Breaking News

Daily Archives: ಜುಲೈ 8, 2025

ಮಗಳು ಬರ್ಬೇಡ ಅಂತಾಳೆ,ಮಗ-ಸೊಸೆ‌ ಹಿಂಸೆ‌ ನೀಡ್ತಾರೆ,ಕೃಷ್ಣಾ ನದಿಗೆ ಹಾರಲು ಯತ್ನಿಸಿದ್ದ ವೃಧ್ದನ ಕಣ್ಣೀರ ಕಥೆ

ಮಗಳು ಬರ್ಬೇಡ ಅಂತಾಳೆ,ಮಗ-ಸೊಸೆ‌ ಹಿಂಸೆ‌ ನೀಡ್ತಾರೆ,ಕೃಷ್ಣಾ ನದಿಗೆ ಹಾರಲು ಯತ್ನಿಸಿದ್ದ ವೃಧ್ದನ ಕಣ್ಣೀರ ಕಥೆ ಚಿಕ್ಕೋಡಿ:ಕೃಷ್ಣಾ ನದಿಗೆ ಹಾರಿ ಜೀವ ತೆಗೆದುಕೊಳ್ಳಲು ಯತ್ನಿಸುತ್ತಿದ್ದ ವೃದ್ಧನನ್ನು ಸ್ಥಳೀಯರು ಕಾಪಾಡಿದಾರೆ. ನಂತರ ಕಷ್ಟ, ಸುಖ ವಿಚಾರಿಸಿದಾಗ ಮಗ ಮಗಳಿಂದಲೇ ದೂರಾವಾದ ಕರುಣಾಜನಕ ಕತೆಯನ್ನು ಹೇಳಿದ್ದಾನೆ. ಅಂದ್ದಾಗೆ ಈ ಘಟನೆಯು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ನಡೆದಿದೆ. ಕೃಷ್ಣಪ್ಪ ಗೋಪಾಲಪ್ಪ ಹತ್ತಿಮರದ (77) ನದಿಗೆ ಹಾರಲು ಯತ್ನಿಸಿದ ವೃದ್ಧ. ಇವರು ಮೂಲತಃ …

Read More »

ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ವಿಜಯ ಮೋರೆ ಅವರಿಗೆ ಸನ್ಮಾನ

ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ವಿಜಯ ಮೋರೆ ಅವರಿಗೆ ಸನ್ಮಾನ ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ವಿಶೇಷ ಕಾರ್ಯಕ್ರಮದಲ್ಲಿ, ಬೆಳಗಾವಿಯ ಮಾಜಿ ಮೇಯರ್ ಮತ್ತು ಸಮಾಜ ಸೇವಕ ವಿಜಯ್ ಮೋರೆ ಅವರನ್ನು ಸಾರ್ವಜನಿಕ ಸೇವೆ ಮತ್ತು ಸಮಾಜಕ್ಕೆ ಸಹಾಯ ಮಾಡುವಲ್ಲಿ ಅವರ ಗಮನಾರ್ಹ ಕಾರ್ಯಕ್ಕಾಗಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮವನ್ನು ಬೆಂಗಳೂರಿನ ಸಮುದಾಯ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಸರ್ಕಾರದೊಂದಿಗೆ ಆಯೋಜಿಸಲಾಗಿತ್ತು. ಈ ಸಮಾರಂಭದಲ್ಲಿ ಕರ್ನಾಟಕದಾದ್ಯಂತ …

Read More »

