Breaking News

Yearly Archives: 2025

ಕರ್ನಾಟಕದ ರೈತರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ.

ನವದೆಹಲಿ/ಹುಬ್ಬಳ್ಳಿ: ಅತಿವೃಷ್ಟಿಯಿಂದಾಗಿ ತತ್ತರಿಸಿದ್ದ ಕರ್ನಾಟಕದ ರೈತರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ. ನವರಾತ್ರಿ ಕೊಡುಗೆಯಾಗಿ ಬೆಂಬಲ ಬೆಲೆಯಲ್ಲಿ ಐದು ಧಾನ್ಯಗಳ ಖರೀದಿಗೆ ಕೇಂದ್ರ ಅನುಮತಿ ನೀಡಿದೆ. 2025-26ನೇ ಸಾಲಿನ ಮುಂಗಾರಿನಲ್ಲಿ ಬೆಳೆದ ಹೆಸರು ಕಾಳು, ಉದ್ದಿನ ಕಾಳು, ನೆಲಗಡಲೆ(ಶೇಂಗಾ), ಸೋಯಾಬಿನ್‌ ಮತ್ತು ಸೂರ್ಯಕಾಂತಿ ಧಾನ್ಯಗಳನ್ನು ಕೇಂದ್ರದ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ಕುರಿತು ಆಹಾರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಕೇಂದ್ರ ಕೃಷಿ ಸಚಿವರು ಖುದ್ದು …

Read More »

ವಿಶ್ವೇಶ್ವರಯ್ಯ ಬೃಹತ್ ಭಾವಚಿತ್ರ ಬಿಡಿಸಿ ವರ್ಲ್ಡ್​ ರೆಕಾರ್ಡ್​​​ಗಾಗಿ ಅರ್ಜಿ ಹಾಕಿದ ಎಂಐಟಿ

ಮೈಸೂರು: 80 ಮೀಟರ್ ಉದ್ದ 100 ಮೀಟರ್ ಅಗಲ (86,111 ಚದರ ಅಡಿ) ಅಳತೆಯಲ್ಲಿ ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯ ಅವರ ಬೃಹತ್ ಭಾವಚಿತ್ರ ಬಿಡಿಸಿ, ನಗುನಹಳ್ಳಿಯಲ್ಲಿರುವ ಮೈಸೂರು ಮಹಾರಾಜ ತಾಂತ್ರಿಕ ಮಹಾವಿದ್ಯಾಲಯ (ಎಂಐಟಿ)ವು ದಾಖಲೆ ಮಾಡಿದೆ. ಸೆ.15ರ ಇಂಜಿನಿಯರ್ ದಿನಾಚರಣೆ ನಿಮಿತ್ತ ಮೈಸೂರು ಮಹಾರಾಜ ತಾಂತ್ರಿಕ ಮಹಾವಿದ್ಯಾಲಯದ (ಎಂಐಟಿ) ಸಿವಿಲ್ ಎಂಜಿನಿಯರಿಂಗ್ ವಿಭಾಗವು ಬೆಂಗಳೂರಿನ ಸಾಯಿ ಕ್ಯಾಡ್ಡ್ ಸಂಸ್ಥೆಯ ಸಹಯೋಗದೊಂದಿಗೆ ಈ ದಾಖಲೆ ಮಾಡಿದೆ. ದೇಶ ಕಂಡ ಶ್ರೇಷ್ಠ …

Read More »

ಒಕ್ಕಲಿಗ ಸಮುದಾಯದ ಸಭೆ: ಜಾತಿ ಸಮೀಕ್ಷೆಯಲ್ಲಿ ಧರ್ಮ ಹಿಂದೂ, ಜಾತಿ ಒಕ್ಕಲಿಗ ಎಂದು ಬರೆಸಲು ನಿರ್ಣಯ

