ತುಮಕೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತುಮಕೂರು ಹೊರವಲಯದ ಅಂತರಸನಹಳ್ಳಿ ಬಳಿ ನಡೆದಿದೆ. ಮಂಡ್ಯ ಜಿಲ್ಲೆಯ ಗಣನೂರು ಗ್ರಾಮದ ಗೀತಾ (20) ಕೊಲೆಯಾದ ಪತ್ನಿಯಾಗಿದ್ದಾರೆ. ಪತಿ ನವೀನ್ ಕೊಲೆ ಮಾಡಿರುವ ಆರೋಪಿ. ಮಹಿಳೆಯ ಕುತ್ತಿಗೆ, ಮುಖ ಹಾಗೂ ಇತರ ಭಾಗಗಳಿಗೆ ಮನಬಂದಂತೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ನವೀನ್ ತುಮಕೂರು ತಾಲೂಕಿನ ಅಮೃತಗಿರಿಯ ವಾಸಿಯಾಗಿದ್ದು, ಅಂತರಸನಹಳ್ಳಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ಇಬ್ಬರೂ ವಾಸವಿದ್ದರು. …
Read More »Daily Archives: ಜುಲೈ 7, 2025
ಪತಿಯನ್ನು ಕೊಲೆ ಮಾಡಲು ಸುಪಾರಿ ಕೊಟ್ಟಿದ್ದ ಪತ್ನಿ ಹಾಗೂ ಕೊಲೆ ಮಾಡಲು ಯತ್ನಿಸಿದ್ದ ಆರೋಪಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ
ಕಾರವಾರ: ದಾಂಡೇಲಿ ಸಮೀಪದ ಅಂಬೇವಾಡಿ ಗಾಂವಠಾಣ ನಿವಾಸಿ ಅಂಕುಶ್ ಸುತಾರ ಅವರ ಕೊಲೆಗೆ ಸುಪಾರಿ ಕೊಟ್ಟಿದ್ದ ಪ್ರಕರಣದಲ್ಲಿ ಅಂಕುಶ್ ಅವರ ಪತ್ನಿ ತೇಜಸ್ವಿನಿ ಹಾಗೂ ಕೊಲೆಗೆ ಯತ್ನಿಸಿದ ಗಣೇಶ್ ಪಾಟೀಲ್ಗೆ ತಲಾ 10 ವರ್ಷಗಳವರೆಗೆ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಪ್ರಕಟಿಸಿದೆ. ಪ್ರಕರಣ ಹಿನ್ನೆಲೆ: 11 ಜೂನ್ 2021 ರಂದು ರಾತ್ರಿ ಅಂಕುಶ್ ಕೊಲೆಗೆ ಯತ್ನ ನಡೆದಿತ್ತು. ಅಂಕುಶ್ ಪತ್ನಿ ಗಣೇಶ್ ಎಂಬಾತನಿಗೆ 30 …
Read More »ತಾಯಿಯೊಂದಿಗೆ ಚಿನ್ನದ ಹುಡುಗ ಕಾರ್ತಿಕ್
ಬೆಳಗಾವಿ: ತಾಯಿ ಟೈಲರಿಂಗ್ ಕೆಲಸ ಮಾಡುತ್ತಾರೆ. ತಂದೆ ಇಲ್ಲ. ತಾಯಿಗೆ-ಮಗ, ಮಗನಿಗೆ-ತಾಯಿನೇ ಎಲ್ಲಾ. ಮನೆಯಲ್ಲಿ ಬಡತನ ಹಾಸು ಹೊಕ್ಕಾಗಿತ್ತು. ಆದರೆ, ತಾಯಿಗೆ ಮಗನ ಸಾಧನೆ ಬಗ್ಗೆ ಬೆಟ್ಟದಷ್ಟು ಕನಸು. ಮಗ ಎಂಜಿನಿಯರಿಂಗ್ ಮೆಕ್ಯಾನಿಕಲ್ ವಿಭಾಗದಲ್ಲಿ 7 ಚಿನ್ನದ ಪದಕ ಗೆದ್ದು ತಾಯಿ ಹೆಮ್ಮೆ ಪಡುವಂತ ಸಾಧನೆಗೈದಿದ್ದಾರೆ. ಬೆಳಗಾವಿಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 25ನೇ ಘಟಿಕೋತ್ಸವ ನಡೆಯಿತು. ಈ ವೇಳೆ ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮೆಕ್ಯಾನಿಕಲ್ ವಿಭಾಗದ ಕಾರ್ತಿಕ್ ಎಲ್. ರಾಜ್ಯಪಾಲ …
Read More »ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ
ಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ ರೂಪಾಯಿಗಳಿಗಿಂತ ಹೆಚ್ಚು ಹಣವನ್ನು ಕಳೆದುಕೊಂಡಿದ್ದಾರೆ. ಜೂನ್ 6ರಂದು ಬೆಳಗ್ಗೆ 10:25ರ ಸುಮಾರಿಗೆ ಮಹಿಳೆಗೆ 8260865038 ಸಂಖ್ಯೆಯಿಂದ ಕರೆ ಬಂದಿದೆ. ಕರೆ ಮಾಡಿದವರು ತಾವು ಇನ್ಸ್ಪೆಕ್ಟರ್ ಅನು ಶರ್ಮಾ ಎಂದು ಪರಿಚಯಿಸಿಕೊಂಡು, NCRP (ನ್ಯಾಷನಲ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್)ನಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಮಹಿಳೆಯ ಗಂಡನ ಹೆಸರಿನಲ್ಲಿ ಹೊಸ ಸಿಮ್ (9867485463) ಖರೀದಿಸಲಾಗಿದೆ. …
Read More »ರಾಜ್ಯದಲ್ಲಿ ಬಾಲ್ಯ ವಿವಾಹ ಕಡಿವಾಣಕ್ಕೆ ಕಠಿಣ ಮಸೂದೆ: ಬಾಲ್ಯ ವಿವಾಹಕ್ಕೆ ಪ್ರಯತ್ನ, ನಿಶ್ಚಿತಾರ್ಥವೂ ಅಪರಾಧ; ಏನೆಲ್ಲಾ ಶಿಕ್ಷೆ, ದಂಡ?
ಬೆಂಗಳೂರು: ರಾಜ್ಯದಲ್ಲಿ ಬಾಲ್ಯ ವಿವಾಹದ ಪ್ರಮಾಣ ವರ್ಷಂಪ್ರತಿ ಹೆಚ್ಚುತ್ತಲೇ ಇದೆ. ಅಧಿಕಾರಿಗಳು ಎಷ್ಟೇ ಜಾಗೃತಿ ಮೂಡಿಸಿದರೂ ಬಾಲ್ಯ ವಿವಾಹಕ್ಕೆ ಕಡಿವಾಣ ಹಾಕಲು ಸಾಧ್ಯವಾಗುತ್ತಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಇದೀಗ ಬಾಲ್ಯ ವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ), 2025 ಕರಡು ಮಸೂದೆ ಸಿದ್ಧಪಡಿಸಿದೆ. ಆಧುನಿಕ ಕಾಲಮಾನದಲ್ಲೂ ಬಾಲ್ಯ ವಿವಾಹದಂತಹ ಸಾಮಾಜಿಕ ಪಿಡುಗು ಅವ್ಯಾಹತವಾಗಿ ಮುಂದುವರೆದಿದೆ. ಅದರಲ್ಲೂ ಕರ್ನಾಟಕದಂತಹ ಪ್ರಗತಿಪರ ರಾಜ್ಯದಲ್ಲೂ ಅನಿಷ್ಟ ಪದ್ಧತಿ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದೆ. ನಾಗರಿಕ …
Read More »ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ
ಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು ಸೇರಿದಂತೆ ಹಲವು ಮಹಾನ್ ವ್ಯಕ್ತಿಗಳು ಜನಿಸಿದ್ದಾರೆ. ಅಂಬಿಗರ ಚೌಡಯ್ಯ 12 ಶತಮಾನದ ವೀರಶೈವ ಲಿಂಗಾಯತ ಬಸವೇಶ್ವರರ ಸಮಕಾಲೀನರು. ಅವರ ಜೊತೆ ಅನುಭವ ಮಂಟಪದಲ್ಲಿ ಭಾಗವಹಿಸಿದ್ದ ಶರಣರಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಸಹ ಒಬ್ಬರು. ತಮ್ಮ ನೇರ, ದಿಟ್ಟ ವಚನಗಳಿಂದ ಸಮಾಜದ ಅಂಕುಡೊಂಕು ತಿದ್ದಿದ್ದ ಚೌಡಯ್ಯ ತಮ್ಮ ಕೊನೆಯ ದಿನಗಳನ್ನು ಕಳೆದಿದ್ದು ರಾಣೆಬೆನ್ನೂರು …
Read More »
Laxmi News 24×7