Breaking News

Monthly Archives: ಜುಲೈ 2025

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲ ರೀತಿಯಲ್ಲೂ ಉತ್ತಮವಾಗಿದೆ: ಗೃಹ ಸಚಿವ ಡಾ.ಜಿ. ಪರಮೇಶ್ವರ್

ಸುಬ್ರಹ್ಮಣ್ಯ(ದ.ಕನ್ನಡ): “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಾ ರೀತಿಯಲ್ಲೂ ಉತ್ತಮವಾಗಿದೆ” ಎಂದು ರಾಜ್ಯ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಮಂಗಳವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಇತ್ತೀಚೆಗೆ ನಡೆದ ಕಾನ್ಫೆರೆನ್ಸ್‌ನಲ್ಲಿ ಮಾನ್ಯ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ, ವಿವಿಧ ಅಪರಾಧಗಳ ಬಗ್ಗೆ ಮಾಹಿತಿ ಪಡೆದ ವೇಳೆ ಕ್ರೈಮ್ ರೇಟ್ ಕಡಿಮೆಯಾಗಿರುವುದು ಕಂಡು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೇ ಎಲ್ಲ ಕಡೆ ಕಾನೂನುನನ್ನು ಬಹಳ ಕಠಿಣವಾಗಿ ತೆಗೆದುಕೊಳ್ಳಲಾಗಿದೆ. ದಕ್ಷಿಣ ಕನ್ನಡ …

Read More »

ಹಾವು ಕಡಿತಕ್ಕೆ ನೂತನ ಚಿಕಿತ್ಸಾ ಕ್ರಮ ಕಂಡುಹಿಡಿದ ಹುಬ್ಬಳ್ಳಿ ಕೆಎಂಸಿಆರ್​​ಐ ವೈದ್ಯರು

ಹುಬ್ಬಳ್ಳಿ : ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಕೆಎಂಸಿಆರ್​​ಐ) ಹಾವು ಕಡಿತಕ್ಕೊಳಗಾದವರಿಗೆ ಸುಧಾರಿತ ಚಿಕಿತ್ಸಾ ಕ್ರಮವನ್ನು‌ ಕಂಡುಹಿಡಿದಿದೆ. ಹಾವಿನ ವಿಷ ಅರಿತು ಚಿಕಿತ್ಸೆ ನೀಡುವ ಸಂಶೋಧನೆ ಮಾಡಲಾಗಿದ್ದು, ಇದು ದೇಶದಲ್ಲಿಯೇ ಪ್ರಥ‌ಮ ಸಂಶೋಧನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಕ್ತ ಪರಿಶೀಲಿಸಿ ಚಿಕಿತ್ಸೆ: ಹಾವು ಕಡಿತಕ್ಕೊಳಗಾಗಿ ಕೆಎಂಸಿಆರ್​​ಐಗೆ ಬರುವವರಲ್ಲಿ ಕೆಲವರು ಕಚ್ಚಿದ ಹಾವಿನೊಟ್ಟಿಗೆ ಬರುತ್ತಿದ್ದರು. ವೈದ್ಯರಿಗೆ ತಾವು ತಂದ ಹಾವು ನೀಡಿ ಗಾಬರಿ ಹುಟ್ಟಿಸುತ್ತಿದ್ದರು. ಈಗ ಹಾಗೇನಿಲ್ಲ, ಹಾವು ಕಡಿದ ವ್ಯಕ್ತಿಯಿಂದ …

Read More »

