ಬೆಂಗಳೂರು: ಕಾರಿನ ಮಿರರ್ ಟಚ್ ಮಾಡಿದ್ದಕ್ಕೆ ಸ್ಕೂಟರನ್ನು ಹಿಂಬಾಲಿಸಿಕೊಂಡು ಬಂದು ಅಪಘಾತವೆಸಗಿ ಯುವಕನೊಬ್ಬನ ಸಾವಿಗೆ ಕಾರಣರಾದ ಆರೋಪದಡಿ ದಂಪತಿಯನ್ನು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜಿಮ್ ತರಬೇತುದಾರನಾಗಿರುವ ಮನೋಜ್ ಕುಮಾರ್ ಹಾಗೂ ಆತನ ಪತ್ನಿ ಆರತಿ ಶರ್ಮಾ ಬಂಧಿತರು. ಅಕ್ಟೋಬರ್ 25 ರಂದು ರಾತ್ರಿ ಜೆ.ಪಿ. ನಗರ 7ನೇ ಹಂತದ ಶ್ರೀರಾಮ ಲೇಔಟ್ ಬಳಿ ಅಪಘಾತವೆಸಗಿದ್ದ ಆರೋಪಿಗಳು, ಸ್ಕೂಟರ್ ಸವಾರ ದರ್ಶನ್ (24)ನ ಸಾವಿಗೆ ಕಾರಣರಾಗಿದ್ದರು. ಮತ್ತೋರ್ವ ಸವಾರ ವರುಣ್ (24) …
Read More »Daily Archives: ಅಕ್ಟೋಬರ್ 29, 2025
ಕನ್ಹೇರಿ ಶ್ರೀ ನಿರ್ಬಂಧ ವಿಚಾರ ವಿಜಯಪುರ ಜಿಲ್ಲಾಡಳಿತದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂ
ಕನ್ಹೇರಿ ಶ್ರೀ ನಿರ್ಬಂಧ ವಿಚಾರ ವಿಜಯಪುರ ಜಿಲ್ಲಾಡಳಿತದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂ ವಿಜಯಪುರ ಜಿಲ್ಲೆಗೆ ನೆರೆ ರಾಜ್ಯ ಮಹಾರಾಷ್ಟ್ರ ರಾಜ್ಯದ ಕನ್ನೇರಿ ಶ್ರೀ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನೇರಿ ಸ್ವಾಮೀಜಿ ಪರ ವಕೀಲರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆದ್ರೆ ಸುಪ್ರೀಂ ಕೋರ್ಟ್ ವಿಜಯಪುರ ಜಿಲ್ಲಾಡಳಿತದ ನಿರ್ಧಾರ ಎತ್ತಿ ಹಿಡಿದಿದೆ. ಕನ್ನೇರಿ ಶ್ರೀಗಳಿಗೆ ಮತ್ತೆ ಹಿನ್ನಡೆಯಾಗಿದೆ. ಅಕ್ಟೋಬರ್ 16 ರಿಂದ ಡಿಸೆಂಬರ್ 14ರ ವರೆಗೆ 2 ತಿಂಗಳು ಕನ್ನೇರಿ ಶ್ರೀಗಳಿಗೆ ವಿಜಯಪುರ …
Read More »ಸುರಂಗ ಮಾರ್ಗಕ್ಕಾಗಿ ಲಾಲ್ಬಾಗ್ನಲ್ಲಿ ಮರಗಳನ್ನು ಕಡಿಯುವುದಿಲ್ಲ: ಹೈಕೋರ್ಟ್ಗೆ ಸರ್ಕಾರದ ಸ್ಪಷ್ಟನೆ
ಬೆಂಗಳೂರು : ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆ ನಿವಾರಣೆಗಾಗಿ ನಗರದ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ವರೆಗಿನ ಉದ್ದೇಶಿತ ಜೋಡಿ ಸುರಂಗ ಮಾರ್ಗದ ಯೋಜನೆಗಾಗಿ ಸಸ್ಯಕಾಶಿ ಲಾಲ್ಬಾಗ್ನಲ್ಲಿ ಮರಗಳನ್ನು ಕಡಿಯುವುದಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ. ಸುರಂಗ ಮಾರ್ಗದ ಟೆಂಡರ್ ರದ್ದು ಕೋರಿ ನಟ ಪ್ರಕಾಶ್ ಬೆಳವಾಡಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ. ಎಂ. ಪೂಣಚ್ಚ ಅವರ ನೇತೃತ್ವದ ವಿಭಾಗೀಯ …
