ಗಂಗಾವತಿ (ಕೊಪ್ಪಳ): ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ವೆಂಕಟಗಿರಿ ಹಾಗೂ ಇರಕಲ್ ಗಡಾ ಹೋಬಳಿಗೆ ಮಂಜೂರಾಗಿದ್ದ ತಲಾ 30 ಹಾಸಿಗೆಗಳ ಎರಡು ಸಮುದಾಯ ಆಸ್ಪತ್ರೆಗಳನ್ನು ಸಚಿವ ಶಿವರಾಜ ತಂಗಡಗಿ ರದ್ದು ಮಾಡಿಸಿದ್ದಾರೆ. ಇದು ಸಚಿವ `ತಂಗಡಗಿ ಅಭಿವೃದ್ಧಿ ಮಾದರಿ’ ಎಂದು ಶಾಸಕ ಗಾಲಿ ಜನಾರ್ದನ್ ರೆಡ್ಡಿ ಅವರು ವಾಗ್ದಾಳಿ ನಡೆಸಿದರು. ನಗರದ ತಾಲೂಕು ಪಂಚಾಯತ್ ಆವರಣದಲ್ಲಿರುವ ಮಂಥನ ಸಭಾಂಗಣದಲ್ಲಿ ಸೋಮವಾರ ನಡೆದ ವಿವಿಧ ಇಲಾಖೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯ …
Read More »Monthly Archives: ಜುಲೈ 2025
ಸಿಎಂ ಬದಲಾವಣೆ ವಿಚಾರ: ಈ ವಿಚಾರವಾಗಿ ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಖರ್ಗೆ ಆದೇಶವಿದೆ: ಮಧು ಬಂಗಾರಪ್ಪ
ಗದಗ: “ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳು ರಾಜ್ಯ ರಾಜಕೀಯದಲ್ಲಿ ಮತ್ತೆ ಸದ್ದು ಮಾಡುತ್ತಿರುವ ಈ ಹೊತ್ತಿನಲ್ಲಿ, ಈ ಬಗ್ಗೆ ಪ್ರತಿಕ್ರಿಯೆ ನೀಡದಂತೆ ಕಾಂಗ್ರೆಸ್ ಹೈಕಮಾಂಡ್ನಿಂದ ಸ್ಪಷ್ಟ ಸೂಚನೆ ಬಂದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಕಾಂಗ್ರೆಸ್ ನಾಯಕರಿಗೆ ‘ಈ ವಿಚಾರವಾಗಿ ಬಾಯಿ ಮುಚ್ಚಿಕೊಂಡು ಇರಬೇಕು’ ಎಂಬ ಸೂಚನೆ ನೀಡಿದ್ದಾರೆ” ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಇಂದು ಗದಗ ಜಿಲ್ಲೆಯಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ಸಿಎಂ …
Read More »ವಿಗ್ರಹ ಕಿತ್ತು ಹಾಕಿದ ಪ್ರಕರಣದಲ್ಲಿ ಇಬ್ಬರ ಬಂಧನ
ಶಿವಮೊಗ್ಗ: “ಹೊರವಲಯ ರಾಗಿಗುಡ್ಡದ ಬಂಗಾರಪ್ಪ ಕಾಲೊನಿಯಲ್ಲಿ ಶನಿವಾರ ನಡೆದ ವಿಗ್ರಹ ಕಿತ್ತು ದ್ವಂಸಕ್ಕೆ ಯತ್ನದ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಯಾರೇ ಆದರೂ ಕಾನೂನಿನ ವಿರುದ್ದ ಕ್ರಮ ತೆಗೆದುಕೊಂಡರೆ ಸೂಕ್ತ ಕ್ರಮ ಜರುಗಿಸಲಾಗುವುದು” ಎಂದು ಎಸ್ಪಿ ಮಿಥುನ್ ಕುಮಾರ್ ಎಚ್ಚರಿಸಿದ್ದಾರೆ. ಅಲ್ಲದೆ ದಲಿತ ದೌರ್ಜನ್ಯದ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸೈಯದ್ ಹಾಗೂ ನಿಯಾಮತ್ ಎಂಬುವರನ್ನು ಬಂಧಿಸಲಾಗಿದೆ. ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಘಟನೆ ಯಾಕೆ ನಡೆದಿದೆ ಎಂದು ತನಿಖೆ ನಡೆಸಲಾಗುತ್ತಿದೆ. ಅಕ್ರಮ …
