Breaking News

Monthly Archives: ಸೆಪ್ಟೆಂಬರ್ 2025

ಅವೈಜ್ಞಾನಿಕ ಚಕ್ ಡ್ಯಾಮ್; ಬೆಳೆಗೆ ನುಗ್ಗಿದ ನೀರು… ಅಧಿಕಾರಿಯಿಂದ ರೈತನಿಗೆ ಹುಚ್ಚು ಮಂಗ್ಯಾ ಎಂದು ಬೈದ ಆರೋಪ

ಅವೈಜ್ಞಾನಿಕ ಚಕ್ ಡ್ಯಾಮ್; ಬೆಳೆಗೆ ನುಗ್ಗಿದ ನೀರು… ಅಧಿಕಾರಿಯಿಂದ ರೈತನಿಗೆ ಹುಚ್ಚು ಮಂಗ್ಯಾ ಎಂದು ಬೈದ ಆರೋಪ ಅವೈಜ್ಞಾನಿಕ ಚಕ್ ಡ್ಯಾಮ್ 20 ಎಕರೆ ಬೆಳೆ ಜಲಾವೃತ, ರೈತರ ಆಕ್ರೋಶ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಣ್ಣೀರಿಟ್ಟ ಕೃಷಿಕರು ಹುಚ್ಚು ಮಂಗ್ಯಾ ಹೋಗು ಎಂದ ಅಧಿಕಾರಿಗಳ ವಿರುದ್ಧ ಅಸಮಾಧಾನ ಅವೈಜ್ಞಾನಿಕ ಚೆಕ್ ಡ್ಯಾಂ ನಿರ್ಮಿಸಿ ಬೆಳೆಹಾನಿಯಾದ ರೈತರ ಸಮಸ್ಯೆಗಳನ್ನು ಕೇಳುವ ಬದಲೂ ರೈತರನ್ನೇ ನಿಂದಿಸಿ ಕಳುಹಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ …

Read More »

ಚಿಕ್ಕೋಡಿಯಲ್ಲಿ ಅರ್ಥಪೂರ್ಣವಾಗಿ ಜರುಗಿದ ಜಿಲ್ಲಾ ‌ಮಟ್ಟದ ಶಿಕ್ಷಕರ ದಿನಾಚರಣೆ

ಚಿಕ್ಕೋಡಿಯಲ್ಲಿ ಅರ್ಥಪೂರ್ಣವಾಗಿ ಜರುಗಿದ ಜಿಲ್ಲಾ ‌ಮಟ್ಟದ ಶಿಕ್ಷಕರ ದಿನಾಚರಣೆ ಚಿಕ್ಕೋಡಿ-“ಗ್ರಾಮೀಣ ಪ್ರದೇಶದಲ್ಲಿಯ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ತಾಲ್ಲೂಕಿನ ವಾಳಕಿ, ಖಡಕಲಾಟ, ಜನವಾಡ, ಹಿರೇಕೋಡಿ ಹಾಗೂ ಕಮತೇನಹಟ್ಟಿಯ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಲಾಗಿದ್ದು, ಪ್ರತಿ ಶಾಲೆಯಲ್ಲಿ 2 ಕೊಠಡಿ ನಿರ್ಮಾಣಕ್ಕೆ ತಲಾ 25 ಲಕ್ಷ ಅನುದಾನ ಮಂಜೂರಾಗಿದೆ” ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಹೇಳಿದರು. ಪಟ್ಟಣದ ಪರಟಿ ನಾಗಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ ಹಾಗೂ …

Read More »

