ಹುಕ್ಕೇರಿ ತಾಲೂಕಿನ ಶಿಂದಿಹಟ್ಟಿ ಗ್ರಾಮದಲ್ಲಿ ವಿದ್ಯುತ್ ಶಾರ್ಟ ಸರ್ಕಿಟ್ ನಿಂದ ಮನೆಯೊಂದು ಸಂಪೂರ್ಣ ಸುಟ್ಟ ಭಷ್ಮವಾದ ಘಟನೆ ಜರುಗಿದೆ. ಹೊಸಪೇಟೆ ಗ್ರಾಮ ಪಂಚಾಯತ ಅಡಿಯಲ್ಲಿ ಶಿಂದಿಹಟ್ಟಿ ಗ್ರಾಮದ ರಾಮಾ ಲಕ್ಮಣ ಮಗದುಮ್ಮ ಎಂಬುವರ ಮನೆಯಲ್ಲಿ ರಾತ್ರಿ ಸಮಯದಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ ನಿಂದ ಮನೆ ಮತ್ತು ಮನೆಯಲ್ಲಿಯ ದವಸ ಧಾನ್ಯ ಸೇರಿದಂತೆ ಹಣ ವಡವೆಗಳು ಸಂಪೂರ್ಣ ಸುಟ್ಟು ಭಷ್ಮವಾಗಿದೆ. ಈ ಕುರಿತು ಮಾದ್ಯಮಗಳೊಂದಿಗೆ ಮಾತನಾಡಿದ ಹಣಬರ ಸಂಘದ ಚಿಕ್ಕೋಡಿ ಜಿಲ್ಲಾ …
Read More »Monthly Archives: ಜುಲೈ 2025
ಕೋಟ್ಯಂತರ ಮೌಲ್ಯದ ಆಸ್ತಿ ಕಬಳಿಕೆ ಆರೋಪ; ಕಾಂಗ್ರೆಸ್ ಮುಖಂಡ ಅರೆಸ್ಟ್!!!
ಕೋಟ್ಯಂತರ ಮೌಲ್ಯದ ಆಸ್ತಿ ಕಬಳಿಕೆ ಆರೋಪ; ಕಾಂಗ್ರೆಸ್ ಮುಖಂಡ ಅರೆಸ್ಟ್!!! ಮಾಜಿ ಕೇಂದ್ರ ಸಚಿವರ ಪುತ್ರಿಯ ಆಸ್ತಿಗೆ ಕನ್ನ ಹಾಕಿದ್ರಾ???!! ಕೋಟ್ಯಂತರ ಮೌಲ್ಯದ ಆಸ್ತಿ ಕಬಳಿಕೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಆಯೂಬ್ ಪಾರ್ಥನಹಳ್ಳಿ ಅವರನ್ನು ಖಡೇಬಜಾರ್ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬೆಳಗಾವಿಯ ಆಜಂನಗರ ನಿವಾಸಿಯಾಗಿದ್ದು, ಆಸ್ತಿ ಹಗರಣದಲ್ಲಿ ಪ್ರಮುಖ ಪಾತ್ರವಹಿಸಿದ್ದಾನೆ ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮಾಜಿ ಸಚಿವ ಬಿ. ಶಂಕರಾನಂದ ಅವರ ಪುತ್ರಿ …
Read More »ಉದ್ಯಮಿಯಾಗಿ ಯಶಸ್ವಿಯಾದ ನಟಿ ಕೃತಿ, 400 ಕೋಟಿ ಬ್ಯುಸಿನೆಸ್
ಸಿನಿಮಾ ನಟ-ನಟಿಯರು ಉದ್ಯಮಗಳಲ್ಲಿ ತೊಡಗಿಕೊಳ್ಳುವುದು ಮಾಮೂಲು. ನಟರು ರಿಯಲ್ ಎಸ್ಟೇಟ್, ಸಿನಿಮಾ ನಿರ್ಮಾಣ ಸಂಸ್ಥೆ, ಸ್ಪೋರ್ಟ್ಸ್ ಫ್ರಾಂಚೈಸ್ ಇನ್ನಿತರೆ ಉದ್ಯಮಗಳ ಮೇಲೆ ಬಂಡವಾಳ ಹೂಡಿದರೆ ನಟಿಯರು ಸೌಂದರ್ಯಕ್ಕೆ ಸಂಬಂಧಿಸಿದ ಬ್ರ್ಯಾಂಡ್ಗಳ ಮೇಲೆ ಹೂಡಿಕೆ ಮಾಡುತ್ತಾರೆ. ದೀಪಿಕಾ ಪಡುಕೋಣೆ, ಕತ್ರಿನಾ ಕೈಫ್, ಆಲಿಯಾ ಭಟ್ ಇತ್ತೀಚೆಗೆ ರಶ್ಮಿಕಾ ಮಂದಣ್ಣ ಸಹ ಸೌಂದರ್ಯವರ್ಧಕ ಕಂಪೆನಿಗಳನ್ನು ಸ್ಥಾಪಿಸಿದ್ದಾರೆ. ಆದರೆ ಅತಿ ಹೆಚ್ಚು ಯಶಸ್ಸು ಗಳಿಸಿರುವುದು ನಟಿ ಕೃತಿ ಸೆನೊನ್. ಬಾಲಿವುಡ್ ಮಾತ್ರವಲ್ಲದೆ ದಕ್ಷಿಣ ಭಾರತದ …
