ಬೆಳಗಾವಿ- ಇಲ್ಲಿಯ ಬೆಳಗಾವಿ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ (TAPCMS) ದ ನೂತನ ಅಧ್ಯಕ್ಷರಾಗಿ ಶಂಕರಗೌಡ ಪಾಟೀಲ ಮತ್ತು ಉಪಾಧ್ಯಕ್ಷರಾಗಿ ಗಜಾನನ ಕಾಗಣೀಕರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದಿಲ್ಲಿ ಸಂಘದ ಕಚೇರಿಯಲ್ಲಿ ಜರುಗಿದ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರಗಳು ಸಲ್ಲಿಕೆಯಾಗಿದ್ದರಿಂದ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು ಚುನಾವಣಾಧಿಕಾರಿಯಾಗಿದ್ದ ಡಿಆರ್ಸಿಎಸ್ ಕಚೇರಿಯ ಹಿರಿಯ ನಿರೀಕ್ಷಿಕ ಗೋವಿಂದಗೌಡ ಪಾಟೀಲ ಅವರು …
Read More »Yearly Archives: 2025
ಹರಕೆ ಕಟ್ಟಿ ಕರು ತಂದು ಈ ದೇವರಿಗೆ ಬಿಟ್ಟರೆ ಸಾಕು ಸಮಸ್ಯೆ ದೂರ: ಸುತ್ತ ಹತ್ತು ಹಳ್ಳಿಗಳ ಕಾಯೋ ರಂಗನಾಥ ಸ್ವಾಮಿ!
ದಾವಣಗೆರೆ: ಎಲ್ಲರ ಸಮಸ್ಯೆಗಳನ್ನು ದೂರ ಮಾಡುವವನು ಈ ಕೊಣಚಕಲ್ ರಂಗನಾಥ ಸ್ವಾಮಿ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಮೆದುವಿನಕೆರೆ ಬಳಿಯ ಕೊಣಚಕಲ್ ರಂಗನಾಥ ಸ್ವಾಮಿ ಭಕ್ತರಿಗೆ ಅಚ್ಚುಮೆಚ್ಚು. ಇಂತಹ ಸಮಸ್ಯೆ ಎಂದು ಹೇಳಿಕೊಂಡು ಕೊಣಚಕಲ್ ರಂಗನಾಥ ಸ್ವಾಮಿ ಬೆಟ್ಟಕ್ಕೆ ಭಕ್ತರು ಆಗಮಿಸಿ ತಮ್ಮ ಬೇಡಿಕೆ ದೇವರ ಮುಂದಿಟ್ಟರೆ ಸಾಕು ಸಮಸ್ಯೆ ದೂರ ಆಗುತ್ತದೆ ಎಂಬುದು ಭಕ್ತರ ನಂಬಿಕೆ. ಅಲ್ಲದೇ ಹರಕೆ ಕಟ್ಟಿಕೊಂಡು ಕರು ತಂದು ಈ ದೇವರಿಗೆ ಬಿಟ್ಟರೆ ಸಾಕು ಎಂತಹ …
Read More »ದಸರಾ ಉಪಸಮಿತಿಗಳಿಗೆ ಅಧಿಕಾರೇತರ 2219 ಸದಸ್ಯರು: ಸರ್ಕಾರದಿಂದ ದಾಖಲೆ ನೇಮಕ!
ಮೈಸೂರು: ದಸರಾ ಮಹೋತ್ಸವದ ನಿಮಿತ್ತ 16 ನಾನಾ ಸಮಿತಿಗಳಿಗೆ ಅಧಿಕಾರೇತರರನ್ನು ಜಿಲ್ಲಾಡಳಿತ ನೇಮಕ ಮಾಡಿದೆ. ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಈ ಉಪ ಸಮಿತಿಗಳಲ್ಲಿ ಬರೋಬ್ಬರಿ 2219 ಸದಸ್ಯರಿದ್ದಾರೆ! ದಸರಾ ಉಪ ಸಮಿತಿಗಳಿಗೆ ಅಧಿಕಾರಿ ವರ್ಗದವರನ್ನು ಉಪ ವಿಶೇಷಾಧಿಕಾರಿ, ಕಾರ್ಯಾಧ್ಯಕ್ಷರು, ಸಹ ಕಾರ್ಯಾಧ್ಯಕ್ಷರು, ಕಾರ್ಯದರ್ಶಿಯವರನ್ನು ನೇಮಕ ಮಾಡಿರುವ ಜಿಲ್ಲಾಡಳಿತ, ಇವರೊಂದಿಗೆ ಅಧಿಕಾರೇತರರ ಪಟ್ಟಿ ಬಿಡುಗಡೆ ಮಾಡಿದೆ. ಈ ಸದಸ್ಯರ ಸಂಖ್ಯೆಯೇ ಈಗ ದಾಖಲೆಯಾಗಿದೆ. ಮೃಗಾಲಯ ಪ್ರಾಧಿಕಾರದ ಮಾಜಿ ಆಧ್ಯಕ್ಷೆ ಮಲ್ಲಿಗೆ ವಿರೇಶ್, …
Read More »ಕಬ್ಬಿನ ಬೆಳೆ ಮಧ್ಯೆ ಬೆಳೆದಿದ್ದ 441 ಕೆಜಿ ಗಾಂಜಾ ಜಪ್ತಿ: ಬೆಳಗಾವಿ ಇತಿಹಾಸದಲ್ಲೇ ದೊಡ್ಡ ಪ್ರಕರಣ
ಚಿಕ್ಕೋಡಿ (ಬೆಳಗಾವಿ): ಕಬ್ಬಿನ ಬೆಳೆಯ ಮಧ್ಯೆ ಅಕ್ರಮವಾಗಿ ಗಾಂಜಾ ಬೆಳೆದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ 20 ಲಕ್ಷಕ್ಕೂ ಹೆಚ್ಚು ಮೌಲ್ಯದ 441 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬೆಳಗಾವಿ ಸೈಬರ್ ಮತ್ತು ರಾಯಭಾಗ ಪೊಲೀಸರು ಜಂಟಿವಾಗಿ ಈ ಕಾರ್ಯಾಚರಣೆ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಸಿಂಗಾಡಿ ಮಾಳಪ್ಪ ಹಿರೇಕೋಡಿ ಬಂಧಿತ ಆರೋಪಿ. ಇವರು ತಮ್ಮ ಒಂದು ಎಕರೆ ಕಬ್ಬಿನ ಗದ್ದೆಯ ಮಧ್ಯೆ ಅಕ್ರಮವಾಗಿ ಗಾಂಜಾ ಬೆಳೆ ಬೆಳೆದಿರುವ ಬಗ್ಗೆ …
