ಮೈಸೂರು: ಬಿಹಾರ ಚುನಾವಣೆ ಹಿನ್ನೆಲೆ ಜಿಎಸ್ಟಿ ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ತಮ್ಮ ನಿವಾಸದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಜಿಎಸ್ಟಿ ಉತ್ಸವ ಆಚರಿಸುವಂತೆ ಕೇಂದ್ರ ಸರ್ಕಾರ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. 2017 ರಲ್ಲಿ ಕೇಂದ್ರ ಸರ್ಕಾರವೇ ಜಿಎಸ್ಟಿ ಜಾರಿಗೆ ತಂದು ಜಿಎಸ್ಟಿ ದರ ನಿಗದಿಪಡಿಸಿತು. ಕಳೆದ ಎಂಟು ವರ್ಷದಿಂದ ಹೆಚ್ಚಿನ ದರ …
Read More »Daily Archives: ಅಕ್ಟೋಬರ್ 3, 2025
ದೇಶದಲ್ಲಿಯೇ ಅತಿ ಹೆಚ್ಚು ಸೈಬರ್ ಅಪರಾಧ ಬೆಂಗಳೂರು ಅಗ್ರಸ್ಥಾನ ಪಡೆದುಕೊಂಡಿದೆ. ಎನ್ಸಿಆರ್ಬಿ (ರಾಷ್ಟ್ರೀಯ ಅಪರಾಧ ದಾಖ
ಬೆಂಗಳೂರು: ಭಾರತದ ಸಿಲಿಕಾನ್ ವ್ಯಾಲಿ, ಐಟಿ ನಗರಿ ಬೆಂಗಳೂರಿನಲ್ಲಿ 2023ರಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿವೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್ಸಿಆರ್ಬಿ) ಸೋಮವಾರ ಬಿಡುಗಡೆಗೊಳಿಸಿರುವ 2023ರ ದತ್ತಾಂಶದಲ್ಲಿ ಈ ಮಾಹಿತಿ ಬಹಿರಂಗಗೊಂಡಿದ್ದು, ಈ ಪಟ್ಟಿಯಲ್ಲಿ ಬೆಂಗಳೂರು ಅಗ್ರಸ್ಥಾನ ಪಡೆದುಕೊಂಡಿದೆ. ಎನ್ಸಿಆರ್ಬಿ (ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ) ಬಿಡುಗಡೆಗೊಳಿಸಿರುವ ಅಂಕಿ- ಅಂಶಗಳನ್ವಯ 2023ರಲ್ಲಿ ಬೆಂಗಳೂರಿನಲ್ಲಿ ಒಟ್ಟು 17,631 ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿವೆ. 2022ರಲ್ಲಿ ದಾಖಲಾದ (9,940) …
Read More »ಗ್ಯಾರಂಟಿ ಕಾರ್ಯಕ್ರಮ ತರಲು ಹೋಗಿ ರಾಜ್ಯ ಬರಡಾಗಿದೆ: ಹಣಕಾಸು ಸ್ಥಿತಿ ಹದಗೆಟ್ಟಿದೆ: ಹೆಚ್. ಡಿ. ದೇವೇಗೌಡ
