ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಆರೋಪ ಸಂಬಂಧ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಶಿಕ್ಷೆಯ ಪ್ರಮಾಣವನ್ನು ಮಧ್ಯಾಹ್ನ 2:45ಕ್ಕೆ ಪ್ರಕಟಿಸುವುದಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿಳಿಸಿದೆ. ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರಿದ್ದ ನ್ಯಾಯಪೀಠ, ಸುದೀರ್ಘ ವಾದ ಆಲಿಸಿದ ಬಳಿಕ, ಮಧ್ಯಾಹ್ನ ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ಹೇಳಿದೆ. ಪ್ರಕರಣದ ಹಿನ್ನೆಲೆ : ಮೈಸೂರಿನ ಕೆ.ಆರ್. ನಗರದ ಸಂತ್ರಸ್ತ ಮಹಿಳೆ …
Read More »Monthly Archives: ಆಗಷ್ಟ್ 2025
ಧಾರವಾಡ ಶಹರ ಪೊಲೀಸ್ ಠಾಣೆ ವತಿಯಿಂದ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ.
ಧಾರವಾಡ ಶಹರ ಪೊಲೀಸ್ ಠಾಣೆ ವತಿಯಿಂದ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ… ಧಾರವಾಡ ಎಸಿಪಿ ಪ್ರಶಾಂತ್ ಸಿದ್ಧನಗೌಡರಿಂದ ಮನೆ ಮನೆಗೆ ಪೊಲೀಸ್ ಉದ್ದೇಶ ಮನವರಿಕೆ.. ಶಾಂತಿ ಸಮಾಜ ಹಾಗೂ ಕಾನೂನು ಸುವ್ಯವಸ್ಥೆ ಸೇರಿ ಸಮಾಜಘಾತುಕ ಶಕ್ತಿಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜನ ಸ್ನೇಹಿ ಪೊಲೀಸ್ ವಾತಾವರಣ ನಿರ್ಮಾಣ ಮಾಡುವ ಉದ್ದೇಶದಿಂದ ಇತ್ತೀಚೆಗೆ ಜಾರಿಯಾಗಿರುವ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮವನ್ನು ಧಾರವಾಡ ಶಹರ ಪೊಲೀಸ್ ಠಾಣೆಯ ವತಿಯಿಂದ ನಡೆಸಲಾಯಿತು. ಹೌದು …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಸೊಗಲ ಗ್ರಾಮದ ಶ್ರೀ ಸೋಮೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …
Read More »CPI ಶ್ರೀಶೈಲ ಬ್ಯಾಕೂಡ ಅವರ ಜನುಮದಿನದಂದು ಮನಾಸರಿ ಹಾರೈಸಿದ ಮೂಲಗಿ ತಾಲೂಕಿನ ಜನತೆ ಹಾಗೂ ಅಭಿಮಾನಿ ಬಳಗ.!
