Breaking News

Monthly Archives: ಡಿಸೆಂಬರ್ 2025

ಪೌರಕಾರ್ಮಿಕರಿಗೆ ಜಾಕೀಟ್ ಹಾಗೂ ಸ್ವೆಟರ್ ವಿತರಣೆ

ಪೌರಕಾರ್ಮಿಕರಿಗೆ ಜಾಕೀಟ್ ಹಾಗೂ ಸ್ವೆಟರ್ ವಿತರಣೆ ಘಟಪ್ರಭಾ:2023-24,2024-25 ನೇ ಸಾಲಿನ ನಗರಸಭೆ ನಿಧಿಯ ಶೇ.24.10 ರ ಯೋಜನೆಯಡಿಯ ಪೌರಕಾರ್ಮಿಕರ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಪುರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಸುರಕ್ಷತಾ ಜಾಕೀಟಗಳನ್ನು ಹಾಗೂ 2025-26 ನೇ ಸಾಲಿನ ಎಸ್ಎಫ್ ಸಿ ಶೇ.24.10 ರ ಅನುಧಾನದಲ್ಲಿ ಪೌರಕಾರ್ಮಿಕರಿಗೆ ಸ್ವೆಟರ್ ಗಳನ್ನು ಘಟಪ್ರಭಾ ಪುರಸಭೆ ಧೂಪದಾಳ ಕಾರ್ಯಾಲಯದ ಆವರಣದಲ್ಲಿ ಬುಧವಾರದಂದು ಹಂಚಿಕೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಪುರಸಭೆಯ ಪುರಸಭೆಯ ಮುಖ್ಯಾಧಿಕಾರಿಗಳು ಶ್ರೀಮತಿ.ಎಂ.ಎಸ್.ಪಾಟೀಲ ಹಿರಿಯ ಮುಖಂಡರಾದ ಡಿ ಎಮ್ …

Read More »

ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಅಂದಾಜು ರೂ. 2.17 ಕೋಟಿ ವೆಚ್ಚದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಚಾಲನೆ ನೀಡಿದರು

ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಅಂದಾಜು ರೂ. 2.17 ಕೋಟಿ ವೆಚ್ಚದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಚಾಲನೆ ನೀಡಿದರು ಅರ್ಜುನವಾಡ ಗ್ರಾಮದಲ್ಲಿ ಅಂದಾಜು ರೂ. 80 ಲಕ್ಷ ವೆಚ್ಚದ ವಿವಿಧ ಸಿಸಿ ರಸ್ತೆಗಳ ನಿರ್ಮಾಣ, ಕುರಣಿ ಗ್ರಾಮದಲ್ಲಿ ರೂ. 50 ಲಕ್ಷ ಹಾಗೂ ರೂ. 30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗಳು, ಜೊತೆಗೆ ರೂ. 57 ಲಕ್ಷ ವೆಚ್ಚದ ಹೊಲಗಳಿಗೆ …

Read More »

ಮಹಾ ಸಂಸದ ಮಾನೆ,ವಿರುದ್ಧ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆಯುವಂತೆ ಆಗ್ರಹಿಸಿ ಸಂಸದೆ ಪ್ರಿಯಾಂಕಾಗೆ ಕರವೇ ಮನವಿ

ಗೋಕಾಕ ಡಿ 24 : ಮಹಾರಾಷ್ಟ್ರ ಸಂಸದ ಧೈರ್ಯಶೀಲ ಮಾನೆ, ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕುವ ಕುರಿತು, ಕೇಂದ್ರ ಗೃಹಸಚಿವರಿಗೆ ದೂರು ನೀಡುವಂತೆ ಆಗ್ರಹಿಸಿ ಬುಧವಾರದಂದು ನಗರದಲ್ಲಿ ಚಿಕ್ಕೋಡಿ ಸಂಸದೆ ಕುಮಾರಿ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮನವಿ ಅರ್ಪಿಸಲಾಯಿತು. ಮಹಾರಾಷ್ಟ್ರದ ನಾಯಕರು ಕಳೆದ ಐವತ್ತು ವರ್ಷಗಳಿಂದ ಬೆಳಗಾವಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಭಾಷಾ ವೈಷಮ್ಯದ ವಿಷ ಬೀಜ ಬಿತ್ತುವ ಕೆಲಸವನ್ನು ಮಾಡುತ್ತಲೇ ಬಂದಿದ್ದಾರೆ. …

Read More »

