Breaking News

Monthly Archives: ನವೆಂಬರ್ 2025

ಪ್ರಸಕ್ತ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕ, ಬಾಲಕಿಯರ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಯನ್ನು ನ.26 ರಿಂದ ಮಾಲಿನಿ ಸಿಟಿ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಎಸ್.ಎನ್.ದೇಸಾಯಿ ಹೇಳಿದರು.

ಬೆಳಗಾವಿ :ಪ್ರಸಕ್ತ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕ, ಬಾಲಕಿಯರ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಯನ್ನು ನ.26 ರಿಂದ ಮಾಲಿನಿ ಸಿಟಿ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಎಸ್.ಎನ್.ದೇಸಾಯಿ ಹೇಳಿದರು. ಸೋಮವಾರ ಬೆಳಗಾವಿ ವಾರ್ತಾ ಇಲಾಖೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ಕ್ರೀಡಾಕೂಟವನ್ನು ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ, ಬೆಳಗಾವಿ ಮತ್ತು ಗೋವಿಂದರಾಮ ಸೆಕ್ಟೇರಿಯಾ ವಿಜ್ಞಾನ ಪದವಿ ಪೂರ್ವ ಕಾಲೇಜು, ಟಿಳಕವಾಡಿ, ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಸ್ಟೇಟಿಂಗ್ ಸ್ಪರ್ಧೆಯನ್ನು ಎಸ್.ಜಿ.ಎಫ್.ಐ …

Read More »

ರಾಣಿ ಚನ್ನಮ್ಮ ವಿವಿಯ 14ನೇ ಘಟಿಕೋತ್ಸವವನ್ನು ನ.25 ರಂದು ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಜರುಗಲಿದ್ದು, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡಲಿದ್ದೇವೆ ಎಂದು ರಾಣಿ ಚನ್ನಮ್ಮ‌ ವಿವಿಯ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ್ ತಿಳಿಸಿದರು.

ಬೆಳಗಾವಿ :ರಾಣಿ ಚನ್ನಮ್ಮ ವಿವಿಯ 14ನೇ ಘಟಿಕೋತ್ಸವವನ್ನು ನ.25 ರಂದು ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಜರುಗಲಿದ್ದು, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡಲಿದ್ದೇವೆ ಎಂದು ರಾಣಿ ಚನ್ನಮ್ಮ‌ ವಿವಿಯ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ್ ತಿಳಿಸಿದರು. ಸೋಮವಾರ ಬೆಳಗಾವಿ ವಾರ್ತಾ ಇಲಾಖೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪರಿಸರ ಮತ್ತು ಗ್ರಾಮೀಣಾಭಿವೃದ್ಧಿ ಸಮಾಜ ಸೇವೆಯಲ್ಲಿ ಶಿವಾಜಿ ಕಾಣಿಕರ, ಶಿಕ್ಷಣ ಮತ್ತು ಸಮಾಜ ಸೇವೆಯಲ್ಲಿ ಸುರೇಂದ್ರ ದೊಡ್ಡಣವರ ಹಾಗೂ ಸಾಹಿತ್ಯ …

Read More »

ವಂದೇ ಭಾರತ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು

ಬೆಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿದ ಪರಿಣಾಮ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ಚಿಕ್ಕಬಾಣಾವರ ನಿಲ್ದಾಣದ ಬಳಿ ಸಂಭವಿಸಿದೆ. ವಿದ್ಯಾರ್ಥಿ ಜಸ್ಟಿನ್ ಜೋಸೆಫ್ (21) ಹಾಗೂ ವಿದ್ಯಾರ್ಥಿನಿ ಸ್ಟೆರಿನ್ ಎಲ್ಜಾ ಸಜಿ (19) ಎಂಬವರೇ ರೈಲಿಗೆ ಸಿಲುಕಿ ಸಾವನ್ನಪ್ಪಿದವರು. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಬೆಂಗಳೂರು ಗ್ರಾಮಾಂತರ ರೈಲ್ವೇ ಠಾಣೆ ಪೊಲೀಸರು ಮೃತರ ಪೋಷಕರಿಗೆ ಮಾಹಿತಿ ರವಾನಿಸಿದ್ದಾರೆ. ಕೇರಳದ ಪಟ್ಟನಂತಿಟ್ಟ ಮೂಲದವರಾದ ಇಬ್ಬರೂ …

