Breaking News

Daily Archives: ಸೆಪ್ಟೆಂಬರ್ 24, 2025

ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ನಾಡಹಬ್ಬ ದಸರಾಗೆ ಚಾಲನೆ

ಹಾವೇರಿ: ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ನಾಡಹಬ್ಬ ದಸರಾಗೆ ಚಾಲನೆ ನೀಡಲಾಗಿದೆ. ನಾಡಿನೆಲ್ಲೆಡೆ ದಸರಾ ಸಂಭ್ರಮ ಮನೆ ಮಾಡಿದೆ. ಏಲಕ್ಕಿನಗರಿ ಹಾವೇರಿಯಲ್ಲೂ ಶರನ್ನವರಾತ್ರಿಯ ಸಂಭ್ರಮ ಮನೆ ಮಾಡಿದೆ. ದಸರಾ ಸಂದರ್ಭ 9 ದಿನಗಳ ಕಾಲ ಒಂದೊಂದು ದುರ್ಗಾ ಮಾತೆಗೆ ಪೂಜೆ ಸಲ್ಲಿಸುವುದು ಸಂಪ್ರದಾಯ. ಈ ಹಿನ್ನೆಲೆ ಹಾವೇರಿಯ ನವದುರ್ಗೆಯರ ದೇವಸ್ಥಾನವನ್ನು ಪುಷ್ಪಗಳಿಂದ ಅಲಂಕರಿಸಲಾಗಿದ್ದು, ಕಣ್ಮನ ಸೆಳೆಯುತ್ತಿದೆ. ಈ ದೇವಸ್ಥಾನದ ಒಂದೇ ಗರ್ಭ ಗುಡಿಯಲ್ಲಿ ಒಂಭತ್ತು ದುರ್ಗೆಯರ ಸ್ಥಾಪನೆಯಾಗಿರುವುದು ವಿಶೇಷ. ನವರಾತ್ರಿಯ …

Read More »

14 ದಲಿತ ಕ್ರಿಶ್ಚಿಯನ್ ಹೆಸರನ್ನು ಹಿಂಪಡೆಯಲು ಬಿಜೆಪಿ ನಿಯೋಗ ಆಗ್ರಹ

ಬೆಂಗಳೂರು: ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಾತಿ ಪಟ್ಟಿಯಲ್ಲಿ ದಲಿತ ಕ್ರಿಶ್ಚಿಯನ್ ನಮೂದು ಹಿಂಪಡೆಯುವಂತೆ ಬಿಜೆಪಿ ನಿಯೋಗ ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಸಲ್ಲಿಸಿತು. ಬೆಂಗಳೂರಿನ ವಸಂತನಗರದ ಆಯೋಗದ ಕಚೇರಿಯಲ್ಲಿ ಅಧ್ಯಕ್ಷ ಮಧುಸೂದನ್ ನಾಯಕ್​​ಗೆ ಮನವಿ ಸಲ್ಲಿಕೆ ಮಾಡಿದರು. ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಾತಿ ಪಟ್ಟಿಯಲ್ಲಿ ದಲಿತ ಕ್ರಿಶ್ಚಿಯನ್ ನಮೂದು ಹಿಂಪಡೆಯುವಂತೆ ಹಾಗೂ ಮತ್ತೊಮ್ಮೆ ಎಸ್​ಸಿ ಸಮುದಾಯದ ಗಣತಿ ನಡೆಸದಂತೆ ಆಗ್ರಹಿಸಿದರು. ಹಿಂದುಳಿದ ವರ್ಗಗಳ ಆಯೋಗದ ಕಚೇರಿಯಲ್ಲಿ …

Read More »

14 ದಲಿತ ಕ್ರಿಶ್ಚಿಯನ್ ಹೆಸರು ಹಿಂಪಡೆಯುವಂತೆ ಹಿಂದುಳಿದ ವರ್ಗಗಳ ಆಯೋಗಕ್ಕೆ ಬಿಜೆಪಿ ನಿಯೋಗ ಮನವಿ

ಬೆಂಗಳೂರು: ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಾತಿ ಪಟ್ಟಿಯಲ್ಲಿ ದಲಿತ ಕ್ರಿಶ್ಚಿಯನ್ ನಮೂದು ಹಿಂಪಡೆಯುವಂತೆ ಬಿಜೆಪಿ ನಿಯೋಗ ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಸಲ್ಲಿಸಿತು. ಬೆಂಗಳೂರಿನ ವಸಂತನಗರದ ಆಯೋಗದ ಕಚೇರಿಯಲ್ಲಿ ಅಧ್ಯಕ್ಷ ಮಧುಸೂದನ್ ನಾಯಕ್​​ಗೆ ಮನವಿ ಸಲ್ಲಿಕೆ ಮಾಡಿದರು. ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಾತಿ ಪಟ್ಟಿಯಲ್ಲಿ ದಲಿತ ಕ್ರಿಶ್ಚಿಯನ್ ನಮೂದು ಹಿಂಪಡೆಯುವಂತೆ ಹಾಗೂ ಮತ್ತೊಮ್ಮೆ ಎಸ್​ಸಿ ಸಮುದಾಯದ ಗಣತಿ ನಡೆಸದಂತೆ ಆಗ್ರಹಿಸಿದರು. ಹಿಂದುಳಿದ ವರ್ಗಗಳ ಆಯೋಗದ ಕಚೇರಿಯಲ್ಲಿ …