ಉದ್ಯಮಭಾಗ ಮುಖ್ಯರಸ್ತೆಯ ಅಪಾಯಕಾರಿ ಗುಂಡಿಗಳನ್ನು ಮುಚ್ಚಿದ ಯಂಗ್ ಬೆಳಗಾವಿ ಫೌಂಡೇಶನ್

ಉದ್ಯಮಭಾಗ ಮುಖ್ಯರಸ್ತೆಯ ಅಪಾಯಕಾರಿ ಗುಂಡಿಗಳನ್ನು ಮುಚ್ಚಿದ ಯಂಗ್ ಬೆಳಗಾವಿ ಫೌಂಡೇಶನ್ ಬೆಳಗಾವಿ ಉದ್ಯಮಭಾಗ ಪುರೋಹಿತ್ ಸ್ವೀಟ್ ಮಾರ್ಟ್ ಎದುರಿನ ಮುಖ್ಯರಸ್ತೆಯಲ್ಲಿ ಅಪಾಯಕಾರಿ ಗುಂಡಿಗಳನ್ನು ಮುಚ್ಚುವ ಮೂಲಕ ಯಂಗ್ ಬೆಳಗಾವಿ ಫೌಂಡೇಶನ್ ಸಾರ್ವಜನಿಕ ಸುರಕ್ಷತೆಯತ್ತ ಒಂದು ದೊಡ್ಡ ಹೆಜ್ಜೆ ಇಟ್ಟು ಸಾಮಾಜಿಕ ಕಳಕಳಿ ಮೆರೆದಿದೆ ಕಳೆದ ಕೆಲವು ದಿನಗಳಿಂದ, ಈ ರಸ್ತೆ ತುಂಬಾ ಅಪಾಯಕಾರಿಯಾಗಿತ್ತು, ದೊಡ್ಡ ಗುಂಡಿಗಳಿಂದಾಗಿ ಅನೇಕ ಜನರು ಬಿದ್ದು ಗಾಯಗೊಂಡಿದ್ದರು. ಹಲವಾರು ದೂರುಗಳ ನಂತರವೂ ಯಾರೂ ಅದನ್ನು ದುರಸ್ತಿ …

Read More »

ಕಣಬುರ್ಗಿಯಲ್ಲಿ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಶಾಸಕ ಆಸೀಫ್ ಸೇಠ್ ಅವರು ನೂತನ ಕೊಠಡಿಗಳನ್ನು ಉದ್ಘಾಟನೆ ಮಾಡಿದರು

ಕಣಬರ್ಗಿ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಶಾಸಕ ಆಸೀಫ ಸೇಠ್ ಕಣಬುರ್ಗಿಯಲ್ಲಿ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಶಾಸಕ ಆಸೀಫ್ ಸೇಠ್ ಅವರು ನೂತನ ಕೊಠಡಿಗಳನ್ನು ಉದ್ಘಾಟನೆ ಮಾಡಿದರು ಸಾರ್ವಜನಿಕ ಶಿಕ್ಷಣವನ್ನು ಸುಧಾರಿಸುವ ನಿರಂತರ ಪ್ರಯತ್ನಗಳ ಭಾಗವಾಗಿ, ಬೆಳಗಾವಿ ಉತ್ತರ ಶಾಸಕ ಆಸಿಫ್ ಸೇಠ್ ಕಣಬರ್ಗಿ ಸರ್ಕಾರಿ ಶಾಲೆಗೆಭೇಟಿ ನೀಡಿ ಅಲ್ಲಿ ಅವರು ಹೊಸದಾಗಿ ನಿರ್ಮಿಸಲಾದ ತರಗತಿ ಕೊಠಡಿಯನ್ನು ಉದ್ಘಾಟಿಸಿದರು ಮತ್ತು ವಿದ್ಯಾರ್ಥಿಗಳಿಗೆ ಕಲಿಕಾ ವಾತಾವರಣವನ್ನು ಹೆಚ್ಚಿಸಲು ಹೊಸ ಡೆಸ್ಕ್‌ಗಳನ್ನು …

Read More »

ಗೋಕಾಕ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಮೇಲೆ ಪಲ್ಟಿಯಾದ ಲಾರಿ: ಓರ್ವ ಗಂಭೀರ

ಗೋಕಾಕ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಮೇಲೆ ಪಲ್ಟಿಯಾದ ಲಾರಿ: ಓರ್ವ ಗಂಭೀರ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಮೇಲೆ ಪಲ್ಟಿಯಾದ ಲಾರಿ ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಹೊರವಲಯದ ಪಾಲ್ಸ್ ರಸ್ತೆಯಲ್ಲಿರುವ ಗಾಂಧೀ ಪುತ್ಥಳಿಯ ಬಳಿ ಘಟನೆ ನಡೆದಿದ್ದು ಒಂದೇ ಬೈಕ್ ನಲ್ಲಿ ಮೂವರು ಸವಾರರು ಪ್ರಯಾಣಿಸುತ್ತಿದ್ದರು ಎನ್ನುವ ಮಾಹಿತಿ ದೊರೆತಿದ್ದು ಆ ಪೈಕಿ ಓರ್ವನ ಕಾಲು ಕಟ್ಟಾಗಿದೆ ಎನ್ನಲಾಗುತ್ತಿದೆ. ಗಾಯಾಳುಗಳನ್ನು ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದ್ದು …