Read More »“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ”
ಬೆಂಗಳೂರು: “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ” ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಕೆ.ಆರ್.ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಬಿಎ ಪೂರ್ವಭಾವಿ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ವಿಷಯ ಸ್ಪಷ್ಟಪಡಿಸಿದರು. “ಕಳೆದ ಮೂರ್ನಾಲ್ಕು ದಿನಗಳಲ್ಲಿ ಬಹಳಷ್ಟು ರಾಜಕೀಯ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ನಾವೆಲ್ಲಾ ಕಾಂಗ್ರೆಸ್ ಪಕ್ಷದ …
Read More »ಆಂತರಿಕ ಕಲಹ ಮುಂದುವರೆದ್ರೆ ಈ ಸರ್ಕಾರ ಇರುವುದಿಲ್ಲ, 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಕೂಡ ಇರಲ್ಲಾ:,ಶೆಟ್ಟರ್
ಚಾಮರಾಜನಗರ: ಇದೇ ರೀತಿ ಆಂತರಿಕ ಕಲಹ ಮುಂದುವರೆದ್ರೆ ಈ ಸರ್ಕಾರ ಇರುವುದಿಲ್ಲ, 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಕೂಡ ಇರಲ್ಲಾ, ಸರ್ಕಾರನೂ ಇರಲ್ಲಾ ಎಂದು ಮಾಜಿ ಸಿಎಂ, ಬೆಳಗಾವಿ ಹಾಲಿ ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ಆಂತರಿಕ ಫೈಟ್ ಜೋರಿದೆ, ಎರಡೂವರೆ ವರ್ಷ ಅಧಿಕಾರ ಹಂಚಿಕೆಗೆ ಸಿದ್ದರಾಮಯ್ಯ ಒಪ್ಪಿಗೆ ಕೊಟ್ಟೇ ಬಂದಿದ್ದಾರೆ. …
Read More »ಸ್ಪೀಕರ್ ಖಾದರ್ ಅವಧಿಯಲ್ಲಿ ಭ್ರಷ್ಟಾಚಾರ ಆರೋಪ: ನ್ಯಾಯಾಂಗ ತನಿಖೆಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹ
ಬೆಂಗಳೂರು: ವಿಧಾನಸಭೆಯ ಪ್ರಧಾನ ಬಾಗಿಲಿಗೆ ರೋಸ್ ವುಡ್ ಮರದ ಕೆತ್ತನೆ ಚೌಕಟ್ಟು, ಶಾಸಕರ ಭವನದ ಕೊಠಡಿಗಳಿಗೆ ಸ್ಮಾರ್ಟ್ ಡೋರ್ ಒಳಗೊಂಡಂತೆ ಇನ್ನಿತರ ಸೌಲಭ್ಯ ಕಲ್ಪಿಸಲು ಸ್ಪೀಕರ್ ಯು.ಟಿ.ಖಾದರ್ ಅನಗತ್ಯವಾಗಿ ಟೆಂಡರ್ ಕರೆದು ದುಂದುವೆಚ್ಚ ಮಾಡಿರುವ ಆರೋಪಗಳ ಕುರಿತು ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕೆಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಸ್ಪೀಕರ್ ಸ್ಥಾನದ ವಿರುದ್ಧ ಬಂದಿರುವ ಆರೋಪಗಳಿಂದ …
Read More »
Laxmi News 24×7