನಿರ್ದೇಶಕರಾದ ಡಾ.ಅಶೋಕ ಶೆಟ್ಟಿ, ಮುಖ್ಯ ವೈದ್ಯಾಧಿಕಾರಿಗಳಾದ ಡಾ.ರವೀಂದ್ರ ಆಂಟೀನ,ಟಿ.ಎಚ್.ಓ ಮುತ್ತಣ್ಣ ಕೋಪ್ಪದ, ಭೀಮನಗೌಡ ಪೊಲೀಸಗೌಡರ,ಟಿ.ಆರ್ ಕಾಗಲ,ಡಾ.ಕಿರಣ,ಡಾ.ಕಡ್ಲೇಪ್ಪಗೋಳ,ಡಾ.ಶಾಂತಕುಮಾರ ಸೇರಿದಂತೆ …

Read More »

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ ಗ್ರೀನ್ ಹೋಟೆಲ್ ಸಮೀಪ ಕ್ಯಾಂಟರ್ ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಕುಟ್ಟಲವಾಡಿ ಗ್ರಾಮದ ವಿನಾಯಕ ವಿಜಯ ಕದಮ (21) ಎಂಬ ಟೆಂಪೋ ಚಾಲಕ, ಚೋರ್ಲಾ ಮೂಲಕ ಜಾಂಬೋಟಿ-ಬೆಳಗಾವಿ ಕಡೆಗೆ ಅತಿವೇಗವಾಗಿ ಹಾಗೂ ಅಜಾಗರೂಕತೆಯಿಂದ ಕ್ಯಾಂಟರ್ …

Read More »

ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್

ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್ ಖಾನಾಪೂರ ತಾಲೂಕಿನ ಕುಪ್ಪಟಗಿರಿ ಕ್ರಾಸ್ ಬಳಿ ನೂತನ ಟ್ರಾನ್ಸಫಾರ್ಮರ್’ನ್ನು ಮಾಜಿ ಶಾಸಕ ಹಾಗೂ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಅರವಿಂದ ಪಾಟೀಲ ಅವರು ಲೋಕಾರ್ಪಣೆಗೊಳಿಸಿದರು. ಈ ವೇಳೆ ಗ್ರಾಮದಲ್ಲಿ ನಿರಂತರ ವಿದ್ಯುತ್ ಪೂರೈಕೆ ಹಾಗೂ ತಾಂತ್ರಿಕ ತೊಂದರೆ ನಿವಾರಣೆಗೆ ಈ ಟ್ರಾನ್ಸಫಾರ್ಮರ್ ಸಹಕಾರಿಯಾಗಲಿದೆ ಎಂಬ ವಿಶ್ವಾಸವನ್ನು ಜನಪ್ರತಿನಿಧಿಗಳು ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಮಾಡಿಗುಂಜಿ ಪಿಕೆಪಿಎಸ್ ಅಧ್ಯಕ್ಷ ಪ್ರಕಾಶ …

Read More »

ಕೆ.ಎಸ್.ಆರ್.ಟಿ.ಸಿ ವಿಭಾಗಮಟ್ಟದ ಕುಂದು ಕೊರತೆ ಸಭೆ ನಡೆಸಿದ ಸಚಿವ ಸತೀಶ್ ಜಾರಕಿಹೊಳಿ

ಕೆ.ಎಸ್.ಆರ್.ಟಿ.ಸಿ ವಿಭಾಗಮಟ್ಟದ ಕುಂದು ಕೊರತೆ ಸಭೆ ನಡೆಸಿದ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ ನಗರದಲ್ಲಿ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ Satish Jarkiholi ಅವರ ಅಧ್ಯಕ್ಷತೆಯಲ್ಲಿ ಇಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ಜಿಲ್ಲಾ ವ್ಯಾಪ್ತಿಯ ಘಟಕಗಳು ಮತ್ತು ವಿಭಾಗಗಳ ಕುಂದು ಕೊರತೆ ಪರಿಶೀಲನಾ ಸಭೆಯಲ್ಲಿ ಭಾಗಿಯಾದೆ. ಈ ವೇಳೆ ನೂತನ ಬಸ್ ಘಟಕ/ನಿಲ್ದಾಣಗಳ ಬೇಡಿಕೆ, ನೆಲಸಮಗೊಳಿಸಬೇಕಾದ ಶಿಥಿಲಾವಸ್ಥೆಯಲ್ಲಿರುವ ಬಸ್ ಘಟಕಗಳನ್ನು ಮರು ನಿರ್ಮಿಸುವುದು, ಹೊಸ …

Read More »

