ಬೆಂಗಳೂರು: ಇಪ್ಪತಕ್ಕೂ ಹೆಚ್ಚು ವರ್ಷಗಳ ಕಾಲ ಸೆರೆವಾಸಕ್ಕೊಳಗಾಗುವ ಅಪರಾಧಿಗಳು ನಿಗದಿತ ಅವಧಿಯ ಜೈಲು ವಾಸದ ಬಳಿಕ ಶಿಕ್ಷೆಯ ಮಾಫಿ ಕೋರಿ ಸಲ್ಲಿಸುವ ಮನವಿ ತಿರಿಸ್ಕರಿಸಬೇಕು ಎಂಬ ನಿಯಮವಿಲ್ಲ ಎಂದು ಹೈಕೋರ್ಟ್ ಇಂದು ಸ್ಪಷ್ಟಪಡಿಸಿದೆ. ಅಪರಾಧಿಗಳಿಗೆ ಶಿಕ್ಷೆ ವಿಧಿಸುವ ಆದೇಶದಲ್ಲಿ ಶಿಕ್ಷೆಯ ಮಾಫಿ ಕುರಿತು ಪ್ರಸ್ತಾಪವಿಲ್ಲದಿದ್ದಂತಹ ಸಂದರ್ಭದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಬೇಕೆಂದಿಲ್ಲ. ಇಂತಿಷ್ಟು ವರ್ಷ ಶಿಕ್ಷೆಯ ಬಳಿಕ ಶಿಕ್ಷೆಯ ಮಾಫಿ, ಪೆರೋಲ್, ಅವಧಿಪೂರ್ವ ಬಿಡುಗಡೆಗೆ ಅರ್ಹರಾಗಿರುತ್ತಾರೆ ಎಂದು ಪೀಠ ತಿಳಿಸಿದೆ. ತನ್ನ ಪತಿ, …
Read More »Monthly Archives: ಸೆಪ್ಟೆಂಬರ್ 2025
ಗಣೇಶೋತ್ಸವಕ್ಕೆ ‘ಆಪರೇಷನ್ ಸಿಂಧೂರ’ ಟಚ್: ಗಣೇಶನೊಂದಿಗೆ ಭಾರತೀಯ ಸೈನಿಕರಿಗೂ ಪೂಜೆ
ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಿರುವ ಸಾರ್ವಜನಿಕ ಗಣೇಶ ಮೂರ್ತಿಗಳು ಒಂದಕ್ಕಿಂತ ಒಂದು ವಿಶಿಷ್ಟವಾಗಿವೆ. ಆಕರ್ಷಕ ಅಲಂಕಾರ, ಮಂಟಪಗಳು ಗಮನ ಸೆಳೆಯುತ್ತಿವೆ. ಇಲ್ಲೊಂದು ಮಂಡಳಿ ‘ಆಪರೇಷನ್ ಸಿಂಧೂರ’ ಟಚ್ ನೀಡಿದ್ದು, ಗಣೇಶನ ಜೊತೆಗೆ ಭಾರತೀಯ ಸೈನಿಕರಿಗೂ ಪೂಜೆ ಸಲ್ಲಿಸುವ ಮೂಲಕ ದೇಶಭಕ್ತಿ ಮೆರೆಯುತ್ತಿದೆ. ಒಂದೆಡೆ ಮಂಟಪದ ಹೊರಗೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಮನೆ ಮಾತಾಗಿದ್ದ ಕರ್ನಲ್ ಸೋಫಿಯಾ ಖುರೇಷಿ, ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಭಾವಚಿತ್ರಗಳು. ಮತ್ತೊಂದೆಡೆ, ಮಂಟಪದೊಳಗೆ ಕಾಲಿಡುತ್ತಿದ್ದಂತೆ …
Read More »ವಿಜಯಪುರ–ಮಂಗಳೂರು ನಡುವೆ ವಿಶೇಷ ರೈಲು ಇಂದಿನಿಂದ ಖಾಯಂ: ಟಿಕೆಟ್ ವಿವರ ಇಲ್ಲಿದೆ
ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ರೈಲು ಸಂಖ್ಯೆ 07377 ವಿಜಯಪುರ–ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ ವಿಶೇಷ ರೈಲು ಇಂದಿನಿಂದ ಅಂದರೆ ಸೆಪ್ಟೆಂಬರ್ 1ರಿಂದ ಹಾಗೂ ರೈಲು ಸಂಖ್ಯೆ 07378 ಮಂಗಳೂರು ಸೆಂಟ್ರಲ್-ವಿಜಯಪುರ ಎಕ್ಸ್ಪ್ರೆಸ್ ವಿಶೇಷ ರೈಲು ಸೆಪ್ಟೆಂಬರ್ 2ರಿಂದ ಖಾಯಂ ಸಂಚಾರ ಮಾಡಲಿದೆ. ಹೊಸ ದರ ಪಟ್ಟಿಯನ್ನು ರೈಲ್ವೇ ಇಲಾಖೆ ಬಿಡುಗಡೆ ಮಾಡಿದೆ. ಈಗಾಗಲೇ ರೈಲು ಸಂಖ್ಯೆ ಬದಲಾವಣೆಯೊಂದಿಗೆ ರೈಲು ಸಂಖ್ಯೆ 17377/78 ವಿಜಯಪುರ–ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ ರೈಲಿನ ಟಿಕೆಟ್ ಬುಕ್ಕಿಂಗ್ ಆರಂಭಗೊಂಡಿದೆ. ಕಾಯ್ದಿರಿಸಿದ ದರ್ಜೆಯ …
Read More »ಚಿನ್ನಯ್ಯನಿಗೆ ಎಸ್ಐಟಿ ಗ್ರಿಲ್: ‘ಬುರುಡೆ’ ಕೊಟ್ಟಿದ್ದೇ ಜಯಂತ್! ಮತ್ತಷ್ಟು ಸ್ಫೋಟಕ ಸಂಗತಿ ಬಹಿರಂಗ
ಬೆಂಗಳೂರು, ಸೆಪ್ಟೆಂಬರ್ 1: ಧರ್ಮಸ್ಥಳ (Dharmasthala) ಪ್ರಕರಣದಲ್ಲಿ ‘ಬುರುಡೆ ಗ್ಯಾಂಗ್’ನ ಬುರುಡೆಯಾಟ ಬಗೆದಷ್ಟು ಬಯಲಾಗುತ್ತಿದೆ. ಬೆಂಗಳೂರಿನ ಬಾಗಲುಗುಂಟೆ ಜಯಂತ್ ಮನೆ ಮತ್ತು ವಿದ್ಯಾರಣ್ಯಪುರ ಸರ್ವೀಸ್ ಅಪಾರ್ಟ್ಮೆಂಟ್ನಲ್ಲಿ ಮಹಜರು ನಡೆಸಿದ ಬಳಿಕ ಸ್ಫೋಟಕ ಸಂಗತಿಗಳು ಹೊರಬಿದ್ದಿವೆ. ಬುರುಡೆ ಸಿಕ್ಕಿದ್ದು, ಬುರುಡೆ ರಿಹರ್ಸಲ್ ನಡೆದಿದ್ದ ಬಗ್ಗೆ ರೋಚಕ ಸಂಗತಿಗಳು ಎಸ್ಐಟಿ ತನಿಖೆಯಿಂದ ಬಹಿರಂಗೊಂಡಿದೆ. ಬುರುಡೆ ಪ್ಲ್ಯಾನ್ಗೂ ಮುನ್ನ ವಿಡಿಯೋ ರೆಕಾರ್ಡ್ ನೂರಾರು ಶವ ಹೂತಿದ್ದೇನೆ. ಹೂತಿರುವ ಜಾಗ ತೋರಿಸುತ್ತೇನೆ ಎಂದು ಕೈಯಲ್ಲೊಂದು ಬುರುಡೆ ಹಿಡಿದುಕೊಂಡು ಬಂದಿದ್ದ …
Read More »ಮಹಿಳೆಯ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಮಾಜಿ ಪ್ರಿಯಕರ
ಬೆಂಗಳೂರು: ಕ್ಯಾಬ್ ಚಾಲಕನೊಬ್ಬ ಹಾಡಹಗಲೇ ತನ್ನ ಮಾಜಿ ಪ್ರೇಯಸಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೈದ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ಹೊಮ್ಮದೇವನಹಳ್ಳಿಯಲ್ಲಿ ಇಂದು ನಡೆಯಿತು. ಸುಮಾರು ಶೇ 80ರಷ್ಟು ದೇಹ ಸುಟ್ಟು ಹೋಗಿದ್ದರಿಂದ ಮಹಿಳೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕೆಂಬತ್ತಳ್ಳಿಯ ನಿವಾಸಿ ವನಜಾಕ್ಷಿ (28) ಮೃತರು. ಹಂತಕ ಮೆಳೆನಲ್ಲಸಂದ್ರದ ಕ್ಯಾಬ್ ಚಾಲಕ ವಿಠ್ಠಲ್ (52) ಎಂಬಾತನನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ವನಜಾಕ್ಷಿ ಅವರನ್ನು ದಾಖಲಿಸಲಾಗಿತ್ತು. ಆದರೆ …
