Breaking News

Daily Archives: ಸೆಪ್ಟೆಂಬರ್ 10, 2025

ಸೆಪ್ಟೆಂಬರ್ ಅಂತ್ಯದೊಳಗೆ ಮೂಡಲಗಿ- ಗೋಕಾಕ ತಾಲ್ಲೂಕಿನ ಅಭ್ಯರ್ಥಿಗಳ ಆಯ್ಕೆ ಅಂತಿಮ- ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

*ಸೆಪ್ಟೆಂಬರ್ ಅಂತ್ಯದೊಳಗೆ ಮೂಡಲಗಿ- ಗೋಕಾಕ ತಾಲ್ಲೂಕಿನ ಅಭ್ಯರ್ಥಿಗಳ ಆಯ್ಕೆ ಅಂತಿಮ- ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಬುಧವಾರದಂದು* *ಗೋಕಾಕದಲ್ಲಿ ಮೂಡಲಗಿ- ಗೋಕಾಕ ತಾಲೂಕಿನ ಪಿಕೆಪಿಎಸ್ ಅಧ್ಯಕ್ಷರು ಸದಸ್ಯರುಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ* *ಗೋಕಾಕ-* ನಾನು ಮತ್ತು ಗೋಕಾಕ ಶಾಸಕ ರಮೇಶ್‌ ಜಾರಕಿಹೊಳಿಯವರು ಸೇರಿಕೊಂಡು ಇದೇ ತಿಂಗಳ ಅಂತ್ಯದೊಳಗೆ ಮೂಡಲಗಿ ಮತ್ತು ಗೋಕಾಕ ತಾಲೂಕಿನ ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದಾಗಿ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. …

Read More »

ಸಿಸಿಬಿ ಪೊಲೀಸ್ ಸಿಬ್ಬಂದಿಯ ಸೋಗಿನಲ್ಲಿ ಬಾಂಗ್ಲಾ ಪ್ರಜೆಗಳನ್ನು ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಬೆಂಗಳೂರು: ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸ್ ಸಿಬ್ಬಂದಿ ಎಂದು ಹೇಳಿಕೊಂಡು ಬಾಂಗ್ಲಾ ಪ್ರಜೆಗಳಿಂದ ಹಣ ವಸೂಲಿ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಗರದಲ್ಲಿ ಬಂಧಿಸಲಾಗಿದೆ. ರಾಜ್ಯ ಜನ ಸದ್ಭಾವನಾ ಸಂಘಟನೆಯ ಸದಸ್ಯರು ನೀಡಿದ್ದ ದೂರಿನ ಅನ್ವಯ ಬೆಂಗಳೂರು ಗ್ರಾಮಾಂತರ ಪೊಲೀಸ್ ವಿಭಾಗದ ಕಾನ್ಸ್‌ಟೇಬಲ್ ಪ್ರಶಾಂತ್ ನಾವಿ ಹಾಗೂ ಮತ್ತೋರ್ವ ಖಾಸಗಿ ವ್ಯಕ್ತಿ ನಾಸೀರ್ ಖಾನ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ. ಈ ಹಿಂದೆ ರಾಜ್ಯ ಆಂತರಿಕ ಭದ್ರತಾ ವಿಭಾಗದಲ್ಲಿ …

Read More »

‘ಜನರನ್ನು ವಿಭಜಿಸಿ, ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ’

ಬೆಂಗಳೂರು: ಕೋಮು ಭಾವನೆಗಳನ್ನು ಕೆರಳಿಸಿ, ಜನರನ್ನು ವಿಭಜಿಸಿ, ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ. ಅವರಿಗೆ ಅಭಿವೃದ್ಧಿ ಬಗ್ಗೆ ಚಿಂತೆ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟೀಕಿಸಿದರು. ಸದಾಶಿವನಗರ ನಿವಾಸದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮದ್ದೂರು ಗಣೇಶ ವಿಸರ್ಜನೆ ವೇಳೆ ನಡೆದಿರುವ ಕಲ್ಲು ತೂರಾಟ ಹಾಗೂ ಅದರ ಬೆನ್ನಲ್ಲೇ ಬಿಜೆಪಿ ನಾಯಕರು ಮದ್ದೂರಿಗೆ ತೆರಳಿರುವ ಬಗ್ಗೆ ಕೇಳಿದಾಗ, “ಈ ಪ್ರಕರಣದ ಬಗ್ಗೆ ಈಗಾಗಲೇ ಸಿಎಂ, ಗೃಹ ಸಚಿವರು ಹಾಗೂ …

