Breaking News

Daily Archives: ಅಕ್ಟೋಬರ್ 31, 2025

ಹುಬ್ಬಳ್ಳಿ–ರಾಮನಾಥಪುರಂ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲಿನ ಸಂಚಾರ ಅವಧಿ ವಿಸ್ತರಣೆ

ಹುಬ್ಬಳ್ಳಿ: ರೈಲ್ವೆ ಮಂಡಳಿಯು ರೈಲು ಸಂಖ್ಯೆ 07355/07356 ಎಸ್ಎಸ್ಎಸ್ ಹುಬ್ಬಳ್ಳಿ–ರಾಮನಾಥಪುರಂ–ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲುಗಳ ಸಂಚಾರದ ಅವಧಿಯನ್ನು ವಿಸ್ತರಿಸಲು ಅನುಮೋದನೆ ನೀಡಿದೆ. ರೈಲು ಸಂಖ್ಯೆ 07355 ಎಸ್ಎಸ್ಎಸ್ ಹುಬ್ಬಳ್ಳಿ–ರಾಮನಾಥಪುರಂ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಈ ಮೊದಲು ಅಕ್ಟೋಬರ್ 25, 2025ರ ವರೆಗೆ ಓಡಿಸಲು ಸೂಚಿಸಲಾಗಿತ್ತು. ಈಗ, ಇದು ನವೆಂಬರ್ 1, 2025 ರಿಂದ ನವೆಂಬರ್ 29, 2025 ರ ವರೆಗೆ ತನ್ನ ಸೇವೆಯನ್ನು …

Read More »

ಪ್ರವಾಹದಿಂದ ಹಾನಿಗೊಳಗಾದ ಪ್ರದೇಶದಲ್ಲಿ ಮೂಲಸೌಕರ್ಯ ಪುನರ್ ನಿರ್ಮಾಣ: 1545.23 ಕೋಟಿ ಅನುದಾನ ಕೋರಿ ಕೇಂದ್ರಕ್ಕೆ ಪತ್ರ

ಬೆಂಗಳೂರು: ನೈಋತ್ಯ ಮುಂಗಾರು ಅವಧಿಯಲ್ಲಿ ಭಾರೀ ಮಳೆಯಿಂದಾಗಿ ನದಿಗಳ ಪ್ರವಾಹ ಉಂಟಾಗಿ ಹಾನಿಗೊಳಗಾದ ಮೂಲಸೌಕರ್ಯಗಳ ಪುನರ್ ನಿರ್ಮಾಣಕ್ಕಾಗಿ 1545.23 ಕೋಟಿ ರೂ. ಅನುದಾನ ನೀಡುವಂತೆ ಕೋರಿ ಕೇಂದ್ರದ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಗೆ (ಎನ್​ಡಿಆರ್​ಎಫ್) ಪತ್ರ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮಳೆಯಿಂದಾಗಿ ಪ್ರವಾಹ ಸೃಷ್ಟಿಯಾಗಿವೆ. ಬೆಳೆ ನಾಶವಲ್ಲದೇ ಹಲವು ಜಿಲ್ಲೆಗಳಲ್ಲಿ ರಸ್ತೆಗಳು ಬಿರುಕು ಮೂಡಿ ಸುಗಮ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಚೆಕ್ ಡ್ಯಾಂ ಹಾಗೂ ಮನೆಗಳು ಇನ್ನಿತರ ಮೂಲಸೌಕರ್ಯಗಳಿಗೆ ಅಡಚಣೆಯಾಗಿದೆ. …

Read More »

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: 11 ಆರೋಪಿಗಳ ವಿರುದ್ಧ ಚಾರ್ಜ್​​ಶೀಟ್

ಬೆಂಗಳೂರು: ದಕ್ಷಿಣ ಕನ್ನಡದ ಬಜ್ಪೆ ಬಳಿ ನಡೆದಿದ್ದ‌ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಬಂಧಿತ 11 ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್​ಐಎ) ಬುಧವಾರ ಚಾರ್ಜ್ ​​ಶೀಟ್ ಸಲ್ಲಿಸಿದೆ. ಬಂಧಿತ ಆರೋಪಿಗಳಾದ ಅಬ್ದುಲ್ ಸಫ್ವಾನ್, ನಿಯಾಜ್, ಮೊಹಮ್ಮದ್, ನೌಶಾದ್, ಆದಿಲ್ ಮಹರೂಫ್, ಕಲಂದರ್ ಶಫಿ, ಎಂ.ನಾಗರಾಜ, ರಂಜಿತ್, ಮಹಮ್ಮದ್ ರಿಜ್ವಾನ್, ಅಜರುದ್ದೀನ್ ಮತ್ತು ಅಬ್ದುಲ್ ಖಾದರ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ 1967, ಭಾರತೀಯ ನ್ಯಾಯ …

Read More »

ಐಟಿ ಉದ್ಯೋಗಿಗಳ ಕನ್ನಡ ಪ್ರೇಮ

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ಸಂಭ್ರಮಕ್ಕೆ ಗಡಿಜಿಲ್ಲೆ ಬೆಳಗಾವಿಯಲ್ಲಿ ಸಂಭ್ರಮ ಕಳೆಗಟ್ಟಿದೆ. ಈ ಬಾರಿಯ ರಾಜ್ಯೋತ್ಸವದಲ್ಲಿ ಇಲ್ಲಿನ ಬೆಳಗಾವಿ ಕೆಎ ಪುಟ ತಂಡದ “ಸೋತ್ರು ಗೆದ್ರು ಆರ್ ಸಿಬಿ ಬಿಡಾಂಗಿಲ್ಲಾ, ಜೀವಾ ಹೋದ್ರು ಬೆಳಗಾವಿ ಕೊಡಾಂಗಿಲ್ಲ” ಬರಹದ ಟೀಶರ್ಟ್ ಗಳು ಗಮನ ಸೆಳೆಯುತ್ತಿವೆ. ಕಳೆದ 10 ವರ್ಷಗಳಿಂದ ಈ ಪುಟ ಗಡಿಯಲ್ಲಿ ಕನ್ನಡದ ಕೈಂಕರ್ಯಕ್ಕೆ ಪಣ ತೊಟ್ಟಿದೆ. ಸಾಮಾಜಿಕ ಜಾಲತಾಣದಲ್ಲಿ ಸಂಚಲನವನ್ನೇ ಸೃಷ್ಟಿಸಿದೆ. ಹೌದು, ಒಂದೆಡೆ ಬೆಳಗಾವಿಯಲ್ಲಿ ಕನ್ನಡ ಗಟ್ಟಿಗೊಳಿಸಲು ವಿವಿಧ …

Read More »