ಬಸವಣ್ಣನವರ ವಚನಗಳನ್ನು ವಿಶ್ವಕ್ಕೆ ತಲುಪಿಸಿದ ಡಿವೈಎಸ್ಪಿ ಬಸವರಾಜ ಯಲಿಗಾರ

ಬಸವಣ್ಣನವರ ವಚನಗಳನ್ನು ವಿಶ್ವಕ್ಕೆ ತಲುಪಿಸಿದ ಡಿವೈಎಸ್ಪಿ ಬಸವರಾಜ ಯಲಿಗಾರ ಗುಮ್ಮಟನಗರಿ ವಿಜಯಪುರ ಜಿಲ್ಲೆಯ ಭೀಮಾತೀರದ ಕುಖ್ಯಾತಿ ಹೊಂದಿರುವ ಜಿಲ್ಲೆ. ಇಲ್ಲಿನ ಪೊಲೀಸರಿಗೆ ಅಪರಾಧ ತಡೆಯೋದೆ ದೊಡ್ಡ ಕೆಲಸ. ರಾತ್ರಿ ಹಗಲು ಎನ್ನದೆ ಕೆಲಸ ಮಾಡಬೇಕು. ಅಂತಹ ಜಿಲ್ಲೆಯ ಪೊಲೀಸ್ ಅಧಿಕಾರಿ ಸದ್ದಿಲ್ಲದೆ ಬಸವಣ್ಣನ ವಚನಗಳು ವಿಶ್ವಕ್ಕೆ ತಲುಪಿಸುವ ಕೆಲಸ ಮಾಡಿದ್ದಾರೆ. ಆ ಅಧಿಕಾರಿಗೆ ವಿಜಯಪುರ ಜಿಲ್ಲೆಯಲ್ಲಿ ಅಭಿನಂದನಾ ಸಮಾರಂಭ ಅಭೂತಪೂರ್ವವಾಗಿ ನಡೆಯಿತು. ‌ ವಿಜಯಪುರ ಜಿಲ್ಲೆ ಅಂದ್ರೆ ಸಾಕು ಕ್ರೈಂ …

Read More »

ಹು – ಧಾ ಮಹಾನಗರ ಪಾಲಿಕೆ ಮೇಯರ್ , ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವು

ಹು – ಧಾ ಮಹಾನಗರ ಪಾಲಿಕೆ ಮೇಯರ್ , ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಗದ್ದುಗೆಯನ್ನು ಬಿಜೆಪಿ ತನ್ನ ತಕ್ಕೆಗೆ ತಗೆದುಕೊಂಡಿದ್ದು, ಬಿಜೆಪಿಯ ಅಭ್ಯರ್ಥಿಗಳು ಮೇಯರ್ ಹಾಗೂ ಉಪಮೇಯರ್ ಆಗಿ ಹೊರಹೊಮ್ಮಿದ್ದಾರೆ. ಧಾರವಾಡದ ಪಾಲಿಕೆ ಸದಸ್ಯೆಯಾದ ಜ್ಯೋತಿ ಪಾಟೀಲ್ ಮೇಯರ್ ಆಗಿ ಹಾಗೂ ಹುಬ್ಬಳ್ಳಿ ಪಾಲಿಕೆ ಸದಸ್ಯರಾದ ಸಂತೋಷ್ ಚವ್ಹಾನ್ ಉಪಮೇಯರ್ ಆಗಿ ಅಧಿಕೃತವಾಗಿ ಆಯ್ಕೆಯಾಗಿದ್ದಾರೆಂದು ಪ್ರಾದೇಶಿಕ ಆಯುಕ್ತರಾದ ಸಿದ್ದಣ್ಣಾ ಬಿರಾದಾರ ಅವರು ಘೋಷಣೆ ಮಾಡಿದ್ದಾರೆ. …

Read More »

ಬರಗೂರು ರಾಮಚಂದ್ರಪ್ಪನವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ; ಎಸ್.ಐ. ಬಿರಾದಾರ

