ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಷಡ್ಯಂತ್ರ, ಅಪಪ್ರಚಾರ ವಿಚಾರ ಕುಂದಾನಗರಿ ಬೆಳಗಾವಿಯಲ್ಲಿ ಧರ್ಮಸ್ಥಳ ಭಕ್ತರಿಂದ ಬೃಹತ್ ಪ್ರತಿಭಟನೆ ನಗರದ ಚೆನ್ನಮ್ಮ ವೃತ್ತದಿಂದ ಡಿಸಿ ಕಚೇರಿ ವರೆಗೂ ಪ್ರತಿಭಟನಾ ರ್ಯಾಲಿ. ಧರ್ಮಸ್ಥಳದ ಭಕ್ತಾಭಿಮಾನಿಗಳ ವೇದಿಕೆಯಿಂದ ಹೋರಾಟ ಸರ್ಕಾರವೇ ರಚಿಸಿರೋ ಎಸ.ಐ.ಟಿ ತನಿಖೆ ನಡೆಸುತ್ತಿದೆ ಈವರೆಗೂ ಈ ತನಿಖಾ ತಂಡ ಇನ್ನೂ ಸರ್ಕಾರಕ್ಕೆ ವರದಿಯೇ ಕೊಟ್ಟಿಲ್ಲ ಧರ್ಮಸ್ಥಳ ಮಂಜುನಾಥ ಸ್ವಾಮಿ, ಡಾ.ವೀರೇಂದ್ರ ಹೆಗ್ಗಡೆ ಕುಟುಂಬಸ್ಥರ ವಿರುದ್ಧ ನಿರಾಧಾರ ಆರೋಪ ಮಾಡಿದ್ದಾರೆ ಗಿರೀಶ್ ಮಟ್ಟಣ್ಣವರ, …
Read More »Monthly Archives: ಆಗಷ್ಟ್ 2025
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರು ಸಂತೋಷ್ ಜಾರಕಿಹೊಳಿ.
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರು ಸಂತೋಷ್ ಜಾರಕಿಹೊಳಿ. ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯ ಮಾರ್ಗದರ್ಶಕರು ಹಾಗೂ ಯುವ ನಾಯಕ ಸಂತೋಷ್ ಜಾರಕಿಹೊಳಿ ಅವರು ಭೇಟಿ ಮಾಡಿ ಕುಶಲೋಪರಿ ವಿಚಾರಿಸಿ, ಅನೇಕ ಚರ್ಚೆ ನಡೆಸಿದರು.
Read More »ರಾಜಕೀಯದಲ್ಲಿ ಎಚ್ಚರಿಕೆಯಿಂದ ಇರಬೇಕು: ರಾಜಣ್ಣ ವಜಾ ಬಗ್ಗೆ ವ್ಯಾಖ್ಯಾನ ಮಾಡಲ್ಲ ಎಂದ ಸಚಿವ ಸತೀಶ್ ಜಾರಕಿಹೊಳಿ.