ಶಿಕ್ಷಕರ ವೃತ್ತಿ, ಕೇವಲ ಉದ್ಯೋಗವಲ್ಲ; ಅದು ಪವಿತ್ರ ಧರ್ಮ

ಶಿಕ್ಷಕರ ವೃತ್ತಿ, ಕೇವಲ ಉದ್ಯೋಗವಲ್ಲ; ಅದು ಪವಿತ್ರ ಧರ್ಮ, ಸಮಾಜದ ಭವಿಷ್ಯ ಕಟ್ಟುವ ಮಹಾಯಜ್ಞ. ಒಬ್ಬ ವೈದ್ಯನು ರೋಗಿಯನ್ನು ಚಿಕಿತ್ಸೆ ಕೊಡುತ್ತಾನೆ, ವಕೀಲನು ನ್ಯಾಯ ಕೊಡಿಸುತ್ತಾನೆ, ಆದರೆ ಒಬ್ಬ ಶಿಕ್ಷಕನು ಒಳ್ಳೆಯ ವೈದ್ಯ, ಒಳ್ಳೆಯ ವಕೀಲ, ಒಳ್ಳೆಯ ನಾಯಕ, ಒಳ್ಳೆಯ ನಾಗರಿಕನನ್ನು ತಯಾರು ಮಾಡುತ್ತಾನೆ. ಶಿಕ್ಷಕರು ಜ್ಞಾನವನ್ನಷ್ಟೇ ಅಲ್ಲ, ಮೌಲ್ಯಗಳು, ಶಿಸ್ತು, ಮಾನವೀಯತೆ, ಹಾಗೂ ಜೀವನದ ನೈಜ ಅರ್ಥವನ್ನು ಬೋಧಿಸುತ್ತಾರೆ ಎಂದು ಯಡೂರಿನ ಶ್ರೀ ಸಿದ್ದಲಿಂಗಶಿವಾಚಾರ್ಯ ವೇದಗಮ ಸಂಸ್ಕೃತಿ ಶಾಲೆಯ …

Read More »

ಬೆಳಗಾವಿಯ ರಾಜಾ…ಚವ್ಹಾಟಗಲ್ಲಿಯ ಗಣೇಶನ ದರ್ಶನ ಪಡೆದ ಹೆಸ್ಕಾಂ ಅಧಿಕಾರಿಗಳು

ಬೆಳಗಾವಿಯ ರಾಜಾ…ಚವ್ಹಾಟಗಲ್ಲಿಯ ಗಣೇಶನ ದರ್ಶನ ಪಡೆದ ಹೆಸ್ಕಾಂ ಅಧಿಕಾರಿಗಳು ಬೆಳಗಾವಿಯ ರಾಜಾ…ಚವ್ಹಾಟಗಲ್ಲಿಯ ಗಣೇಶ ದರ್ಶನ ಪಡೆದ ಹೆಸ್ಕಾಂ ಅಧಿಕಾರಿಗಳು ಗಣೇಶೋತ್ಸವ ಯಶಸ್ವಿಗೆ ಸಹಕಾರ ಮಂಡಳಿದ ವತಿಯಿಂದ ಅಧಿಕಾರಿಗಳ ಸನ್ಮಾನ ಹೆಸ್ಕಾಂ ಅಧಿಕಾರಿಗಳು ಇಂದು ಬೆಳಗಾವಿಯ ರಾಜಾ ಚವ್ಹಾಟ ಗಲ್ಲಿಯ ಶ್ರೀ ಗಣೇಶನ ದರ್ಶನ ಪಡೆದುಕೊಂಡರು. ಬೆಳಗಾವಿಯ ರಾಜಾ ಚವ್ಹಾಟಗಲ್ಲಿ ಗಣಪತಿಯ ದರ್ಶನವನ್ನು ಇಂದು ಹೆಸ್ಕಾಂ ಎಇಇ ಅಶ್ವೀನ್ ಶಿಂಧೆ, ಮನೋಹರ್ ಸುತಾರ್ ಮತ್ತು ಭಜಂತ್ರಿ ಅವರು ಭೇಟಿ ನೀಡಿ ಗಣೇಶನ …

Read More »