Read More »ಅಕ್ರಮ ಬೆಟ್ಟಿಂಗ್ ಆರೋಪದಲ್ಲಿ ಬಂಧಿತನಾದ ಶಾಸಕ ವೀರೇಂದ್ರ ಪ್ರಕರಣದ ದಾಖಲೆ ಕೇಳಿ ಇಡಿ ಸಮನ್ಸ್: ಅನಿಲ್ ಗೌಡ ಸಲ್ಲಿಸಿದ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು : ಅಕ್ರಮ ಬೆಟ್ಟಿಂಗ್ ಆರೋಪದಲ್ಲಿ ಶಾಸಕ ವೀರೇಂದ್ರ ಪಪ್ಪಿ ಬಂಧನ ಪ್ರಕರಣದಲ್ಲಿ ಕೆಲ ದಾಖಲೆ ಒದಗಿಸುವಂತೆ ಇ.ಡಿ (ಜಾರಿ ನಿರ್ದೇಶನಾಲಯ) ನೀಡಿರುವ ಸಮನ್ಸ್ ಪ್ರಶ್ನಿಸಿ ಆರ್.ಆರ್ ನಗರದ ಹನುಮಂತರಾಯಪ್ಪ ಪುತ್ರ ಅನಿಲ್ ಗೌಡ ಸಲ್ಲಿಸಿದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದ್ದು, ಆದೇಶವನ್ನು ಮುಂದಿನ ಸೋಮವಾರ ಪ್ರಕಟಿಸುವುದಾಗಿ ಹೇಳಿದೆ. ತನಗೆ ಜಾರಿ ಮಾಡಿರುವ ಸಮನ್ಸ್ ಪ್ರಶ್ನಿಸಿ ಅನಿಲ್ ಗೌಡ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚ್ಚಿನ್ ಶಂಕರ್ …
Read More »ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ,ಸುಳಗಾ ಗ್ರಾಮದ ಸಾರ್ವಜನಿಕ ಗಣಪತಿ ದರ್ಶನ್ ಪಡೆದುಕೊಂಡ ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್
ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ,ಸುಳಗಾ ಗ್ರಾಮದ ಸಾರ್ವಜನಿಕ ಗಣಪತಿ ದರ್ಶನ್ ಪಡೆದುಕೊಂಡ ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ -ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಪಾದಾರ್ಪಣೆ ಮಾಡಿ ಬೆನಕನಹಳ್ಳಿ ಗ್ರಾಮದ ಧರ್ಮವೀರ ಸಂಭಾಜಿ ಗಣೇಶೋತ್ಸವ ಮಂಡಳಿಯ ಶ್ರೀ ಗಣೇಶನ ದರ್ಶನ್ ಪಡೆದುಕೊಂಡು ಆರತಿ ನೇರವೇರಿಸಿದರು ಈ ಸಂದರ್ಭದಲ್ಲಿ ಬೆನಕನಹಳ್ಳಿ ಗ್ರಾಮದ ನಾರಾಯಣ ಕಾಲಕುಂದ್ರಿ, ಸುರೇಶ್ ರಾಜೂರ್ಕರ್, …
Read More »ಮಗು ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ: ಸಿ.ಎಂ.ಸಿದ್ದರಾಮಯ್ಯ
