Breaking News

Monthly Archives: ಆಗಷ್ಟ್ 2025

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ ಫ್ರಾನ್ಸ್​ನಲ್ಲಿ ನಡೆಯಲಿದೆ. ಇಲ್ಲಿ ನಡೆಯುವ ಗಾಳಿಪಟ ಉತ್ಸವಕ್ಕೆ ಮಂಗಳೂರಿನ ಗಾಳಿಪಟ ಆಸಕ್ತರ ತಂಡವೊಂದು ವಿಶೇಷ ಗಾಳಿಪಟವನ್ನು ತಯಾರಿಸಿ, ಸಿದ್ಧವಾಗಿದೆ. ಫ್ರಾನ್ಸ್‌ನಲ್ಲಿ ಸೆಪ್ಟಂಬರ್ 13 ರಿಂದ ಪ್ರಪಂಚದ ಅತೀ ದೊಡ್ಡ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ನಡೆಯಲಿದೆ. ಈ ಉತ್ಸವದಲ್ಲಿ ಗಾಳಿಪಟ ಹಾರಿಸಲು ‘ಟೀಮ್ ಮಂಗಳೂರು’ ತಂಡ ವಿಶೇಷವಾದ ಗಾಳಿಪಟವನ್ನು ತಯಾರಿಸಿದೆ. ಇದೇ ಗಾಳಿಪಟ ಫ್ರೆಂಚರ …

Read More »

ಲಕ್ಕಿ ಸ್ಕೀಮ್ ಹೆಸರಲ್ಲಿ ಜನರಿಗೆ ನಂಬಿಸಿ ₹14 ಕೋಟಿಗೂ ಅಧಿಕ ವಂಚನೆ: ನಾಲ್ವರ ಬಂಧನ

ಮಂಗಳೂರು: ಲಕ್ಕಿ ಸ್ಕೀಮ್ ಮೂಲಕ ಗ್ರಾಹಕರಿಂದ ಕೋಟ್ಯಂತರ ರೂ. ಸಂಗ್ರಹಿಸಿ ವಂಚನೆ ಮಾಡಿದ ಎರಡು ಸಂಸ್ಥೆಗಳ ನಾಲ್ವರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಅಹಮದ್ ಖುರೇಶಿ, ನಝೀರ್ ಯಾನೆ ನಾಸಿರ್, ಮುಹಮ್ಮದ್ ಅಶ್ರಫ್, ಮುಹಮ್ಮದ್ ಹನೀಫ್ ಬಂಧಿತ ಆರೋಪಿಗಳಾಗಿದ್ದಾರೆ. ಪ್ರಕರಣ 1: ನ್ಯೂ ಶೈನ್ ಎಂಟರ್​ಪ್ರೈಸಸ್ ಎಂಬ ಲಕ್ಕಿ ಸ್ಕೀಮ್​ನಲ್ಲಿ 9 ತಿಂಗಳು 1,000 ರೂ. ಹಾಗೂ ಕೊನೆಯ 2 …

Read More »

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ ಸಾಮಗ್ರಿಗಳು, ಗೃಹ ಅಲಂಕಾರ ಮತ್ತು ಪೀಠೋಪಕರಣಗಳ ಬೃಹತ್ ವಸ್ತು ಪ್ರದರ್ಶನವನ್ನು‌ ಇಂದು ಉದ್ಘಾಟಿಸಲಾಯಿತು. ಕಟ್ಟಡ ನಿರ್ಮಾಣ ಕ್ಷೇತ್ರದ ನವೀನ ತಂತ್ರಜ್ಞಾನಗಳು, ಆಧುನಿಕ ವಸ್ತುಗಳು ಮತ್ತು ಉಪಕರಣಗಳನ್ನು ಒಟ್ಟುಗೂಡಿಸಿದ ಈ ಪ್ರದರ್ಶನದಲ್ಲಿ ವಿವಿಧ ಮಳಿಗೆಗಳಿಗೆ ಭೇಟಿ ನೀಡಿ, ಅಲ್ಲಿ ಪ್ರದರ್ಶಿಸಲಾದ ತಂತ್ರಜ್ಞಾನಗಳನ್ನು ಅವಲೋಕಿಸಿದೆ. …

Read More »