ರಾಜಕೀಯದಲ್ಲಿ ಎಚ್ಚರಿಕೆಯಿಂದ ಇರಬೇಕು: ರಾಜಣ್ಣ ವಜಾ ಬಗ್ಗೆ ವ್ಯಾಖ್ಯಾನ ಮಾಡಲ್ಲ ಎಂದ ಸಚಿವ ಸತೀಶ್ ಜಾರಕಿಹೊಳಿ. ಕೆ.ಎನ್.ರಾಜಣ್ಣರನ್ನು ಸಂಪುಟದಿಂದ ವಜಾ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ರಾಜಕೀಯದಲ್ಲಿ ಒಬ್ಬರ ಮೇಲೆ ಒಬ್ಬರು ಹಗೆ ಸಾಧಿಸುತ್ತಾರೆ. ನಾವು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ರಾಜಣ್ಣ ಅವರನ್ನು ವಜಾ ಮಾಡಿರುವುದು ಹೈಕಮಾಂಡ್ ನಿರ್ಧಾರ. ಈ ಬಗ್ಗೆ ರಾಜಣ್ಣ ಅವರೇ …
Read More »ಗರ್ಭ ಧರಿಸಿದ ಬಸವಿ ಹಸುವಿಗೆ ಸೀಮಂತ
ಹಾವೇರಿ: ಜಿಲ್ಲೆಯ ಬ್ಯಾಡಗಿ ತಾಲೂಕಿನ ಹೊಸ ಶೀಡೆನೂರು ಗ್ರಾಮದಲ್ಲಿ ಮೂರು ವರ್ಷದ ಹಿಂದೆ ಬಸವಿ ಕರು ಬಿಡಲಾಗಿತ್ತು. ಈ ಕರುವನ್ನು ಎಲ್ಲರೂ ಗೌರಿ ಎಂದು ಮುದ್ದಾಗಿ ಕರೆಯುತ್ತಿದ್ದರು. ಗೌರಿಗೆ ಮೂರು ವರ್ಷ ತುಂಬಿದ್ದರೂ ಗರ್ಭ ಧರಿಸಿಲ್ಲಾ ಎನ್ನುವ ಬೇಸರದಲ್ಲಿದ್ದ ಜನರು ಇದೀಗ ಮರಿ ಗೌರಿಯ ಸಂಭ್ರಮದಲ್ಲಿದ್ದಾರೆ. ಹಸುವಿಗೆ ಸೀಮಂತ: ಜನರ ಬಯಕೆಯಂತೆ ಗೌರಿ ಗರ್ಭ ಧರಿಸಿದ್ದು, ಗ್ರಾಮಸ್ಥರು ಗೌರಿಗೆ ಸೀಮಂತ ಮಾಡುವ ಮೂಲಕ ಸಂಭ್ರಮಿಸಿದ್ದಾರೆ. ಗೌರಿಗೆ ಅರಿಶಿಣ ಕುಂಕುಮ ಹಚ್ಚಿ, ಹೊಸ ಸೀರೆ …
Read More »ಕಾಂಗ್ರೆಸ್ ಮುಖಂಡನ ಮೇಲೆ ಮಾ₹ ರಣಾಂತಿಕ ಹಲ್ಲೆ
ಕಾಂಗ್ರೆಸ್ ಮುಖಂಡನ ಮೇಲೆ ಮಾ₹ ರಣಾಂತಿಕ ಹಲ್ಲೆ ಚಿಕ್ಕೋಡಿ: ಮಾಜಿ ತಾಲೂಕು ಪಂಚಾಯತ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡನ ಮೇಲೆ ಮಾರ₹ ಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮುಗಳಿ ಗ್ರಾಮದಲ್ಲಿ ನಡೆದಿದೆ. ಮಾಜಿ ತಾಲೂಕು ಪಂಚಾಯತ ಸದಸ್ಯ ಹಾಗೂ ಕೈ ಮುಖಂಡ ರಾಜು ಪಾಟೀಲ್ ಮೇಲೆ ಖಾರದ ಪುಡಿ ಎರಚಿ ಮಾರ₹ ಣಾಂತಿಕ ಹಲ್ಲೆ ನಡೆಸಲಾಗಿದೆ. ಮುಗಳಿ ಗ್ರಾಮದ ಬಸ್ ನಿಲ್ದಾಣದ ಬಳಿ …
Read More »ಎಡಪಂಥೀಯರಿಂದ ಧರ್ಮಸ್ಥಳ, ಹೆಗ್ಗಡೆಯವರ ಹೆಸರಿಗೆ ಕಳಂಕ ತರುವ ಕೆಲಸ’: ಹಾವೇರಿಯಲ್ಲಿ ಪ್ರತಿಭಟನೆ
