ಬೀದರ್, ಅಕ್ಟೋಬರ್ 21: ಮಹಾರಾಷ್ಟ್ರದ ಉಮ್ಮರ್ಗಾ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ (accident) ಸಂಭವಿಸಿದ್ದು, ಬೀದರ್ ಮೂಲದ ನಾಲ್ವರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ (death) ಹೊಂದಿರುವಂತಹ ಘಟನೆ ನಡೆದಿದೆ. ಶಿವಕುಮಾರ್, ರತಿಕಾಂತ, ಇನ್ನಿಬ್ಬರ ಹೆಸರು ತಿಳಿದುಬಂದಿಲ್ಲ. ಮೃತರು ಬೀದರ್ ತಾಲೂಕಿನ ಖಾಶೆಂಪೂರ್ ಗ್ರಾಮದ ನಿವಾಸಿಗಳು. ಓರ್ವನಿಗೆ ಗಂಭೀರ ಗಾಯವಾಗಿದ್ದು, ಉಮ್ಮರ್ಗಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಡೆದದ್ದೇನು? ದೀಪಾವಳಿ ಹಬ್ಬ ಹಿನ್ನೆಲೆ ಹುಲಜಂತಿ ಮಾಳಿಂಗರಾಯ ಸ್ವಾಮೀಜಿ ದರ್ಶನಕ್ಕೆ ಬೀದರ್ ಮೂಲದ ಐವರು ಸ್ನೇಹಿತರು ತೆರಳಿದ್ದರು. …
Read More »Daily Archives: ಅಕ್ಟೋಬರ್ 21, 2025
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿದ ಮೈಸೂರು ಪೊಲೀಸರು
ಮೈಸೂರು: ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ ಹಿಡಿದ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸ್ ಕಾರ್ಯಾಚರಣೆಗೆ ಹೆದರಿದ ಕಿಡಿಗೇಡಿಗಳು, ವಾಹನವನ್ನು ವೇಗವಾಗಿ ಓಡಿಸಿದ ಪರಿಣಾಮ ಉರುಳಿ ಬಿದ್ದಿದೆ. ವಾಹನವನ್ನು ಸೀಜ್ ಮಾಡಿದ ಪೊಲೀಸರು 20 ಕರುಗಳನ್ನು ರಕ್ಷಿಸಿದ್ದಾರೆ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂದು ಜಯಪುರ ಪೊಲೀಸರಿಗೆ ಮಾಹಿತಿ ಬಂದಿತ್ತು. ಪಿಎಸ್ಐ ಹೇಮಾವತಿ ಅವರು ಜಾನುವಾರು ಸಾಗಿಸುತ್ತಿದ್ದ ವಾಹನವನ್ನು ಚೇಸ್ …
Read More »ಹಬ್ಬದ ಅವಧಿಯಲ್ಲಿ ಗುರಿ ಮೀರಿದ ಸಾಧನೆ; 1,100 ಮೆಟ್ರಿಕ್ ಟನ್ ನಂದಿನಿ ಸಿಹಿ ಉತ್ಪನ್ನ ಮಾರಾಟ: ಸಚಿವ ಕೆ.ವೆಂಕಟೇಶ್