Read More »

ಬೆಳಗಾವಿ ಕಾರಂಜಿ ಮಠದಲ್ಲಿ ಮಾಸಿಕ ಶಿವಾನುಭವ ಗೋಷ್ಠಿ: ವಚನಗಳಿಂದ ಅಂತರಂಗ ಶುದ್ಧಿ : ಡಾ. ಸಂಜಯ ಸಿಂಧೆಹಟ್ಟಿ

ಬೆಳಗಾವಿ ಕಾರಂಜಿ ಮಠದಲ್ಲಿ ಮಾಸಿಕ ಶಿವಾನುಭವ ಗೋಷ್ಠಿ: ವಚನಗಳಿಂದ ಅಂತರಂಗ ಶುದ್ಧಿ : ಡಾ. ಸಂಜಯ ಸಿಂಧೆಹಟ್ಟಿ ಬೆಳಗಾವಿಯ ಕಾರಂಜಿ ಮಠದಲ್ಲಿ 288ನೆಯ ಮಾಸಿಕ ಶಿವಾನುಭವ ಗೋಷ್ಠಿಯಲ್ಲಿ “ಶರಣರ ವಚನಗಳಲ್ಲಿ ಆತ್ಮವಿಮರ್ಶೆ”ವಿಷಯ ಕುರಿತು ಉಪನ್ಯಾಸ ನೀಡಲಾಯಿತು ಸೋಮವಾರ ಬೆಳಗಾವಿ ಕಾರಂಜಿ ಮಠದಲ್ಲಿ ಆಯೋಜಿಸಲಾಗಿದ್ದ ಮಾಸಿಕ ಶಿವಾನುಭವ ಘೋಷ್ಠಿಯಲ್ಲಿ ಅತಿಥಿ ಉಪನ್ಯಾಸಕರಾಗಿ ಭಾಗವಹಿಸಿದ್ದ ಮೂಡಲಗಿ ದಂತ ವೈದ್ಯ ಡಾ. ಸಂಜಯ ಸಿಂಧೆಹಟ್ಟಿ, ಶರಣರ ವಚನಗಳಲ್ಲಿರುವ ಜೀವನದ ಮೌಲ್ಯಗಳು ಬದುಕಿಗೆ ಸ್ಪೂರ್ತಿ ನೀಡಿ …

Read More »

ರೈತನಿಗೆ ದೋಷಯುತ ಕೊಯ್ಲುಯಂತ್ರ ನೀಡಿದ ಕಂಪನಿಗೆ ದಂಡ ಪರಿಹಾರಕ್ಕೆ ಗ್ರಾಹಕರ ಆಯೋಗ ಆದೇಶ

ರೈತನಿಗೆ ದೋಷಯುತ ಕೊಯ್ಲುಯಂತ್ರ ನೀಡಿದ ಕಂಪನಿಗೆ ದಂಡ ಪರಿಹಾರಕ್ಕೆ ಗ್ರಾಹಕರ ಆಯೋಗ ಆದೇಶ ಧಾರವಾಡ – ರೈತರೊಬ್ಬರಿಗೆ ದೋಷಯುತ ಕೊಯ್ಲುಯಂತ್ರ ನೀಡಿದ ಕಂಪನಿಯ ವಿರುದ್ಧ ಅನ್ನದಾತ ಜಿಲ್ಲಾ ಗ್ರಾಹಕ ಆಯೋಗಕ್ಕೆ ದೂರು ನೀಡಿದ ಬೆನ್ನಲೆ ಆಯೋಗವು ಕೂಲಂಕುಷವಾಗಿ ವಿಚಾರಣೆ ನಡೆಸಿ ರೈತನಿಗೆ ಕಂನಿಯಿಂದ ಪರಿಹಾರ ಜತೆಗೆ ದಂಡ ವಿಧಿಸುವ ಮೂಲಕ ನ್ಯಾಯ ಒದಗಿಸಿ ಆದೇಶ ಹೊರಡಿಸಿದೆ. ನವಲಗುಂದದ ನಿವಾಸಿ ದ್ಯಾಮಪ್ಪ ಹಂಚಿನಾಳ ಎನ್ನುವವರು ವೃತ್ತಿಯಲ್ಲಿ ವ್ಯವಸಾಯವನ್ನು ಅವಲಂಬಿಸಿದ್ದಾರೆ. ತಮ್ಮ ಉಪಜೀವನಕ್ಕಾಗಿ …

