ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಯ ಭಾಗಶಃ ರಸ್ತೆಗಳಲ್ಲಿ ತಗ್ಗು ಗುಂಡಿಗಳು ಬಿದ್ದಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಮತ್ತೊಂದೆಡೆ ನಿರ್ಮಾಣ ಹಂತದಲ್ಲಿರುವ ಬೃಹತ್ ಕಾಮಗಾರಿಗಳಿಂದ ರಸ್ತೆ ಸಂಚಾರ ಅಯೋಮಯವಾಗಿದ್ದು, ಅದರಿಂದ ಏಳುವ ಧೂಳು ಅವಳಿ ನಗರದ ಜನತೆಯನ್ನು ಹೈರಾಣು ಮಾಡಿದೆ. ತಗ್ಗು-ಗುಂಡಿ ಹಾಗೂ ಧೂಳಿನ ಕಿರಿಕಿರಿಗೆ ಸ್ಥಳೀಯರು ಹಿಡಿಶಾಪ ಹಾಕುತ್ತಿದ್ದಾರೆ. ಓಡಾಡುವುದಕ್ಕೆ ಸಾಧ್ಯವೇ ಇಲ್ಲದಷ್ಟು ಅವಳಿ ನಗರದ ಭಾಗಶಃ ರಸ್ತೆಗಳು ಹದಗೆಟ್ಟಿದ್ದು, ಹೇಗೆ ಮತ್ತು ಎಲ್ಲಿಂದ ರಸ್ತೆಯನ್ನು ಸರಿಪಡಿಸುವುದೆಂದು ಗೊತ್ತಾಗದಂತಹ ಸ್ಥಿತಿ ನಿರ್ಮಾಣವಾಗಿದೆ. …
Read More »
Laxmi News 24×7