ಬೆಂಗಳೂರು: ಈ ಬಾರಿ ಹಬ್ಬದ ಅವಧಿಯಲ್ಲಿ ಗುರಿ ಮೀರಿ ನಂದಿನಿ ಸಿಹಿ ತಿಂಡಿ ಉತ್ಪನ್ನಗಳ ಮಾರಾಟವಾಗಿದೆ ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ತಿಳಿಸಿದರು. ವಿಕಾಸಸೌದದಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಅವರು, 2024ರ ದಸರಾ ಮತ್ತು ದೀಪಾವಳಿ ಹಬ್ಬದ ಅವಧಿಯಲ್ಲಿ ಒಟ್ಟು 725 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಿ 33.48 ಕೋಟಿ ರೂ. ವಹಿವಾಟು ದಾಖಲಿಸಲಾಗಿತ್ತು. ಈ ಬಾರಿ 2025ರ ಹಬ್ಬದ ಅವಧಿಗೆ ಹೆಚ್ಚುವರಿ ಬೇಡಿಕೆಯನ್ನು ಪರಿಗಣಿಸಿ, ಸುಮಾರು ಎರಡು ತಿಂಗಳುಗಳ …
Read More »ಪಟಾಕಿ ತಾಗಿದ್ದಕ್ಕೆ ಸಿಡಿಮಿಡಿ; ಮಾರಕಾಸ್ತ್ರಗಳಿಂದ ಇಬ್ಬರ ಮೇಲೆ ಹಲ್ಲೆ
ಬೆಂಗಳೂರು: ಪಟಾಕಿ ಕಿಡಿ ತಾಗಿದ್ದಕ್ಕೆ ಮಾತಿಗೆ ಮಾತು ಬೆಳೆದು ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಇಬ್ಬರು ಬಾಲಕರು ಸೇರಿ ಐವರನ್ನ ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಕಿರಣ್ ಎಂಬುವರು ನೀಡಿದ ದೂರಿನ ಮೇರೆಗೆ ಅಮೀನ್ ಶರೀಫ್, ಸೈಯ್ಯದ್ ಅರ್ಬಾಜ್ ಹಾಗೂ ಸೈಯದ್ ಖಾದರ್ ಎಂಬುವವರನ್ನ ಬಂಧಿಸಲಾಗಿದೆ. ಕಾನೂನು ಸಂಘರ್ಷಕ್ಕೆ ಒಳಗಾದ ಇಬ್ಬರನ್ನ ರಿಮ್ಯಾಂಡ್ ಹೋಮ್ಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ಧಾರೆ. ಆ. 19ರಂದು ಬೆಳಗ್ಗೆ ಕಿರಣ್ ಅವರು …
Read More »ನಾಯಕ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ ರಮೇಶ್ ಕತ್ತಿ ವಿರುದ್ಧ ಮುಧೋಳದಲ್ಲಿ ಜಾತಿ ನಿಂದನೆ ದೂರು ದಾಖಲು
ನಾಯಕ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ ರಮೇಶ್ ಕತ್ತಿ ವಿರುದ್ಧ ಮುಧೋಳದಲ್ಲಿ ಜಾತಿ ನಿಂದನೆ ದೂರು ದಾಖಲು ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಾಯಕ ಸಮಾಜದ ಕುರಿತು ಅವಹೇಳನಕಾರಿ ಪದಬಳಕೆ ಮಾಡಿದ ಆರೋಪದ ಮೇಲೆ ರಮೇಶ್ ಕತ್ತಿ ಅವರ ವಿರುದ್ಧ ಜಾತಿ ನಿಂದನೆ ದೂರು ದಾಖಲಾಗಿದೆ. ಕತ್ತಿ ಅವರ ಹೇಳಿಕೆಯನ್ನು ವಿರೋಧಿಸಿ ವಾಲ್ಮೀಕಿ ನಾಯಕ ಸಮುದಾಯದ ಸದಸ್ಯರು ಮತ್ತು ವೀರ ಸಿಂಧೂರ ಲಕ್ಷ್ಮಣ ಯುವ ಸೇನೆಯ ಕಾರ್ಯಕರ್ತರು ನಗರದ ಪೊಲೀಸ್ ಠಾಣೆ …