ಬರಗೂರು ರಾಮಚಂದ್ರಪ್ಪನವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ; ಎಸ್.ಐ. ಬಿರಾದಾರ ಬಸವರಾಜ ಕಟ್ಟಿಮನಿ ಕಾದಂಬರಿ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ನಾಡೋಜ ಬರಗೂರು ರಾಮಚಂದ್ರಪ್ಪ ಕುರಿತು ವಿಚಾರ ಸಂಕಿರಣ ಅನ್ಯರ ಪ್ರತಿ ಪ್ರೀತಿ ವಾತ್ಸಲ್ಯವನ್ನು ತೋರಿ ಬದುಕನ್ನು ಅನುಭವಿಸಬೇಕು. ಇಂತಹ ವ್ಯಕ್ತಿತ್ವವನ್ನು ನಾಡೋಜ್ ಬರಗೂರು ರಾಮಚಂದ್ರಪ್ಪನವರು ಹೊಂದಿದ್ದಾರೆಂದು ಕನ್ನಡ ಅಧ್ಯಾಪಕರ ಪರಿಷತ್ತಿನ ಅಧ್ಯಕ್ಷರಾದ ಡಾ. ಎಸ್‌.ಐ. ಬಿರಾದಾರ ಹೇಳಿದರು. ಬೆಳಗಾವಿಯ ಸಂಗೊಳ್ಳಿರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ಬಸವರಾಜ ಕಟ್ಟಿಮನಿ ಪ್ರತಿಷ್ಠಾನ, …

Read More »

ಗೋಡಚಿನಮಲ್ಕಿ ನಿಸರ್ಗ ಜಲಪಾತಕ್ಕೆ ಪ್ರವಾಸಿಗರ ದಂಡು

ಹುಕ್ಕೇರಿ : ಗೋಕಾಕ ತಾಲೂಕಿನ ಗೋಡಚಿನಮಲ್ಕಿ ನಿಸರ್ಗ ಜಲಪಾತಕ್ಕೆ ಪ್ರವಾಸಿಗರ ದಂಡು ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಸಪ್ತನದಿಗಳ ನಾಡು ಬೆಳಗಾವಿ ಜಿಲ್ಲೆಯಲ್ಲಿ ಒಂದೆಡೆ ಪ್ರವಾಹ ಸೃಷ್ಟಿಯಾಗುತ್ತದೆ, ಮತ್ತೊಂದೆಡೆ ಮಾರ್ಕಂಡೇಯ ನದಿ ಉಕ್ಕಿ ಹರಿಯುತ್ತಿರುವದರಿಂದ ಹುಕ್ಕೇರಿ ತಾಲೂಕಿನ ಶಿರೂರ ಜಲಾಶಯದಿಂದ ನೀರು ಹೋರಕ್ಕೆ ಬಿಟ್ಟಿದ್ದರಿಂದ ಗೋಕಾಕ ತಾಲೂಕಿನ ಗೊಡಚಿನಮಲ್ಕಿ ಜಲಪಾತದ ರುದ್ರರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಮುಗಿಬೀಳುತ್ತಿದ್ದಾರೆ. ಗೋಕಾಕ್​ನಿಂದ 18 ಕಿ‌.ಮೀ ದೂರದಲ್ಲಿರುವ ಗೊಡಚಿನಮಲ್ಕಿ ಗ್ರಾಮದಿಂದ ಸುಮಾರು 2.5 …

Read More »

ಹುಡುಗಿ ವಿಚಾರ ನಡು ರಾತ್ರಿ ಕಿಡ್ನಾಪ್ ಮಾಡಿ ಹಲ್ಲೆ

ಹುಬ್ಬಳ್ಳಿ: ಹುಡುಗಿ ವಿಚಾರ ನಡು ರಾತ್ರಿ ಕಿಡ್ನಾಪ್ ಮಾಡಿ ಹಲ್ಲೆ ಪ್ರೀತಿ ಮಾಯೆ ಹುಷಾರು ಕಣ್ಣೀರ್ ಮಾರೋ ಬಜಾರ್ ಎಂಬ ಸಾಂಗ್ ನಾವೆಲ್ಲ ಕೇಳಿದ್ದೇವೆ ಪ್ರೀತಿಗೋಸ್ಕರ ಪ್ರಾಣ ಕೊಟ್ಟಿರೋರು, ಪ್ರಾಣ ತೆಗಿದಿರೋರ್ ಬಗ್ಗೆ ನಾವೆಲ್ಲ ನೋಡಿದ್ದೇವೆ, ಅದೇ ರೀತಿ ಇಲ್ಲೊಬ್ಬ ಪ್ರೀತಿ ವಿಚಾರಕ್ಕೇ ಯಮನ ಮನೆಯ ಬಾಗಿಲನ್ನು ತಟ್ಟಿ ಬಂದಿದ್ದಾನೆ,ಹಾಗಾದ್ರೆ ಯಾರಾತ ಏನು ಆತನ ಲವ್ ಸ್ಟೋರಿ ಅಂತೀರಾ ಹಾಗಾದ್ರೆ ಈ ಸ್ಟೋರಿ ನೋಡಿ. ಹೀಗೆ ಆಸ್ಪತ್ರೆಯ ಬೆಡ್ ಮೇಲೆ …

Read More »