ಜಾತಿ ನಿಂದನೆ ಆರೋಪದಡಿ ವಕೀಲ ಕೆ.ಎನ್​​​. ಜಗದೀಶ್​​​​ ಬಂಧನ

ಬೆಂಗಳೂರು: ಜಾತಿ ನಿಂದನೆ ಆರೋಪದಡಿ ಬಿಗ್​ಬಾಸ್​​​ ಮಾಜಿ ಸ್ಪರ್ಧಿ, ವಕೀಲ ಕೆ.ಎನ್​. ಜಗದೀಶ್​​ ಅವರನ್ನು ಕೊಡಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್​​ ಎಂಬುವವರು ನೀಡಿದ ದೂರಿನನ್ವಯ ಎಫ್​ಐಆರ್​​ ದಾಖಲಿಸಿಕೊಳ್ಳಲಾಗಿದ್ದು, ಜಗದೀಶ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಮಾಜಿಕ‌ ಜಾಲತಾಣದ ಮೂಲಕ ಜಾತಿ ನಿಂದನೆ ಮಾಡಿರುವ ಆರೋಪ ಜಗದೀಶ್ ಅವರ ವಿರುದ್ಧ ಕೇಳಿ ಬಂದಿತ್ತು. ಅದರನ್ವಯ ಜಗದೀಶ್ ಅವರಿಗೆ ಗುರುವಾರ ನೋಟಿಸ್ ನೀಡಲು ಪೊಲೀಸರು ತೆರಳಿದ್ದಾಗ ಮನೆಯ ಬಾಗಿಲು ತೆರೆಯದೇ ಹೈಡ್ರಾಮಾ …

Read More »

ಒಂದು ಲಕ್ಷ ಯುನಿಟ್ ರಕ್ತವನ್ನು ಸಂಗ್ರಹದ ಗುರಿ: ಬೆಳಗಾವಿಯ ಹಿಂಡಲಗಾದಲ್ಲಿ ಬೃಹತ್ ರಕ್ತಧಾನ ಶಿಬಿರ…. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಿಂದ

ಒಂದು ಲಕ್ಷ ಯುನಿಟ್ ರಕ್ತವನ್ನು ಸಂಗ್ರಹದ ಗುರಿ: ಬೆಳಗಾವಿಯ ಹಿಂಡಲಗಾದಲ್ಲಿ ಬೃಹತ್ ರಕ್ತಧಾನ ಶಿಬಿರ…. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಿಂದ ಬೆಳಗಾವಿಯ ಹಿಂಡಲಗಾದಲ್ಲಿ ಬೃಹತ್ ರಕ್ತಧಾನ ಶಿಬಿರ ಸ್ವಯಂ ಪ್ರೇರಿತರಾಗಿ ಬಂದು ರಕ್ತಧಾನ ಮಾಡಿದ ಸಾರ್ವಜನಿಕರುಒಂದು ಲಕ್ಷ ಯುನಿಟ್ ರಕ್ತವನ್ನು ಸಂಗ್ರಹದಗುರಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಒಂದು ಲಕ್ಷ ಯುನಿಟ್ ರಕ್ತವನ್ನು ಸಂಗ್ರಹಿಸಿ ಸರ್ಕಾರಕ್ಕೆ ನೀಡುವ ಗುರಿ ಹೊಂದಲಾಗಿದೆ ಎಂದು ರಾಜಯೋಗಿನಿ ಬಿಕೆ ಸುಲೋಚನಾ …

Read More »