CPI ಶ್ರೀಶೈಲ ಬ್ಯಾಕೂಡ ಅವರ ಜನುಮದಿನದಂದು ಮನಾಸರಿ ಹಾರೈಸಿದ ಮೂಲಗಿ ತಾಲೂಕಿನ ಜನತೆ ಹಾಗೂ ಅಭಿಮಾನಿ ಬಳಗ.! ಶ್ರೀಶೈಲ ಬ್ಯಾಕೋಡವರು ಖಜಕಿಸ್ಥಾನದಲ್ಲಿ ನಡೆದ ಐರನ್ ಮ್ಯಾನ್ ಸ್ಪರ್ಧೆಯಲ್ಲಿ ಭಾಗವಹಿಸಿ 3.8km ಈಜು,180km ಸೈಕಲಿಂಗ್ ಮತ್ತು 42km ಓಟವನ್ನು14 ಗಂಟೆ 30 ನಿಮಿಷದಲ್ಲಿ ಪೂರ್ಣಗೊಳಿಸಿ ಐರನ್ ಮ್ಯಾನ್ ಆಗಿ ಹೊರಹೊಮ್ಮಿದ್ದಾರೆ ಹಾಗೂ ಈ ಸ್ಪರ್ಧೆಯಲ್ಲಿ ಭಾಗವಹಿಸಿದ ಕರ್ನಾಟಕದ ಮೊದಲ ಪೊಲೀಸ್ ಅಧಿಕಾರಿ ಯಾಗಿದ್ದಾರೆ. ಇಂತಹ ಒಂದು ಕರ್ನಾಟಕ ಪೊಲೀಸ್ ಇಲಾಖೆಗೆ ಹಾಗೂ …
Read More »ರೈಲಿನಲ್ಲಿ ರಾಜಸ್ಥಾನದಿಂದ ದಾವಣಗೆರೆಗೆ ಬಂದು ಕಳ್ಳತನ: ಮೂವರು ಅರೆಸ್ಟ್, 20 ಲಕ್ಷ ಮೌಲ್ಯದ ಬೆಳ್ಳಿ ವಶ
ದಾವಣಗೆರೆ: ಕಳ್ಳತನ ಪ್ರಕರಣವೊಂದನ್ನು ಬೇಧಿಸಿರುವ ದಾವಣಗೆರೆ ಪೊಲೀಸರು, 18.790 ಕೆಜಿ ಬೆಳ್ಳಿ ಆಭರಣ ಕಳವು ಮಾಡಿದ್ದ ರಾಜಸ್ಥಾನ ಮೂಲದ ಮೂವರು ಖದೀಮರನ್ನು ಬಂಧಿಸಿದ್ದಾರೆ. ದಿನೇಶ್ ಕುಮಾರ್(35), ದೀಪಕ್ ಕುಮಾರ್(26), ರಮೇಶ್ ಕುಮಾರ್ (31) ಬಂಧಿತರು. ನಗರದ ಕೆಬಿ ಬಡಾವಣೆಯ ಕೀರ್ವಾಡಿ ಲೇಔಟ್ನ ನಿವಾಸಿ ಗಿರೀಶ್ ಎನ್ನುವರು ಜು.14ರಂದು ತಾವು ಯಾರು ಇಲ್ಲದಾಗ ತಮ್ಮ ಮನೆಯಲ್ಲಿ ಕಳ್ಳತನವಾಗಿದೆ ಎಂದು ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ತನಿಖೆ ಚುರುಕುಗೊಳಿಸಿದ್ದ …
Read More »ಆಗಸ್ಟ್ 3ರವರೆಗೆ ಅಮರನಾಥ ಯಾತ್ರೆ ಸ್ಥಗಿತ
ಜಮ್ಮು: ಭಾರಿ ಮಳೆಯಿಂದ ಸಂಚಾರಕ್ಕೆ ಅಡಚಣೆಯಾಗಿದ್ದು, ತುರ್ತು ದುರಸ್ತಿ ಮತ್ತು ನಿರ್ವಹಣೆ ಅಗತ್ಯವಿರುವ ಹಿನ್ನೆಲೆಯಲ್ಲಿ ಆಗಸ್ಟ್ 3ರವರೆಗೆ ಪವಿತ್ರ ಅಮರನಾಥ ಯಾತ್ರೆಯನ್ನು ಎರಡೂ ಮಾರ್ಗದಲ್ಲೂ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ಪಹಲ್ಗಾಮ್ ಮಾರ್ಗದಿಂದ ಯಾವುದೇ ಹೊಸ ಯಾತ್ರಿಕರ ತಂಡ ಪ್ರಯಾಣ ಕೈಗೊಂಡಿಲ್ಲ. ಆದರೆ, ಬಾಲ್ಟಾಲ್ ಮಾರ್ಗವಾಗಿ ಗುಹಾಂತರ ದೇಗುಲಕ್ಕೆ ಯಾತ್ರಿಕರು ತೆರಳಿದ್ದಾರೆ. ಬಳಿಕ ಭಾರಿ ಮಳೆಯಿಂದಾಗಿ ಬಲ್ಟಾಲಾ ಮಾರ್ಗದಲ್ಲೂ ಯಾತ್ರೆಯನ್ನು ಸ್ಥಗಿತಗೊಳಿಸಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಕಳೆದೆರಡು ದಿನದಿಂದ …
Read More »ಕಳಚಿತು ದೊಡ್ಮನೆಯ ಹಿರಿಯ ಕೊಂಡಿ
ಚಾಮರಾಜನಗರ: ವರನಟ ದಿ.ಡಾ.ರಾಜ್ಕುಮಾರ್ ಅವರ ಸಹೋದರಿ ನಾಗಮ್ಮ(94) ಇಂದು ಬೆಳಗ್ಗೆ ವಯೋಸಹಜ ಕಾಯಿಲೆಯಿಂದ ನಿಧನರಾದರು. ನಾಗಮ್ಮ ಅಣ್ಣಾವ್ರ ಅಚ್ಚುಮೆಚ್ಚಿನ ಸಹೋದರಿಯಾಗಿದ್ದರು. ಜೊತೆಗೆ, ಇಡೀ ರಾಜ್ ಪರಿವಾರಕ್ಕೆ ಅಕ್ಕರೆಯ ನಾಗಮ್ಮತ್ತೆಯಾಗಿದ್ದರು. ಅಣ್ಣಾವ್ರು ಅಂದಿನ ಮದ್ರಾಸ್ನಲ್ಲಿದ್ದಾಗ ನಾಗಮ್ಮ ಮಕ್ಕಳ ಲಾಲನೆ-ಪಾಲನೆ ಮಾಡುತ್ತಿದ್ದರು. ತಂಗಿ ಹಾಗೂ ಕುಟುಂಬದ ಜೊತೆ ವಿರಾಮದ ಕಾಲ ಕಳೆಯಬೇಕೆಂದು ಅಣ್ಣಾವ್ರು ಗಾಜನೂರಿನಲ್ಲಿ ಮನೆಯನ್ನೂ ಕಟ್ಟಿಸಿದ್ದರು. ಅಷ್ಟರಲ್ಲಿ, ವೀರಪ್ಪನ್ನಿಂದ ಅಪಹರಣಕ್ಕೊಳಗಾದ ಬಳಿಕ ಅನಿವಾರ್ಯವಾಗಿ ಗಾಜನೂರಿನಲ್ಲಿ ನೆಲೆ ನಿಲ್ಲುವ ಆಸೆ ಕೈಬಿಟ್ಟಿದ್ದರು.ಪುನೀತ್ ರಾಜ್ ಕುಮಾರ್ …
Read More »ಧರ್ಮಸ್ಥಳದಲ್ಲಿ ಸಿಕ್ಕ ಪ್ಯಾನ್ ಕಾರ್ಡ್, ಎಟಿಎಂ ಕಾರ್ಡ್ ಸುಳಿವು ಪತ್ತೆ
ನೆಲಮಂಗಲ: ಧರ್ಮಸ್ಥಳದಲ್ಲಿ SIT ತಂಡ ಶವಗಳ ಪತ್ತೆಗಾಗಿ ಉತ್ಖನನ ಮಾಡುವ ವೇಳೆ ಸಿಕ್ಕ ಪ್ಯಾನ್ ಕಾರ್ಡ್ ಮತ್ತು ಎಟಿಎಂ ಕಾರ್ಡ್ ವಾರಸುದಾರರು ನೆಲಮಂಗದ ದಾಬಸ್ ಪೇಟೆಯ ನಿವಾಸಿಗಳು ಎಂದು ತಿಳಿದು ಬಂದಿದೆ. ಧರ್ಮಸ್ಥಳದಲ್ಲಿ ಸ್ವಚ್ಛತೆಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಧರ್ಮಸ್ಥಳ ಗ್ರಾಮದಲ್ಲಿ ಹಲವು ಶವಗಳನ್ನು ಹೂತು ಹಾಕಿರುವುದಾಗಿ ದೂರು ನೀಡಿರುವ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ SIT ತಂಡ ರಚನೆ ಮಾಡಿದೆ. ಅನಾಮಧೇಯ ವ್ಯಕ್ತಿ ನೀಡಿರುವ ಮಾಹಿತಿಯಂತೆ ನೇತ್ರಾವತಿ ನದಿಯ ದಡದಲ್ಲಿ …