Read More »ಕರ್ತವ್ಯ ಲೋಪ, ಹಣಕ್ಕೆ ಬೇಡಿಕೆ ಆರೋಪ: ಇಬ್ಬರು ಇನ್ಸ್ಪೆಕ್ಟರ್ ಸಹಿತ ಐವರು ಸಿಬ್ಬಂದಿ ಅಮಾನತು
ಬೆಂಗಳೂರು: ಲಂಚಕ್ಕೆ ಬೇಡಿಕೆ ಹಾಗೂ ಕರ್ತವ್ಯ ಲೋಪದ ಆರೋಪದಡಿ ಇಬ್ಬರು ಪೊಲೀಸ್ ಇನ್ಸ್ಪೆಕ್ಟರ್ಗಳ ಸಹಿತ ಐವರು ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ. ಪ್ರತ್ಯೇಕ ಪ್ರಕರಣಗಳಲ್ಲಿ ಕೋರಮಂಗಲ ಠಾಣೆಯ ಇನ್ಸ್ಪೆಕ್ಟರ್ ಲೂಯಿರಾಮ ರೆಡ್ಡಿ ಹಾಗೂ ಹಲಸೂರು ಗೇಟ್ ಠಾಣೆಯ ಇನ್ಸ್ಪೆಕ್ಟರ್ ಹನುಮಂತ ಭಜಂತ್ರಿ ಸೇರಿದಂತೆ ಐವರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಚಿನ್ನದ ಉದ್ಯಮಿಯೊಬ್ಬರಿಂದ 10 ಲಕ್ಷ ರೂಪಾಯಿ ವಸೂಲಿಗೆ ಯತ್ನಿಸಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಿಸಿಟಿವಿ …
Read More »ವರುಣನ ಆರ್ಭಟಕ್ಕೆ ಕಲಬುರಗಿಯಲ್ಲಿ ಅವಾಂತರ ಸೃಷ್ಟಿ
ಕಲಬುರಗಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಕಲಬುರಗಿ ಜಿಲ್ಲೆ ಅಕ್ಷರಶಃ ತತ್ತರಿಸಿದೆ. ಮಳೆ ಹೊಡೆತಕ್ಕೆ ತೊಗರಿನಾಡಿನ ರೈತರು ಕಷ್ಟುಪಟ್ಟು ಬೆಳೆದಿದ್ದ ಬೆಳೆ ನಾಶವಾಗಿದ್ದು, ಹಲವು ಕಡೆ ಅವಾಂತರ ಸೃಷ್ಟಿಯಾಗಿದೆ. ಯಡ್ರಾಮಿ ಪಟ್ಟಣದ ಹಳೆ ಬಜಾರ್ ಬಡಾವಣೆಯಲ್ಲಿ ಹಳೆಯ ಕಲ್ಲಿನ ಗೋಡೆ ಕುಸಿದು 17 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಇದೇ ವೇಳೆ ಮನೆಯಲ್ಲಿದ್ದ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತೊಂದೆಡೆ, ಬೆಣ್ಣೆತೋರಾ ಜಲಾಶಯ ಸಂಪೂರ್ಣ ಭರ್ತಿಯಾಗಿರುವುದರಿಂದ 55 ಸಾವಿರ ಕ್ಯೂಸೆಕ್ …
Read More »ಗೋಮಾಂಸ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಹಚ್ಚಿದ ಹಿಂದೂ ಸಂಘಟನೆ ಕಾರ್ಯಕರ್ತರು
ಚಿಕ್ಕೋಡಿ: ಐನಾಪುರ ಮಾರ್ಗವಾಗಿ ಹೈದರಾಬಾದ್ ಕಡೆಗೆ ನಾಲ್ಕು ಬೃಹತ್ ಲಾರಿಗಳಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೆಲವು ಸಂಘಟನೆಗಳ ಕಾರ್ಯಕರ್ತರು ವಾಹನಗಳನ್ನು ತಡೆದು ಒಂದು ವಾಹನಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿರುವ ಘಟನೆ ತಡರಾತ್ರಿ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ತಡರಾತ್ರಿ ಈ ಘಟನೆ ಸಂಭವಿಸಿದೆ. ಕೆಲವು ಸಂಘಟನೆಗಳ ಕಾರ್ಯಕರ್ತರು ಜೊತೆಯಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಬೃಹತ್ ಲಾರಿಗಳನ್ನು ತಡೆದು ಅವುಗಳನ್ನು ಪರಿಶೀಲನೆ ಮಾಡಿ …
