Breaking News

Daily Archives: ಜುಲೈ 3, 2025

ಬೆಂಗಳೂರಿನಿಂದ ಹೊರಡುವ ವಿಶೇಷ ಎಕ್ಸ್​​ಪ್ರೆಸ್ ರೈಲು ಸೇವೆ ವಿಸ್ತರಣೆ

ಹುಬ್ಬಳ್ಳಿ: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೀದರ್, ನಾರಂಗಿ ಹಾಗೂ ಮಾಲ್ಡಾ ಟೌನ್ ನಡುವೆ ಈ ಹಿಂದೆ ಚಲಿಸುತ್ತಿದ್ದ ವಿಶೇಷ ರೈಲು ಸೇವೆಗಳನ್ನು ಈಗಿರುವ ಸಮಯ, ನಿಲುಗಡೆಗಳು ಮತ್ತು ಬೋಗಿಗಳ ಸಂಯೋಜನೆಯೊಂದಿಗೆ ಮುಂದುವರಿಸಲು ನಿರ್ಧರಿಸಿದೆ. ವಿವರ ಕೆಳಕಂಡಂತಿದೆ.. ಎಸ್ಎಂವಿಟಿ ಬೆಂಗಳೂರು – ಬೀದರ್ – ಎಸ್ಎಂವಿಟಿ ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ: 1. ರೈಲು ಸಂಖ್ಯೆ 06539 ಎಸ್ಎಂವಿಟಿ ಬೆಂಗಳೂರು …

Read More »

ಶ್ವಾಸನಾಳದಲ್ಲಿ ಸಿಲುಕಿದ್ದ ಕಡಲೆ ತುಣಕು

ಮಂಗಳೂರು: ಹಲವು ತಿಂಗಳಿನಿಂದ ಅಸ್ತಮಾ ಎಂದುಕೊಂಡು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರಿಗೆ ಮಂಗಳೂರಿನ ಕೆಎಂಸಿ ಆಸ್ಪತ್ರೆ ವೈದ್ಯರು ಯಶಸ್ವಿ ಚಿಕಿತ್ಸೆ ನೀಡಿ ಗುಣಪಡಿಸಿದ್ದಾರೆ. ಅಸ್ತಮಾ ಅಥವಾ ಯಾವುದೇ ಅಲರ್ಜಿಯ ಲಕ್ಷಣ ಹೊಂದಿರದ 50 ವರ್ಷದ ವ್ಯಕ್ತಿಯೊಬ್ಬರು ಕಳೆದ 6 ತಿಂಗಳಿನಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಉಬ್ಬಸ ಸಮಸ್ಯೆಯನ್ನು ಅಸ್ತಮಾ ಎಂದು ತಿಳಿದು ಸಾಕಷ್ಟು ಕಡೆ ಚಿಕಿತ್ಸೆ, ಬ್ರೊಂಕೊಡೈಲೇಟರ್ ಥೆರಪಿ ಪಡೆದರೂ ಸಮಸ್ಯೆಯಲ್ಲಿ ಯಾವುದೇ ಸುಧಾರಣೆ ಕಂಡುಬಂದಿರಲಿಲ್ಲ. ಆದರೆ ಈಗ ಕೆಎಂಸಿ ಆಸ್ಪತ್ರೆಯ …

Read More »

ಉದ್ಯಮಿಯಿಂದ 2 ಕೋಟಿ ರೂ. ದರೋಡೆ ಪ್ರಕರಣ: ನಾಲ್ವರು ಆರೋಪಿಗಳ ಬಂಧ‌ನ

ಬೆಂಗಳೂರು: ನಗದು ಹಣವನ್ನು ಯುಎಸ್‌ಡಿಟಿ ಕರೆನ್ಸಿಯಾಗಿ ಬದಲಾವಣೆ ಮಾಡಿಕೊಡುವುದಾಗಿ ನಂಬಿಸಿ ಉದ್ಯಮಿಯೊಬ್ಬರನ್ನು ಕರೆಸಿಕೊಂಡು, ಮಾರಕಾಸ್ತ್ರ ತೋರಿಸಿ 2 ಕೋಟಿ ರೂ. ನಗದು ಸುಲಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬೆಂಜಮಿನ್ ಹರ್ಷ, ರಕ್ಷಿತ್, ಪ್ರಕಾಶ್ ಹಾಗೂ ಭರತ್ ಎಂಬುವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಲಿಗೆ ಸಂಬಂಧ ಉದ್ಯಮಿ ವಿ. ಶ್ರೀಹರ್ಷ ಪೊಲೀಸರಿಗೆ ದೂರು ನೀಡಿದ್ದರು. …

