Breaking News

Monthly Archives: ಸೆಪ್ಟೆಂಬರ್ 2025

ಹುಕ್ಕೇರಿ ತಾಲೂಕಿನ ಶಿಂಧಿಹಟ್ಟಿ ಗ್ರಾಮದಲ್ಲಿ ವಿದ್ಯುತ್ ಸಹಕಾರಿ ಪೆನಲ್ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿದೆ.

ಹುಕ್ಕೇರಿ ತಾಲೂಕಿನ ಶಿಂಧಿಹಟ್ಟಿ ಗ್ರಾಮದಲ್ಲಿ ಇಂದು ನಡೆದ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಶ್ರೀ ಅಪ್ಪಣಗೌಡ ಪಾಟೀಲ ವಿದ್ಯುತ್ ಸಹಕಾರಿ ಪೆನಲ್ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿದೆ. ಗ್ರಾಮೀಣ ಅಭಿವೃದ್ಧಿ ಹಾಗೂ ಜನಪರ ಸೇವೆಗೆ ಬದ್ಧತೆಯಿಂದ‌ ಮತ್ತು ಸ್ವತಂತ್ರವಾಗಿ ಶ್ರಮಿಸುವ ಈ ಪೆನಲ್‌ಗೆ ಎಲ್ಲರೂ ಒಗ್ಗಟ್ಟಿನಿಂದ ಬೆಂಬಲ ನೀಡುವಂತೆ ಮನವಿ ಮಾಡಿದೆ. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಶಶಿಕಾಂತ ನಾಯಕ, ಮುಖಂಡರಾದ ‌ಶ್ರೀ‌ …

Read More »

ಚಿಕ್ಕೋಡಿ | ವಸತಿ ಶಾಲೆಯ 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಚಿಕ್ಕೋಡಿ : ತಾಲ್ಲೂಕಿನ ಹಿರೇಕೋಡಿ ಗ್ರಾಮದ ಹೊರವಲಯದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ಶುಕ್ರವಾರ ಬೆಳಗಿನ ಉಪಹಾರ ಸೇವಿಸಿದ ನಂತರ ಅಸ್ವಸ್ಥಗೊಂಡ ಘಟನೆ ಬೆಳಕಿಗೆ ಬಂದಿದೆ. ಬೆಳಿಗ್ಗೆ ಉಪ್ಪಿಟ್ಟು ಸೇವನೆ ಮಾಡಿದ ವಿದ್ಯಾರ್ಥಿ-ವಿದ್ಯಾರ್ಥಿನಿಯರಲ್ಲಿ ವಾಂತಿ ಹಾಗೂ ಬೇಧಿ ಕಾಣಿಸಿಕೊಂಡಿದ್ದು, ತೀವ್ರ ಅಸ್ವಸ್ಥರಾದವರನ್ನು ತಕ್ಷಣವೇ ಚಿಕ್ಕೋಡಿ ತಾಲ್ಲೂಕು ಆಸ್ಪತ್ರೆ ಮತ್ತು ತಾಯಿ-ಮಕ್ಕಳ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅಪರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಸ್. ಗಡದ ಅವರ ಮಾಹಿತಿಯ ಪ್ರಕಾರ, ತಾಲ್ಲೂಕು …

Read More »