Read More »

ರಾಜಧಾನಿಯಲ್ಲಿ ಟೋಯಿಂಗ್ ಮರುಜಾರಿ ಸದ್ಯಕ್ಕಿಲ್ಲ

ಬೆಂಗಳೂರು: ಮೂರು ವರ್ಷಗಳ ಬಳಿಕ ರಾಜಧಾನಿಯಲ್ಲಿ ಟೋಯಿಂಗ್ ಮರುಜಾರಿಗೆ ಹಲವು ಸಭೆಗಳನ್ನ ರಾಜ್ಯ ಸರ್ಕಾರ ಚರ್ಚೆ ನಡೆಸಿದರೂ ಒಮ್ಮತದ ನಿರ್ಧಾರದ ಬಗ್ಗೆ ಜಿಜ್ಞಾಸೆ ಮೂಡಿದ ಪರಿಣಾಮ ಸದ್ಯಕ್ಕೆ ಟೋಯಿಂಗ್ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಅಡ್ಡಾದಿಡ್ಡಿ ವಾಹನಗಳ ನಿಲುಗಡೆಯಿಂದಾಗಿ ನಗರದ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಮುಖ್ಯವಾಗಿ ಪೀಕ್ ಅವರ್​​ಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗುತ್ತಿದೆ. ಎಲ್ಲೆಂದರಲ್ಲಿ ವಾಹನ ನಿಲ್ಲಿಸುವ ಸವಾರರಿಗೆ ಬಿಸಿ ಮುಟ್ಟಿಸುವ ಸಲುವಾಗಿ ಟೋಯಿಂಗ್ ಮತ್ತೆ ಆರಂಭಿಸುವುದಾಗಿ ಸರ್ಕಾರ ಹೇಳಿತ್ತು. ಈ ಬಾರಿ …

Read More »

ಕೊಪ್ಪಳದ ಗಾಂಜಾ ಪ್ರಕರಣ ಶಿಫ್ಟ್ ವಿಚಾರ: ಗಂಗಾವತಿಗೆ ಮಸಿ ಬಳಿಯುವ ಯತ್ನ ಎಂದ ಜನಾರ್ದನ ರೆಡ್ಡಿ

ಗಂಗಾವತಿ: ರಾಮಾಯಣದಂತ ಪೌರಾಣಿಕ ಹಿನ್ನೆಲೆ, ವಿಜಯನಗರದ ಐತಿಹಾಸಿಕ ಹಿನ್ನೆಲೆಯ ನಂಟು ಹೊಂದಿರುವ ಗಂಗಾವತಿಯಂಥ ಕ್ಷೇತ್ರಕ್ಕೆ ಪೊಲೀಸ್ ಮತ್ತು ಅಬಕಾರಿ ಇಲಾಖೆಯ ಅಧಿಕಾರಿಗಳಾದ ನೀವು ಕಳಂಕ ಉಂಟು ಮಾಡಲು ಯತ್ನಿಸುತ್ತಿದ್ದೀರಿ ಎಂದು ಶಾಸಕ ಜಿ. ಜನಾರ್ದನ ರೆಡ್ಡಿ ಅಧಿಕಾರಿಗಳನ್ನು ಸಾರ್ವಜನಿಕವಾಗಿಯೇ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು. ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿರುವ ಮಂಥನ ಸಭಾಂಗಣದಲ್ಲಿ ಸೋಮವಾರ ನಡೆದ ವಿವಿಧ ಇಲಾಖೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, …

Read More »

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ ನೀಡಿರುವ ದೂರಿನನ್ವಯ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಡಿವೈಎಸ್‌ಪಿ ಹಾಗೂ ಮತ್ತೋರ್ವ ಮಹಿಳೆಯ ವಿರುದ್ಧ ವರದಕ್ಷಿಣೆ ನಿಷೇಧ ಕಾಯ್ದೆ ಸೇರಿದಂತೆ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಬೆಂಗಳೂರು ಈಶಾನ್ಯ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ( ಅಪರಾಧ ಸಂಖ್ಯೆ 0033/2025). ತನಿಖೆ ಕೂಡ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ …

Read More »