ಪ್ರೀತಿಸಿ ಸರಳ ವಿವಾಹ, ನೇತ್ರದಾನಕ್ಕೂ ಸಹಿ ಹಾಕಿದ ನವಜೋಡಿ

ಮೈಸೂರು: ಸುಮಾರು ಹತ್ತು ವರ್ಷಗಳಿಂದ ಪ್ರೀತಿಯಲ್ಲಿ ಒಂದಾಗಿದ್ದ ನಗರದ ನಿವಾಸಿ ಚಂದನ್ ಮತ್ತು ಲಾವಣ್ಯ ಅವರ ಸರಳ ಮದುವೆ ಮೂಲಕ ಹೊಸ ಬದುಕನ್ನು ಪ್ರಾರಂಭಿಸಿದ್ದಾರೆ. ಮನೆಯವರ ಸಮ್ಮುಖದಲ್ಲಿ ದೇವಸ್ಥಾನದಲ್ಲಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ಎಂದರೆ ಕೇವಲ ಸಂಬಂಧಿಕರು-ಸ್ನೇಹಿತರಿಗೆ ಔತಣಕೂಟ, ಆನಂದ-ಆಡಂಬರವೆಂದುಕೊಳ್ಳುವ ಅನೇಕ ಯುವ ದಂಪತಿಗಳಿಗೆ ಈ ಜೋಡಿ ನಿಜಕ್ಕೂ ಮಾದರಿಯಾಗಿದೆ. ಮಾಂಗಲ್ಯ ಧಾರಣೆ ಬಳಿಕ ನವ ದಂಪತಿ ಇಬ್ಬರೂ ಸ್ವಇಚ್ಛೆಯಿಂದಲೇ ಮೈಸೂರಿನ ಅಗರವಾಲ್ ಕಣ್ಣಿನ ಆಸ್ಪತ್ರೆಯ ವೈದ್ಯರ …

Read More »

ಬೆಳಗಾವಿ ಉಪನ್ಯಾಸಕಿ ಜ್ಯೋತಿಗೆ ಒಲಿದು ಬಂದ ರಾಜ್ಯಮಟ್ಟದ ಅತ್ಯುತ್ತಮ ಉಪನ್ಯಾಸಕಿ ಪ್ರಶಸ್ತಿ 

ಬೆಳಗಾವಿ: ಬೆಳಗಾವಿಯ ಶಹಾಪುರದ ಚಿಂತಾಮಣರಾವ್ ಪದವಿಪೂರ್ವ ಸರ್ಕಾರಿ ಕಾಲೇಜಿನ ಕನ್ನಡ ಉಪನ್ಯಾಸಕಿ ಜ್ಯೋತಿ ಸಿ.ಎಂ. ಅವರಿಗೆ ಇಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ಉತ್ತಮ ಉಪನ್ಯಾಸಕಿ ಪ್ರಶಸ್ತಿ ಪ್ರದಾನ ಮಾಡಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಶುಕ್ರವಾರ ಆಯೋಜಿಸಿದ್ದ ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ನಿಮಿತ್ತ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಮುಖ್ಯಮಂತ್ರಿಗಳು …

Read More »

ಇವಿಎಂ ಬಗ್ಗೆ ನಿಮಗೆ ಸಂಶಯ ಇದ್ದಲ್ಲಿ ಅಸೆಂಬ್ಲಿ ವಿಸರ್ಜಿಸಿ ಚುನಾವಣೆ ಎದುರಿಸಿ: ಮಾಜಿ ಸಚಿವ ಎಸ್. ಸುರೇಶ್

ಬೆಂಗಳೂರು: 2023 ಮೇ ತಿಂಗಳಿನಲ್ಲಿ ಇವಿಎಂ ಮೂಲಕ ಚುನಾಯಿತವಾದ ಕಾಂಗ್ರೆಸ್​​ನ ಈ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಿದೆ. ಇವಿಎಂ ಬಗ್ಗೆ ನಿಮಗೆ ಸಂಶಯ ಇದ್ದಲ್ಲಿ ನೀವು ಅಸೆಂಬ್ಲಿ ವಿಸರ್ಜಿಸಿ ಚುನಾವಣೆಗೆ ಹೋಗಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ಎಸ್. ಸುರೇಶ್ ಕುಮಾರ್ ಅವರು ಸವಾಲು ಹಾಕಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಗೆದ್ದಾಗಲೆಲ್ಲ ಚೆನ್ನಾಗಿದೆ. ಗೆಲ್ಲದೇ ಇದ್ದಾಗ ಇವಿಎಂ ಎಂಬ ಧೋರಣೆಯು ಅತ್ಯಂತ ಹಳೆಯ …

Read More »