Read More »ಸಿಎ ಪಾಸ್ ಮಾಡಿದ ಕೂಲಿ ಕಾರ್ಮಿಕನ ಮಗ ರಮೇಶ
ಸಿಎ ಪಾಸ್ ಮಾಡಿದ ಕೂಲಿ ಕಾರ್ಮಿಕನ ಮಗ ರಮೇಶ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಳ್ಳಿಕಾನಿನ ರಮೇಶ್ ನಾಯ್ಕ ಪ್ರತಿಷ್ಠಿತ “𝗜𝗻𝘀𝘁𝗶𝘁𝘂𝘁𝗲 𝗼𝗳 𝗖𝗵𝗮𝗿𝘁𝗲𝗿𝗲𝗱 𝗔𝗰𝗰𝗼𝘂𝗻𝘁𝗮𝗻𝘁𝘀 𝗼𝗳 𝗜𝗻𝗱𝗶𝗮” ಮೇ 2025 ರಲ್ಲಿ ನೆಡೆಸಿದ ಅಂತಾರಾಷ್ಟ್ರಿಯ ಮಟ್ಟದ CA ಅಂತಿಮ ಹಂತದ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಸಾಧನೆ ಮಾಡಿದ್ದಾರೆ. ಇವರು ಮಂಜುನಾಥ ಹಾಗೂ ಶಾರದಾ ದಂಪತಿಗಳ ಮಗನಾಗಿದ್ದು ಅವಿದ್ಯಾವಂತರಾದ ತಂದೆ ತಾಯಿ ಇಬ್ಬರು ದಿನಗೂಲಿ ಕೆಲಸ ಮಾಡುತ್ತಾರೆ. …
Read More »ಮೊಹರಂ ನೃತ್ಯದಲ್ಲೂ ಕಂಡು ಬಂದ ಆರ್.ಸಿ.ಬಿ ಅಭಿಮಾನ
ಮೊಹರಂ ನೃತ್ಯದಲ್ಲೂ ಕಂಡು ಬಂದ ಆರ್.ಸಿ.ಬಿ ಅಭಿಮಾನ ಉಗರಗೋಳ, ಚಿಕ್ಕುಂಬಿಯಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಸವದತ್ತಿ ತಾಲ್ಲೂಕಿನ ಉಗರಗೋಳ ಹಾಗೂ ಚಿಕ್ಕುಂಬಿ ಗ್ರಾಮಗಳಲ್ಲಿ ಮೊಹರಂ ಅನ್ನು ಶ್ರದ್ಧಾ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಮುಸ್ಲಿಂ ಬಾಂಧವರು ಸಾಂಪ್ರದಾಯಿಕವಾಗಿ ಪಂಜಾಗಳ ಮೆರವಣಿಗೆಯನ್ನು ನಡೆಸಿದರೆ, ಮಕ್ಕಳ ಕಲಾತ್ಮಕ ನೃತ್ಯಗಳು ಗ್ರಾಮಸ್ಥರ ಗಮನ ಸೆಳೆಯುವಂತಾಗಿತ್ತು. ಉಗರಗೋಳ ಗ್ರಾಮದಲ್ಲಿ ಆರು ಮಸೀದಿಗಳಲ್ಲಿ ಪಂಜಾಗಳನ್ನು ಪ್ರತಿಷ್ಠಾಪಿಸಲಾಗಿದ್ದು, ಡೋಲಿಗಳ ಮೆರವಣಿಗೆಯ ಮೂಲಕ ಅವುಗಳನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಹರಿದಾಡಿಸಲಾಯಿತು. ಮೆರವಣಿಗೆ …
Read More »ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಕಾಮಗಾರಿ ಕೈಗೊಳ್ಳಿ :ಶಾಸಕ ರಾಜು ಶೆಠ್
