Breaking News

Daily Archives: ನವೆಂಬರ್ 24, 2025

‘ಸುವರ್ಣ ವಿಧಾನಸೌಧದ ಮುಂದೆ ಬಸವಣ್ಣನ ಮೂರ್ತಿ ಸ್ಥಾಪಿಸಿ, ಅಧಿವೇಶನದಲ್ಲಿ ಘೋಷಿಸಿ’

ಬೆಳಗಾವಿ: ಅನುಭವ ಮಂಟಪದ ಮೂಲಕ ಜಗತ್ತಿನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮುನ್ನುಡಿ‌ ಬರೆದವರು ವಿಶ್ವಗುರು ಬಸವಣ್ಣ. ಭಾರತದ ಸಂವಿಧಾನದಲ್ಲಿರುವ ಬಹುತೇಕ ಅಂಶಗಳು ಬಸವಾದಿ ಶರಣರ ವಿಚಾರಗಳೇ ಆಗಿವೆ. ಅಂತಹ ಬಸವಣ್ಣನವರ ಪುತ್ಥಳಿಯನ್ನು ಉತ್ತರ ಕರ್ನಾಟಕದ ಶಕ್ತಿ ಸೌಧ ಸುವರ್ಣ ವಿಧಾನಸೌಧದ ಮುಂದೆ ಪ್ರತಿಷ್ಠಾಪಿಸಬೇಕೆಂಬ ಒತ್ತಾಯ ಕೇಳಿ ಬಂದಿದೆ. ಸುವರ್ಣ ವಿಧಾನಸೌಧದ ಮುಂಭಾಗ ಈಗಾಗಲೇ ವೀರರಾಣಿ ಕಿತ್ತೂರು ಚನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ‌ ರಾಯಣ್ಣ, ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮೂರ್ತಿಗಳನ್ನು ಬಸವರಾಜ ಬೊಮ್ಮಾಯಿ ಅವರ ಸರ್ಕಾರದ …

Read More »

ಆನ್‌ಲೈನ್‌ನಲ್ಲಿ ಅಧಿಕ ಲಾಭದ ಆಸೆ ತೋರಿಸಿ ₹46.5 ಲಕ್ಷ ವಂಚನೆ; ಬ್ಯಾಂಕ್ ಮ್ಯಾನೇಜರ್​ಗಳು ಸೇರಿ ನಾಲ್ವರ ಬಂಧನ

ಕಾರವಾರ: ಆನ್‌ಲೈನ್‌ನಲ್ಲಿ ಅತಿ ಹೆಚ್ಚು ಹಣ ಗಳಿಸಬಹುದು ಎಂದು ನಂಬಿಸಿ, ಫಾರೆಕ್ಸ್‌ (FOREX) ಟ್ರೇಡಿಂಗ್ ಆ್ಯಪ್ ಮೂಲಕ ಹೊನ್ನಾವರದ ಉದ್ಯಮಿಯೊಬ್ಬರಿಗೆ ಬರೋಬ್ಬರಿ 46.50 ಲಕ್ಷ ರೂಪಾಯಿ ವಂಚಿಸಿದ ಅಂತಾರಾಜ್ಯ ವಂಚಕರ ಜಾಲವನ್ನು ಉತ್ತರ ಕನ್ನಡದ ಸಿಇಎನ್ (CEN) ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಬ್ಯಾಂಕ್ ಉದ್ಯೋಗಿಗಳು ಸೇರಿದಂತೆ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಬಗ್ಗೆ ಸಿಇಎನ್​ ಠಾಣೆ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಹೊನ್ನಾವರದ ಪ್ರಭಾತನಗರದ ನಿವಾಸಿ …

Read More »