Read More »

ಕಳಸೂರು ಬ್ರಿಡ್ಜ್​​​​​​ ಕಂ ಬಾಂದಾರಕ್ಕೆ ಕ್ರಸ್ಟ್​ಗೇಟ್​ ಹಾಕುವ ಕಾರ್ಯ ಪೂರ್ಣ​:​ ರೈತರ ಹೋರಾಟಕ್ಕೆ ಜಯ

ಹಾವೇರಿ: ಜಿಲ್ಲೆಯ ಸವಣೂರು ತಾಲೂಕು ಕಳಸೂರು ಸೇರಿದಂತೆ ಸುತ್ತಮುತ್ತಲ ರೈತರ ಹೋರಾಟಕ್ಕೆ ಜಯಸಿಕ್ಕಿದೆ. ಕಳಸೂರು ಬ್ರಿಡ್ಜ್​​​​​​ ಕಂ ಬಾಂದಾರಕ್ಕೆ ಕ್ರಸ್ಟ್​ಗೇಟ್​ಗೆ ಅಳವಡಿಸಲು ನೀರಾವರಿ ಇಲಾಖೆ ಗೇಟ್‌ಗಳನ್ನು ನೀಡಿದೆ. ಇಲಾಖೆ 132 ಗೇಟ್‌ಗಳನ್ನು ನೀಡಿದ್ದು ರೈತರು ಲೇಬರ್​ಗಳ ಸಹಾಯದಿಂದ ಕ್ರಸ್ಟ್​ಗೇಟ್​ಗಳನ್ನು ಹಾಕುವ ಕಾರ್ಯ ಪೂರ್ಣಗೊಳಿಸಿದ್ದಾರೆ. ಪ್ರತಿಯೊಂದು ಹಂತದಲ್ಲಿ 44 ಗೇಟ್​ಗಳಂತೆ ಮೂರು ಹಂತದಲ್ಲಿ ಬಾಂದಾರಕ್ಕೆ ಸುಮಾರು 132 ಗೇಟ್​ ಅಳವಡಿಸಲಾಗಿದೆ. ರೈತರೇ ನೂತನ ಗೇಟ್‌ಗಳಿಗೆ ಬಣ್ಣ ಬಳಿದು ವೈಸರ್​ ರಬ್ಬರ್ ಹಾಕಿ ಗೋಣಿಚೀಲದ …

Read More »

ಕಾಂಗ್ರೆಸ್‌ ಪಕ್ಷದವರಿಗೆ ತಮ್ಮದೇ ಶಾಸಕರನ್ನು ಖರೀದಿಸುವ ಪರಿಸ್ಥಿತಿ ಉದ್ಭವ: ಛಲವಾದಿ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಪಟ್ಟಕ್ಕಾಗಿ ಕಿತ್ತಾಟಕ್ಕಿಂತಲೂ ಹೆಚ್ಚಾಗಿ ಆಂತರಿಕವಾಗಿ ಅವರದೇ ಎಂಎಲ್‌ಎಗಳ ವ್ಯಾಪಾರ ನಡೆಯುತ್ತಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದ್ದಾರೆ. ಬೆಂಗಳೂರಿನ ಜಿಕೆವಿಕೆ ಕ್ಯಾಂಪಸ್‌ನಲ್ಲಿ ಇಂದು ನಡೆದ ಸಂಸದ್ ಕ್ರೀಡಾ ಮಹೋತ್ಸವ ಸಮಾರೋಪ ಸಮಾರಂಭದ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದವರಿಗೆ ತಮ್ಮದೇ ಪಕ್ಷದ ಶಾಸಕರನ್ನು ಖರೀದಿಸುವ ಪರಿಸ್ಥಿತಿ ಉದ್ಭವವಾಗಿದೆ ಎಂದರು. ಮೊದಲು ಒಬ್ಬೊಬ್ಬ ಶಾಸಕರನ್ನು ಖರೀದಿಸಲು 50 ಕೋಟಿ ರೂ ಕೊಡುತ್ತಿದ್ದರು. ಈಗ …

Read More »

‘ಸುವರ್ಣ ವಿಧಾನಸೌಧದ ಮುಂದೆ ಬಸವಣ್ಣನ ಮೂರ್ತಿ ಸ್ಥಾಪಿಸಿ, ಅಧಿವೇಶನದಲ್ಲಿ ಘೋಷಿಸಿ’

ಬೆಳಗಾವಿ: ಅನುಭವ ಮಂಟಪದ ಮೂಲಕ ಜಗತ್ತಿನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮುನ್ನುಡಿ‌ ಬರೆದವರು ವಿಶ್ವಗುರು ಬಸವಣ್ಣ. ಭಾರತದ ಸಂವಿಧಾನದಲ್ಲಿರುವ ಬಹುತೇಕ ಅಂಶಗಳು ಬಸವಾದಿ ಶರಣರ ವಿಚಾರಗಳೇ ಆಗಿವೆ. ಅಂತಹ ಬಸವಣ್ಣನವರ ಪುತ್ಥಳಿಯನ್ನು ಉತ್ತರ ಕರ್ನಾಟಕದ ಶಕ್ತಿ ಸೌಧ ಸುವರ್ಣ ವಿಧಾನಸೌಧದ ಮುಂದೆ ಪ್ರತಿಷ್ಠಾಪಿಸಬೇಕೆಂಬ ಒತ್ತಾಯ ಕೇಳಿ ಬಂದಿದೆ. ಸುವರ್ಣ ವಿಧಾನಸೌಧದ ಮುಂಭಾಗ ಈಗಾಗಲೇ ವೀರರಾಣಿ ಕಿತ್ತೂರು ಚನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ‌ ರಾಯಣ್ಣ, ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮೂರ್ತಿಗಳನ್ನು ಬಸವರಾಜ ಬೊಮ್ಮಾಯಿ ಅವರ ಸರ್ಕಾರದ …

Read More »

ಆನ್‌ಲೈನ್‌ನಲ್ಲಿ ಅಧಿಕ ಲಾಭದ ಆಸೆ ತೋರಿಸಿ ₹46.5 ಲಕ್ಷ ವಂಚನೆ; ಬ್ಯಾಂಕ್ ಮ್ಯಾನೇಜರ್​ಗಳು ಸೇರಿ ನಾಲ್ವರ ಬಂಧನ

ಕಾರವಾರ: ಆನ್‌ಲೈನ್‌ನಲ್ಲಿ ಅತಿ ಹೆಚ್ಚು ಹಣ ಗಳಿಸಬಹುದು ಎಂದು ನಂಬಿಸಿ, ಫಾರೆಕ್ಸ್‌ (FOREX) ಟ್ರೇಡಿಂಗ್ ಆ್ಯಪ್ ಮೂಲಕ ಹೊನ್ನಾವರದ ಉದ್ಯಮಿಯೊಬ್ಬರಿಗೆ ಬರೋಬ್ಬರಿ 46.50 ಲಕ್ಷ ರೂಪಾಯಿ ವಂಚಿಸಿದ ಅಂತಾರಾಜ್ಯ ವಂಚಕರ ಜಾಲವನ್ನು ಉತ್ತರ ಕನ್ನಡದ ಸಿಇಎನ್ (CEN) ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಬ್ಯಾಂಕ್ ಉದ್ಯೋಗಿಗಳು ಸೇರಿದಂತೆ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಬಗ್ಗೆ ಸಿಇಎನ್​ ಠಾಣೆ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಹೊನ್ನಾವರದ ಪ್ರಭಾತನಗರದ ನಿವಾಸಿ …

Read More »

ನನ್ನಿಂದಲೇ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ’ ಅನ್ನೋದನ್ನು ನಾನು ಒಪ್ಪಲ್ಲ: ಡಿಕೆಶಿಗೆ ಸತೀಶ್​ ಜಾರಕಿಹೊಳಿ ಟಾಂಗ್​

ಬೆಳಗಾವಿ: ಕೆಲವೇ ಜನರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂಬುದನ್ನು ನಾನು ಕೂಡಾ ಒಪ್ಪುವುದಿಲ್ಲ. ನಮಗಿರುವ 1 ಕೋಟಿ 25 ಲಕ್ಷ ಮತದಾರರಿಂದ ನಾವು ಶಾಸಕರು, ಮಂತ್ರಿ ಆಗಿದ್ದೇವೆ. ಹಾಗಾಗಿ, ನಮಗೆ ಇತಿಮಿತಿ ಇರಬೇಕು. ಎಲ್ಲವೂ ನನ್ನಿಂದಲೇ ಆಗಿದೆ ಎನ್ನುವುದು ಬಹಳ ತಪ್ಪು ಎಂದು ಪರೋಕ್ಷವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್​ಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ಕೊಟ್ಟರು. ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ಅಧಿಕಾರಕ್ಕೆ ಬರಲು ಬಹಳಷ್ಟು …