Read More »

ನಿಧಿಯಾಸೆಗೆ ದೇವರ ಕಲ್ಲನ್ನು ಕೆಡವಿದ್ದ ಕಳ್ಳರನ್ನು ಬಂಧಿಸಿದ ಪೊಲೀಸರು: ಮೂಕಪ್ಪಸ್ವಾಮಿ ಪವಾಡ ಎಂದ ಗ್ರಾಮಸ್ಥರು

ಹಾವೇರಿ: 4 ತಿಂಗಳ ಹಿಂದೆ ನಿಧಿ ಆಸೆಗಾಗಿ ಕೋಣಕಲ್ಲು ಭರಮಪ್ಪ ದೇವರ ಕಲ್ಲನ್ನು ಕೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ವಿಚಿತ್ರ ಎಂದರೆ ವೃಷಭ ರೂಪಿ ಶನೇಶ್ವರ ಮೂಕಪ್ಪಸ್ವಾಮಿ ಈ ನಿಧಿಗಳ್ಳರನ್ನು ಪತ್ತೆ ಮಾಡಿದೆ ಎಂದು ಗ್ರಾಮಸ್ಥರು ಹೇಳಿದ್ದು, ಅವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಹಾನಗಲ್​​​​ ತಾಲೂಕು ಮಲಗುಂದ ಗ್ರಾಮದ ಹೊರವಲಯದಲ್ಲಿ ಕೋಣಕಲ್ಲು ಭರಮಪ್ಪ ದೇವರ ಕಲ್ಲು ಇತ್ತು. ಅದರ ಕೆಳಗೆ ಸಾಕಷ್ಟು ನಿಧಿ ಇದೆ ಎಂಬ ಆಸೆಗೆ …

Read More »

ಮೂನ್ನೂರು ರೂಪಾಯಿ ಹಣಕ್ಕಾಗಿ ಕಲ್ಲು ಎತ್ತಿ ಹಾಕಿ ಅಪರಿಚಿತ ವ್ಯಕ್ತಿಯ ಕೊಲೆ

ಬಳ್ಳಾರಿ: ಕುಡಿದ ಮತ್ತಿನಲ್ಲಿ ಹಣ ನೀಡಲಿಲ್ಲ ಎನ್ನುವ ಕಾರಣಕ್ಕೆ ಅಪರಿಚಿತ ವ್ಯಕ್ತಿಯೊಬ್ಬನ ಬಳಿ ಇದ್ದ ಮೂನ್ನೂರು ರೂಪಾಯಿ ಕಸಿದುಕೊಂಡು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಬಳ್ಳಾರಿಯಲ್ಲಿ ಶುಕ್ರವಾರ (ಸೆ. 5ರಂದು) ನಡೆದಿದೆ. ಸೋಮವಾರ ಆರೋಪಿಗಳನ್ನು ಬಂಧಿಸಲಾಗಿದ್ದು, ಮೃತಪಟ್ಟ ವ್ಯಕ್ತಿ ಯಾರು ಎಂಬುದು ಇನ್ನೂ ಪತ್ತೆಯಾಗಿಲ್ಲ. ಇನ್ನೂ ತಡರಾತ್ರಿ ನಡೆದ ಕಾರಣ ಆರಂಭದಲ್ಲಿ ಯಾರಿಗೂ ಗೊತ್ತಾಗಲಿಲ್ಲ. ಯಾರೋ ಗಿಡದ ಪೊದೆಯಲ್ಲಿ ಮಲಗಿಕೊಂಡಿದ್ಧಾರೆ ಎಂದು ನೋಡಿಲ್ಲ. ಮಧ್ಯಾಹ್ನದ ನಂತರ ಸ್ಥಳೀಯರೊಬ್ಬರು ಪೊಲೀಸರಿಗೆ …