ಬೃಹತ್ ಗಾಂಜಾ ಪ್ರಕರಣ ಬೇಧಿಸಿದ ಬೆಳಗಾವಿಯ ನಗರ ಪೊಲೀಸರು 6 ಆರೋಪಿಗಳನ್ನು

ಬೃಹತ್ ಗಾಂಜಾ ಪ್ರಕರಣ ಬೇಧಿಸಿದ ಬೆಳಗಾವಿಯ ನಗರ ಪೊಲೀಸರು 6 ಆರೋಪಿಗಳನ್ನು ಬಂಧಿಸಿದ್ದಾರೆ….50ಕೆಜಿ ಗಾಂಜಾ ಪ್ರಕರಣ ಭೇದಿಸಿದ ಬೆಳಗಾವಿಯ ಖಾಕಿ ಪಡೆಗಾಂಜಾ ಜಾಲವನ್ನು ಬುಡಸಮೇತ ಕಿತ್ತು ಹಾಕಲಾಗುವುದುಜಾಲದಲ್ಲಿರುವ ವ್ಯಕ್ತಿಗಳ ಪತ್ತೆಗೆ ಮೂಹರ್ತವಿಟ್ಟ ಕಮೀಷನರ್ ಜಾಲವನ್ನು ಬೇಧಿಸಿದ ಪೊಲೀಸ್ ತಂಡಕ್ಕೆ ಬಹುಮಾನ ಘೋಷಣೆ ಬೆಳಗಾವಿ-ಚಂದಗಡ ರಸ್ತೆಯಲ್ಲಿರುವ ದಾಭಾ ಒಂದರ ಬಳಿ ಕಾರ ಪರಿಶೀಲನೆ ನಡೆಸಿದಾಗ ಆರು ಜನ ಆರೋಪಿಗಳು ಸುಮಾರು 50 ಕೆಜಿಯಷ್ಟು ಗಾಂಜಾದೊಂದಿಗೆ ಸಿಕ್ಕಿ ಬಿದ್ದಿರುವದಾಗಿ ಬೆಳಗಾವಿ ನಗರ ಪೊಲೀಸ್ …

Read More »

ಚಿಕ್ಕೋಡಿ: ಮಳೆಯ ಆರ್ಭಟ ಕಡಿಮೆಯಾದರೂ ತಗ್ಗದ ಕೃಷ್ಣೆಯ ಒಳಹರಿವು

ಚಿಕ್ಕೋಡಿ (ಬೆಳಗಾವಿ): ಮಹಾರಾಷ್ಟ್ರ ಪಶ್ಚಿಮಘಟ್ಟ ಹಾಗೂ ಕೃಷ್ಣಾನದಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ಗಣನೀಯವಾಗಿ ಕಡಿಮೆಯಾದರೂ ರಾಜ್ಯಕ್ಕೆ ಇನ್ನೂ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ನಾಲ್ಕು ಅಡಿಯಷ್ಟು ಕೃಷ್ಣಾನದಿ ಏರಿಕೆ ಕಂಡಿದ್ದು, ನದಿ ಪಾತ್ರದ ಜಮೀನುಗಳಿಗೆ ಅಪಾರ ಪ್ರಮಾಣದ ನೀರು ನುಗ್ಗಿ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿನ ಬೆಳೆಗಳು, ಹಲವು ಸೇತುವೆಗಳು ಜಲಾವೃತವಾಗಿವೆ.  ಚಿಕ್ಕೋಡಿ, ಹುಕ್ಕೇರಿ, ನಿಪ್ಪಾಣಿ ರಾಯಬಾಗ, ಅಥಣಿ, ಕಾಗವಾಡ ತಾಲೂಕಿನಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದ್ದು, ರೈತರಲ್ಲಿ ಆತಂಕಕ್ಕೆ …

Read More »

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರದ ವಿರುದ್ಧ ಬಿಜೆಪಿ ಧರ್ಮ ಯುದ್ಧ ನಡೆಸುವುದಾಗಿ ಘೋಷಿಸಿದೆ.

ಬೆಂಗಳೂರು: ಧರ್ಮಸ್ಥಳದ ವಿಚಾರವಾಗಿ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ “ಧರ್ಮದ ಉಳಿವಿಗಾಗಿ ಧರ್ಮ ಯುದ್ಧ” ಹೋರಾಟವನ್ನು ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು, “ಧರ್ಮಸ್ಥಳದ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಚಿವ ದಿನೇಶ್ ಗುಂಡೂರಾವ್ ಅವರು ನೀಡಿರುವ ಹೇಳಿಕೆಗಳು ಎಲ್ಲರಿಗೂ ತಿಳಿದಿದೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರದ ವಿಚಾರವಾಗಿ ರಾಜ್ಯ ಸರ್ಕಾರದ ನಡವಳಿಕೆ ಬಗ್ಗೆ ನಮಗೂ ಅನುಮಾನಗಳು ಕಾಡುತ್ತಿವೆ” ಎಂದು ಹೇಳಿದರು. “ರಾಜ್ಯ ಸರ್ಕಾರದ ಈ …

Read More »

ಅತೀ ಶೀಘ್ರದಲ್ಲೇ ನಾವು ಬರ್ತಿದ್ದೇವೆ ಎಂದ ಆಪಲ್​!