Read More »ಮೈಸೂರಿನಲ್ಲಿ ಬೃಹತ್ ಡ್ರಗ್ಸ್ ಜಾಲ ಪತ್ತೆ ಪ್ರಕರಣ: ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಹೇಳಿದ್ದಿಷ್ಟು
ಮೈಸೂರು : ನಗರದ ಬನ್ನಿಮಂಟಪದ ಶೆಡ್ನಲ್ಲಿ ಪತ್ತೆಯಾದ ಡ್ರಗ್ಸ್ ಪ್ರಕರಣ ಸಂಬಂಧ ಎಫ್ಐಆರ್ ದಾಖಲು ಮಾಡಿಕೊಂಡು ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಮಾಹಿತಿ ನೀಡಿದ್ದಾರೆ. ಮೈಸೂರಿನಲ್ಲಿಂದು ಮನೆ ಮನೆಗೆ ಪೊಲೀಸ್ ಯೋಜನೆ ಎಂಬ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ, ಅವರು, ಮಹಾರಾಷ್ಟ್ರ ಹಾಗೂ ಸ್ಥಳೀಯ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಬನ್ನಿಮಂಟಪ ಸಮೀಪದ ವರ್ತುಲ ರಸ್ತೆಯಲ್ಲಿದ್ದ ಗ್ಯಾರೇಜ್ ರೀತಿಯ ಶೆಡ್ ಮೇಲೆ ಕಳೆದ …
Read More »ಅಪಾರ್ಟ್ಮೆಂಟ್ ಗೋಡೆ ಮೇಲೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಬರಹ
ಬೆಂಗಳೂರು: ನಗರದ ಅಪಾರ್ಟ್ ಮೆಂಟ್ ಗೋಡೆಯೊಂದರ ಮೇಲೆ ಬಾಂಬ್ ಸ್ಫೋಟಿಸುವುದಾಗಿ ಬರೆದು ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ. ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಲ್ಫೈನ್ ಪಿರಮಿಡ್ ಅಪಾರ್ಟ್ಮೆಂಟ್ ನ ಗೋಡೆ ಮೇಲೆ ಈ ಬೆದರಿಕೆಯ ಬರಹ ಪತ್ತೆಯಾಗಿದೆ. ಅಪಾರ್ಟ್ ಮೆಂಟ್ ನಿವಾಸಿಗಳು ಇದನ್ನು ಕಂಡು ಕೂಡಲೇ ಮಾಹಿತಿ ನೀಡಿದ ಮೇರೆಗೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ‘ಪಾಕಿಸ್ತಾನದಿಂದಲೇ ನಾನು ಭಾರತವನ್ನು ಸ್ಫೋಟಿಸುತ್ತೇನೆ’ ಎಂದು ಕಂದು ಬಣ್ಣದಲ್ಲಿ ಇಂಗ್ಲಿಷ್ ನಲ್ಲಿ ಬರೆಯಲಾಗಿದೆ. ನೂರಾರು …