Read More »ಕಾಮಿಡಿ ಕಿಲಾಡಿಗಳು ಶೋ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
ಯಲ್ಲಾಪುರ (ಉತ್ತರ ಕನ್ನಡ): ಕಾಮಿಡಿ ಕಿಲಾಡಿಗಳು ಶೋ ಮೂಲಕ ಪ್ರೇಕ್ಷಕರನ್ನು ನಕ್ಕು ನಲಿಸಿದ್ದ ಯಲ್ಲಾಪುರ ತಾಲೂಕಿನ ಚಿಮ್ಮಳ್ಳಿ ಗ್ರಾಮದ ಚಂದ್ರಶೇಖರ್ ಸಿದ್ದಿ (31) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ. ಯಲ್ಲಾಪುರ ತಾಲೂಕಿನ ತೆಲಂಗಾರ ವಜ್ರಳ್ಳಿಯ ನಿವಾಸಿಯಾದ ಚಂದ್ರಶೇಖರ್, ಕಬ್ಬಿಗೆ ಗ್ರಾಮಕ್ಕೆ ಪತ್ನಿಯೊಂದಿಗೆ ಕೆಲಸಕ್ಕೆಂದು ಹೋಗಿ ಅಲ್ಲೇ ಉಳಿದುಕೊಂಡಿದ್ದರು. ಶನಿವಾರ (ಜುಲೈ 31) ಮಧ್ಯಾಹ್ನ 2 ಗಂಟೆಗೆ ತನ್ನ ಮಗನನ್ನು ಶಾಲೆಯಿಂದ ಕರೆದುಕೊಂಡು ಮನೆಗೆ ಬಂದಿದ್ದ ಚಂದ್ರಶೇಖರ್, ಬಳಿಕ ಶೌಚಾಲಯಕ್ಕೆ …
Read More »ಹುಬ್ಬಳ್ಳಿಗೆ 10 ಹೊಸ ಮೆಮು ರೈಲು ಸಂಚಾರ ಆರಂಭಿಸುವಂತೆ ರೈಲ್ವೆ ಸಚಿವರಿಗೆ ಜೋಶಿ ಮನವಿ
ನವದೆಹಲಿ/ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅಕ್ಕಪಕ್ಕದ ಪಟ್ಟಣಗಳಿಂದ ಹುಬ್ಬಳ್ಳಿಗೆ ಪ್ರಯಾಣಿಸುವವರ ಅನುಕೂಲಕ್ಕಾಗಿ 10 ಹೊಸ ಮೆಮು ರೈಲುಗಳ ಸಂಚಾರ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಲ್ಲಿ ಪ್ರಲ್ಹಾದ್ ಜೋಶಿ ಮನವಿ ಮಾಡಿದರು. ನವದೆಹಲಿಯಲ್ಲಿ ಬುಧವಾರ ಕೇಂದ್ರ ರೈಲ್ವೆ ಸಚಿವರನ್ನು ಭೇಟಿ ಮಾಡಿದ ಜೋಶಿ, ಪಟ್ಟಣ ಹಾಗೂ ಗ್ರಾಮಗಳಿಂದ ಹುಬ್ಬಳ್ಳಿಗೆ ಪ್ರಯಾಣಿಸುವವರಿಗಾಗಿ 10 ಹೊಸ ಮೆಮು (MEMU) ರೈಲುಗಳ ಸಂಚಾರ ಆರಂಭಿಸಬೇಕೆಂದು ಕೋರಿದರು. ಹುಬ್ಬಳ್ಳಿ ಉತ್ತರ ಕರ್ನಾಟಕದ ವಾಣಿಜ್ಯ ರಾಜಧಾನಿಯಾಗಿದೆ. ಅಕ್ಕಪಕ್ಕದ ಪಟ್ಟಣ, …
Read More »