ಬೆಂಗಳೂರು : ಗ್ಯಾರಂಟಿ ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತರಲು ಹೋಗಿ ಇಂದು ರಾಜ್ಯ ಬರಡಾಗಿದೆ. ಹಣಕಾಸಿನ ಸ್ಥಿತಿ ಹದಗೆಟ್ಟಿದೆ ಎಂದು ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಆರೋಪಿಸಿದ್ದಾರೆ. ಜೆ. ಪಿ. ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಮಾತನ್ನು ನಾನು ಹೇಳುತ್ತಿಲ್ಲ. ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ. ಅವರಲ್ಲೇ ಗೊಂದಲ ಇದೆ. ದುಡ್ಡಿಲ್ಲ ದುಡ್ಡಿಲ್ಲ ಅಂತಿದ್ದಾರೆ. ಸರ್ಕಾರ ಇಂಥ ಅತಿವೃಷ್ಟಿ ಬಂದಾಗ ತನ್ನ ಸಂಪನ್ಮೂಲದಿಂದ ಸಂಕಷ್ಟಕ್ಕೀಡಾದ ಜನರಿಗೆ ಶಕ್ತಿ ಮೀರಿ ಸಹಾಯ …
Read More »ವಿಜಯನಗರ: 5.25 ಕೋಟಿ ಇನ್ಶೂರೆನ್ಸ್ ಹಣಕ್ಕಾಗಿ ಕೊಲೆ: ಅಪಘಾತವೆಂದು ಬಿಂಬಿಸಲು ಯತ್ನಿಸಿದ ಆರೋಪಿಗಳ ಬಂಧನ
ವಿಜಯನಗರ: ಇನ್ಶೂರೆನ್ಸ್ ಹಣಕ್ಕಾಗಿ ಕೊಲೆ ಮಾಡಿ, ಅದನ್ನು ಅಪಘಾತ ಎಂದು ಬಿಂಬಿಸಲು ಪ್ರಯತ್ನಪಟ್ಟ ಹಂತಕರನ್ನು ಸೆರೆ ಹಿಡಿಯುವಲ್ಲಿ ಹೊಸಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹೊಸಪೇಟೆ ಹೊರವಲಯದಲ್ಲಿ ವ್ಯಕ್ತಿಯೊಬ್ಬನನ್ನು ಅಪಘಾತದಲ್ಲಿ ಮೃತಪಟ್ಟಂತೆ ತೋರಿಸಿ, 5.25 ಕೋಟಿ ರೂ. ಇನ್ಶೂರೆನ್ಸ್ ಹಣ ಲಪಟಾಯಿಸುವ ಯತ್ನವನ್ನು ಮಾಡಿದ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ವ್ಯಕ್ತಿಯನ್ನು ಹೊಸಪೇಟೆಯ ಕೌಲ್ ಪೇಟೆಯ ನಿವಾಸಿ ಗಂಗಾಧರ ಹಾಗೂ ಬಂಧಿತರನ್ನು ಕೊಪ್ಪಳ ಜಿಲ್ಲೆಯ ಕೃಷ್ಣಪ್ಪ, ರವಿ ಗೋಸಂಗಿ, ವಿಜಯನಗರ ಜಿಲ್ಲೆಯ ಅಜೇಯ, …
Read More »ಬೆಳಗಾವಿ ಜಿಲ್ಲಾ ಟ್ಯಾಲೆಂಟ್ ಸರ್ಚ್ ಪರೀಕ್ಷೆ ಗೋಕಾಕ ನಗರದ ಗೃಹಕಚೇರಿಯಲ್ಲಿ ಬಿಡುಗಡೆ
ಜಿಲ್ಲಾ ಪಂಚಾಯತ್ ಕಾರ್ಯಾಲಯ ಬೆಳಗಾವಿ, ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ ಮತ್ತು ಚಿಕ್ಕೋಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ “ಬೆಳಗಾವಿ ಜಿಲ್ಲಾ ಟ್ಯಾಲೆಂಟ್ ಸರ್ಚ್ ಪರೀಕ್ಷೆ – ಕನಸುಗಳಿಗೆ ಚಿನ್ನದ ದಾರಿ, ಪ್ರತಿಭೆಗೆ ಹೊಸ ವೇದಿಕೆ – 2025” ರ ಮಾಹಿತಿ ಪತ್ರವನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ಗೋಕಾಕ ನಗರದ ಗೃಹಕಚೇರಿಯಲ್ಲಿ ಬಿಡುಗಡೆ ಮಾಡಿದರು ಜಿಲ್ಲಾ ಪಂಚಾಯತ್ ಬೆಳಗಾವಿ ವತಿಯಿಂದ, ಜಿಲ್ಲೆಯ ಸರಕಾರಿ ಪ್ರೌಢಶಾಲೆಗಳ 9 ಮತ್ತು …