Read More »

ದೇವಾಲಯದ ಸುತ್ತ ಮಾಂಸಾಹಾರ ನಿಷೇಧ ನೋಟಿಸ್‌ ವಾಪಸ್​: ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ಮಾಹಿತಿ

ಬೆಂಗಳೂರು: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಶಿವನಗೆರೆ ಗ್ರಾಮದಲ್ಲಿನ ಹೊನ್ನೇಶ್ವರ ದೇವಾಲಯದ ಸುತ್ತಲು ಪ್ರಾಣಿಗಳ ವಧೆ ಮತ್ತು ಮಾಂಸಾಹಾರ ಸೇವನೆ ನಿಷೇಧಿಸಿ ಹೊರಡಿಸಿರುವ ನೋಟಿಸ್‌ ಹಿಂಪಡೆಯಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಅಲ್ಲದೇ, ದೇವಾಲಯದ ಸುತ್ತಮುತ್ತಲ ಭಾಗಗಳಲ್ಲಿ ಪ್ರಾಣಿವಧೆ ಮಾತ್ರ ಸೀಮಿತಗೊಳಿಸಿ ಮುಂದಿನ ಒಂದು ವಾರದಲ್ಲಿ ಹೊಸದಾಗಿ ನೋಟಿಸ್‌ ನೀಡಲಾಗುವುದು ಎಂದು ಸರ್ಕಾರದ ಪರ ವಕೀಲರು ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ದೇವಾಲಯದ 200 ಮೀಟರ್‌ ವ್ಯಾಪ್ತಿಯಲ್ಲಿ ಮಾಂಸಾಹಾರ ಸೇವನೆ …

Read More »

ಅಂಬಾವಿಲಾಸ ಅರಮನೆಯ ಚಿನ್ನದ ಹೊಳಪಿನ ದೀಪಾಲಂಕಾರ ಅದ್ಭುತ

ಮೈಸೂರು: ಮೈಸೂರಿನ ಪ್ರಮುಖ ಆಕರ್ಷಣೆ ಅಂಬಾವಿಲಾಸ ಅರಮನೆ. ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಈ ಅಂಬಾವಿಲಾಸ ಅರಮನೆಯ ಚಿನ್ನದ ಹೊಳಪಿನ ದೀಪಾಲಂಕಾರದ ಇತಿಹಾಸ ಏನು? ಎಂಬ ಕುತೂಹಲಕಾರಿ ಅಂಶಗಳನ್ನು ಒಳಗೊಂಡ ವಿಶೇಷ ವರದಿ ಇಲ್ಲಿದೆ. ಮೈಸೂರು ಅರಮನೆಯ ಚಿನ್ನದ ಹೊಳಪಿನ ದೀಪಾಲಂಕಾರ ನೋಡುವುದೇ ಒಂದು ಖುಷಿ. ಮೈಸೂರು ಅರಮನೆಯ ದೀಪಾಲಂಕಾರಕ್ಕೆ ಒಟ್ಟು 96,700 ವಿಶೇಷ ಬಲ್ಬ್​ಗಳನ್ನು ಅಳವಡಿಸಲಾಗುತ್ತದೆ. ವಿಶೇಷವೆಂದರೆ ಹಳೆಯ ಮಾದರಿಯ ಬುರುಡೆಯ ಆಕಾರದ ಎಂ ಆಕೃತಿಯ ತಂತಿಯನ್ನೊಳಗೊಂಡ 15 ವ್ಯಾಟ್ ಸಾಮರ್ಥ್ಯದ …

Read More »

14 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ನಿಪ್ಪಾಣಿ ಯುವಕನಿಗೆ 30 ವರ್ಷ ಜೈಲು ಶಿಕ್ಷೆ