ಗೋಕಾಕದ ಸರ್ಕಾರಿ ಪಿ.ಯು. ಕಾಲೇಜಿನಲ್ಲಿ ಪ್ರತಿಭಾ ಕಾರಂಜಿ’ ಕಾರ್ಯಕ್ರಮ

ಇಂದು ಗೋಕಾಕದ ಸರ್ಕಾರಿ ಪಿ.ಯು. ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಹಯೋಗದಲ್ಲಿ ಹಮ್ಮಿಕೊಂಡ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ‘ಪ್ರತಿಭಾ ಕಾರಂಜಿ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದೆ. ಮಕ್ಕಳ ಸಾಂಸ್ಕೃತಿಕ, ಕಲಾತ್ಮಕ ಹಾಗೂ ಸೃಜನಶೀಲ ಪ್ರತಿಭೆಗಳ ಸಂಗಮಕ್ಕೆ ಸಾಕ್ಷಿಯಾದ ಈ ಕಾರ್ಯಕ್ರಮವು, ವಿದ್ಯಾರ್ಥಿಗಳಲ್ಲಿ ಅಡಗಿರುವ ಹಾಡು, ನೃತ್ಯ, ನಾಟಕ, ಚಿತ್ರಕಲೆ ಸೇರಿದಂತೆ ವಿವಿಧ ಪ್ರತಿಭೆಗಳನ್ನು ಗುರುತಿಸಿ, ಬೆಳೆಸುವ ಮಹತ್ವದ ವೇದಿಕೆಯಾಗಿದೆ. ಪ್ರತಿಭಾ ಕಾರಂಜಿ ಮಕ್ಕಳ ಆತ್ಮವಿಶ್ವಾಸವನ್ನು …

Read More »

ಗೋಕಾಕ ನಗರದ ಶೆಪರ್ಡ್ ಮಿಷನ್ ಆಂಗ್ಲ ಮಾದ್ಯಮ ಶಾಲೆಯ 16 ನೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ

ಗೋಕಾಕ ನಗರದ ಶೆಪರ್ಡ್ ಮಿಷನ್ ಆಂಗ್ಲ ಮಾದ್ಯಮ ಶಾಲೆಯ 16 ನೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಾತನಾಡಿದೆ. ಈ ವೇಳೆ ಡಾ.‌ ವಿಶ್ವನಾಥ ಶಿಂಧೋಳಿಮಠ, ಶಾಲೆಯ ಅಧ್ಯಕ್ಷರಾದ ಶ್ರೀ ಸಂದೀಪ ಅನಿಗೋಳ, ಶ್ರೀ ಮಂಜುನಾಥ ಅನಿಗೋಳ, ಶ್ರೀಮತಿ ಶಾಂತಾ ಅನಿಗೋಳ ಸೇರಿ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.

Read More »

ಚಿರತೆಗಿಟ್ಟಿದ್ದ ಬೋನಿನಲ್ಲಿ 4 ತಾಸು ಲಾಕ್ ಆದ ವ್ಯಕ್ತಿ!

ಚಾಮರಾಜನಗರ: ಕುತೂಹಲವೊಂದು ಮನುಷ್ಯನನ್ನು ಪೀಕಲಾಟಕ್ಕೆ ನೂಕಿದ ಘಟನೆ ಯಳಂದೂರು ತಾಲೂಕಿನ ಗಂಗವಾಡಿಯಲ್ಲಿ ನಡೆದಿದೆ. ಚಿರತೆಗಾಗಿ ಇಟ್ಟಿದ್ದ ಬೋನಿನಲ್ಲಿ ವ್ಯಕ್ತಿ ಸಿಲುಕಿ 4 ತಾಸು ಒದ್ದಾಡಿದ್ದಾನೆ. ಗಂಗವಾಡಿ ಗ್ರಾಮದ ಕಿಟ್ಟಿ ಎಂಬಾತನೆ ಬೋನಿನಲ್ಲಿ ಸಿಲುಕಿದ ವ್ಯಕ್ತಿ. ಗಂಗವಾಡಿ ಗ್ರಾಮದಲ್ಲಿ ಶನಿವಾರ ರಾತ್ರಿ ರಾಮಯ್ಯ ಎಂಬುವರಿಗೆ ಸೇರಿದ ಜಮೀನಿನಲ್ಲಿ ಚಿರತೆ ದಾಳಿ ನಡೆಸಿ ಮೂರು ಜಾನುವಾರುಗಳನ್ನು ಕೊಂದು ಹಾಕಿತ್ತು. ಈ ಸಂಬಂಧ ಶಾಸಕ ಎ. ಆರ್. ಕೃಷ್ಣಮೂರ್ತಿ ಕೂಡ ಸ್ಥಳಕ್ಕೆ ಭೇಟಿ ನೀಡಿ, ಚಿರತೆ …

Read More »