Read More »ಮಸ್ಕಿಯಲ್ಲಿ 4 ಸಾವಿರ ವರ್ಷಗಳ ಹಿಂದಿನ ಜನವಸತಿ ಕುರುಹು ಪತ್ತೆ
ರಾಯಚೂರು: ಮೌರ್ಯ ಚಕ್ರವರ್ತಿ ಅಶೋಕನನ್ನು ‘ದೇವನಾಂಪ್ರಿಯ’ ಎಂದು ಉಲ್ಲೇಖಿಸಿರುವ ಏಕೈಕ ಶಿಲಾಶಾಸನ ಪತ್ತೆಯಾಗಿ ಮಸ್ಕಿ ವಿಶ್ವಪ್ರಸಿದ್ಧಿ ಪಡೆದಿದೆ. ಇದೀಗ ನಾಲ್ಕು ಸಾವಿರ ವರ್ಷಗಳ ಹಿಂದೆಯೇ ಇಲ್ಲಿ ಜನವಸತಿ ಇದ್ದ ಬಗ್ಗೆ ಕುರುಹುಗಳು ಸಿಕ್ಕಿವೆ. ಅಮೆರಿಕ, ಕೆನಡಾ ಹಾಗೂ ಭಾರತದ 20 ಸಂಶೋಧಕರ ತಂಡ ಕೆಲ ತಿಂಗಳ ಹಿಂದೆ ಮಸ್ಕಿ ಪಟ್ಟಣದ ಮಲ್ಲಿಕಾರ್ಜುನ ಬೆಟ್ಟ, ಬಯಲು ಆಂಜನೇಯ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ನಡೆಸಿದ ಉತ್ಖನನ ಹಾಗೂ ಸಂಶೋಧನೆಯಿಂದ ನಾಲ್ಕು ಸಾವಿರ ವರ್ಷಗಳ ಹಿಂದೆಯೇ …
Read More »ಒಂದೇ ದಿನ ಐವರ ಮೇಲೆ ಬೀದಿನಾಯಿ ದಾಳಿಮಕ್ಕಳು ಸೇರಿದಂತೆ ಐವರಿಗೆ ಕಚ್ಚಿ ಗಾಯ
ದಾವಣಗೆರೆ: ಮೂವರು ಮಕ್ಕಳು ಸೇರಿ ಒಟ್ಟು 5 ಜನರ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಚನ್ನಗಿರಿ ತಾಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಸ್ನೇಹಾ (8), ಮದನ್ ಬೈರವ್ (2), ಚಂದ್ರಿಕಾ (3), ಸುಮಾ(30) ಮತ್ತು ರುದ್ರಮ್ಮ (65) ಬೀದಿ ನಾಯಿ ದಾಳಿಯಿಂದ ಗಾಯಗೊಂಡವರು. ಬುಧವಾರ ಸಂಜೆ ಘಟನೆ ನಡೆದಿದೆ. ಮನೆ ಅಂಗಳದಲ್ಲಿ ಆಟ ಆಡುತ್ತಿದ್ದ ಮೂವರು ಮಕ್ಕಳ ಮಕ್ಕಳ ಮೇಲೆ ಬೀದಿ ನಾಯಿ ದಾಳಿ …
Read More »ಭಾರತೀಯ ಹಬ್ಬಗಳು ಭಾವೈಕ್ಯತೆ ಬೆಳೆಸುವ ಕೊಂಡಿ ಮಹಾಂತೇಶ ಕವಟಗಿಮಠ
*ಭಾರತೀಯ ಹಬ್ಬಗಳು ಭಾವೈಕ್ಯತೆ ಬೆಳೆಸುವ ಕೊಂಡಿ ಮಹಾಂತೇಶ ಕವಟಗಿಮಠ ಭಾರತ ಸಂಸ್ಕೃತಿ, ಆಚಾರ ವಿಚಾರಗಳ ಬೀಡು. ಇಲ್ಲಿ ಬಡವನಾಗಲಿ ಶ್ರೀಮಂತನಾಗಲಿ ಎಲ್ಲರೂ ಭಕ್ತಿ ಪರಂಪರೆಯನ್ನು ಹೊಂದಿದ್ದಾರೆ. ಶತಶತಮಾನಗಳ ಪರಕೀಯರ ಆಳ್ವಿಕೆಯ ನಂತರವೂ ಇಲ್ಲಿ ಮೂಲ ಸಂಸ್ಕೃತಿ ಹಾಗೆ ಉಳಿದಿದೆ. ಇದಕ್ಕೆ ಮೂಲ ಕಾರಣ ಇಲ್ಲಿನ ವಿಶಿಷ್ಟ ಹಬ್ಬಗಳು. ಈ ಹಬ್ಬಗಳು ಪರಸ್ಪರರಲ್ಲಿ ಭಾವೈಕ್ಯತೆಯನ್ನು ಬೆಳೆಸುವ ಕೊಂಡಿಯಾಗಿವೆ ಎಂದು ವಿಧಾನ ಪರಿಷತ್ತಿನ ಮಾಜಿ ಸಚೇತಕ ಮಹಾಂತೇಶ ಕವಟಿಗಿಮಠ ಅಭಿಪ್ರಾಯಪಟ್ಟರು. ಅವರು ಇತ್ತೀಚಿಗೆ …