Read More »

ಜು.4ರಂದು ವಿಟಿಯು ಘಟಿಕೋತ್ಸವ: ಇಸ್ರೋ ಅಧ್ಯಕ್ಷ ಡಾ. ವಿ. ನಾರಾಯಣನ್ ಸೇರಿ ಮೂವರಿಗೆ ಡಾಕ್ಟರ್ ಆಫ್ ಸೈನ್ಸ್ ಪ್ರದಾನ

ಬೆಳಗಾವಿ: “ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 25ನೇ ಘಟಿಕೋತ್ಸವದ ಭಾಗ-1 ಜುಲೈ 4ರಂದು ನಡೆಯಲಿದೆ. ಈ ವೇಳೆ ವಿಜ್ಞಾನ, ತಾಂತ್ರಿಕ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಸಾಧನೆ ಮಾಡಿದ ಮೂವರು ಮಹನೀಯರಿಗೆ ಗೌರವ ಡಾಕ್ಟರೇಟ್ ಪದವಿ ಡಾಕ್ಟರ್ ಆಫ್ ಸೈನ್ಸ್ ಪ್ರದಾನ ಮಾಡಲಾಗುತ್ತದೆ” ಎಂದು ಕುಲಪತಿ ಪ್ರೊ‌.ಎಸ್. ವಿದ್ಯಾಶಂಕರ ತಿಳಿಸಿದರು. ವಿಟಿಯುದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ವಿಶ್ವವಿದ್ಯಾಲಯದ ಜ್ಞಾನ ಸಂಗಮ ಆವರಣದ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಸಭಾಂಗಣದಲ್ಲಿ …

Read More »

ಬೆಳಗಾವಿ ಜಿಲ್ಲೆ ವಿಭಜನೆಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಒತ್ತಾಯ

ಬೆಳಗಾವಿ: 2025ರ ಡಿಸೆಂಬರ್‌ 31ರೊಳಗೆ ಕ್ರಮವಹಿಸಿ ಹೊಸ ಜಿಲ್ಲೆಗಳನ್ನು ಘೋಷಣೆ ಮಾಡದೇ ಹೋದರೆ ಈ ಸರ್ಕಾರದ ಅವಧಿಯಲ್ಲಿ ಜಿಲ್ಲಾ ರಚನೆ ಮರೀಚಿಕೆ ಆಗುತ್ತದೆ. ಮುಖ್ಯಮಂತ್ರಿಗಳು, ಕಂದಾಯ ಸಚಿವರು ಹಾಗೂ ಜಿಲ್ಲೆಯ ಇಬ್ಬರು ಸಚಿವರು ಜನರ ಮೂಗಿಗೆ ತುಪ್ಪ ಹಚ್ಚುವುದನ್ನು ಬಿಟ್ಟು ಬೆಳಗಾವಿ ಜಿಲ್ಲೆಯನ್ನು ವಿಭಜಿಸುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಒತ್ತಾಯಿಸಿದರು. ಬೆಳಗಾವಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರದ ಜನಗಣತಿ ಇಲಾಖೆ ಒಂದು ಆದೇಶ ಹೊರಡಿಸಿದ್ದು, ಎಲ್ಲಾ ರಾಜ್ಯಗಳ …

Read More »