Read More »ಮಂಗಳೂರು ಸೆಂಟ್ರಲ್ನಿಂದ ಬೆಂಗಳೂರು ಮಾರ್ಗವಾಗಿ ನವದೆಹಲಿಗೆ ಪ್ರಪ್ರಥಮ ವಿಶೇಷ ರೈಲು: ಅ.5ರಿಂದ ಸೇವೆ ಪ್ರಾರಂಭ
ಸುಬ್ರಹ್ಮಣ್ಯ(ದ.ಕನ್ನಡ): ದಕ್ಷಿಣ ರೈಲ್ವೆ ವಲಯವು ಇದೇ ಅ.5ರಂದು ಮಂಗಳೂರು ಸೆಂಟ್ರಲ್ನಿಂದ ಹಾಸನ, ಯಶವಂತಪುರ, ಕಾಚಿಗುಡ ಮಾರ್ಗವಾಗಿ ಪ್ರಪ್ರಥಮವಾಗಿ ದೆಹಲಿಯ ಹಜ್ರತ್ ನಿಜಾಮುದ್ದೀನ್ ರೈಲು ನಿಲ್ದಾಣಕ್ಕೆ ವಿಶೇಷ ರೈಲು ಘೋಷಿಸಿದೆ. ರೈಲು ಸಂಖ್ಯೆ 06008 ಮಂಗಳೂರು ಸೆಂಟ್ರಲ್ – ಹಜ್ರತ್ ನಿಜಾಮುದ್ದೀನ್ ವಿಶೇಷ ರೈಲು ಅ.5ರಂದು ಮಧ್ಯಾಹ್ನ 2:25ಕ್ಕೆ ಮಂಗಳೂರು ಸೆಂಟ್ರಲಿನಿಂದ ಹೊರಟು ಹಾಸನ ಮಾರ್ಗವಾಗಿ ರಾತ್ರಿ 11:30ಕ್ಕೆ ಯಶವಂತಪುರ ಜಂಕ್ಷನ್ ರೈಲು ನಿಲ್ದಾಣ ತಲುಪಲಿದೆ. ಅಲ್ಲಿಂದ ರಾತ್ರಿ 11:45ಕ್ಕೆ ಹೊರಡುವ ರೈಲು …
Read More »ಪೇಸ್ಮೇಕರ್ ಚಿಕಿತ್ಸೆ ಯಶಸ್ವಿ, ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಯಿಂದ ಬಿಡುಗಡೆ
ಬೆಂಗಳೂರು: ಅನಾರೋಗ್ಯಕ್ಕೊಳಗಾಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್ ಮೇಕರ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದ್ದು, ಗುರುವಾರ ಸಂಜೆ ಬೆಂಗಳೂರಿನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಶೀಘ್ರದಲ್ಲೇ ದೈನಂದಿನ ಕಾರ್ಯಕ್ಕೆ ಮರಳಲಿದ್ದಾರೆ ಎಂದು ತಿಳಿಸಿದೆ. ಖರ್ಗೆ ಚೇತರಿಕೆ ಕಾಣುತ್ತಿದ್ದಾರೆ. ಅವರಿಗೆ ಶುಭ ಹಾರೈಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ಶೀಘ್ರದಲ್ಲೇ ವೈದ್ಯರ ಸಲಹೆಯ ಬಳಿಕ ಅವರು ತಮ್ಮ ಚಟುವಟಿಕೆಗಳಿಗೆ …
Read More »ಮತ್ತೊಂದು ಹುಲಿ ಹತ್ಯೆ: ತನಿಖೆಗೆ ಅರಣ್ಯ ಸಚಿವ ಖಂಡ್ರೆ ಆದೇಶ