ಪಾಸ್ ಪೋರ್ಟ್​ಗೆ ಸುಳ್ಳು ದಾಖಲೆಗೆ ಸಹಕಾರ: ಪೊಲೀಸ್ ಸಿಬ್ಬಂದಿ ಬಂಧನ

ಬಂಟ್ವಾಳ (ದಕ್ಷಿಣಕನ್ನಡ): ಪಾಸ್​ ಪೋರ್ಟ್ ಮಾಡಲು ಸುಳ್ಳು ದಾಖಲೆ ನೀಡಿದ ವ್ಯಕ್ತಿಗೆ ಸಹಕಾರ ನೀಡಿದ ಆರೋಪದಲ್ಲಿ ವಿಟ್ಲ ಪೊಲೀಸ್ ಠಾಣೆ ಸಿಬ್ಬಂದಿ ವಿರುದ್ಧ ಹಾಗೂ ಪಾಸ್​ ಪೋರ್ಟ್ ದಾಖಲೆ ಸೃಷ್ಟಿಸಿದ ಆರೋಪದಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸ್ ಸಿಬ್ಬಂದಿ ಪ್ರದೀಪ್ ಮತ್ತು ದಾಖಲೆ ಮಾಡಲು ಹೊರಟ ಶಕ್ತಿದಾಸ್ ಆರೋಪಿಗಳು. ಪ್ರದೀಪ್​ನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮೇಲಧಿಕಾರಿಯಿಂ ಶಿಫಾರಸು ಮಾಡಿಸಿಕೊಟ್ಟಿರುವ ಆರೋಪ: ಇವರಲ್ಲಿ ಶಕ್ತಿದಾಸ್ ಯಾವ ಊರಿನವನು ಎಂಬ ಕುರಿತು ಸ್ಪಷ್ಟತೆ …

Read More »

ಜೈಲಿನಲ್ಲಿ ತಪಾಸಣೆಗೆ ಎಐ ಮಾದರಿ ತಂತ್ರಜ್ಞಾನ ಬಳಕೆ: ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್

ಮಂಗಳೂರು: ಜೈಲಿನಲ್ಲಿ ತಪಾಸಣೆಗೆ ಟ್ರಯಲ್ ಬೇಸಿಸ್ ಮೇಲೆ ಎಐ ಟೆಕ್ನಾಲಜಿ ಬಳಕೆ ಮಾಡುತ್ತೇವೆ.‌ ಅದು ಎಷ್ಟು ಪರಿಣಾಮಕಾರಿ ಆಗುತ್ತದೆ ಎಂದು ನೋಡಿ ಅಳವಡಿಕೆ ಮಾಡುತ್ತೇವೆ. ಪರಪ್ಪನ ಅಗ್ರಹಾರ, ಮೈಸೂರು ಜೈಲಿನಲ್ಲಿ ಟ್ರಯಲ್ ಆಗಿದೆ.‌ ಮಂಗಳೂರು ಜೈಲಿನಲ್ಲಿಯೂ ಬೇಕಾದ್ರೆ ಟ್ರಯಲ್ ಮಾಡುತ್ತೇವೆ ಎಂದು ಕಾರಾಗೃಹ ವಿಭಾಗದ ನೂತನ ಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮಂಗಳೂರು ಕಾರಾಗೃಹಕ್ಕೆ ಔಪಚಾರಿಕವಾಗಿ …

Read More »

ಎರಡು ಬಾರಿ ಡಿಕೆಶಿ ಭೇಟಿ, ಇದೀಗ ಸಿದ್ದರಾಮಯ್ಯ ಜೊತೆ ಮಾತುಕತೆ: ಕುತೂಹಲ ಕೆರಳಿಸಿದ ರಾಜಣ್ಣ ನಡೆ!

ಬೆಂಗಳೂರು: ರಾಜ್ಯದಲ್ಲಿ ಪವರ್ ಫೈಟ್ ಮತ್ತೆ ಚುರುಕಾದಂತಿದೆ. ಈ ಮಧ್ಯೆ ಮಾಜಿ ಸಚಿವ ಕೆ.ಎನ್.ರಾಜಣ್ಣರ ನಡೆ ಸಾಕಷ್ಟು ಕುತೂಹಲ ಕೆರಳಿಸುತ್ತಿದೆ. ಎರಡು ಬಾರಿ ಡಿಸಿಎಂ ಡಿ.ಕೆ.ಶಿವಕುಮಾರ್​​ ಭೇಟಿಯಾಗಿದ್ದ ಕೆ.ಎನ್.ರಾಜಣ್ಣ, ಮಂಗಳವಾರ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿದೆ. ಎರಡು ದಿನಗಳ ಹಿಂದೆ ಕೆ.ಎನ್.ರಾಜಣ್ಣ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಎರಡು ಬಾರಿ ಪರಸ್ಪರ ಭೇಟಿಯಾಗಿ ಸಮಾಲೋಚನೆ ನಡೆಸಿದ್ದರು. ರಾಜಕೀಯವಾಗಿ ವೈರಿಗಳಾಗಿದ್ದ ಉಭಯ ನಾಯಕರ ಭೇಟಿ ಹುಬ್ಬೇರಿಸುವಂತೆ ಮಾಡಿತ್ತು. …

Read More »

ಬಿಕ್ಲು ಶಿವ ಹತ್ಯೆ ಪ್ರಕರಣ: ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

ಬೆಂಗಳೂರು: ರೌಡಿಶೀಟರ್‌ ಶಿವಪ್ರಕಾಶ್‌ ಅಲಿಯಾಸ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶಿಸಿದೆ. ಪ್ರಕರಣದ 5ನೇ ಆರೋಪಿ ಬಿ.ಎ.ಬಸವರಾಜ್ ಅಲಿಯಾಸ್ ಬೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ. ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬೈರತಿ …

Read More »