ವಿದ್ಯಾರ್ಥಿನಿಯರನ್ನು ಸ್ವಂತಖರ್ಚಲ್ಲಿ ಸಂಸತ್ ಕಲಾಪ ವೀಕ್ಷಣೆಗೆ ಕರೆದೊಯ್ಯುವ ಸಂಸದೆ (ಬೆಳಗಾವಿ ಜಿಲ್ಲೆ): ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯ ಶಾಲಾ, ಕಾಲೇಜುಗಳ 15 ವಿದ್ಯಾರ್ಥಿನಿಯರನ್ನು ಸಂಸತ್ ಕಲಾಪ ವೀಕ್ಷಣೆಗಾಗಿ ತಮ್ಮ ಸ್ವಂತ ಖರ್ಚಿನಲ್ಲಿ ವಿಮಾನದ ಮೂಲಕ ಕರೆದೊಯ್ಯಲು ಸಿದ್ಧತೆ ಮಾಡಿಕೊಂಡಿದ್ದಾರೆ. ಡಿಸೆಂಬರ್ 15ರಂದು ಬೆಳಿಗ್ಗೆ 8.45ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಿಂದ ಸಂಸದೆ ಪ್ರಿಯಾಂಕಾ ಮತ್ತು ಎಲ್ಲ ಮಕ್ಕಳು ನವದೆಹಲಿಗೆ ಪ್ರಯಾಣ ಬೆಳೆಸುವರು. 2024-25ನೇ ಸಾಲಿನ …
Read More »Daily Archives: ಡಿಸೆಂಬರ್ 14, 2025
ಪಕ್ಷದ ಹೈಕಮಾಂಡ್ಗೆ ತಮ್ಮ ಬದ್ಧತೆಯನ್ನು ತಿಳಿಸುವ ಮೂಲಕ ಸಿಎಂ ಬದಲಾವಣೆ ಕುರಿತ ಚರ್ಚೆಗಳಿಗೆ ಮತ್ತೊಮ್ಮೆ ಸ್ಪಷ್ಟನೆ
ಗದಗ : ನಾನು ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ. ಪಕ್ಷದ ಹೈಕಮಾಂಡ್ ಏನೇ ನಿರ್ಧಾರ ಮಾಡಿದರೂ ಅದನ್ನು ಒಪ್ಪಿಕೊಳ್ಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಾಸಕ ಇಕ್ಬಾಲ್ ಹುಸೇನ್ ಅವರ ಇತ್ತೀಚಿನ ಹೇಳಿಕೆಗಳನ್ನು ಉಲ್ಲೇಖಿಸಿ ಮಾತನಾಡಿ, ಪಕ್ಷದ ಒಳಗಿನ ಯಾವುದೇ ಗೊಂದಲಕ್ಕೂ ತಾವು ಕಾರಣರಲ್ಲ ಎಂದ ಸ್ಪಷ್ಟಪಡಿಸಿದರು. ಪಕ್ಷದ ಒಗ್ಗಟ್ಟು ಮತ್ತು ಹೈಕಮಾಂಡ್ನ ನಿರ್ಧಾರಕ್ಕೆ ನಾನು ಯಾವಾಗಲೂ ಬದ್ಧನಿದ್ದೇನೆ ಎಂದು ತಿಳಿಸಿದ್ದಾರೆ. …
Read More »ಜನವರಿಯಲ್ಲಿ ದರ್ಶನ್ಗೆ ಬೇಲ್ ಸಿಗುವ ನಿರೀಕ್ಷೆಯಿದೆ: ಸಚಿವ ಜಮೀರ್ ಪುತ್ರ ಝೈದ್ ಖಾನ್
ಹಾವೇರಿ: ಜನವರಿಯಲ್ಲಿ ದರ್ಶನ್ಗೆ ಬೇಲ್ ಸಿಗುವ ನಿರೀಕ್ಷೆ ಇದೆ. ಒಂದು ವೇಳೆ ಅವರು ಜೈಲಿನಿಂದ ಬಿಡುಗಡೆಯಾಗದಿದ್ದರೇ ನಾನೇ ವೈಯಕ್ತಿಕವಾಗಿ ಜೈಲ್ಗೆ ಹೋಗಿ ದರ್ಶನ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯುತ್ತೇನೆ ಎಂದು ನಟ ಹಾಗೂ ಸಚಿವ ಜಮೀರ್ ಪುತ್ರ ಝೈದ್ ಖಾನ್ ತಿಳಿಸಿದರು. ಹಾವೇರಿಯಲ್ಲಿ ಕಲ್ಟ್ ಸಿನಿಮಾ ಪ್ರಮೋಷನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಸ್ತುತ ಚಿತ್ರಮಂದಿರಗಳಲ್ಲಿ ದರ್ಶನ್ ಅಭಿನಯದ ಡೆವಿಲ್ ಚಿತ್ರ ಪ್ರದರ್ಶನ ಕಾಣುತ್ತಿದೆ. ನಮ್ಮ ಕಲ್ಟ್ ಚಿತ್ರ ಜನವರಿ 23 …
Read More »2ನೇ ವಿಮಾನ ನಿಲ್ದಾಣದ ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ: ಸಚಿವ ಎಂ.ಬಿ.ಪಾಟೀಲ್
ಬೆಂಗಳೂರು: ರಾಜಧಾನಿಯ ಸಮೀಪ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಸ್ಥಳದ ಅನುಕೂಲ ಮತ್ತು ತಾಂತ್ರಿಕ ಹಾಗೂ ಆರ್ಥಿಕ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಪರಿಣತ ಸಲಹಾ ಸಂಸ್ಥೆಯ ಆಯ್ಕೆಗಾಗಿ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮವು (ಕೆಎಸ್ಐಐಡಿಸಿ) ಟೆಂಡರ್ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು 2026ರ ಜನವರಿ 12 ಕೊನೆಯ ದಿನವಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಶನಿವಾರ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, 2ನೇ …
Read More »ಏರ್ ಗನ್ನಿಂದ ಅಚಾನಕ್ಕಾಗಿ ಉದ್ಯಮಿಗೆ ಗುಂಡು ತಗುಲಿದ ಪ್ರಕರಣ: ಕಾನೂನು ವಿದ್ಯಾರ್ಥಿ ಬಂಧನ
ಬೆಂಗಳೂರು: ನಗರದ ಬಸನನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣರಾವ್ ಪಾರ್ಕ್ ನಲ್ಲಿ ಉದ್ಯಮಿ ಮೇಲೆ ಏರ್ ಗನ್ ನಿಂದ ಗುಂಡು ಹಾರಿಸಿದ ಆರೋಪದಡಿ ಕಾನೂನು ವಿದ್ಯಾರ್ಥಿಯನ್ನು ಬಂಧಿಸಲಾಗಿದೆ. ಮೊಹಮ್ಮದ್ ಅಫ್ಜಲ್ ಬಂಧಿತ ವಿದ್ಯಾರ್ಥಿ. ಡಿ.10 ರಂದು ಸಂಜೆ ಪಾರ್ಕ್ ನಲ್ಲಿ ಉದ್ಯಮಿ ರಾಜಗೋಪಾಲ್ ಎಂಬುವರು ವಾಯು ವಿಹಾರ ಮಾಡುತ್ತಿದ್ದಾಗ ಕುತ್ತಿಗೆ ಹಿಂಭಾಗಕ್ಕೆ ಏರ್ ಗನ್ ನಿಂದ ಹಾರಿದ ಗುಂಡು ತಗುಲಿತ್ತು. ಈ ಸಂಬಂಧ ದೂರು ದಾಖಲಿಸಿಕೊಂಡ ಬಸವನಗುಡಿ ಪೊಲೀಸರು ಆರೋಪಿಯನ್ನು …
Read More »
Laxmi News 24×7