ಅನ್ನಭಾಗ್ಯ ಅಕ್ಕಿ ಸಾಗಾಟ ಲಾರಿಗಳ ಮುಷ್ಕರ ವಾಪಸ್

ಬೆಂಗಳೂರು, ಜುಲೈ 9: ಕರ್ನಾಟಕದಾದ್ಯಂತ ಅನ್ನಭಾಗ್ಯ (Anna Bhagya) ಅಕ್ಕಿ ಪೂರೈಕೆ ಮಾಡಿದ ಲಾರಿ ಮಾಲೀಕರಿಗೆ ಕಳೆದ ಐದು ತಿಂಗಳಿನಿಂದ ಬಿಡುಗಡೆ ಮಾಡಬೇಕಿದ್ದ 260 ಕೋಟಿ ರೂ.ನಷ್ಟು ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಲಾರಿ ಮಾಲೀಕರ ಸಂಘ ಸೋಮವಾರದಿಂದ ಮುಷ್ಕರ ಆರಂಭಿಸಿತ್ತು. ಈ ಬಗ್ಗೆ  ನಿರಂತರವಾಗಿ ವರದಿ ಪ್ರಸಾರ ಮಾಡಿತ್ತು. ಇದರ ಬೆನ್ನಲ್ಲೇ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ, ಎರಡು ದಿನಗಳಲ್ಲಿ ಹಣ ಸಂದಾಯ ಮಾಡುತ್ತೇವೆಂದು ಭರವಸೆ ನೀಡಿದ್ದರು. …

Read More »

ಯುವತಿ ಮೇಲೆ ಆ್ಯಸಿಡ್ ದಾಳಿ ಮಾಡಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ

ಚಿಕ್ಕಬಳ್ಳಾಪುರ: ಮದುವೆಯಾಗಲು ನಿರಾಕರಿಸಿದ ಯುವತಿಯ ಮನೆ ಮುಂದೆ ಹೈಡ್ರಾಮ ಮಾಡಿರುವ ಯುವಕನೋರ್ವ ಯುವತಿ ಮೇಲೆ ಆ್ಯಸಿಡ್ ಎರಚಿದ್ದಾನೆ. ಬಳಿಕ ತನ್ನ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಆತನ ಪರಿಸ್ಥಿತಿ ಚಿಂತಾಜನಕವಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ಮಂಚನಬಲೆ ಗ್ರಾಮದಲ್ಲಿ ಇಂದು ಮಧ್ಯಾಹ್ನ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕ ಆನಂದ್ ಕುಮಾರ್ ತೀವ್ರ ಸುಟ್ಟ ಗಾಯಗಳಿಂದ ನರಳುತ್ತಿದ್ದಾನೆ. ಆ್ಯಸಿಡ್ ದಾಳಿಗೆ ತುತ್ತಾದ ಯುವತಿ ಪ್ರಾಣಾಪಾಯದಿಂದ …

Read More »

ಗಣಿತದಲ್ಲಿ ಗಿನ್ನಿಸ್ ರೆಕಾರ್ಡ್​ಗೆ ಹಾವೇರಿಯ ಮೂವರು ವಿದ್ಯಾರ್ಥಿಗಳಿಂದ ತಯಾರಿ

ಹಾವೇರಿ: ಗಣಿತ ಅಂದರೆ ಸಾಕು ಕೆಲ ವಿದ್ಯಾರ್ಥಿಗಳಿಗೆ ಕಬ್ಬಿಣದ ಕಡಲೆ. ಕೆಲವರಿಗೆ ನೀರು ಕುಡಿದಷ್ಟೇ ಸುಲಭ. ಅದೇ ರೀತಿ ಹಾವೇರಿ ನಗರದ ಮೂರು ವಿದ್ಯಾರ್ಥಿಗಳು ಗಣಿತದಲ್ಲಿ ವಿಶ್ವದಾಖಲೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಹಾವೇರಿಯ ಗಣಿತ ತಜ್ಞೆ ಉಷಾರಾಣಿ ಈ ಮಕ್ಕಳಿಗೆ ತರಬೇತಿ ನೀಡುತ್ತಿದ್ದಾರೆ. ಅನರ್ಘಾ ರಾಜು ಗೌಳಿ, ಆರವ್ ಜವಳೇಕರ್ ಮತ್ತು ಹರೀಶ್ ಸುರಳೇಶ್ವರ ಈ ಮೂವರು ಸಾಧನೆ ಮಾಡಲು ಹೊರಟಿರುವ ವಿದ್ಯಾರ್ಥಿಗಳು. ಇವರೇ ಗಣಿತದ ಲೆಕ್ಕಗಳನ್ನು, ಮಗ್ಗಿಗಳನ್ನು ನೀರು ಕುಡಿದಷ್ಟೇ …