ದಂಡ ಕಟ್ಟಿ ಮಾರುದ್ದದ ಚಲನ್ ಸ್ವೀಕರಿಸುತ್ತಿರುವ ವಾಹನ ಸವಾರ

ದಾವಣಗೆರೆ: ಸಂಚಾರಿ ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ ಪಾವತಿ ಮಾಡಲು ಸರ್ಕಾರ ಶೇ.50% ರಿಯಾಯಿತಿ ನೀಡಿತ್ತು. ಇದರಿಂದ ವಾಹನ ಸವಾರರು ಸರತಿ ಸಾಲಿನಲ್ಲಿ ನಿಂತು ದಂಡ ಪಾವತಿ ಮಾಡಿದ್ದಾರೆ. ಹತ್ತಿಪ್ಪತ್ತು ಪ್ರಕರಣಗಳಲ್ಲಿ 20 ರಿಂದ 30 ಸಾವಿರ ರೂಪಾಯಿ ವರೆಗೂ ದಂಡ ಪಾವತಿ ಮಾಡಿದ್ದಾರೆ. ಇನ್ನು ದಾವಣಗೆರೆ ಉತ್ತರ ಹಾಗೂ ದಕ್ಷಿಣ ಸಂಚಾರಿ ಠಾಣೆಗಳಲ್ಲಿ ದಂಡ ಪಾವತಿಸಿ ಉದ್ದನೆಯ ಚಲನ್ ಪಡೆಯುವ ಮೂಲಕ ಕೆಲ ವಾಹನ ಸವಾರರು ಗಮನ ಸೆಳೆದಿದ್ದಾರೆ. ಉದ್ದನೆಯ …

Read More »

ಕಾಂಗ್ರೆಸ್ ಸರ್ಕಾರ ಬಂದು 2 ವರ್ಷ ಕಳೆದರೂ ಅಭಿವೃದ್ಧಿ ಶೂನ್ಯ

ಕಾಂಗ್ರೆಸ್ ಸರ್ಕಾರ ಬಂದು 2 ವರ್ಷ ಕಳೆದರೂ ಅಭಿವೃದ್ಧಿ ಶೂನ್ಯ ಬರೀ ಗ್ಯಾರಂಟಿಯಲ್ಲೇ ಕಾಲಹರಣ ರಸ್ತೆಗಳ ಗುಂಡಿ ತುಂಬಲಿಕ್ಕೆ ಹಣವಿಲ್ಲ; ಮಾಜಿ ಸಚಿವ ಮುರುಗೇಶ್ ನಿರಾಣಿ ಆರೋಪ ಕಾಂಗ್ರೆಸ್ ಸರ್ಕಾರ ಬಂದು 2 ವರ್ಷ ಕಳೆದರೂ ಅಭಿವೃದ್ಧಿ ಶೂನ್ಯ ಬರೀ ಗ್ಯಾರಂಟಿಯಲ್ಲೇ ಕಾಲಹರಣ ರಸ್ತೆಗಳ ಗುಂಡಿ ತುಂಬಲಿಕ್ಕೆ ಹಣವಿಲ್ಲ ಮಾಜಿ ಸಚಿವ ಮುರುಗೇಶ್ ನಿರಾಣಿ ಆರೋಪ ಕೈ ಟಿಕೆಟ್ ಆಕಾಂಕ್ಷಿಗಳ ಬೆನ್ನಿಗೆ ಜೆ ಟಿ ಪಾಟೀಲ್ ಚೂರಿ ಹಾಕ್ತಿದ್ದಾರೆ ಕಳೆದ …

Read More »

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಹಿನ್ನೆಲೆ ಚಿತ್ರಕಲೆ ಮತ್ತು ಭಾಷಣ ಸ್ಪರ್ಧೆ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಹಿನ್ನೆಲೆ ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ಧೇಶ ಚಿತ್ರಕಲೆ ಮತ್ತು ಭಾಷಣ ಸ್ಪರ್ಧೆ ವಿದ್ಯಾರ್ಥಿಗಳು ಮತ್ತು ಜನರಿಂದ ಉತ್ತಮ ಪ್ರತಿಕ್ರಿಯೆ ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಹಿನ್ನೆಲೆ ಚಿತ್ರಕಲೆ ಮತ್ತು ಭಾಷಣ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಶುಕ್ರವಾರದಂದು ಬೆಳಗಾವಿಯ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮಕ್ಕಳಿಗಾಗಿ ಭಾಷಣ ಮತ್ತು ಚಿತ್ರಕಲೆ ಸ್ಪರ್ಧೆಯನ್ನು ಬೆಳಗಾವಿಯ ಡಾ.ಬಿ.ಆರ್. …

Read More »

ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಉತ್ತಮ ಪ್ರದರ್ಶನ ಅಭ್ಯಾಸದೊಂದಿಗೆ ಕ್ರೀಡೆಯೂ ಅತ್ಯಗತ್ಯ; ಶಾಸಕ ಆಸೀಫ್ ಸೇಠ್

ಶ್ರೀBGM ASIF SAIT GOVT SCHOOL SPORTS INAU. ನಗರ ವಲಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಶಾಸಕ ಆಸೀಫ್ ಸೇಠ್ ಚಾಲನೆ ನಗರ ವಲಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ಶಾಸಕ ಆಸೀಫ್ ಸೇಠ್ ಚಾಲನೆ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಉತ್ತಮ ಪ್ರದರ್ಶನ ಅಭ್ಯಾಸದೊಂದಿಗೆ ಕ್ರೀಡೆಯೂ ಅತ್ಯಗತ್ಯ; ಶಾಸಕ ಆಸೀಫ್ ಸೇಠ್ ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್ ಅವರು ನಗರ ವಲಯದ ಪ್ರಾಥಮಿಕ ಮತ್ತು …

Read More »

ಬೆಳಗಾವಿ ತಾಲ್ಲೂಕಿನ ಪಿಕೆಪಿಎಸ್ ಆಡಳಿತ ಮಂಡಳಿಯ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ ತಾಲ್ಲೂಕಿನ ಪಿಕೆಪಿಎಸ್ ಆಡಳಿತ ಮಂಡಳಿಯ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ ತಾಲ್ಲೂಕಿನ ಸಂಭಾವ್ಯ ಅಭ್ಯರ್ಥಿಯನ್ನು ಅವಿರೋಧವಾಗಿ ಆಯ್ಕೆ ಮಾಡಲು ನಿರ್ಧಾರ ವಿಪ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ನಾಯಕ ರಾಹುಲ್ ಜಾರಕಿಹೊಳಿ, ಕುಲಗೋಡೆ ಭಾಗಿ ಬೆಳಗಾವಿ- ಮುರಗೋಡ ಅಜ್ಜನವರ ಕೃಪಾಶೀರ್ವಾದದಿಂದ ರೈತರಿಗಾಗಿಯೇ ನೂರು ವರ್ಷಗಳ ಹಿಂದೆಯೇ ಸ್ಥಾಪಿತಗೊಂಡಿರುವ ಬೆಳಗಾವಿ ಡಿಸಿಸಿ ಬ್ಯಾಂಕಿನ ಹಿತರಕ್ಷಣೆಗೆ ನಾವುಗಳು ಬದ್ಧರಿದ್ದು, ಮುಂದಿನ ದಿನಗಳಲ್ಲಿ ರೈತರಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ದೊರಕಿಸಿಕೊಡುವುದಾಗಿ …

Read More »

ಭೂಮಿ‌ ಇರೋವರೆಗೂ ಬಸವಣ್ಣನವರ ವಿಚಾರಧಾರೆಗಳನ್ನ ಕಾಪಾಡಬೇಕು: ಬಸವ ಸಂಸ್ಕೃತಿ ಅಭಿಯಾನದಲ್ಲಿ ಸತೀಶ ಜಾರಕಿಹೊಳಿ

ಬೆಳಗಾವಿ: “ಭೂಮಿ ಇರುವವರೆಗೆ ಬಸವಣ್ಣನವರ ವಿಚಾರಗಳನ್ನು ಕಾಪಾಡುವ ಪ್ರಯತ್ನ ಮಾಡಬೇಕಿದೆ. ದೇಶದಲ್ಲಿ ಮೂಲ ವಿಚಾರ ಮತ್ತು ಇತಿಹಾಸವನ್ನು ತಿರುಚುವ ಕೆಲಸ ಸಾವಿರಾರು ವರ್ಷಗಳಿಂದ ನಡೆಯುತ್ತಿದೆ. ಅಂತಹ ಸಂದರ್ಭದಲ್ಲಿ ಅದನ್ನು ಉಳಿಸುವ ಕೆಲಸ ಬಸವ ಸಂಸ್ಕೃತಿ ಅಭಿಯಾನದ ಮೂಲಕ ನಡೆಯುತ್ತಿರುವುದು ಶ್ಲಾಘನೀಯ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಬೆಳಗಾವಿಯ ನಾಗನೂರು ರುದ್ರಾಕ್ಷಿ ಮಠದ ಎಸ್.ಜಿ.ಬಿ.ಐ.ಟಿ. ಕಾಲೇಜಿನ ಆವರಣದಲ್ಲಿ ಬಸವ ಸಂಸ್ಕೃತಿ ಅಭಿಯಾನದ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. …

