ಕಾಗವಾಡ ತಾಲೂಕಿನ ಕೃಷ್ಣಾ ಕಿತ್ತೂರ್ ಸೊಸೈಟಿಯು ಆಸ್ತಿ ಖರೀದಿ ಸರಕಾರ ಕಾಯ್ದೆ ಉಲ್ಲಂಘನೆ ಮಾಡಿದೆ ಎಂದು ಆರೋಪ ಕೇಳಿ ಬರ್ತಾಯಿದೆ ಕಾಗವಾಡ ತಾಲೂಕಿನ ಕೃಷ್ಣಾ ಕಿತ್ತೂರು ಕೋ ಆಪ್ ಕ್ರೆಡಿಟ್ ಸೊಸೈಟಿಯು ಹಾಗೂ ವೆಂಕಣ್ಣ ಅಪ್ಪು ಪಾಟೀಲ್ ಅವರೊಂದಿಗೆ ಸೇರಿ ಚಿಕ್ಕೋಡಿಯ ನಗರ ಸಭೆ ವ್ಯಾಪ್ತಿಯಲ್ಲಿ 6789/1/p-42 ಆಸ್ತಿ ಖರೀದಿ ಮಾಡಿದ್ದಾರೆ.. ಬ್ಯಾಂಕ್ ಗಳು ಒಬ್ಬ ವ್ಯಕ್ತಿಯೊಂದಿಗೆ ಜಂಟಿಯಾಗಿ ಖರೀದಿಸಲು ಅವಕಾಶ ಇಲ್ಲಾ.. ಆದರೆ ಇವರು ನಿಯಮ ಮೀರಿ ಆಸ್ತಿ …
Read More »Monthly Archives: ಆಗಷ್ಟ್ 2025
ಸಹೋದರರ ಸವಾಲ್ : ಚನ್ನಮ್ಮನ ಕಿತ್ತೂರಿನಲ್ಲಿ ರಂಗೇರಿದ ಡಿ ಸಿ ಸಿ ಬ್ಯಾಂಕ್ ಚುನಾವಣೆ.
ಸಹೋದರರ ಸವಾಲ್ : ಚನ್ನಮ್ಮನ ಕಿತ್ತೂರಿನಲ್ಲಿ ರಂಗೇರಿದ ಡಿ ಸಿ ಸಿ ಬ್ಯಾಂಕ್ ಚುನಾವಣೆ. ಅತ್ತ ಬಾಲಚಂದ್ರ ಜಾರಕಿಹೊಳಿ ಮಹಾಂತೇಶ್ ದೊಡ್ಡಗೌಡರ್ ಅವರಿಗೆ ಸಪೋರ್ಟ್ ಮಾಡಿದ್ರೆ ಇತ್ತ ಸತೀಶ್ ಜಾರಕಿಹೊಳಿ ಕಿತ್ತೂರು ಶಾಸಕರ ತಮ್ಮ ನಾನಾಸಾಹೇಬ್ ಪಾಟೀಲ್ ಅವರನ್ನು ಕಣಕ್ಕಿಳಿಸಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
Read More »ವಂದೇ ಭಾರತ್ ರೈಲಿನಲ್ಲಿ ಮಕ್ಕಳೊಂದಿಗೆ ಮೋದಿ ಸಂವಾದ
ಆಗಸ್ಟ್ 10: ಬೆಂಗಳೂರು-ಬೆಳಗಾವಿ, ಅಮೃತಸರ-ಶ್ರೀಮಾತಾ ವೈಷ್ಣೋದೇವಿ ಕತ್ರಾ ಮತ್ತು ನಾಗಪುರ(ಅಜ್ನಿ)-ಪುಣೆ ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಹಸಿರು ನಿಶಾನೆ ತೋರಿದರು. ಬಳಿಕ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಶಾಲಾ ಮಕ್ಕಳ ಜೊತೆ ಮಾತನಾಡಿದರು. ಈ ವೇಳೆ ಪ್ರಧಾನಿ ಮೋದಿಯನ್ನು ಕಂಡು ಮಕ್ಕಳ ಸಹ ಸಂತೋಷಗೊಂಡರು.
