Breaking News

Daily Archives: ನವೆಂಬರ್ 13, 2025

ಹುಲಿ ದಾಳಿ ಮಾಡಿದರೂ ಮನುಷ್ಯನನ್ನು ತಿನ್ನಲ್ಲ: ಕಾರಣ ತಿಳಿಸಿದ ವನ್ಯಜೀವಿ ಛಾಯಾಗ್ರಾಹಕ

ಮೈಸೂರು: ಹುಲಿ ದಾಳಿಯಿಂದಾಗುತ್ತಿರುವ ಪ್ರಾಣ ಹಾನಿ ಹಾಗೂ ಇತರ ಹಾನಿಗಳನ್ನು ತಡೆಯುವ ನಿಟ್ಟಿನಲ್ಲಿ ಬಂಡೀಪುರ ಹಾಗೂ ನಾಗರಹೊಳೆಯ ವ್ಯಾಪ್ತಿಯ ವನ್ಯಜೀವಿ ಸಫಾರಿಯನ್ನು ರಾಜ್ಯ ಸರ್ಕಾರ ಬಂದ್ ಮಾಡಿದೆ. ಈ ಬಗ್ಗೆ ವನ್ಯಜೀವಿ ಛಾಯಾಗ್ರಾಹಕರು ಹಾಗೂ ರೈತ ಮುಖಂಡರು  ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ವನ್ಯಜೀವಿ ಛಾಯಾಗ್ರಾಹಕ ಮಧುಸೂದನ್ ಮಾತನಾಡಿ, “ಹುಲಿ ದಾಳಿಗೆ ತುಂಬಾ ಕಾರಣಗಳಿರುತ್ತವೆ. ಒಂದು ಹುಲಿಗಳ ಸಂಖ್ಯೆ ಅಧಿಕವಾಗಿದೆ. ಹಾಗೆಯೇ ಕಾಡಿನೊಳಗೆ ಅವುಗಳ ಹೊಡೆದಾಟ ಮತ್ತು ಕೆಲ ಗಾಯಗೊಂಡ ಹುಲಿಗಳು ಕಾಡಂಚಿನ …

Read More »

ಬೆಳಗಾವಿ ಎಸ್ಪಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ.

ಬೆಳಗಾವಿ ಎಸ್ಪಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ. ಎಸ್ಪಿ ಕಚೇರಿಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು ಪೊಲೀಸರ ವಶಕ್ಕೆ, ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜ್ಯಾತಿಥ್ಯ ಖಂಡಿಸಿ ಬಿಜೆಪಿ ಪ್ರತಿಭಟನೆಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಎಸ್ಪಿ ಕಚೇರಿ ಮುತ್ತಿಗೆಗೆ ಬಿಜೆಪಿ ಕಾರ್ಯಕರ್ತರ ಯತ್ನ ಗೃಹ ಸಚಿವರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಈ ವೇಳೆ ಎಸ್ಪಿ ಕಚೇರಿ ಮುತ್ತಿಗೆಗೆ ನುಗ್ಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರ ವಶಕ್ಕೆ ಪಡೆದ …

Read More »

ತಂದೆಯನ್ನ ಒನಕೆಯಿಂದ ಹೊಡೆದು ಕೊಂದ ಮಗ

ವಿಜಯನಗರ: ತಂದೆ-ತಾಯಿ ಗಲಾಟೆ ಬಿಡಿಸುವ ವೇಳೆ ಕೆಳಗೆ ಬಿದ್ದ ತಂದೆಗೆ ಒನಕೆಯಿಂದ ಹೊಡೆದು ಮಗನೇ ಹತ್ಯೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಮಾಲವಿ ಗ್ರಾಮದಲ್ಲಿ ನಡೆದಿದೆ. ಜವಳಿ ಶಿವಲಿಂಗಪ್ಪ (60) ಹತ್ಯೆಯಾದ ವ್ಯಕ್ತಿ, ಶಂಕ್ರಪ್ಪ ಕೊಲೆ ಆರೋಪಿ ಆಗಿದ್ದು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಘಟನೆ ಬಗ್ಗೆ ಮೃತನ ಪತ್ನಿ ಗಂಗಮ್ಮ ಹೆಚ್​ಬಿ ಹಳ್ಳಿ ಪೊಲೀಸ್​​​ ಠಾಣೆಗೆ ದೂರು ನೀಡಿದ್ದರು.ಘಟನೆ ಬಗ್ಗೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಎಸ್. …

Read More »

ವಿಶ್ವ ದಾಖಲೆ ಸೇರಿದ ಮಿಷ್ಠಾನ ನೈವೇದ್ಯ

ಮೈಸೂರು: ಕಷ್ಟ ಭಂಜನ (ಕಷ್ಟನಾಶಕ) ಭೈರವ ದೇವರಿಗೆ 2025ನೇ ವರ್ಷದ ಪ್ರಕಾರದ ಮಿಷ್ಠಾನ ನೈವೇದ್ಯ ಸಮರ್ಪಣೆಯು ವಿಶ್ವ ದಾಖಲೆಯ ಪುಟ ಸೇರಿತು. ನಗರದ ಪುರಭವನ ಆವರಣದಲ್ಲಿ ಭೈರವ ಜನ್ಮಾಷ್ಟಮಿ ಪ್ರಯುಕ್ತ ನವೆಂಬರ್​ 5 ರಿಂದ 12 ರವರೆಗೆ ಕೃಷ್ಣಗಿರಿ ಪೀಠಾಧಿಪತಿ ಶ್ರೀ 1008 ಆಚಾರ್ಯ ವಸಂತ ವಿಜಯಾನಂದ ಗಿರಿಜಿ ಮಹಾರಾಜ್ ಅವರ ಸಾನ್ನಿಧ್ಯದಲ್ಲಿ ಕಷ್ಟ ಭಂಜನ ಭೈರವ ಜನ್ಮಾಷ್ಟಮಿ ಕಾರ್ಯಕ್ರಮ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬುಧವಾರ ಸಂಜೆ 2025 ಪ್ರಕಾರದ ಮಿಷ್ಠಾನ …

Read More »

ಕಬ್ಬು ಬೆಳೆಗಾರರ ಸಮಸ್ಯೆಗೆ ರಾಜ್ಯ ಸರ್ಕಾರವೇ ನೇರ ಹೊಣೆ: ಸಿಎಂಗೆ ಜೋಶಿ ಬಹಿರಂಗ ಪತ್ರ

ನವದೆಹಲಿ/ಹುಬ್ಬಳ್ಳಿ: ಕರ್ನಾಟಕದ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತಂತೆ ರಾಜ್ಯ ಸರ್ಕಾರದ ಲೋಪಗಳ ಬಗ್ಗೆ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಜೊತೆಗೆ, ಕೇಂದ್ರದ ಸುಧಾರಣಾ ಕ್ರಮಗಳನ್ನು ಮರೆಮಾಚುತ್ತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ. ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ಕೇಂದ್ರವು ಬೆಲೆ ಸ್ಥಿರತೆ ಮತ್ತು ಮಾರುಕಟ್ಟೆ ವೈವಿಧ್ಯತೆ ಎರಡನ್ನೂ ಉತ್ತಮವಾಗಿಸಿದೆ. ಆದರೆ ಪಾವತಿ ಜಾರಿ, …

Read More »