Breaking News

Daily Archives: ಜುಲೈ 7, 2025

ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಭಾರಿ ಏರಿಕೆ ಹಿನ್ನೆಲೆ

ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಭಾರಿ ಏರಿಕೆ ಹಿನ್ನೆಲೆ ಕೃಷ್ಣಾ ನದಿಗೆ ಭೇಟಿ ನೀಡಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಾ ನದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಸತೀಶ ಜಾರಕಿಹೊಳಿ‌ ಕುಡಚಿ ಸೇತುವೆಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದ ಸತೀಶ ಜಾರಕಿಹೊಳಿ‌ ಕೃಷ್ಣಾ ನದಿಗೆ 1 ಲಕ್ಷ 10 ಸಾವಿರ ಕ್ಯೂಸೆಕ್ ಒಳ ಹರಿವು ಅಪಾಯ ಮಟ್ಟ ಮೀರಿ ಕೃಷ್ಣಾ ನದಿ ಹರಿಯುತ್ತಿರುವ ಕಾರಣ ಭೇಟಿ …

Read More »

ಹಠಾತ್​ ಸಾವು ಅಧಿಸೂಚಿತ ಕಾಯಿಲೆ, ಮರಣೋತ್ತರ ಪರೀಕ್ಷೆ ಕಡ್ಡಾಯ: ಸಚಿವ ದಿನೇಶ್​ ಗುಂಡೂರಾವ್

ಬೆಂಗಳೂರು: ಕೋವಿಡ್​​ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ ಎಂಬುದು ವರದಿಯಲ್ಲಿ ಗೊತ್ತಾಗಿದೆ. ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ರವೀಂದ್ರನಾಥ್ ನೇತೃತ್ವದ ತಜ್ಞರ ಸಮಿತಿ ವರದಿಯನ್ನು ಇಂದು ಸರ್ಕಾರಕ್ಕೆ ಸಲ್ಲಿಸಿದೆ. ಮಾಧ್ಯಮಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವ ದಿನೇಶ್​ ಗುಂಡೂರಾವ್​ ಅವರು, “ಹೃದಯಾಘಾತಕ್ಕೆ ಕೋವಿಡ್​ ಸೋಂಕು ಕೂಡ ಕಾರಣವಾಗಿರುಬಹುದೇ ಹೊರತು ಲಸಿಕೆಯಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. “ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವುಗಳು ಮತ್ತು ಕೋವಿಡ್‌ನಿಂದಾಗುವ ದುಷ್ಪರಿಣಾಮಗಳ ಕುರಿತು ಸರ್ಕಾರದ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದ್ದು, ಈ ಸಂಬಂಧ …

Read More »

ಕಣ್ಮನ ಸೆಳೆದ ಗೋಕಾಕ್​​ ಭಂಡಾರ ಜಾತ್ರೆ 10 ಲಕ್ಷಕ್ಕೂ ಅಧಿಕ ಭಕ್ತರು ಸಾಕ್ಷಿ

ಬೆಳಗಾವಿ: ಗ್ರಾಮದೇವಿಗೆ ಜಾತ್ರೆಯ ಸಂಭ್ರಮ.. ಎಲ್ಲಿ ನೋಡಿದರೂ ಜನಸಾಗರ.. ಕಣ್ಮನ ಸೆಳೆವ ಅದ್ಧೂರಿ ಜೋಡು ರಥೋತ್ಸವ.. ಅಲಂಕಾರಗೊಂಡು ಕಂಗೊಳಿಸುತ್ತಿರುವ ನೂತನ ಲಕ್ಷ್ಮೀ ದೇವಿ ದೇವಸ್ಥಾನ.. ಮುಗಿಲೆತ್ತರಕ್ಕೆ ಚಿಮ್ಮಿದ ಭಕ್ತಿಯ ಭಂಡಾರದಲ್ಲಿ ಮಿಂದೆದ್ದ ಭಕ್ತ ಸಮೂಹ. ಹೌದು, ಇಂತಹ ಅದ್ಭುತ ದೃಶ್ಯಗಳಿಗೆ ಸಾಕ್ಷಿ ಆಗಿದ್ದು, ಕರದಂಟು ನಾಡು ಗೋಕಾಕದ ಗ್ರಾಮದೇವತೆ ಲಕ್ಷ್ಮೀದೇವಿ ಜಾತ್ರೆ. ಕಳೆದ ಜೂ.30 ರಿಂದ ಆರಂಭವಾಗಿರುವ ಈ ಜಾತ್ರಾ ಮಹೋತ್ಸವದಲ್ಲಿ ಭಕ್ತಿಯ ಪರಾಕಾಷ್ಠೆ ಮುಗಿಲು ಮುಟ್ಟಿದೆ. ಹೀಗಾಗಿ, ಗೋಕಾಕದ ಮನೆ …