ಹಾವೇರಿ: ಮೂಲಭೂತವಾದಿಗಳು ಹಾಗು ಎಡಪಂಥೀಯರು ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಹೆಸರಿಗೆ ಕಳಂಕ ತರುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ವಿವಿಧ ಸಂಘಟನೆಗಳು ಮಂಗಳವಾರ ಹಾವೇರಿಯಲ್ಲಿ ಪ್ರತಿಭಟನೆ ನಡೆಸಿದವು. ಹಾವೇರಿ ಜಿಲ್ಲಾಧಿಕಾರಿ ಕಚೇರಿ ಎದುರು ಅಪಾರ ಸಂಖ್ಯೆಯಲ್ಲಿ ಸೇರಿದ ಜನರು, ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಅವರಿಗೆ ಕಳಂಕ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಆಗ್ರಹಿಸಿದರು. ಧರ್ಮಸ್ಥಳದಲ್ಲಿ ಹಲವಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ದೂರಿನ …
Read More »ಧರ್ಮಸ್ಥಳ: ಮುಸುಕುಧಾರಿ ದೂರುದಾರ ತೋರಿಸಿದ ಪಾಯಿಂಟ್ 13ರಲ್ಲಿ 15 ಅಡಿ ಅಗೆದರೂ ಸಿಗದ ಶವ
ಬೆಳ್ತಂಗಡಿ(ದಕ್ಷಿಣ ಕನ್ನಡ): ನೂರಾರು ಮೃತದೇಹಗಳನ್ನು ಹೂತು ಹಾಕಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪಾಯಿಂಟ್ ನಂಬರ್ 13ರಲ್ಲಿ ನಡೆಸಿದ ಶೋಧ ಕಾರ್ಯದಲ್ಲಿ ಯಾವುದೇ ಕಳೇಬರದ ಕುರುಹುಗಳು ಪತ್ತೆಯಾಗಿಲ್ಲ. ಕಳೆದ 12 ದಿನಗಳಿಂದ ಎಸ್ಐಟಿ ನೇತೃತ್ವದಲ್ಲಿ ಶೋಧ ಕಾರ್ಯ ನಡೆಯುತ್ತಿದ್ದು, ನೇತ್ರಾವತಿ ನದಿ ಬದಿಯಲ್ಲಿ ಗುರುತು ಮಾಡಿದ 13ರ ಶೋಧ ಕುತೂಹಲಕ್ಕೆ ಕಾರಣವಾಗಿತ್ತು. ಅನಾಮಧೇಯ ಮುಸುಕುಧಾರಿ ದೂರುದಾರ ವ್ಯಕ್ತಿ ಈ ಸ್ಥಳದಲ್ಲಿ ಹಲವು ಶವಗಳನ್ನು ಹೂತು ಹಾಕಿರುವುದಾಗಿ ಮಾಹಿತಿ ನೀಡಿದ್ದ ಹಿನ್ನೆಲೆಯಲ್ಲಿ ಈ …
Read More »ಸರ್ಕಾರಿ ನೌಕರಿ ನಕಲಿ ಆದೇಶ ಪತ್ರ, ರಾಜ್ಯಪಾಲರ ಸಹಿ: ಆರೋಪಿ ವಿರುದ್ಧ ಚಾರ್ಜ್ಶೀಟ್ಗೆ ಬೆಳಗಾವಿ ಪೊಲೀಸರ ಸಿದ್ಧತೆ
ಬೆಳಗಾವಿ: ”ಸರ್ಕಾರಿ ನೌಕರಿ ಕೊಡಿಸುವುದಾಗಿ 14 ಜನರಿಗೆ 30 ಲಕ್ಷ ರೂ. ವಂಚಿಸಿದ್ದ ಪ್ರಕರಣದಲ್ಲಿ ಆರೋಪಿ ಬೇರೆ ಬೇರೆಯವರ ಹೆಸರು ಹೇಳಿಕೊಂಡು ಸರ್ಕಾರದ ಲೋಗೋ ಕಾಪಿ ಮಾಡಿ, ರಾಜ್ಯಪಾಲರ ಸಹಿಯನ್ನೂ ನಕಲು ಮಾಡಿ, ಸುಳ್ಳು ಸರ್ಕಾರಿ ನೌಕರಿಯ ಆದೇಶ ಪತ್ರ ಕೊಟ್ಟಿರುವುದು ತನಿಖೆಯಲ್ಲಿ ಸಾಬೀತಾಗಿದೆ. ಹಾಗಾಗಿ, ಆರೋಪಿ ವಿರುದ್ಧ ಚಾರ್ಜ್ಶೀಟ್ ಸಿದ್ಧಪಡಿಸುತ್ತಿದ್ದೇವೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ತಿಳಿಸಿದರು. ಈ ಕುರಿತು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಎಸ್ಪಿ, ”ಮಂಜುನಾಥ …