Read More »

ಎರಡನೇ ದಿನವೂ ತಾಂತ್ರಿಕ ದೋಷ, ಆಮೆಗತಿ; ಸುಮಾರು 71,004 ಜನರ ಸಮೀಕ್ಷೆ ಪೂರ್ಣ

ಬೆಂಗಳೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಆರಂಭವಾಗಿ ಎರಡು ದಿನವಾಗಿದ್ದು, ಇಂದು(ಮಂಗಳವಾರ) ಸಂಜೆ 6 ಗಂಟೆವರೆಗೆ ಕೇವಲ 71,004 ಜನರನ್ನು ಸಮೀಕ್ಷೆಗೆ ಒಳಪಡಿಸಲಾಗಿದೆ. ಸಮೀಕ್ಷೆಗಾಗಿ ಸಿದ್ಧಪಡಿಸಿದ ಆ್ಯಪ್ ನಲ್ಲಿ ತಾಂತ್ರಿಕ ದೋಷ, ಸರ್ವರ್ ಡೌನ್ ಸಮಸ್ಯೆಗಳು ಮುಂದುವರಿಯಿತು. ಮೊದಲ ದಿನವಾದ ಸೋಮವಾರ ಆ್ಯಪ್ ತಾಂತ್ರಿಕ ದೋಷ, ಗೊಂದಲ, ಸರ್ವರ್ ಡೌನ್, ಸಮೀಕ್ಷಾದಾರರ ಕೈಗೆ ಸಿಗದ ಕೈಪಿಡಿ ಹೀಗೆ ಹಲವು ವಿಘ್ನಗಳೊಂದಿಗೆ ಸಮೀಕ್ಷೆ ಮಂದಗತಿಯಲ್ಲಿ ನಡೆದಿತ್ತು. ಹಾಗಾಗಿ, ಕೇವಲ 2,765 ಕುಟುಂಬಗಳ ಸುಮಾರು …

Read More »

2025ರ ಅಂತ್ಯದವರೆಗೆ ಅಧಿಕಾರಿಗಳ ಅಧಿಕೃತ ವಿದೇಶ ಪ್ರವಾಸ ನಿರ್ಬಂಧಿಸಿ ಸರ್ಕಾರ ಆದೇಶ

ಬೆಂಗಳೂರು: 2025ರ ಅಂತ್ಯದವರೆಗೂ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಅಧಿಕಾರಿಗಳ ಅಧಿಕೃತ ವಿದೇಶ ಪ್ರವಾಸಗಳನ್ನು ನಿರ್ಬಂಧಿಸಿ ಇಂದು ಸರ್ಕಾರ ಆದೇಶ ಹೊರಡಿಸಿದೆ. 2024ನೇ ಸಾಲಿನ ಆಗಸ್ಟ್ ತಿಂಗಳಿನಿಂದ 2025ರ ಜುಲೈ ತಿಂಗಳವರೆಗೆ ರಾಜ್ಯ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಅಧಿಕೃತ ವಿದೇಶ ಪ್ರವಾಸ ಕೈಗೊಂಡು ಅಧ್ಯಯನ ನಡೆಸಿ, ಕಲಿಕೆ ಹಾಗು ಶಿಫಾರಸುಗಳೊಂದಿಗೆ ಸರ್ಕಾರಕ್ಕೆ ಅಧ್ಯಯನ ವರದಿಯನ್ನು ಒಂದು ವಾರದೊಳಗಾಗಿ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದರು. ಆದರೆ, ಹಲವು ಅಧಿಕಾರಿಗಳು ಕೈಗೊಂಡಿರುವ ಅಧಿಕೃತ …

Read More »

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಅ.1ರಿಂದ ನಗದುರಹಿತ ಚಿಕಿತ್ಸೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ‘ಕರ್ನಾಟಕ ಆರೋಗ್ಯ ಸಂಜೀವಿನಿ’ ಯೋಜನೆ ಅಕ್ಟೋಬರ್ 1ರಿಂದ ಜಾರಿಗೆ ಬರಲಿದೆ. ಈ ಕುರಿತು ಸರ್ಕಾರ ಇಂದು ಆದೇಶ ಹೊರಡಿಸಿದೆ. ಈ ಯೋಜನೆಗಾಗಿ ನೌಕರರ ವೇತನದಿಂದ ಗ್ರೂಪ್‌ಗೆ ಅನುಗುಣವಾಗಿ ಮಾಸಿಕ ವಂತಿಕೆ ಕಡಿತವಾಗಲಿದ್ದು, ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.‌ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಯೋಜನೆ ಅನುಷ್ಠಾನಗೊಳ್ಳಲಿದೆ. ಯೋಜನೆಯು ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ …

Read More »