ಮೈಸೂರು ಸೆ 1:ಮಗು ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ. ಇದಕ್ಕಾಗಿ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನೀಯವಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು. ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ (ಆಯಿಷ್) ಮೈಸೂರು ಇವರ ವತಿಯಿಂದ ಆಯೋಜಿಸಿದ್ದ ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯ “ವಜ್ರ ಮಹೋತ್ಸವ ಕಾರ್ಯಕ್ರಮ”ದಲ್ಲಿ ಮಾತನಾಡಿದರು. ಈ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮತ್ತು ಪ್ರಗತಿ ಕಾಣಬೇಕಾಗಿದೆ. ಇದಕ್ಕಾಗಿ …
Read More »ಹುಕ್ಕೇರಿ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರ ಸಭೆ
ಹುಕ್ಕೇರಿ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರ ಸಭೆಯನ್ನು ಇಂದು ಹಮ್ಮಿಕೊಂಡು, ಮುಂಬರುವ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಚುನಾವಣೆಯ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಹುಕ್ಕೇರಿ ತಾಲೂಕಿನ ಹರಗಾಪುರ ಗ್ರಾಮದವರು ಹಾಗೂ ಸಂಗಮ ಶುಗರ್ಸ್ ಅಧ್ಯಕ್ಷರಾದ ಶ್ರೀ ರಾಜೇಂದ್ರ ಪಾಟೀಲ ಅವರನ್ನು, ಬೆಳಗಾವಿ ಡಿಸಿಸಿ ಚುನಾವಣೆಯಲ್ಲಿ ಹುಕ್ಕೇರಿ ತಾಲೂಕಿನ ಅಭ್ಯರ್ಥಿಯಾಗಿ ಸರ್ವಾನುಮತದಿಂದ ಘೋಷಿಸಲಾಯಿತು. ಈ …
Read More »ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್, ಕಾಮೆಂಟ್ ಮಾಡುವವರಿಗೆ ರಾಜ್ಯ ಪೊಲೀಸರ ಎಚ್ಚರಿಕೆ
ಬೆಂಗಳೂರು: ಸೋಶಿಯಲ್ ಮೀಡಿಯಾಗಳಲ್ಲಿ ಮನಸೋ ಇಚ್ಚೆ ಪೋಸ್ಟ್, ಕಾಮೆಂಟ್ ಮಾಡುವುದನ್ನು ಕರ್ನಾಟಕ ರಾಜ್ಯ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ತರುವ ಪೋಸ್ಟ್, ಕಾಮೆಂಟ್ ಪ್ರಕಟಿಸುವವರ ವಿರುದ್ಧ ಇನ್ನುಮುಂದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಕಠಿಣ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಿಂದ ಸಂದೇಶ ನೀಡಿರುವ ಪೊಲೀಸರು, ಇನ್ನುಮುಂದೆ ಯಾವುದೇ ವ್ಯಕ್ತಿ, ಸಂಘಟನೆ ಅಥವಾ ಸಂಸ್ಥೆಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಅಥವಾ ಕಾಮೆಂಟ್ …
Read More »
Laxmi News 24×7