ಫ್ಲೈಓವರ್ ಕಾಮಗಾರಿಗೆ ಸಂಬಂಧಿಸಿದ ಪ್ರಮುಖ ಪ್ರದೇಶಗಳ ಪರಿಶೀಲನೆ ನಾಗರಿಕರ ಸುರಕ್ಷತೆ, ತುರ್ತು ಸೇವೆಗಳ ಪ್ರವೇಶ ಮಾರ್ಗ ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಕಾಮಗಾರಿ ಕೈಗೊಳ್ಳಿ ಶಾಸಕ ರಾಜು ಶೆಠ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ಬೆಳಗಾವಿ ನಗರದಲ್ಲಿ ಮುಂಬರುವ ದಿನಗಳಲ್ಲಿ ಆರಂಭವಾಗುವ ಫ್ಲೈಓವರ್ ಕಾಮಗಾರಿಯಿಂದ ಸಾರ್ವಜನಿಕರಿಗೆ ಯಾವುದೇ ಸಮಸ್ಯೆಯಾಗದಂತೆ ಕಾಮಗಾರಿ ಕೈಗೊಂಡು ಆದಷ್ಟು ಬೇಗನೆ ಕಾಮಗಾರಿಯನ್ನು ಮುಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಬೆಳಗಾವಿ ಉತ್ತರದ ಶಾಸಕ ಆಸಿಫ್ (ರಾಜು) ಶೆಠ ಸೂಚಿಸಿದರು. ಅವರು ಫ್ಲೈಓವರ್ ಯೋಜನೆಯಿಂದ …
Read More »ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಭಾರಿ ಏರಿಕೆ ಹಿನ್ನೆಲೆ
ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಭಾರಿ ಏರಿಕೆ ಹಿನ್ನೆಲೆ ಕೃಷ್ಣಾ ನದಿಗೆ ಭೇಟಿ ನೀಡಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಾ ನದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಸತೀಶ ಜಾರಕಿಹೊಳಿ ಕುಡಚಿ ಸೇತುವೆಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದ ಸತೀಶ ಜಾರಕಿಹೊಳಿ ಕೃಷ್ಣಾ ನದಿಗೆ 1 ಲಕ್ಷ 10 ಸಾವಿರ ಕ್ಯೂಸೆಕ್ ಒಳ ಹರಿವು ಅಪಾಯ ಮಟ್ಟ ಮೀರಿ ಕೃಷ್ಣಾ ನದಿ ಹರಿಯುತ್ತಿರುವ ಕಾರಣ ಭೇಟಿ …
Read More »ಹಠಾತ್ ಸಾವು ಅಧಿಸೂಚಿತ ಕಾಯಿಲೆ, ಮರಣೋತ್ತರ ಪರೀಕ್ಷೆ ಕಡ್ಡಾಯ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಕೋವಿಡ್ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ ಎಂಬುದು ವರದಿಯಲ್ಲಿ ಗೊತ್ತಾಗಿದೆ. ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ರವೀಂದ್ರನಾಥ್ ನೇತೃತ್ವದ ತಜ್ಞರ ಸಮಿತಿ ವರದಿಯನ್ನು ಇಂದು ಸರ್ಕಾರಕ್ಕೆ ಸಲ್ಲಿಸಿದೆ. ಮಾಧ್ಯಮಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವ ದಿನೇಶ್ ಗುಂಡೂರಾವ್ ಅವರು, “ಹೃದಯಾಘಾತಕ್ಕೆ ಕೋವಿಡ್ ಸೋಂಕು ಕೂಡ ಕಾರಣವಾಗಿರುಬಹುದೇ ಹೊರತು ಲಸಿಕೆಯಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. “ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವುಗಳು ಮತ್ತು ಕೋವಿಡ್ನಿಂದಾಗುವ ದುಷ್ಪರಿಣಾಮಗಳ ಕುರಿತು ಸರ್ಕಾರದ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದ್ದು, ಈ ಸಂಬಂಧ …
Read More »ಕಣ್ಮನ ಸೆಳೆದ ಗೋಕಾಕ್ ಭಂಡಾರ ಜಾತ್ರೆ 10 ಲಕ್ಷಕ್ಕೂ ಅಧಿಕ ಭಕ್ತರು ಸಾಕ್ಷಿ
ಬೆಳಗಾವಿ: ಗ್ರಾಮದೇವಿಗೆ ಜಾತ್ರೆಯ ಸಂಭ್ರಮ.. ಎಲ್ಲಿ ನೋಡಿದರೂ ಜನಸಾಗರ.. ಕಣ್ಮನ ಸೆಳೆವ ಅದ್ಧೂರಿ ಜೋಡು ರಥೋತ್ಸವ.. ಅಲಂಕಾರಗೊಂಡು ಕಂಗೊಳಿಸುತ್ತಿರುವ ನೂತನ ಲಕ್ಷ್ಮೀ ದೇವಿ ದೇವಸ್ಥಾನ.. ಮುಗಿಲೆತ್ತರಕ್ಕೆ ಚಿಮ್ಮಿದ ಭಕ್ತಿಯ ಭಂಡಾರದಲ್ಲಿ ಮಿಂದೆದ್ದ ಭಕ್ತ ಸಮೂಹ. ಹೌದು, ಇಂತಹ ಅದ್ಭುತ ದೃಶ್ಯಗಳಿಗೆ ಸಾಕ್ಷಿ ಆಗಿದ್ದು, ಕರದಂಟು ನಾಡು ಗೋಕಾಕದ ಗ್ರಾಮದೇವತೆ ಲಕ್ಷ್ಮೀದೇವಿ ಜಾತ್ರೆ. ಕಳೆದ ಜೂ.30 ರಿಂದ ಆರಂಭವಾಗಿರುವ ಈ ಜಾತ್ರಾ ಮಹೋತ್ಸವದಲ್ಲಿ ಭಕ್ತಿಯ ಪರಾಕಾಷ್ಠೆ ಮುಗಿಲು ಮುಟ್ಟಿದೆ. ಹೀಗಾಗಿ, ಗೋಕಾಕದ ಮನೆ …
Read More »ಸರ್ಕಾರಕ್ಕೆ 4,416 ಕೋಟಿ ರೂ. ಅಬಕಾರಿ ರಾಜಸ್ವ ಸಂಗ್ರಹ: ಕಳ್ಳಭಟ್ಟಿ ಮುಕ್ತ ಕಲಬುರಗಿ ಜಿಲ್ಲೆಗೆ ಪಣ, ಗಡಿಯಲ್ಲಿ ಕಟ್ಟೆಚ್ಚರ
ಕಲಬುರಗಿ: ಜಿಲ್ಲೆಯಲ್ಲಿ ಅಕ್ರಮ ಕಳ್ಳಭಟ್ಟಿ ಮತ್ತು ಕಲಬೆರೆಕೆ ಸೇಂದಿ ಹಾಗೂ ಮಾದಕ ವಸ್ತುಗಳ (ಗಾಂಜಾ ಮತ್ತು ಇತರೆ ವಿಷಪೂರಿತ) ತಯಾರಿಕೆ, ಸಾಗಾಣಿಕೆ, ಸಂಗ್ರಹಣೆ ಮತ್ತು ಮಾರಾಟಗಳಂತಹ ಕೃತ್ಯಗಳ ನಿಯಂತ್ರಣಕ್ಕೆ ಅಬಕಾರಿ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸಿ ಕಳ್ಳಭಟ್ಟಿ ಮುಕ್ತ ಕಲಬುರಗಿ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಗಸ್ತು, ದಾಳಿ ತೀವ್ರಗೊಳಿಸಿದೆ. ಕಳ್ಳಭಟ್ಟಿ ನಿಯಂತ್ರಣಕ್ಕೆ ಪ್ರತಿ ತಿಂಗಳು ಪರೇಡ್ ಮಾಡಲಾಗುತ್ತಿದ್ದು, ಇಲ್ಲಿ ಗೌಪ್ಯ ದಾಳಿಗೆ ರೂಪುರೇಷೆ ಹಾಕಿಕೊಂಡು ನಿರಂತರ ದಾಳಿ ಮಾಡಲಾಗುತ್ತಿದೆ. …
Read More »