ನಾಳೆ ಹಿಂದೂ ಮಹಾ ಮಂಡಳ ಗಣಪತಿ ಮೆರವಣಿಗೆ: ಶಿವಮೊಗ್ಗ ನಗರ ಕೇಸರಿಮಯ

ಶಿವಮೊಗ್ಗ : ರಾಜ್ಯದಲ್ಲಿಯೇ ಹೆಸರುವಾಸಿಯಾಗಿರುವ ಶಿವಮೊಗ್ಗದ ಹಿಂದೂ ಮಹಾಮಂಡಲದ ಗಣಪತಿಯ ರಾಜಬೀದಿ ಉತ್ಸವ ನಾಳೆ ನಡೆಯಲಿದೆ. ಗಣೇಶ ಚತುರ್ಥಿ ನಂತರ 11 ದಿನಕ್ಕೆ ಬರುವ ಅನಂತ ಚತುರ್ಥಿಯಂದು ಗಣೇಶನ ರಾಜಬೀದಿ ಉತ್ಸವ ನಡೆಯುವುದು ವಾಡಿಕೆ. ಇದರಿಂದಾಗಿ ನಾಳೆಯ ರಾಜಬೀದಿ ಉತ್ಸವಕ್ಕೆ ಹಿಂದೂ ಕೇಸರಿ ಅಲಂಕಾರ ಸಮಿತಿಯವರು ಶಿವಮೊಗ್ಗ ನಗರವನ್ನು ಸಂಪೂರ್ಣ ಕೇಸರಿಮಯ ಮಾಡಿದ್ದಾರೆ. ಇದಕ್ಕೆ ಪೊಲೀಸ್ ಇಲಾಖೆಯು 1 ಸಾವಿರ ಸಿಬ್ಬಂದಿಯನ್ನ ನಿಯೋಜಿಸಿದೆ. ಸಮುದ್ರ ಮಂಥನದ ಅಲಂಕಾರ : ಹಿಂದೂ ಕೇಸರಿ ಅಲಂಕಾರ …

Read More »

ಟ್ರಾಫಿಕ್ ನಿಯಮ ಉಲ್ಲಂಘಿಸಿದ ಸಂಬಂಧ ಸಿಎಂ ಕಾರಿನ ಮೇಲೆ ದಾಖಲಾದ ಪ್ರಕರಣ ಸಂಬಂಧ ದಂಡ ಪಾವತಿ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ಶೇ.50 ರಷ್ಟು ದಂಡ ಪಾವತಿಗೆ ಸರ್ಕಾರ ರಿಯಾಯಿತಿ ನೀಡಿದ ಹಿನ್ನೆಲೆಯಲ್ಲಿ ಸವಾರರು ದಂಡ ಕಟ್ಟುವಲ್ಲಿ ನಿರತರಾಗಿದ್ದಾರೆ. ಇದುವರೆಗೂ 40 ಕೋಟಿಗಿಂತ ಹೆಚ್ಚು ದಂಡ ಪಾವತಿಸಿದ್ದಾರೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕಾರಿನ ಮೇಲಿನ ಪ್ರಕರಣಗಳ ಸಂಬಂಧ ಕೂಡ ದಂಡ ಪಾವತಿಯಾಗಿದೆ. ಸಿಎಂ ಕಾರಿನ ಮೇಲೆ 7 ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳಸುವ ಇನೋವಾ-ಕ್ರಿಸ್ಟಾ ಕಾರು 2024ರಿಂದ ಈವರೆಗೂ ಏಳು ಸಂಚಾರ ನಿಯಮಗಳ ಉಲ್ಲಂಘಿಸಿವೆ. …

Read More »

ಗೋಕಾಕ ನಗರದಲ್ಲಿ ನೂತನವಾಗಿ ಆರಂಭಗೊಂಡ ಕುಂದಾಪುರ ಕೆಫೆ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ

ಗೋಕಾಕ ನಗರದಲ್ಲಿ ನೂತನವಾಗಿ ಆರಂಭಗೊಂಡ ಕುಂದಾಪುರ ಕೆಫೆ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಗೋಕಾಕ : ನಗರದ ಲಕ್ಷ್ಮೀ ಟಾಕೀಸ್ ಎದುರು ನೂತನವಾಗಿ ಆರಂಭಗೊಂಡ ಕುಂದಾಪುರ ಕೆಫೆಯನ್ನು ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಆಪ್ತ ಸಹಾಯಕರಾದ ಸದಾನಂದ ಕಲಾಲ, ಮಾಲೀಕರಾದ ಮೋಹನ್ ಶೆಟ್ಟಿ, ರಮೇಶ್ ಶೆಟ್ಟಿ, ಸಂತೋಷ್ ಶೆಟ್ಟಿ, ಅರುಣ ಶೆಟ್ಟಿ, ಜಾದವ್ ಹಾಗೂ ಶೆಟ್ಟಿ ಕುಟುಂಬಸ್ಥರು ಉಪಸ್ಥಿತರಿದ್ದರು

Read More »