Bengaluru: ಇನ್ನು ಕೆಲವೇ ದಿನಗಳಲ್ಲಿ ಐಫೋನ್​ 17 ಮಾರುಕಟ್ಟೆಗೆ ಲಗ್ಗೆಯಿಡಲಿದೆ. ಇದಕ್ಕೂ ಮುನ್ನ ಆಪಲ್​ ಕರ್ನಾಟಕ ರಾಜ್ಯಕ್ಕೆ ಸಿಹಿ ಸುದ್ದಿಯೊಂದು ನೀಡಿದೆ. ಬೆಂಗಳೂರಿನ ಹೆಬ್ಬಾಳದಲ್ಲಿ ತನ್ನ ಮೂರನೇ ಪ್ರಮುಖ ರಿಟೇಲ್​ ಮಳಿಗೆಯನ್ನು ತೆರೆಯಲು ಆಪಲ್ ಸಜ್ಜಾಗಿದೆ. ಇದಕ್ಕೂ ಮೊದಲು ಆಪಲ್ ಮುಂಬೈನಲ್ಲಿ ಆಪಲ್ ಬಿಕೆಸಿ ಮತ್ತು ನವದೆಹಲಿಯಲ್ಲಿ ಆಪಲ್ ಸಾಕೆಟ್ ಶಾಪ್​ಗಳನ್ನು ಯಶಸ್ವಿಯಾಗಿ ತೆರೆದಿದೆ. ಆಪಲ್ ಇಂಡಿಯಾದ ಅಧಿಕೃತ ವೆಬ್‌ಸೈಟ್ ಪ್ರಕಾರ, ಆಪಲ್ ಹೆಬ್ಬಾಳ ಅಂಗಡಿ ಸೆಪ್ಟೆಂಬರ್​ರಂದು ತೆರೆಯಲಿದೆ. ಅಂಗಡಿಯ ಉದ್ಘಾಟನೆ …

Read More »

ನಾನು ಹುಟ್ಟು ಕಾಂಗ್ರೆಸಿಗ, ಬಿಜೆಪಿ – ಆರ್​​ಎಸ್​​ಎಸ್ ಜೊತೆ ಕೈ ಜೋಡಿಸುವ ಪ್ರಮೇಯವೇ ಇಲ್ಲ: ಡಿಸಿಎಂ

ಬೆಂಗಳೂರು : ನಾನು ಅಪ್ಪಟ ಕಾಂಗ್ರೆಸಿಗ. ಹುಟ್ಟಿನಿಂದ ಕಾಂಗ್ರೆಸ್​ ಪಕ್ಷದಲ್ಲಿದ್ದೇನೆ. ಜೀವ ಇರುವ ತನಕವೂ ಕಾಂಗ್ರೆಸಿಗನಾಗಿಯೇ ಇರುತ್ತೇನೆ. ನನ್ನ ಜೀವ, ನನ್ನ ರಕ್ತ ಎಲ್ಲವೂ ಕಾಂಗ್ರೆಸ್. ನಾನೀಗ ಪಕ್ಷವನ್ನು ಮುನ್ನಡೆಸುತ್ತಿದ್ದೇನೆ. ಅದಕ್ಕೆ ಆಧಾರಸ್ತಂಭವಾಗಿ ನಿಲ್ಲುತ್ತೇನೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ವಿಧಾ‌ನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಧಾನಸಭೆಯಲ್ಲಿ ಆರ್​​ಎಸ್​​ಎಸ್ ಗೀತೆ ಹಾಡಿದ್ದರ ಪರಿಣಾಮ ನೀವು ಬಿಜೆಪಿ ಹಾಗೂ ಆರ್​​ಎಸ್​​ಎಸ್ ಜೊತೆ ಕೈ ಜೋಡಿಸುವ ಬಗ್ಗೆ ಚರ್ಚೆಯಾಗುತ್ತಿದೆ …

Read More »