Read More »

ಸರ್ಕಾರಕ್ಕೆ 4,416 ಕೋಟಿ ರೂ. ಅಬಕಾರಿ ರಾಜಸ್ವ ಸಂಗ್ರಹ: ಕಳ್ಳಭಟ್ಟಿ ಮುಕ್ತ ಕಲಬುರಗಿ ಜಿಲ್ಲೆಗೆ ಪಣ, ಗಡಿಯಲ್ಲಿ ಕಟ್ಟೆಚ್ಚರ

ಕಲಬುರಗಿ: ಜಿಲ್ಲೆಯಲ್ಲಿ ಅಕ್ರಮ ಕಳ್ಳಭಟ್ಟಿ ಮತ್ತು ಕಲಬೆರೆಕೆ ಸೇಂದಿ ಹಾಗೂ ಮಾದಕ ವಸ್ತುಗಳ (ಗಾಂಜಾ ಮತ್ತು ಇತರೆ ವಿಷಪೂರಿತ) ತಯಾರಿಕೆ, ಸಾಗಾಣಿಕೆ, ಸಂಗ್ರಹಣೆ ಮತ್ತು ಮಾರಾಟಗಳಂತಹ ಕೃತ್ಯಗಳ ನಿಯಂತ್ರಣಕ್ಕೆ ಅಬಕಾರಿ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸಿ ಕಳ್ಳಭಟ್ಟಿ ಮುಕ್ತ ಕಲಬುರಗಿ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಗಸ್ತು, ದಾಳಿ ತೀವ್ರಗೊಳಿಸಿದೆ. ಕಳ್ಳಭಟ್ಟಿ ನಿಯಂತ್ರಣಕ್ಕೆ ಪ್ರತಿ ತಿಂಗಳು ಪರೇಡ್ ಮಾಡಲಾಗುತ್ತಿದ್ದು, ಇಲ್ಲಿ ಗೌಪ್ಯ ದಾಳಿಗೆ ರೂಪುರೇಷೆ ಹಾಕಿಕೊಂಡು ನಿರಂತರ ದಾಳಿ ಮಾಡಲಾಗುತ್ತಿದೆ. …

Read More »

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

ಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು ಪತ್ತೆ ಮಾಡಿದ್ದಾರೆ. ಆರೋಪಿಗಳಿಂದ 4.5 ಕೋಟಿ ಮೌಲ್ಯದ ಮಾದಕ ದ್ರವ್ಯಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಯಲಹಂಕ ತಾಲೂಕು ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಅದ್ದಿಗಾನಹಳ್ಳಿ ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಿದೇಶಿ ಪ್ರಜೆಗಳು ವಾಸವಾಗಿದ್ದು, ಅವರ ಚಲನವಲನದ ಬಗ್ಗೆ ಪೊಲೀಸರಿಗೆ ಸಂಶಯ ಇತ್ತು. ಹೀಗಾಗಿ ಖಚಿತ ಮಾಹಿತಿ ಪಡೆದ ಮೇರೆಗೆ ರಾಜಾನುಕುಂಟೆ ಪೊಲೀಸರು ಅವರ …