Read More »

ವಿಧಾನ ಪರಿಷತ್​ ಉಪಕಾರ್ಯದರ್ಶಿ ಜಲಜಾಕ್ಷಿ ಅಮಾನತು ಆದೇಶಕ್ಕೆ ಹೈಕೋರ್ಟ್​ ತಡೆ

ಬೆಂಗಳೂರು: ‘ಸಂವಿಧಾನ ಪೀಠಿಕೆ ಓದು’ ಕಾರ್ಯಕ್ರಮದ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಫೋಟೋ ಹಾಕಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ವಿಧಾನಪರಿಷತ್ ಉಪ ಕಾರ್ಯದರ್ಶಿ ಕೆ.ಜೆ. ಜಲಜಾಕ್ಷಿ ಅವರನ್ನು ಅಮಾನತುಗೊಳಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ವಿಧಾನಪರಿಷತ್​​ ಕಾರ್ಯದರ್ಶಿ ಆದೇಶ: ‘ಸಂವಿಧಾನದ ದಿನದ’ ಅಂಗವಾಗಿ ವಿಧಾನಪರಿಷತ್ತಿನ ಸಚಿವಾಲಯದಲ್ಲಿ 2024ರ ನವೆಂಬರ್ 26ರಂದು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಫೋಟೋ ಹಾಕಿಲ್ಲವೆಂಬ ಆರೋಪದ ಮೇಲೆ …

Read More »

ಒಂದೇ ರಾತ್ರಿ ಮೂರು ಮನೆಗಳ ಕಳ್ಳತನಕ್ಕೆ ಯತ್ನ

ಬಾಗಲಕೋಟೆ : ಒಂದೇ ರಾತ್ರಿ ಮೂರು ಮನೆಗಳ ಕಳ್ಳತನಕ್ಕೆ ಯತ್ನ ಜಮಖಂಡಿ ತಾಲೂಕು ನಾಗನೂರು ಗ್ರಾಮದಲ್ಲಿ ಒಂದೇ ರಾತ್ರಿಯಲ್ಲಿ ಮೂರು ಮನೆಗಳ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ. ದರೋಡೆಗೆ ಬಂದ ಕಳ್ಳರು ಎಲ್ಲಾ ಮನೆಗಳ ಹತ್ತಿರ ಸುಳಿದಾಡಿದ್ದಾರೆ. ನಂತರ ಒಂದು ಮನೆಯಲ್ಲಿ ಚಿನ್ನಾಭರಣ, ನಗದು ಕದ್ದು ಪರಾರಿಯಾಗಿದ್ದಾರೆ. ಮತ್ತೆರಡು‌ ಮನೆಗಳಲ್ಲೂ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾರೆ .ಉಮೇಶ ಕನಮುಚನಾಳ ಎಂಬುವರ ಮನೆಯಲ್ಲಿ ಕಳ್ಳತನ ಮಾಡಿ 30 ಗ್ರಾಂ ಚಿನ್ನದ ತಾಳಿ, …

Read More »

ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಸಭೆ”

ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಸಭೆ” ಸರ್ಕಾರಿ ಶಾಲೆಗಳಿಗೆ ಮಕ್ಕಳ ಪ್ರವೇಶಾತಿ ಹೆಚ್ಚಿಸುವಂತೆ ಕ್ರಮ ವಹಿಸಲು ಸಚಿವ ಮಧು ಬಂಗಾರಪ್ಪ ಸೂಚನೆ ಬೆಳಗಾವಿ,ಮುಖ್ಯಮಂತ್ರಿಗಳ ನಿರ್ದೇಶನದಂತೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಪ್ರವೇಶಾತಿ ಹೆಚ್ಚಾಗಬೇಕು. ಖಾಸಗಿ ಶಾಲೆಗಳ ಮಾದರಿಯಲ್ಲೇ ಸರ್ಕಾರಿ ಶಾಲೆಗಳು ನಿರ್ವಹಿಸುವದರ ಜೊತೆಗೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಪ್ರಾಥಮಿಕ ಪ್ರೌಢಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಅವರು …

Read More »

ಮಗಳು ಬರ್ಬೇಡ ಅಂತಾಳೆ,ಮಗ-ಸೊಸೆ‌ ಹಿಂಸೆ‌ ನೀಡ್ತಾರೆ,ಕೃಷ್ಣಾ ನದಿಗೆ ಹಾರಲು ಯತ್ನಿಸಿದ್ದ ವೃಧ್ದನ ಕಣ್ಣೀರ ಕಥೆ

ಮಗಳು ಬರ್ಬೇಡ ಅಂತಾಳೆ,ಮಗ-ಸೊಸೆ‌ ಹಿಂಸೆ‌ ನೀಡ್ತಾರೆ,ಕೃಷ್ಣಾ ನದಿಗೆ ಹಾರಲು ಯತ್ನಿಸಿದ್ದ ವೃಧ್ದನ ಕಣ್ಣೀರ ಕಥೆ ಚಿಕ್ಕೋಡಿ:ಕೃಷ್ಣಾ ನದಿಗೆ ಹಾರಿ ಜೀವ ತೆಗೆದುಕೊಳ್ಳಲು ಯತ್ನಿಸುತ್ತಿದ್ದ ವೃದ್ಧನನ್ನು ಸ್ಥಳೀಯರು ಕಾಪಾಡಿದಾರೆ. ನಂತರ ಕಷ್ಟ, ಸುಖ ವಿಚಾರಿಸಿದಾಗ ಮಗ ಮಗಳಿಂದಲೇ ದೂರಾವಾದ ಕರುಣಾಜನಕ ಕತೆಯನ್ನು ಹೇಳಿದ್ದಾನೆ. ಅಂದ್ದಾಗೆ ಈ ಘಟನೆಯು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ನಡೆದಿದೆ. ಕೃಷ್ಣಪ್ಪ ಗೋಪಾಲಪ್ಪ ಹತ್ತಿಮರದ (77) ನದಿಗೆ ಹಾರಲು ಯತ್ನಿಸಿದ ವೃದ್ಧ. ಇವರು ಮೂಲತಃ …

Read More »

ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ವಿಜಯ ಮೋರೆ ಅವರಿಗೆ ಸನ್ಮಾನ

ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ವಿಜಯ ಮೋರೆ ಅವರಿಗೆ ಸನ್ಮಾನ ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ವಿಶೇಷ ಕಾರ್ಯಕ್ರಮದಲ್ಲಿ, ಬೆಳಗಾವಿಯ ಮಾಜಿ ಮೇಯರ್ ಮತ್ತು ಸಮಾಜ ಸೇವಕ ವಿಜಯ್ ಮೋರೆ ಅವರನ್ನು ಸಾರ್ವಜನಿಕ ಸೇವೆ ಮತ್ತು ಸಮಾಜಕ್ಕೆ ಸಹಾಯ ಮಾಡುವಲ್ಲಿ ಅವರ ಗಮನಾರ್ಹ ಕಾರ್ಯಕ್ಕಾಗಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮವನ್ನು ಬೆಂಗಳೂರಿನ ಸಮುದಾಯ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಸರ್ಕಾರದೊಂದಿಗೆ ಆಯೋಜಿಸಲಾಗಿತ್ತು. ಈ ಸಮಾರಂಭದಲ್ಲಿ ಕರ್ನಾಟಕದಾದ್ಯಂತ …

Read More »