ಬೆಂಗಳೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಆರಂಭವಾಗಿ ಎರಡು ದಿನವಾಗಿದ್ದು, ಇಂದು(ಮಂಗಳವಾರ) ಸಂಜೆ 6 ಗಂಟೆವರೆಗೆ ಕೇವಲ 71,004 ಜನರನ್ನು ಸಮೀಕ್ಷೆಗೆ ಒಳಪಡಿಸಲಾಗಿದೆ. ಸಮೀಕ್ಷೆಗಾಗಿ ಸಿದ್ಧಪಡಿಸಿದ ಆ್ಯಪ್ ನಲ್ಲಿ ತಾಂತ್ರಿಕ ದೋಷ, ಸರ್ವರ್ ಡೌನ್ ಸಮಸ್ಯೆಗಳು ಮುಂದುವರಿಯಿತು. ಮೊದಲ ದಿನವಾದ ಸೋಮವಾರ ಆ್ಯಪ್ ತಾಂತ್ರಿಕ ದೋಷ, ಗೊಂದಲ, ಸರ್ವರ್ ಡೌನ್, ಸಮೀಕ್ಷಾದಾರರ ಕೈಗೆ ಸಿಗದ ಕೈಪಿಡಿ ಹೀಗೆ ಹಲವು ವಿಘ್ನಗಳೊಂದಿಗೆ ಸಮೀಕ್ಷೆ ಮಂದಗತಿಯಲ್ಲಿ ನಡೆದಿತ್ತು. ಹಾಗಾಗಿ, ಕೇವಲ 2,765 ಕುಟುಂಬಗಳ ಸುಮಾರು …
Read More »Monthly Archives: ಸೆಪ್ಟೆಂಬರ್ 2025
2025ರ ಅಂತ್ಯದವರೆಗೆ ಅಧಿಕಾರಿಗಳ ಅಧಿಕೃತ ವಿದೇಶ ಪ್ರವಾಸ ನಿರ್ಬಂಧಿಸಿ ಸರ್ಕಾರ ಆದೇಶ
ಬೆಂಗಳೂರು: 2025ರ ಅಂತ್ಯದವರೆಗೂ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಅಧಿಕಾರಿಗಳ ಅಧಿಕೃತ ವಿದೇಶ ಪ್ರವಾಸಗಳನ್ನು ನಿರ್ಬಂಧಿಸಿ ಇಂದು ಸರ್ಕಾರ ಆದೇಶ ಹೊರಡಿಸಿದೆ. 2024ನೇ ಸಾಲಿನ ಆಗಸ್ಟ್ ತಿಂಗಳಿನಿಂದ 2025ರ ಜುಲೈ ತಿಂಗಳವರೆಗೆ ರಾಜ್ಯ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಅಧಿಕೃತ ವಿದೇಶ ಪ್ರವಾಸ ಕೈಗೊಂಡು ಅಧ್ಯಯನ ನಡೆಸಿ, ಕಲಿಕೆ ಹಾಗು ಶಿಫಾರಸುಗಳೊಂದಿಗೆ ಸರ್ಕಾರಕ್ಕೆ ಅಧ್ಯಯನ ವರದಿಯನ್ನು ಒಂದು ವಾರದೊಳಗಾಗಿ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದರು. ಆದರೆ, ಹಲವು ಅಧಿಕಾರಿಗಳು ಕೈಗೊಂಡಿರುವ ಅಧಿಕೃತ …
Read More »ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಅ.1ರಿಂದ ನಗದುರಹಿತ ಚಿಕಿತ್ಸೆ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ‘ಕರ್ನಾಟಕ ಆರೋಗ್ಯ ಸಂಜೀವಿನಿ’ ಯೋಜನೆ ಅಕ್ಟೋಬರ್ 1ರಿಂದ ಜಾರಿಗೆ ಬರಲಿದೆ. ಈ ಕುರಿತು ಸರ್ಕಾರ ಇಂದು ಆದೇಶ ಹೊರಡಿಸಿದೆ. ಈ ಯೋಜನೆಗಾಗಿ ನೌಕರರ ವೇತನದಿಂದ ಗ್ರೂಪ್ಗೆ ಅನುಗುಣವಾಗಿ ಮಾಸಿಕ ವಂತಿಕೆ ಕಡಿತವಾಗಲಿದ್ದು, ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಯೋಜನೆ ಅನುಷ್ಠಾನಗೊಳ್ಳಲಿದೆ. ಯೋಜನೆಯು ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ …
Read More »ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ (TAPCMS) ದ ನೂತನ ಅಧ್ಯಕ್ಷರಾಗಿ ಶಂಕರಗೌಡ ಪಾಟೀಲ ಮತ್ತು ಉಪಾಧ್ಯಕ್ಷರಾಗಿ ಗಜಾನನ ಕಾಗಣೀಕರ ಅವರು ಅವಿರೋಧವಾಗಿ ಆಯ್ಕೆ
ಬೆಳಗಾವಿ- ಇಲ್ಲಿಯ ಬೆಳಗಾವಿ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ (TAPCMS) ದ ನೂತನ ಅಧ್ಯಕ್ಷರಾಗಿ ಶಂಕರಗೌಡ ಪಾಟೀಲ ಮತ್ತು ಉಪಾಧ್ಯಕ್ಷರಾಗಿ ಗಜಾನನ ಕಾಗಣೀಕರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದಿಲ್ಲಿ ಸಂಘದ ಕಚೇರಿಯಲ್ಲಿ ಜರುಗಿದ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರಗಳು ಸಲ್ಲಿಕೆಯಾಗಿದ್ದರಿಂದ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು ಚುನಾವಣಾಧಿಕಾರಿಯಾಗಿದ್ದ ಡಿಆರ್ಸಿಎಸ್ ಕಚೇರಿಯ ಹಿರಿಯ ನಿರೀಕ್ಷಿಕ ಗೋವಿಂದಗೌಡ ಪಾಟೀಲ ಅವರು …
Read More »ಹರಕೆ ಕಟ್ಟಿ ಕರು ತಂದು ಈ ದೇವರಿಗೆ ಬಿಟ್ಟರೆ ಸಾಕು ಸಮಸ್ಯೆ ದೂರ: ಸುತ್ತ ಹತ್ತು ಹಳ್ಳಿಗಳ ಕಾಯೋ ರಂಗನಾಥ ಸ್ವಾಮಿ!
ದಾವಣಗೆರೆ: ಎಲ್ಲರ ಸಮಸ್ಯೆಗಳನ್ನು ದೂರ ಮಾಡುವವನು ಈ ಕೊಣಚಕಲ್ ರಂಗನಾಥ ಸ್ವಾಮಿ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಮೆದುವಿನಕೆರೆ ಬಳಿಯ ಕೊಣಚಕಲ್ ರಂಗನಾಥ ಸ್ವಾಮಿ ಭಕ್ತರಿಗೆ ಅಚ್ಚುಮೆಚ್ಚು. ಇಂತಹ ಸಮಸ್ಯೆ ಎಂದು ಹೇಳಿಕೊಂಡು ಕೊಣಚಕಲ್ ರಂಗನಾಥ ಸ್ವಾಮಿ ಬೆಟ್ಟಕ್ಕೆ ಭಕ್ತರು ಆಗಮಿಸಿ ತಮ್ಮ ಬೇಡಿಕೆ ದೇವರ ಮುಂದಿಟ್ಟರೆ ಸಾಕು ಸಮಸ್ಯೆ ದೂರ ಆಗುತ್ತದೆ ಎಂಬುದು ಭಕ್ತರ ನಂಬಿಕೆ. ಅಲ್ಲದೇ ಹರಕೆ ಕಟ್ಟಿಕೊಂಡು ಕರು ತಂದು ಈ ದೇವರಿಗೆ ಬಿಟ್ಟರೆ ಸಾಕು ಎಂತಹ …
Read More »ದಸರಾ ಉಪಸಮಿತಿಗಳಿಗೆ ಅಧಿಕಾರೇತರ 2219 ಸದಸ್ಯರು: ಸರ್ಕಾರದಿಂದ ದಾಖಲೆ ನೇಮಕ!