Read More »

ಅಶ್ರಫ್ ಕುಟುಂಬಸ್ಥರು ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಸ್ಪೀಕರ್ ಯು. ಟಿ. ಖಾದರ್ ಇದ್ದಾರೆ (

ಬೆಂಗಳೂರು : ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದ ಕೆ. ಸಿ. ವೇಣುಗೋಪಾಲ್ ಕೋರಿಕೆಯಂತೆ, ಗುಂಪು ಹತ್ಯೆಯಲ್ಲಿ ಹಲ್ಲೆಗೀಡಾದ ಅಶ್ರಫ್ ಕುಟುಂಬಸ್ಥರಿಗೆ 15 ಲಕ್ಷ ರೂಪಾಯಿ ಪರಿಹಾರ ಮೊತ್ತವನ್ನು ವಿತರಿಸಲಾಗಿದೆ. ಮಂಗಳೂರಿನ ಕುಡುಪುವಿನಲ್ಲಿ ನಡೆದ ಗುಂಪು ಹತ್ಯೆಗೆ ಸಂಬಂಧಿಸಿದಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಅವರ ಕೋರಿಕೆ ಹಾಗೂ ಸೂಚನೆಯ ಮೇರೆಗೆ ಸಭಾಧ್ಯಕ್ಷ ಯು. ಟಿ. ಖಾದರ್, ಸಚಿವ ಜಮೀರ್ ಅಹ್ಮದ್ ಖಾನ್, ಎಐಸಿಸಿ ಕಾರ್ಯದರ್ಶಿಗಳಾದ ಬಿ. ಕೆ. ಹರಿಪ್ರಸಾದ್, …

Read More »

ವಿಡಿಯೋ ಮಾಡಲು ಬಳಸಿದ್ದ ಮಾರಕಾಸ್ತ್ರ ಮಾಯ! ಸಾಕ್ಷ್ಯನಾಶ ಸಾಬೀತಾದ್ರೆ ವಿನಯ್‌, ರಜತ್ ಗೆ ಸಂಕಷ್ಟ

ಬೆಂಗಳೂರು: ಕಿರುತೆರೆ ರಿಯಾಲಿಟಿ ಶೋ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಮಾರಕಾಸ್ತ್ರ ಹಿಡಿದು ಸಾರ್ವಜನಿಕ ಸ್ಥಳದಲ್ಲಿ ಶಾರ್ಟ್ ವಿಡಿಯೋ ಮಾಡಿದ್ದ ಪ್ರಕರಣ ಚಾರ್ಜ್ ಶೀಟ್ ಹಂತ ತಲುಪಿದೆ‌. ವಿಡಿಯೋಗೆ ಬಳಸಿದ್ದ ಮಾರಕಾಸ್ತ್ರಗಳು ಮೂರು ತಿಂಗಳು ಕಳೆದರೂ ಪೊಲೀಸರಿಗೆ ಸಿಗದಿರುವುದು ಇಬ್ಬರೂ ಆರೋಪಿಗಳಿಗೂ ಪುನಃ ಸಂಕಷ್ಟ ತಂದೊಡ್ಡುವ ಸಾಧ್ಯತೆ ದಟ್ಟವಾಗಿದೆ. ಮಾರಕಾಸ್ತ್ರ ದೊರೆಯದಿದ್ದರೆ ಸಾಕ್ಷ್ಯನಾಶವೆಂದು ಉಲ್ಲೇಖಿಸಿ ಚಾರ್ಜ್ ಶೀಟ್ ಸಲ್ಲಿಸುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ‌. ಮಾರಕಾಸ್ತ್ರಗಳ ಮಾದರಿಯನ್ನು ತಯಾರಿಸಿ ಕೊಟ್ಟಿದ್ದರು …

Read More »

ಗೋಕಾಕ್ ಮಹಾಲಕ್ಷ್ಮೀ ಜಾತ್ರೆಯಲ್ಲಿ ಒಂದಾದ B.J.P. ರೆಬೆಲ್ ಟೀಮ್.