ಕಾಗವಾಡ ತಾ.ಶೇಡಬಾಳದ ಬಿಎಸ್ಎಫ್ ಯೋಧ ಅನಾರೋಗ್ಯದಿಂದ ನಿಧನ

ಕಾಗವಾಡ ತಾ.ಶೇಡಬಾಳದ ಬಿಎಸ್ಎಫ್ ಯೋಧ ಅನಾರೋಗ್ಯದಿಂದ ನಿಧನ ಬಿಎಸ್ಎಫ್ ಯೋಧ ದಗಡು ಪೂಜಾರಿ ರಜೆಯ ಮೇಲೆ ಗ್ರಾಮಕ್ಕೆ ಮರಳಿದ್ದಾಗ ಆರೋಗ್ಯ ಸಮಸ್ಯೆಯಿಂದ ಬೆಳಗಾವಿ ಆಸ್ಪತ್ರೆಗೆ ದಾಖಲಾಗಿದ್ದರು.ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಮೃತ ಯೋಧರು ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಯೋಧನು ಅಸ್ಸಾಂ ರಾಜ್ಯದ ಗುವಾಹಟಿಯ170 ಬಟಾಲಿಯನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಯೋಧನ ಸ್ವಗ್ರಾಮದ ತೋಟದಲ್ಲಿ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಅಂತ್ಯಕ್ರಿಯೆಯಲ್ಲಿ ಸರ್ಕಾರಿ ಅಧಿಕಾರಿಗಳು ಗ್ರಾಮದ ಮುಖಂಡರು ಭಾಗಿಯಾಗಿದ್ದರು

Read More »

ಗಮನ ಸೆಳೆದ ಕೇರಳದ ಕೊಟ್ಟಿಯೂರು ಕ್ಷೇತ್ರ

ಬಂಟ್ವಾಳ(ದಕ್ಷಿಣ ಕನ್ನಡ): ಈ ವರ್ಷ ಇದ್ದಕ್ಕಿದ್ದಂತೆ ಕೇರಳದ ಪುಣ್ಯಕ್ಷೇತ್ರವೊಂದು ಗಮನ ಸೆಳೆಯುತ್ತಿದೆ. ಸೋಶಿಯಲ್​​ ಮೀಡಿಯಾದಲ್ಲಂತೂ ಕೇರಳದ ಕಣ್ಣೂರು ಜಿಲ್ಲೆಯಲ್ಲಿರುವ ಕೊಟ್ಟಿಯೂರು ಕ್ರೇಜ್​ ಸೃಷ್ಟಿಸಿದೆ. ಕಣ್ಣೂರು ಜಿಲ್ಲೆಯಲ್ಲಿರುವ ಕೊಟ್ಟಿಯೂರು ಶಿವ ಕ್ಷೇತ್ರದಲ್ಲಿ ವರ್ಷಕ್ಕೊಂದು ಬಾರಿ 27 ದಿನಗಳ ವೈಶಾಖ ಮಹೋತ್ಸವ ನಡೆಯುತ್ತದೆ. ಈ ವರ್ಷ ಕೊಟ್ಟಿಯೂರಿನ ವೈಶಾಖ ಮಹೋತ್ಸವ ಭಾರೀ ಸಂಚಲನ ಮೂಡಿಸಿದೆ. ದಕ್ಷಯಜ್ಞದ ಪುರಾಣ ಕಥೆಯೊಂದಿಗೆ ಸಂಬಂಧ ಇರುವ ಕೊಟ್ಟಿಯೂರು ಸನ್ನಿಧಿಯಲ್ಲಿ ಸ್ಥಾವರ ರೂಪದ ಶಾಶ್ವತ ದೇವಸ್ಥಾನಗಳಿಲ್ಲ. ವೈಶಾಖ ಮಹೋತ್ಸವಕ್ಕಾಗಿ ಪ್ರಕೃತಿದತ್ತವಾದ …

Read More »

‘ಪಡಿತರ ಅಕ್ರಮ ತಡೆಗೆ ಅಂಗಡಿಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿ’: ಗ್ಯಾರಂಟಿ ಅನುಷ್ಠಾನ ಸಮಿತಿ ಸೂಚನೆ

ಗಂಗಾವತಿ: “ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಅನ್ನಭಾಗ್ಯ’ ಪಡಿತರ ಫಲಾನುಭವಿಗಳಿಗೆ ತಲುಪದೇ ಬಹುತೇಕ ಧಾನ್ಯ ಕಳ್ಳರ ಪಾಲಾಗುತ್ತಿದ್ದು, ಇದನ್ನು ತಡೆಯಲು ನ್ಯಾಯಬೆಲೆ ಅಂಗಡಿಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಬೇಕು” ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಡಾ. ವೆಂಕಟೇಶ್​ ಬಾಬು ಹೇಳಿದರು. ತಾಲೂಕು ಪಂಚಾಯಿತಿ ಆವರಣದಲ್ಲಿರುವ ಮಂಥನ ಸಭಾಂಗಣದಲ್ಲಿ ಬುಧವಾರ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಹಂತದ ಪಂಚ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. …

Read More »