ಬೆಂಗಳೂರು: ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆಯಾಗಿದ್ದು, ಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ ನೀಡಿದ್ದಾರೆ. ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಲಿಖಿತ ಆದೇಶ ನೀಡಿರುವ ಅವರು, ಮಲೆ ಮಹದೇಶ್ವರ ಬೆಟ್ಟದ ಕಾನನದ ಹನೂರು ವಲಯದ ಪಚ್ಚೆದೊಡ್ಡಿ ಗ್ರಾಮದ ಬಳಿ ಗುರುವಾರ ಹುಲಿಯ ಅರ್ಧ ಕಳೇಬರ ಪತ್ತೆಯಾಗಿರುವ ಬಗ್ಗೆ ಪಿಸಿಸಿಎಫ್ ಸ್ಮಿತಾ ಬಿಜ್ಜೂರು …
Read More »ನೆರೆ ಸಂಕಷ್ಟಿತ ರೈತರ ನೆರವಿಗೆ ರಾಜ್ಯ ಸರ್ಕಾರ ಕೂಡಲೇ ಧಾವಿಸಲಿ-ಸೂಕ್ತ ತುರ್ತು ಪರಿಹಾರ ತಕ್ಷಣ ಘೋಷಿಸಲಿ”
ನೆರೆ ಸಂಕಷ್ಟಿತ ರೈತರ ನೆರವಿಗೆ ರಾಜ್ಯ ಸರ್ಕಾರ ಕೂಡಲೇ ಧಾವಿಸಲಿ-ಸೂಕ್ತ ತುರ್ತು ಪರಿಹಾರ ತಕ್ಷಣ ಘೋಷಿಸಲಿ” ನೆರೆ ಪ್ರದೇಶಗಳ ಪ್ರವಾಸದ ಹಿನ್ನಲೆ ಬೈಲಹೊಂಗಲ ಕ್ಷೇತ್ರದ ನೇಸರಗಿ ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾದ ರೈತರ ಜಮೀನುಗಳಿಗೆ ವಿರೋಧ ಪಕ್ಷದ ನಾಯಕರಾದ ಶ್ರೀ R Ashoka ಜಿ ಅವರೊಂದಿಗೆ ಭೇಟಿ ನೀಡಿ ಬೆಳೆ ಹಾನಿಯ ಪರಿಶೀಲನೆ ನಡೆಸಿ,ರೈತರಿಗೆ ಧೈರ್ಯ ತುಂಬಲಾಯಿತು. ನೆರೆ ಹಾವಳಿಯ ಕುರಿತು ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ,ನಿರ್ಲಕ್ಷ್ಯ ತೋರಿದ ರೈತ ಕಾಳಜಿ …
Read More »ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿ ಐದು ವರ್ಷ ಇರುತ್ತಾರೆ: ಡಾ. ಜಿ. ಪರಮೇಶ್ವರ್
ತುಮಕೂರು : ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿ ಐದು ವರ್ಷ ಇರುತ್ತಾರೆ. ಅಲ್ಲದೇ ಸಿದ್ದರಾಮಯ್ಯ ಅವರೇ ನೀಡಿರುವ ಹೇಳಿಕೆ ಪ್ರಕಾರ ನಮ್ಮಲ್ಲಿ ಹೈಕಮಾಂಡ್ ಇದೆ, ಹೈಕಮಾಂಡ್ ಹೇಳಿದಂತೆ ನಾನು ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಕ್ರಾಂತಿ ಇರೋದಿಲ್ಲ, ಬದಲಾಗಿ ಶಾಂತಿಯಾಗಿ ಇರಲಿದೆ. ತುಮಕೂರು ಜಿಲ್ಲೆಯು ಕಲೆ, ಸಾಹಿತ್ಯ ಹಾಗೂ ನಾಟಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಇದನ್ನು ನಾವು …
Read More »