ಬಿಜೆಪಿ ರೆಬೆಲ್ಸ್ ಟೀಮ್ ಮತ್ತೆ ಆಕ್ಟೀವ್..! ಗೋಕಾಕ್ ಮಹಾಲಕ್ಷ್ಮೀ ಜಾತ್ರೆಯಲ್ಲಿ ಒಂದಾದ ರೆಬೆಲ್ ಟೀಮ್. ಗೋಕಾಕ್ ಮಹಾಲಕ್ಷ್ಮಿ ಜಾತ್ರೆಗೆ ಭೇಟಿ ನೀಡಿದ ಕುಮಾರ್ ಬಂಗಾರಪ್ಪ . ಈ ವೇಳೆ ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ ಮಾಜಿ ಸಚಿವರು, ಬಿಪಿ ಹರೀಶ್ ಶಾಸಕರು, ಮಾಜಿ ಸಚಿವರಾದ ಶ್ರೀಮಂತ ಪಾಟೀಲ್ , ರಾಯಚೂರು ಮಾಜಿ ಸಂಸದ ಬಿ.ವಿ ನಾಯ್ಕ್ ರವರು ಹಾಜರಿದ್ದರು.

Read More »

ಕೇಂದ್ರ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

ಆನಂದ್ ನಗರದಲ್ಲಿ ೩೦ ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಎನ್.ಸಿ.ಡಿ.ಎಫ್.ಐ ಕಚೇರಿಯ ಕಟ್ಟಡವನ್ನು ಉದ್ಘಾಟಿಸಿದ ಕೇಂದ್ರ ಸಹಕಾರ ಸಚಿವ ಅಮಿತ್ ಷಾ ಕೇಂದ್ರ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಸಹಕಾರಿ ಸಂಘಗಳ ಆರ್ಥಿಕ ಮತ್ತು ತಾಂತ್ರಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (NCDFI) ಗುಜರಾತ್ ನ ಆನಂದ್ …

Read More »

ಚೇರಿಯಲ್ಲಿ ರಾಜ್ಯದ ಎಐಸಿಸಿ ಉಸ್ತುವಾರಿ ರಂದೀಪ್ ಸುರ್ಜೇವಾಲಾ (Randeep Surjewala) ಅವರನ್ನು ಭೇಟಿಯಾದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ, ಪ್ರಮುಖವಾಗಿ ಪಕ್ಷದ ಸಂಘಟನೆ ವಿಷಯದಲ್ಲಿ ಚರ್ಚೆ

ಬೆಂಗಳೂರು, ಜುಲೈ 7: ಕೆಪಿಸಿಸಿ ಕಚೇರಿಯಲ್ಲಿ ರಾಜ್ಯದ ಎಐಸಿಸಿ ಉಸ್ತುವಾರಿ ರಂದೀಪ್ ಸುರ್ಜೇವಾಲಾ (Randeep Surjewala) ಅವರನ್ನು ಭೇಟಿಯಾದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ, ಪ್ರಮುಖವಾಗಿ ಪಕ್ಷದ ಸಂಘಟನೆ ವಿಷಯದಲ್ಲಿ ಚರ್ಚೆ ಆಯಿತು, ಮುಂಬರುವ ಎಲ್ಲ ಸ್ಥಳೀಯ ಮತ್ತು ಪಂಚಾಯತ್ ಚುನಾವಣೆ ಮತ್ತು ಮೂರು ವರ್ಷಗಳ ನಂತರ ನಡೆಯುವ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪುನಃ ಅಧಿಕಾರಕ್ಕೆ ತರುವ ಬಗ್ಗೆ ಸುರ್ಜೇವಾಲಾ ಅವರೊಂದಿಗೆ ಮಾತುಕತೆ ನಡೆಯಿತು ಎಂದು ಸವದಿ …

Read More »