Read More »ಬಿಜೆಪಿ-ಕಾಂಗ್ರೆಸ್ ನಾಯಕರ ಮೆಟ್ರೋ ಕ್ರೆಡಿಟ್ ವಾರ್: ಮೋದಿ ಮುಂದೆಯೇ ಲೆಕ್ಕ ಬಿಚ್ಚಿಟ್ಟ ಸಿದ್ದರಾಮಯ್ಯ
ಬೆಂಗಳೂರು, (ಆಗಸ್ಟ್ 10): ನಮ್ಮ ಮೆಟ್ರೋ ಹಳದಿ ಮಾರ್ಗ (Yellow metri Line) ಉದ್ಘಾಟನೆ ಬೆನ್ನಲ್ಲೇ ಬಿಜೆಪಿ ಹಾಗೂ ಕಾಂಗ್ರೆಸ್ (BJP And BJP) ನಾಯಕರು ನಡುವೆ ಕ್ರೆಡಿಟ್ ವಾರ್ ಶುರುವಾಗಿದೆ. ಅತಿ ಹೆಚ್ಚು ಪಾಲು ಮೋದಿ ನೇತೃತ್ವದ ಕೇಂದ್ರ ಸರ್ಕಾರದ್ದು ಎಂದು ರಾಜ್ಯ ಬಿಜೆಪಿ ನಾಯಕರು ಹೇಳುತ್ತಿದ್ದರೆ, ಇದಕ್ಕೆ ಪ್ರತಿಯಾಗಿ ಡಿಸಿಎಂ ಡಿಕೆ ಶಿವಕುಮಾರ್ ಆದಿಯಾಗಿ ಸಚಿವರು ನಮ್ಮದೇ ಪಾಲು ಹೆಚ್ಚಿದೆ ಎಂದು ತಿರುಗೇಟು ನೀಡಿದ್ದಾರೆ. ಇನ್ನು ಇದೀಗ ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೆ …
Read More »ವ್ಯಕ್ತಿಯ ಪ್ರಾಣಕ್ಕೆ ಕುತ್ತು ತಂದ ವೈಟ್ ಶರ್ಟ್
ಮಂಡ್ಯ, (ಆಗಸ್ಟ್ 09): ಟಾರ್ಗೆಟ್ ಮಾಡಿದ್ದವನನ್ನ ಬಿಟ್ಟು ಮತ್ತೊಬ್ಬನನ್ನ ಹತ್ಯೆಗೈದಿರುವ (Murder) ಘಟನೆ ಮಂಡ್ಯದಲ್ಲಿ (Mandya) ನಡೆದಿದೆ. ಮದ್ದೂರು ತಾಲೂಕಿನ ಹೆಮ್ಮನಹಳ್ಳಿ ರಸ್ತೆಯ ನಿರ್ಜನ ಪ್ರದೇಶದಲ್ಲಿ ಯುವಕನನ್ನ ಬರ್ಬರವಾಗಿ ಕೊಲೆ ಮಾಡಲಾಗಿದೆ. ವೈಟ್ ಶರ್ಟ್ ಸುಳಿವು ಹಿಡಿದು ಫಾಲೋ ಮಾಡಿದ್ದ ಹಂತಕರು ಟಾರ್ಗೆಟ್ ಮಾಡಿದ್ದವನ ಬದಲಿಗೆ ಮತ್ತೊಬ್ಬನನ್ನ ಕೊಚ್ಚಿ ಕೊಲೆ ಮಾಡಿದ್ದಾರೆ. ವಡ್ಡರಹಳ್ಳಿ ಗ್ರಾಮದ ಅರುಣ್ (34) ಕೊಲೆಯಾದ ಯುವಕ. ಬೆಂಗಳೂರಿನಲ್ಲಿ ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಅರುಣ್ ನಿನ್ನೆ (ಆಗಸ್ಟ್ 08) ವರಮಹಾಲಕ್ಷ್ಮೀ …
Read More »ಮೆಜೆಸ್ಟಿಕ್ ರೈಲು ನಿಲ್ದಾಣ ಸುತ್ತಮುತ್ತ ಸಂಚಾರ ನಿರ್ಬಂಧ
ಬೆಂಗಳೂರು: ಬೆಂಗಳೂರು – ಬೆಳಗಾವಿ ಮಾರ್ಗದ ವಂದೇ ಭಾರತ್ ರೈಲಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ಮೋದಿ ಆಗಮನದ ಹಿನ್ನೆಲೆಯಲ್ಲಿ ನಗರದ ಹೃದಯ ಪ್ರದೇಶವಾಗಿರುವ ನಗರ ರೈಲು ಹಾಗೂ ಮೆಜೆಸ್ಟಿಕ್ ಬಸ್ ನಿಲ್ದಾಣಗಳು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಟ್ರಾಫಿಕ್ ಪೊಲೀಸರು ವಾಹನ ಸಂಚಾರ ನಿರ್ಬಂಧಿಸಿದ್ದಾರೆ. ಭಾನುವಾರ ಬೆಳಗ್ಗೆ 11 ಗಂಟೆಗೆ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಬೆಂಗಳೂರು – ಬೆಳಗಾವಿ ನಡುವಿನ …
Read More »ಅಪ್ರಾಪ್ತೆಯನ್ನು ಪ್ರೀತಿಸಿ ಮದುವೆಯಾಗಿ ಕೊಲೆ ಮಾಡಿದ ಗಂಡ; ಮಹಿಳೆ ಸೇರಿ ನಾಲ್ವರ ಬಂಧನ
ವಿಜಯನಗರ: ಅಪ್ರಾಪ್ತೆಯನ್ನು ಪ್ರೀತಿಸಿ ಮದುವೆಯಾದ ಬಳಿಕ ಗಂಡನೇ ಕೊಲೆ ಮಾಡಿರುವ ಘಟನೆ ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣ ಸಂಬಂಧ ಮಹಿಳೆ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಹೊಸಪೇಟೆನಗರದ ನಿವಾಸಿಗಳಾದ ಮಂಜುನಾಥ ಅಲಿಯಾಸ್ ಡಾಲಿ (24), ಈತನ ತಾಯಿ ಲಕ್ಷ್ಮಿ, ಈತನ ಸ್ನೇಹಿತರಾದ ತರುಣ್, ಅಕ್ಬರ್ ಬಂಧಿತರು. ಪ್ರಕರಣದ ವಿವರ: ನಗರದ ಚಪ್ಪರದಹಳ್ಳಿಯ ಬಾಲಕಿ (17)ಯನ್ನು ಪುಸಲಾಯಿಸಿ ಪ್ರೀತಿ ಮಾಡಿ, ದೇವಸ್ಥಾನವೊಂದರಲ್ಲಿ ಕಳೆದ ನಾಲ್ಕು ತಿಂಗಳ ಹಿಂದೆ …
Read More »ಶಾಲಾ ಮಕ್ಕಳ ಸುರಕ್ಷತೆಗಾಗಿ ರಾಜ್ಯ ಸರ್ಕಾರದಿಂದ ಎಸ್ಒಪಿ ಜಾರಿ: ಪಾಲಿಸಬೇಕಾದ ಪ್ರಮುಖ ಅಂಶಗಳಿವು
ಶಿವಮೊಗ್ಗ: ಇತ್ತೀಚೆಗೆ ಶಾಲೆಯಲ್ಲಿ ವಿದ್ಯಾರ್ಥಿಗಳು ಕುಡಿಯುವ ನೀರಿಗೆ ಕ್ರಿಮಿನಾಶಕ ಮಿಶ್ರಣ ಮಾಡಿದ ಪ್ರಕರಣಗಳು ಶಿವಮೊಗ್ಗ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದ್ದವು. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯು ರಾಜ್ಯದ ಎಲ್ಲಾ ಶಾಲೆಗಳಿಗೆ ಪ್ರಮಾಣಿತ ಕಾರ್ಯಾಚರಣಾ ವಿಧಾನ (ಎಸ್ಒಪಿ)ಯನ್ನು ಜಾರಿಗೊಳಿಸಿದೆ. ಈ ಎಸ್ಒಪಿ ಕುರಿತು ಶಿವಮೊಗ್ಗದ ಡಿಡಿಪಿಐ ಮಂಜುನಾಥ್ ಅವರು ‘ಮಾಹಿತಿ ನೀಡಿದ್ದಾರೆ. ಹೊಸನಗರದ ಶಾಲೆಯೊಂದರಲ್ಲಿ ಕುಡಿಯುವ ನೀರಿಗೆ ಕ್ರಿಮಿನಾಶಕ ಮಿಶ್ರಣ ಮಾಡಿದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ, ಶಾಲೆಯಲ್ಲಿ …