Read More »ಕಬ್ಬಿನ ಬಾಕಿ ಹಣ ನೀಡದ 13 ಕಾರ್ಖಾನೆಗಳು ರೊಚ್ಚಿಗೆದ್ದ ಬಾಗಲಕೋಟೆ ರೈತರಿಂದ ಕಬ್ಬು ಕಟಾವು ಸ್ಥಗಿತಕ್ಕೆ ಕರೆ
ಕಬ್ಬಿನ ಬಾಕಿ ಹಣ ನೀಡದ 13 ಕಾರ್ಖಾನೆಗಳುರೊಚ್ಚಿಗೆದ್ದ ಬಾಗಲಕೋಟೆ ರೈತರಿಂದ ಕಬ್ಬು ಕಟಾವು ಸ್ಥಗಿತಕ್ಕೆ ಕರೆ13 ಸಕ್ಕರೆ ಕಾರ್ಖಾನೆಗಳಿಂದ 4-5 ತಿಂಗಳಿಂದ ಬಾಕಿ ಬಿಲ್ ಪಾವತಿ ವಿಳಂಬ ಅ 23 ರಂದು ಬಾಗಲಕೋಟೆ ಡಿಸಿ ಕಬ್ಬು ಬೆಳೆಗಾರರ ಸಭೆಹಳೆಯ ಬಾಕಿ ಹಣ ತೀರಿಸಲು ರೈತರ ಆಗ್ರಹ ಸಮಸ್ಯೆ ಬಗೆಹರಿಯುವವರೆಗೂ ಕಬ್ಬು ಕಟಾವು ಮಾಡದಂತೆ ಕರೆ ಬಾಗಲಕೋಟೆ ಜಿಲ್ಲೆಯ 13 ಸಕ್ಕರೆ ಕಾರ್ಖಾನೆಗಳು ಕಳೆದ ಡಿಸೆಂಬರ್ ತಿಂಗಳಲ್ಲಿ ಕಳುಹಿಸಿದ ಕಬ್ಬಿನ ಬಹುತೇಕ …
Read More »ವದಿ ಅಭಿಮಾನಿ ಫೋನ್ನಲ್ಲಿ ಕಾಗೆ ಮೇಲೆ ಗರಂ!” — ಡಿಸಿಸಿ ಬ್ಯಾಂಕ್ ಚುನಾವಣೆಯ ಬಳಿಕ ಆಡಿಯೋ ವೈರಲ್ |
ಸವದಿ ಅಭಿಮಾನಿ ಫೋನ್ನಲ್ಲಿ ಕಾಗೆ ಮೇಲೆ ಗರಂ!” — ಡಿಸಿಸಿ ಬ್ಯಾಂಕ್ ಚುನಾವಣೆಯ ಬಳಿಕ ಆಡಿಯೋ ವೈರಲ್ | ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಿರ್ದೇಶಕ ಸ್ಥಾನದ ನಾಮಪತ್ರ ಸಲ್ಲಿಕೆಯ ವೇಳೆ ಜೋಡೆತ್ತು ಹಾಗೆ ಬಂದ ಶಾಸಕ ಲಕ್ಷ್ಮಣ ಸವದಿ ಹಾಗೂ ರಾಜು ಕಾಗೆ ಬಳಿಕ ಸವದಿ ಬಿಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದ ಕಾಗೆಗೆ ಸವದಿ ಅಭಿಮಾನಿ ಕರೆ ಮಾಡಿ ಸಿಕ್ಕಾಪಟ್ಟೆ ತರಾಟೆಗೆ ತೆಗೆದುಕೊಂಡ ಆಡಿಯೋ ವೈರಲ್ ಆಗಿದೆ. ಅಥಣಿಯ ಮಲ್ಲಿಕನಾಜ್ ನಧಾಫ್ …
Read More »ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಲಿಂಗರಾಜ ಕಾಲೇಜು ವಿದ್ಯಾರ್ಥಿಗಳ ಭೇಟಿ
ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಲಿಂಗರಾಜ ಕಾಲೇಜು ವಿದ್ಯಾರ್ಥಿಗಳ ಭೇಟಿ ಅಧೀಕ್ಷಕರಿಂದ ಜೈಲಿನ ಕಾರ್ಯದ ಕುರಿತು ಮಾಹಿತಿ ಪಡೆದ ವಿದ್ಯಾರ್ಥಿಗಳು ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹಲಿಂಗರಾಜ ಕಾಲೇಜು ವಿದ್ಯಾರ್ಥಿಗಳು ಭೇಟಿ ಜೈಲಿನ ಕಾರ್ಯದ ಮಾಹಿತಿ ಪಡೆದ ಸಮಾಜಶಾಸ್ತ್ರದ ವಿದ್ಯಾರ್ಥಿಗಳುಕಾರಾಗೃಹದ ಅಧೀಕ್ಷಕ ವಿ.