Read More »3ನೇ ಪಾಯಿಂಟ್ನಲ್ಲೂ ಮೂಳೆಗಳು ಸಿಗದಿದ್ರೆ SIT ಶೋಧ ಸ್ಥಗಿತ, ಸಚಿವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ: ಸಿಎಂ
ಬೆಂಗಳೂರು: 13 ಸ್ಥಳಗಳಲ್ಲೂ ಶವ ಸಿಗದಿದ್ದರೆ ಎಸ್ಐಟಿ ಶವ ಶೋಧನೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕಾಗುತ್ತದೆ. ಈ ಬಗ್ಗೆ ಸರ್ಕಾರ ಅಂತಿಮ ತೀರ್ಮಾನ ಕೈಗೊಳ್ಳುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಇಂದು ನಡೆದ ಶಾಸಕಾಂಗ ಸಭೆಯಲ್ಲಿ ತಿಳಿಸಿದ್ದಾರೆ. ಧರ್ಮಸ್ಥಳ ವಿಚಾರವಾಗಿ ಬೇಳೂರು ಗೋಪಾಲಕೃಷ್ಣ ವಿಷಯ ಪ್ರಸ್ತಾಪಿಸಿದರು. ಈ ಸಂಬಂಧ ಮಾತನಾಡಿದ ಸಿಎಂ, ಎಸ್ಐಟಿ ಮಾಡಿದ ಬಗ್ಗೆ ಜನರಿಂದ ಒಳ್ಳೆಯ ಅಭಿಪ್ರಾಯ ಬಂದಿದೆ. ಧರ್ಮಸ್ಥಳದ ವಿಚಾರದಲ್ಲಿ ಯಾರೂ ಭಾವನಾತ್ಮಕವಾಗಿ ಹೇಳಿಕೆ ನೀಡಬೇಡಿ, 13 ಸ್ಥಳಗಳಲ್ಲಿ ಎಸ್ಐಟಿ ಶೋಧನೆ …
Read More »ಯಲ್ಲಮ್ಮನ ಗುಡ್ಡದಲ್ಲಿ ಮಳೆ ಅವಾಂತರ: ಹುಂಡಿಗೆ ನುಗ್ಗಿದ ನೀರು, ತೊಯ್ದ ಕಾಣಿಕೆ ಹಣ
ಬೆಳಗಾವಿ: ಕೋಟ್ಯಂತರ ಭಕ್ತರ ಆರಾಧ್ಯ ದೇವತೆ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಉಂಟಾದ ಪ್ರವಾಹದಲ್ಲಿ ದೇವಸ್ಥಾನ ಸಂಪೂರ್ಣವಾಗಿ ಮುಳುಗಿತ್ತು. ಶ್ರಾವಣ ಹಿನ್ನೆಲೆ ಬರುತ್ತಿರುವ ಭಕ್ತರು ಮಳೆಯಿಂದ ತೀವ್ರ ಸಂಕಷ್ಟ ಎದುರಿಸಿದ್ದರು. ಪ್ರವಾಹದ ನೀರು ದೇವಸ್ಥಾನದ ತುಂಬೆಲ್ಲಾ ವ್ಯಾಪಿಸಿದ್ದರಿಂದ ಕೊಳಚೆ, ಮಣ್ಣು, ಕೆಸರು ತುಂಬಿಕೊಂಡಿದೆ. ಇದರಿಂದ ದೇವಸ್ಥಾನದ ಆವರಣವು ಕೆಸರಿನಿಂದ ತುಂಬಿಕೊಂಡಿದೆ. ದೇವಸ್ಥಾನದ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ. ನೀರಿನಲ್ಲಿ ತೊಯ್ದ ಹುಂಡಿ …
Read More »
Laxmi News 24×7