Read More »

ಕರ್ನಾಟಕ ಅನುಸೂಚಿತ ಜಾತಿ ಮತ್ತು ಪಂಗಡಗಳ ಕಾಯ್ದೆ ಪ್ರಶ್ನಿಸಿ ಅರ್ಜಿ: ಸರ್ಕಾರಕ್ಕೆ ನೋಟಿಸ್​ ಜಾರಿ ಮಾಡಿದ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ಎಸ್ಸಿ – ಎಸ್ಟಿ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕರ್ನಾಟಕ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳು ಮತ್ತು ಸರ್ಕಾರದ ಅಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯ್ದೆ-2022 ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ಸಂಬಂಧ ಕೋರ್ಟ್​ ಸರ್ಕಾರಕ್ಕೆ ನೋಟಿಸ್​ ಜಾರಿ ಮಾಡಿದೆ. ಅಲ್ಲದೇ, ಈ ಕಾಯಿದೆ ಆಧರಿಸಿ ಬಿಬಿಎಂಪಿಯಲ್ಲಿನ 92 ಸಹಾಯಕ ಸಿವಿಲ್ …

Read More »

ಹೊಸ ಬದುಕಿಗೆ ಕಾಲಿಟ್ಟ ಅಂಧರು; ಆಶೀರ್ವದಿಸಿದ ಕುಟುಂಬಸ್ಥರು, ಗ್ರಾಮಸ್ಥರು

ರಾಯಚೂರು : ಮದುವೆ ಎಂಬುದು ಸ್ವರ್ಗದಲ್ಲೇ ನಿಶ್ಚಯವಾಗಿರುತ್ತೆ ಎನ್ನುವ ಮಾತಿದೆ. ಆದರೆ, ಅಪ್ಪ-ಅಮ್ಮ ಇಲ್ಲದ, ವಿಶೇಷ ವ್ಯಕ್ತಿ ತಾನು ವಿವಾಹ ಆಗಬೇಕು ಎನ್ನುವ ಹಂಬಲದೊಂದಿಗೆ ಕಳೆದ ಮೂರು ವರ್ಷಗಳಿಂದ ವಧುವಿಗಾಗಿ ಹುಡುಕಾಟ ನಡೆಸುತ್ತಿದ್ದರೂ ವಧುವೇ ಸಿಕ್ಕಿರಲಿಲ್ಲ. ಆದರೆ, ಕೆಲಸಕ್ಕಾಗಿ ತೆರಳಿದಾಗ ಕಂಕಣ ಭಾಗ್ಯ ಕೂಡಿ ಬಂದಿದ್ದು, ಗ್ರಾಮಸ್ಥರೆಲ್ಲರೂ ಸೇರಿಕೊಂಡು ಅಪರೂಪದ ವಿವಾಹದ ಆರತಕ್ಷತೆ ನೆರವೇರಿಸಿದ್ದಾರೆ. ಇದು ದಿವ್ಯಾಂಗರ ಶುಭ ವಿವಾಹ: ನವದಂಪತಿಯ ಹೆಸರು ರಂಗಪ್ಪ ಹಾಗೂ ನಾರಾಯಣಮ್ಮ. ಇವರಿಬ್ಬರು ಹುಟ್ಟಿನಿಂದ ಕಣ್ಣು ಕಾಣದವರು. …

Read More »