Read More »ಧರ್ಮಸ್ಥಳದ ಬಗ್ಗೆ ಅಪಪ್ರಚಾರ, ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿದೆ: ಸಂಸದ ಜಗದೀಶ ಶೆಟ್ಟರ್ ಗಂಭೀರ ಆರೋಪ
ಬೆಳಗಾವಿ: ಹಿಂದೂ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಮತ್ತು ಅಲ್ಲಿನ ನಂಬಿಕೆಗಳ ಬಗ್ಗೆ ಅಪಪ್ರಚಾರ ಮಾಡುವುದನ್ನು ನಾವು ಖಂಡಿಸುತ್ತೇವೆ. ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದಲೇ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಗಂಭೀರ ಆರೋಪ ಮಾಡಿದರು. ಧರ್ಮಸ್ಥಳದಲ್ಲಿ ಎಸ್ಐಟಿ ತನಿಖೆ ವಿಚಾರಕ್ಕೆ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಾಥಮಿಕ ಸಾಕ್ಷ್ಯಗಳು ಇಲ್ಲದೇ ಎಸ್ಐಟಿ ರಚನೆ ಮಾಡಿದರು. ಸರಿ ತಪ್ಪು ಎಂಬುದು ತನಿಖೆ ಆಗಲಿ. 13 ಸ್ಥಳಗಳಲ್ಲಿ …
Read More »ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ; ಮೆಟ್ರೋ ಹಳದಿ ಮಾರ್ಗ, ವಂದೇ ಭಾರತ್ ರೈಲಿಗೆ ಚಾಲನೆ
ಬೆಂಗಳೂರು: ನಮ್ಮ ಮೆಟ್ರೋದ ಹಳದಿ ಮಾರ್ಗ ಮತ್ತು ಬೆಂಗಳೂರು ಮತ್ತು ಬೆಳಗಾವಿ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ಟ್ರೈನ್ಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಕುರಿತು ವೇಳಾಪಟ್ಟಿ ಹಂಚಿಕೊಂಡಿರುವ ಸಿಎಂ ಕಚೇರಿ, ಮೋದಿ ನಾಲ್ಕು ಗಂಟೆಗಳ ಕಾಲ ಇರಲಿದ್ದು, ಈ ವೇಳೆ ಮೂರು ಕಾರ್ಯಕ್ರಮಗಳಲ್ಲಿ ಹಸಿರು ನಿಶಾನೆ ತೋರಲಿದ್ದಾರೆ. ಬೆಳಗ್ಗೆ 10.30ಕ್ಕೆ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ, ಬಳಿಕ ಕೆಎಸ್ಆರ್ ಬೆಂಗಳೂರು …
Read More »