14 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ನಿಪ್ಪಾಣಿ ಯುವಕನಿಗೆ 30 ವರ್ಷ ಜೈಲು ಶಿಕ್ಷೆ ನಿಪ್ಪಾಣಿ ಮೂಲದ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಯ ವಿರುದ್ಧ ಬೆಳಗಾವಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಆರೋಪಿಗೆ 30 ವರ್ಷ ಜೈಲು ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿದೆ. ಶಿಕ್ಷೆಗೊಳಗಾದ ಆರೋಪಿಯ ಹೆಸರು ಆಕಾಶ ಅಲಿಯಾಸ …

Read More »

ಬೆಳಗಾವಿ ಜಿಲ್ಲಾ ದಸರಾ ಈಜು ಸ್ಪರ್ಧೆತನುಜ್ ಸಿಂಗ್ ಮತ್ತು ವೇದಾ ಖಾನೋಲ್ಕರ್’ಗೆ ವೈಯಕ್ತಿಕ ಚಾಂಪಿಯನ್‌ಶಿಪ್ ಪ್ರಶಸ್ತಿಬೆಳಗಾವಿ ಜಿಲ್ಲಾ ದಸರಾ ಈಜು ಸ್ಪರ್ಧೆ

ಬೆಳಗಾವಿ ಜಿಲ್ಲಾ ದಸರಾ ಈಜು ಸ್ಪರ್ಧೆತನುಜ್ ಸಿಂಗ್ ಮತ್ತು ವೇದಾ ಖಾನೋಲ್ಕರ್’ಗೆ ವೈಯಕ್ತಿಕ ಚಾಂಪಿಯನ್‌ಶಿಪ್ ಪ್ರಶಸ್ತಿಬೆಳಗಾವಿ ಜಿಲ್ಲಾ ದಸರಾ ಈಜು ಸ್ಪರ್ಧೆ ತನುಜ್ ಸಿಂಗ್ ಮತ್ತು ವೇದಾ ಖಾನೋಲ್ಕರ್’ಗೆ ವೈಯಕ್ತಿಕ ಚಾಂಪಿಯನ್‌ಶಿಪ್ ಪ್ರಶಸ್ತಿಯುವಜನ ಸೇವಾ ಕ್ರೀಡಾ ಇಲಾಖೆ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜನೆ ಯುವಜನ ಸೇವಾ ಕ್ರೀಡಾ ಇಲಾಖೆ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಬೆಳಗಾವಿ ಗೋವಾವೇಸ್’ನ ಮಹಾನಗರ ಪಾಲಿಕೆ ಈಜುಕೊಳದಲ್ಲಿ ಆಯೋಜಿಸಲಾದ …

Read More »

ತವಂದಿ ಘಾಟನಲ್ಲಿ ಕಂದಕಕ್ಕೆ ಬಿದ್ದ ಕಂಟೇನರ್ ವಾಹನ

ನಿಪ್ಪಾಣಿಯ ತವಂದಿ ಘಾಟನಲ್ಲಿ ಕಂದಕಕ್ಕೆ ಬಿದ್ದ ಕಂಟೇನರ್ ವಾಹನ ಚಿಕ್ಕೋಡಿ:ನಿಪ್ಪಾಣಿ ತಾಲೂಕಿನ ತವಂದಿ ಘಾಟ್‌ನಲ್ಲಿ ಕಂಟೇನರ್ ವಾಹನ ಪಲ್ಟಿಯಾದ ಪರಿಣಾಮ ಅದೃಷ್ಟವಶಾತ ಯಾವುದೇ ಸಾವುನೋವು ಸಂಭವಿಸಿಲ್ಲ. ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಕಂಟೇನರ್ ಪಲ್ಟಿಯಾಗಿದೆ. ಅದೃಷ್ಟವಶಾತ್, ಅಪಘಾತದಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ. ಕಂಟೇನರ್ ಚಾಲಕ ಬೆಳಗಾವಿಯಿಂದ ಕೊಲ್ಹಾಪುರಕ್ಕೆ ಹೋಗುತ್ತಿದ್ದಾಗ, ಚಾಲಕನ ನಿಯಂತ್ರಣ ತಪ್ಪಿ ಕಂಟೇನರ ವಾಹನ ಕಂದಕಕ್ಕೆ ಬಿದ್ದಿದೆ.

Read More »