Read More »

ಭಗವದ್ಗೀತೆ ಜೀವನಕ್ಕೆ ಮಾರ್ಗದರ್ಶನ ಮಾಡುವ ಗ್ರಂಥ : ವಿನೋದ ದೇಶಪಾಂಡೆ

ಬೆಳಗಾವಿ : ಭಗವದ್ಗೀತೆ ಪ್ರತಿಯೊಬ್ಬರ ಜೀವನಕ್ಕೆ, ಇಡೀ ಮಾನವ ಕುಲಕ್ಕೆ ಮಾರ್ಗದರ್ಶನ ಮಾಡುವ ಗ್ರಂಥ ಎಂದು ಕರಿಯರ್ ಎಕ್ಸೆಲ್ ನಿರ್ದೇಶಕ, ನಿವೃತ್ತ ಪ್ರಾಧ್ಯಾಪಕ ವಿನೋಧ ದೇಶಪಾಂಡೆ ಹೇಳಿದ್ದಾರೆ. ಇಲ್ಲಿಯ ಸಂತಮೀರಾ ಶಾಲೆಯಲ್ಲಿ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ವತಿಯಿಂದ ಶನಿವಾರ ನಡೆದ ಭಗವದ್ಗೀತೆ ಅಭಿಯಾನದ ಸ್ಫರ್ಧಾ ಕಾರ್ಯಕ್ರಮಗಳ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡುತ್ತಿದ್ದರು. ಭಗವದ್ಗೀತೆ ಬೇರೆಲ್ಲ ಗ್ರಂಥಗಳ ಸಮಾವೇಶ ಇದ್ದಂತೆ. ಅದನ್ನು ಓದಿದರೆ ಎಲ್ಲ ವೇದ, ಪುರಾಣಗಳನ್ನೂ ಓದಿದಂತೆ. ಬದುಕಿನ ದಾರಿದೀಪ …

Read More »

ಪೃಥ್ವಿ ಫೌಂಡೇಶನ್ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭ- ಸಾಧಕರ ಮಹತ್ಕಾರ್ಯ ಗೌರವಿಸುವುದು ಯುವ ಜನಾಂಗಕ್ಕೆ ದಾರಿ ದೀಪ- ಡಾ. ಹೇಮಾವತಿ ಸೋನೋಳ್ಳಿ

ಪೃಥ್ವಿ ಫೌಂಡೇಶನ್ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭ- ಸಾಧಕರ ಮಹತ್ಕಾರ್ಯ ಗೌರವಿಸುವುದು ಯುವ ಜನಾಂಗಕ್ಕೆ ದಾರಿ ದೀಪ- ಡಾ. ಹೇಮಾವತಿ ಸೋನೋಳ್ಳಿ ಬೆಳಗಾವಿ 23-ಸಾಧಕರ ಸುದೀರ್ಘ ಸೇವೆ ಗುರುತಿಸಿ ಅವರನ್ನು ಸತ್ಕರಿಸುವುದು ಪ್ರಸ್ತುತ ಯುವ ಜನಾಂಗಕ್ಕೆ ಮಾರ್ಗದರ್ಶಿಯಾಗುವುದರ ಜೊತೆಗೆ ಅವರ ಸತ್ಕಾರ್ಯಕ್ಕೆ ಇನ್ನಷ್ಟು ಹುರುಪು ಸಿಕ್ಕಂತಾಗುವುದು. ಆ ನಿಟ್ಟಿನಲ್ಲಿ ನಮ್ಮ ಫೌಂಡೇಶನ್ ವತಿಯಿಂದ ಎಲೆ ಮರೆ ಕಾಯಿಯಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವ ಮಹನೀಯರನ್ನು ಗುರುತಿಸಿ ಅವರ ಸೇವೆಯನ್ನ ನೆನೆಯುವ …

Read More »