ಮೈಸೂರು: ದಸರಾ ಮಹೋತ್ಸವದ ನಿಮಿತ್ತ 16 ನಾನಾ ಸಮಿತಿಗಳಿಗೆ ಅಧಿಕಾರೇತರರನ್ನು ಜಿಲ್ಲಾಡಳಿತ ನೇಮಕ ಮಾಡಿದೆ. ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಈ ಉಪ ಸಮಿತಿಗಳಲ್ಲಿ ಬರೋಬ್ಬರಿ 2219 ಸದಸ್ಯರಿದ್ದಾರೆ! ದಸರಾ ಉಪ ಸಮಿತಿಗಳಿಗೆ ಅಧಿಕಾರಿ ವರ್ಗದವರನ್ನು ಉಪ ವಿಶೇಷಾಧಿಕಾರಿ, ಕಾರ್ಯಾಧ್ಯಕ್ಷರು, ಸಹ ಕಾರ್ಯಾಧ್ಯಕ್ಷರು, ಕಾರ್ಯದರ್ಶಿಯವರನ್ನು ನೇಮಕ ಮಾಡಿರುವ ಜಿಲ್ಲಾಡಳಿತ, ಇವರೊಂದಿಗೆ ಅಧಿಕಾರೇತರರ ಪಟ್ಟಿ ಬಿಡುಗಡೆ ಮಾಡಿದೆ. ಈ ಸದಸ್ಯರ ಸಂಖ್ಯೆಯೇ ಈಗ ದಾಖಲೆಯಾಗಿದೆ. ಮೃಗಾಲಯ ಪ್ರಾಧಿಕಾರದ ಮಾಜಿ ಆಧ್ಯಕ್ಷೆ ಮಲ್ಲಿಗೆ ವಿರೇಶ್, …
Read More »ಕಬ್ಬಿನ ಬೆಳೆ ಮಧ್ಯೆ ಬೆಳೆದಿದ್ದ 441 ಕೆಜಿ ಗಾಂಜಾ ಜಪ್ತಿ: ಬೆಳಗಾವಿ ಇತಿಹಾಸದಲ್ಲೇ ದೊಡ್ಡ ಪ್ರಕರಣ
ಚಿಕ್ಕೋಡಿ (ಬೆಳಗಾವಿ): ಕಬ್ಬಿನ ಬೆಳೆಯ ಮಧ್ಯೆ ಅಕ್ರಮವಾಗಿ ಗಾಂಜಾ ಬೆಳೆದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ 20 ಲಕ್ಷಕ್ಕೂ ಹೆಚ್ಚು ಮೌಲ್ಯದ 441 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬೆಳಗಾವಿ ಸೈಬರ್ ಮತ್ತು ರಾಯಭಾಗ ಪೊಲೀಸರು ಜಂಟಿವಾಗಿ ಈ ಕಾರ್ಯಾಚರಣೆ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಸಿಂಗಾಡಿ ಮಾಳಪ್ಪ ಹಿರೇಕೋಡಿ ಬಂಧಿತ ಆರೋಪಿ. ಇವರು ತಮ್ಮ ಒಂದು ಎಕರೆ ಕಬ್ಬಿನ ಗದ್ದೆಯ ಮಧ್ಯೆ ಅಕ್ರಮವಾಗಿ ಗಾಂಜಾ ಬೆಳೆ ಬೆಳೆದಿರುವ ಬಗ್ಗೆ …
Read More »ಕರ್ತವ್ಯ ಲೋಪ, ಹಣಕ್ಕೆ ಬೇಡಿಕೆ ಆರೋಪ: ಇಬ್ಬರು ಇನ್ಸ್ಪೆಕ್ಟರ್ ಸಹಿತ ಐವರು ಸಿಬ್ಬಂದಿ ಅಮಾನತು
ಬೆಂಗಳೂರು: ಲಂಚಕ್ಕೆ ಬೇಡಿಕೆ ಹಾಗೂ ಕರ್ತವ್ಯ ಲೋಪದ ಆರೋಪದಡಿ ಇಬ್ಬರು ಪೊಲೀಸ್ ಇನ್ಸ್ಪೆಕ್ಟರ್ಗಳ ಸಹಿತ ಐವರು ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ. ಪ್ರತ್ಯೇಕ ಪ್ರಕರಣಗಳಲ್ಲಿ ಕೋರಮಂಗಲ ಠಾಣೆಯ ಇನ್ಸ್ಪೆಕ್ಟರ್ ಲೂಯಿರಾಮ ರೆಡ್ಡಿ ಹಾಗೂ ಹಲಸೂರು ಗೇಟ್ ಠಾಣೆಯ ಇನ್ಸ್ಪೆಕ್ಟರ್ ಹನುಮಂತ ಭಜಂತ್ರಿ ಸೇರಿದಂತೆ ಐವರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಚಿನ್ನದ ಉದ್ಯಮಿಯೊಬ್ಬರಿಂದ 10 ಲಕ್ಷ ರೂಪಾಯಿ ವಸೂಲಿಗೆ ಯತ್ನಿಸಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಿಸಿಟಿವಿ …
Read More »ವರುಣನ ಆರ್ಭಟಕ್ಕೆ ಕಲಬುರಗಿಯಲ್ಲಿ ಅವಾಂತರ ಸೃಷ್ಟಿ
ಕಲಬುರಗಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಕಲಬುರಗಿ ಜಿಲ್ಲೆ ಅಕ್ಷರಶಃ ತತ್ತರಿಸಿದೆ. ಮಳೆ ಹೊಡೆತಕ್ಕೆ ತೊಗರಿನಾಡಿನ ರೈತರು ಕಷ್ಟುಪಟ್ಟು ಬೆಳೆದಿದ್ದ ಬೆಳೆ ನಾಶವಾಗಿದ್ದು, ಹಲವು ಕಡೆ ಅವಾಂತರ ಸೃಷ್ಟಿಯಾಗಿದೆ. ಯಡ್ರಾಮಿ ಪಟ್ಟಣದ ಹಳೆ ಬಜಾರ್ ಬಡಾವಣೆಯಲ್ಲಿ ಹಳೆಯ ಕಲ್ಲಿನ ಗೋಡೆ ಕುಸಿದು 17 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಇದೇ ವೇಳೆ ಮನೆಯಲ್ಲಿದ್ದ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತೊಂದೆಡೆ, ಬೆಣ್ಣೆತೋರಾ ಜಲಾಶಯ ಸಂಪೂರ್ಣ ಭರ್ತಿಯಾಗಿರುವುದರಿಂದ 55 ಸಾವಿರ ಕ್ಯೂಸೆಕ್ …
Read More »ಗೋಮಾಂಸ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಹಚ್ಚಿದ ಹಿಂದೂ ಸಂಘಟನೆ ಕಾರ್ಯಕರ್ತರು
ಚಿಕ್ಕೋಡಿ: ಐನಾಪುರ ಮಾರ್ಗವಾಗಿ ಹೈದರಾಬಾದ್ ಕಡೆಗೆ ನಾಲ್ಕು ಬೃಹತ್ ಲಾರಿಗಳಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೆಲವು ಸಂಘಟನೆಗಳ ಕಾರ್ಯಕರ್ತರು ವಾಹನಗಳನ್ನು ತಡೆದು ಒಂದು ವಾಹನಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿರುವ ಘಟನೆ ತಡರಾತ್ರಿ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ತಡರಾತ್ರಿ ಈ ಘಟನೆ ಸಂಭವಿಸಿದೆ. ಕೆಲವು ಸಂಘಟನೆಗಳ ಕಾರ್ಯಕರ್ತರು ಜೊತೆಯಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಬೃಹತ್ ಲಾರಿಗಳನ್ನು ತಡೆದು ಅವುಗಳನ್ನು ಪರಿಶೀಲನೆ ಮಾಡಿ …
Read More »
Laxmi News 24×7