Read More »ತುಂಬಿದ ಕೃಷ್ಣಾ ನದಿ: ಕುಡಚಿ ಉಗಾರ ಸೇತುವೆ ಮುಳುಗಡೆ, ಸಂಚಾರ ಬಂದ್
ಚಿಕ್ಕೋಡಿ (ಬೆಳಗಾವಿ): ಮಹಾರಾಷ್ಟ್ರ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಮಾಡಿದ್ದರಿಂದ ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಳ ಆಗಿದೆ. ಪರಿಣಾಮ ಮಹಾರಾಷ್ಟ್ರ ಮತ್ತು ಕರ್ನಾಟಕ್ಕೆ ಸಂಪರ್ಕ ಕಲ್ಪಿಸುವ ಕುಡಚಿ ಉಗಾರ ಸೇತುವೆ ಮುಳುಗಡೆಯಾಗಿದ್ದು, ಗಡಿಭಾಗದ ಪ್ರಮುಖ ಸಂಪರ್ಕ ಸೇತುವೆ ಬಂದ್ ಆಗಿದೆ. ಕುಡಚಿ ಉಗಾರ ಸೇತುವೆ ಮುಳುಗಡೆ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಸಮೀಪದಲ್ಲಿರುವ ಕೃಷ್ಣಾ ನದಿಗೆ ಅಡ್ಡಲಾಗಿರುವ ಕುಡಚಿ – ಉಗಾರ ಸೇತುವೆ …
Read More »ಈಗ ಬಹಳ ಜನರ ಬಯಕೆ ಬಿಡಿಸಿಸಿ ಬ್ಯಾಂಕ್ಗೆ ಬರುವುದು. ಆದರೆ, ನಾನು ಬಿಡಿಸಿಸಿ ಬ್ಯಾಂಕ್ಗೆ ಸ್ಪರ್ಧೆ ಮಾಡುವುದಿಲ್ಲ. ಮುಂದಿನ ದಿನಗಳಲ್ಲಿಯೂ ನಾನು ಅಧ್ಯಕ್ಷ ಸ್ಥಾನ ಆಕಾಂಕ್ಷಿಯೂ ಅಲ್ಲ
ಬೆಳಗಾವಿ: ಈಗ ಬಹಳ ಜನರ ಬಯಕೆ ಬಿಡಿಸಿಸಿ ಬ್ಯಾಂಕ್ಗೆ ಬರುವುದು. ಆದರೆ, ನಾನು ಬಿಡಿಸಿಸಿ ಬ್ಯಾಂಕ್ಗೆ ಸ್ಪರ್ಧೆ ಮಾಡುವುದಿಲ್ಲ. ಮುಂದಿನ ದಿನಗಳಲ್ಲಿಯೂ ನಾನು ಅಧ್ಯಕ್ಷ ಸ್ಥಾನ ಆಕಾಂಕ್ಷಿಯೂ ಅಲ್ಲ. ಮುಂದೆ ಲಿಂಗಾಯತ ಸಮಾಜದವರನ್ನೇ ಅಧ್ಯಕ್ಷ, ಉಪಾಧ್ಯಕ್ಷರನ್ನಾಗಿ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಜಾರಕಿಹೊಳಿ ಕುಟುಂಬದಿಂದ ಅಧ್ಯಕ್ಷರಾಗುವ ಮಾತೇ ಇಲ್ಲ ಎಂದು ಬೆಮುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದಲ್ಲಿ ಬುಧವಾರ ನಡೆದ ಬಿಡಿಸಿಸಿ ಬ್ಯಾಂಕ್ನ ಸಾಮಾನ್ಯ ಸಭೆಯ ನಂತರ ಸುದ್ದಿಗಾರರೊಂದಿಗೆ …
Read More »