ಕೃಷ್ಣ ಮೂರ್ತಿ ಮಾಹಿತಿ ಬೆಳಗಾವಿಯ ಕೆಎಲ್ಇ ಸಂಸ್ಥೆಯ ಲಿಂಗರಾಜ ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಶುಕ್ರವಾರ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದರು. ಅಲ್ಲಿನ ಆಡಳಿತ ವ್ಯವಸ್ಥೆ ಹಾಗೂ ಕೈದಿಗಳ …
Read More »ಆ ಆದೇಶದಲ್ಲಿ ಎಲ್ಲಿಯೂ RSS ಪದ ಬಳಸಿಲ್ಲ: ಸಿಎಂಗೆ ಜಗದೀಶ್ ಶೆಟ್ಟರ್ ತಿರುಗೇಟು
ಧಾರವಾಡ: “ನಾನು ಸಿಎಂ ಆಗಿದ್ದಾಗ ಶಿಕ್ಷಣ ಇಲಾಖೆ ಜಾಗದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಅವಕಾಶವಿಲ್ಲ ಎಂದು ಶಿಕ್ಷಣ ಇಲಾಖೆ ಹೊರಡಿಸಿದ್ದ ಆದೇಶವದು. ಆ ಆದೇಶದಲ್ಲಿ ಎಲ್ಲಿಯೂ ಆರ್ಎಸ್ಎಸ್ ಪದ ಬಳಸಿಲ್ಲ” ಎಂದು ಸಂಸದ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಸಿಎಂ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಶೆಟ್ಟರ್, RSS ವಿಚಾರದಲ್ಲಿ ತಮ್ಮ ಮೇಲಿನ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿ, ” 2013ರಲ್ಲಿ ಬಿಜೆಪಿಯೇ ಈ ಆದೇಶ ಮಾಡಿತ್ತು ಅಂತಾರೆ. ನಾನು ಸಿಎಂ ಇದ್ದಾಗಿನ …
Read More »ದಾವಣಗೆರೆ ಹಾವೇರಿಯಲ್ಲೂ ಮಾಜಿ ಸಂಸದ ರಮೇಶ್ ಕತ್ತಿ ಹೇಳಿಕೆ ಖಂಡಿಸಿ ಪ್ರತಿಭಟನೆ
ದಾವಣಗೆರೆ/ ಹಾವೇರಿ: ಮಾಜಿ ಸಂಸದ ರಮೇಶ್ ಕತ್ತಿ ವಾಲ್ಮೀಕಿ ಸಮಾಜದ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಕನಕ ಗುರುಪೀಠದ ಪ್ರಸನಾನಂದಪುರಿ ಸ್ವಾಮೀಜಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಮೇಶ್ ಕತ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶ್ರೀಗಳು ಸರ್ಕಾರವನ್ನು ಆಗ್ರಹಿಸಿದ್ದಾರೆ. ಅಲ್ಲದೇ ಜಿಲ್ಲಾ ನಾಯಕ ಸಮಾಜದಿಂದ ಬಡಾವಣೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ಬಳಿ ವಾಲ್ಮೀಕಿ ಗುರುಪೀಠದ ಸ್ವಾಮೀಜಿ ಮಾತನಾಡಿ “ಬೆಳಗಾವಿ ಯಲ್ಲಿ …
Read More »
Laxmi News 24×7