Read More »ಮಲ್ಟಿಫ್ಲೆಕ್ಸ್ ಸೇರಿ ರಾಜ್ಯದ ಚಿತ್ರಮಂದಿರಗಳಲ್ಲಿ ಗರಿಷ್ಠ 200 ರೂ. ನಿಗದಿ ಪಡಿಸಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ
ಬೆಂಗಳೂರು: ಮಲ್ಟಿಪ್ಲೆಕ್ಸ್ ಸೇರಿ ರಾಜ್ಯದ ಚಿತ್ರಮಂದಿರಗಳಲ್ಲಿ ಎಲ್ಲ ಭಾಷೆಯ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂಪಾಯಿ ಏಕರೂಪ ದರ ನಿಗದಿಪಡಿಸಿ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಸೆಪ್ಟೆಂಬರ್ 12ರಿಂದ ಅನ್ವಯವಾಗುವಂತೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕರ್ನಾಟಕ ಸಿನಿಮಾ (ನಿಯಂತ್ರಣ)(ತಿದ್ದುಪಡಿ) ನಿಯಮಗಳು-2025 ಅನ್ನು ಪ್ರಶ್ನಿಸಿ ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್, ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಪ್ರತಿನಿಧಿ ಶುಭಂ ಠಾಕೂರ್, ಪಿವಿಆರ್ ಐನಾಕ್ಸ್ ಲಿಮಿಟೆಡ್ನ …
Read More »21 ದಿನಗಳ ದಸರಾ ದೀಪಾಲಂಕಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಚಾಲನೆ: ಸೊಬಗನ್ನು ಕಣ್ತುಂಬಿಕೊಳ್ಳಲು ಕರೆ
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್ ದೀಪಾಲಂಕಾರಕ್ಕೆ ಇಂಧನ ಸಚಿವರಾದ ಕೆ. ಜೆ. ಜಾರ್ಜ್ ಅವರು ಚಾಲನೆ ನೀಡಿದರು. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿರುವ ಹಸಿರು ಚಪ್ಪರದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ದಸರಾ ವಿದ್ಯುತ್ ದೀಪಾಲಂಕಾರಕ್ಕೆ ವಿಧ್ಯುಕ್ತ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು, “ಪ್ರತಿ ವರ್ಷದಂತೆ ಈ ವರ್ಷವೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ದಸರಾ ದೀಪಾಲಂಕಾರ ಮಾಡಲಾಗಿದ್ದು, ಕಳೆದ ವರ್ಷಕ್ಕಿಂತಲೂ ಹೆಚ್ಚು ಆಕರ್ಷಣೀಯವಾಗಿ ಈ …
Read More »ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಅವರನ್ನೂ ಬಿಡದ ಸೈಬರ್ ವಂಚಕರು
ಬೆಂಗಳೂರು: ಸರ್ಕಾರಿ ಅಧಿಕಾರಿಯ ಸೋಗಿನಲ್ಲಿ ವಂಚಕನೋರ್ವ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಹಾಗೂ ರಾಜ್ಯಸಭಾ ಸದಸ್ಯರಾದ ಡಾ.ಸುಧಾಮೂರ್ತಿ ಅವರಿಗೆ ಕರೆ ಮಾಡಿ ವೈಯಕ್ತಿಕ ಮಾಹಿತಿ ಕದಿಯಲು ಪ್ರಯತ್ನಿಸಿದ್ದು, ಈ ಸಂಬಂಧ ನಗರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಧಾಮೂರ್ತಿ ಅವರ ಪರವಾಗಿ ಗಣಪತಿ ಎಂಬವರು ನೀಡಿದ ದೂರು ಆಧರಿಸಿ ಅಪರಿಚಿತ ಆರೋಪಿಯ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಎಫ್ಐಆರ್ ದಾಖಲಿಸಲಾಗಿದೆ. “ಸೆ.5ರಂದು ಕೇಂದ್ರದ ಸರ್ಕಾರ ದೂರ ಸಂಪರ್ಕ ಇಲಾಖೆ ಅಧಿಕಾರಿಯ …
Read More »
Laxmi News 24×7