ಬೆಂಗಳೂರು: ಸೆಪ್ಟಂಬರ್​ 22 ರಿಂದ ಆರಂಭವಾಗಲಿರುವ ಜಾತಿ ಸಮೀಕ್ಷೆ ಸಂಬಂಧ ಬೆಂಗಳೂರಲ್ಲಿ ನಡೆದ ಒಕ್ಕಲಿಗ ಸಮುದಾಯದ ಸಭೆಯಲ್ಲಿ ಜಾತಿ ಪಟ್ಟಿಯಲ್ಲಿ ಧರ್ಮ ಹಿಂದೂ, ಜಾತಿ ಒಕ್ಕಲಿಗ ಎಂದು ಬರೆಸುವಂತೆ ನಿರ್ಣಯ ಕೈಗೊಳ್ಳಲಾಗಿದೆ. ಜಾತಿ ಸಮೀಕ್ಷೆ ಗೊಂದಲ ಸಂಬಂಧ ಒಕ್ಕಲಿಗ ಸಮುದಾಯ ವಿಜಯನಗರದ ಆದಿ ಚುಂಚನಗಿರಿ ಶಾಖಾ ಮಠದಲ್ಲಿ ಶನಿವಾರ (ಸೆ.20) ಏರ್ಪಡಿಸಿದ್ದ ಸಭೆಯಲ್ಲಿ ಒಕ್ಕಲಿಗ ನಾಯಕರು ಒಗ್ಗಟ್ಟು ಪ್ರದರ್ಶನ‌ ಮಾಡಿದರು. ಸಭೆಯಲ್ಲಿ ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಶಿರಾದ …

Read More »

ಬಸವಣ್ಣ ಲಿಂಗಾಯತ ಧರ್ಮವನ್ನು ಸ್ಥಾಪಿಸಿಲ್ಲ: ಯತ್ನಾಳ್

ಚಿಕ್ಕೋಡಿ (ಬೆಳಗಾವಿ): ಬಸವಣ್ಣನವರು ಲಿಂಗಾಯತ ಧರ್ಮವನ್ನು ಮಾಡಿಲ್ಲ, ಕೆಲವು ಕಂಪನಿಗಳು ಅದನ್ನು ತಯಾರು ಮಾಡಿಕೊಂಡಿವೆ. ಬಸವಣ್ಣನವರು ಹಿಂದೂ ಸಮಾಜದಲ್ಲಿ ಮೌಢ್ಯಗಳ ವಿರುದ್ಧ ಹೋರಾಡಿದ್ದಾರೆಯೇ ಹೊರತು ಲಿಂಗಾಯತ ಧರ್ಮವನ್ನು ಸ್ಥಾಪನೆಯೇ ಮಾಡಿಲ್ಲ ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೊಸ ಚರ್ಚೆಯೊಂದನ್ನು ಹುಟ್ಟುಹಾಕಿದ್ದಾರೆ. ಜಿಲ್ಲೆಯ ರಾಯಭಾಗ ತಾಲೂಕಿನ ಹಾರುಗೇರಿಯಲ್ಲಿ ಪಂಚಮಸಾಲಿ ಮೀಸಲಾತಿ ಎಂಟನೇ ಹಂತದ ಹೋರಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೆಲವು ಮಠಾಧೀಶರು ವೀರಶೈವ ಲಿಂಗಾಯತ ಎಂದು …

Read More »

ಶೋಷಿತ ಜಾತಿ-ಸಮುದಾಯಗಳು ಜಾತಿ ಸಂಘಟನೆ ಮೂಲಕ ಹಕ್ಕುಗಳನ್ನು ಪಡೆದುಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ*

ಶೋಷಿತ ಜಾತಿ-ಸಮುದಾಯಗಳು ಜಾತಿ ಸಂಘಟನೆ ಮೂಲಕ ಹಕ್ಕುಗಳನ್ನು ಪಡೆದುಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ* *ಶಿಕ್ಷಣ ಸಂಘಟನೆ ಹೋರಾಟ ಅಂಬೇಡ್ಕರ್ ಅವರು ಕೊಟ್ಟ ಮಂತ್ರ: ಸಿ.ಎಂ.ಸಿದ್ದರಾಮಯ್ಯ* *ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿ.ಎಂ ಸಿದ್ದರಾಮಯ್ಯ ಬೇಸರ* *ಇನ್ನೂ ಎಷ್ಟು ವರ್ಷ ಹಿಂದುಳಿದ ಜಾತಿಗಳ ಮಕ್ಕಳೇ ಬಲಿಯಾಗಬೇಕು : ಸಿ.ಎಂ ಪ್ರಶ್ನೆ* ಗದಗ ಸೆ 20: ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ …

Read More »

ರಾಜ್ಯಕ್ಕೆ ಗೋವಾ ಅರಣ್ಯ ಸಚಿವರ ಭೇಟಿಕುಮ್ಕಿ ಆನೆ ನೀಡುವಂತೆ ಮನವಿ

ಬೆಂಗಳೂರು: ಗೋವಾ ಅರಣ್ಯ ಸಚಿವ ವಿಶ್ವಜಿತ್ ರಾಣೆ ಅವರು ರಾಜ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಅವರನ್ನು ವಿಕಾಸಸೌಧದ ಸಚಿವರ ಕೊಠಡಿಯಲ್ಲಿಂದು ಭೇಟಿಯಾಗಿ ಕುಮ್ಕಿ ಆನೆ ನೀಡುವಂತೆ ಮನವಿ ಮಾಡಿದರು. ಗೋವಾದಲ್ಲಿ ಪುಂಡಾನೆಗಳ ಹಾವಳಿ ಹೆಚ್ಚಾಗಿದ್ದು, ಕರ್ನಾಟಕದ ಸಹಕಾರ ಕೋರಿದ್ದಾರೆ. ಪುಂಡಾನೆಗಳ ಹಾವಳಿ ನಿಯಂತ್ರಣಕ್ಕೆ ಕುಮ್ಕಿ ಆನೆಗಳನ್ನು ನೀಡುವಂತೆ ಖಂಡ್ರೆ ಅವರಲ್ಲಿ ಮನವಿ ಮಾಡಿದರು. ಈ ಸಂಬಂಧ ಸಚಿವ ಖಂಡ್ರೆ ಪರಿಶೀಲಿಸುವುದಾಗಿ ಭರವಸೆ ನೀಡಿದರು. …

Read More »

ಜಾತಿ ಜನಗಣತಿಯಲ್ಲಿ ಪಂಚಮಸಾಲಿಗಳೆಂದು ನಮೂದಿಸಿ : ಜಯಮೃತ್ಯುಂಜಯ ಸ್ವಾಮೀಜಿ

ಚಿಕ್ಕೋಡಿ (ಬೆಳಗಾವಿ) : ಹಿಂದುಳಿದ ಆಯೋಗ ನಡೆಸುವ ಜಾತಿ ಜನಗಣತಿಯಲ್ಲಿ ಪಂಚಮಸಾಲಿಗಳೆಂದು ನಮೂದಿಸಿ, ಕಾಲಂ ನಂಬರ್ 0868 ಎಂದು ಇರಲಿದೆ. ಅದರಲ್ಲಿ ಪಂಚಮಸಾಲಿ ಸಮಾಜವೆಂದು ಬರೆಸಿ ಎಂದು ಪಂಚಮಸಾಲಿ ಸಮಾಜದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಜಿಲ್ಲೆಯ ರಾಯಭಾಗ ಪಟ್ಟಣದಲ್ಲಿ ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಲಿಂಗಾಯತ ಮಹಾಸಭಾ ಏನಾದರೂ ತೀರ್ಮಾನ ಮಾಡಲಿ, ಪಂಚಮಸಾಲಿಗಳು ಅದಕ್ಕೆ ಕಿವಿಗೊಡಬೇಡಿ, ಜಾತಿ ಜನಗಣತಿಯಲ್ಲಿ ನೀವು ಪಂಚಮಸಾಲಿಗಳೆಂದು ನಮೂದಿಸಿ ಎಂದಿದ್ದಾರೆ. ಸಂವಿಧಾನ ಬದ್ಧವಾಗಿ ಲಿಂಗಾಯತ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.. ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಹಳೇಯರಗುದ್ರಿ ಗ್ರಾಮದ ಶ್ರೀ ಶಿವಶರಣಿ ಹೇಮರಡ್ಡಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ …

Read More »

ವೀರಶೈವ ಲಿಂಗಾಯತ ಏಕತಾ ಸಮಾವೇಶದಲ್ಲಿ ‌ಮೊಳಗಿದ ಒಗ್ಗಟ್ಟಿನ ‌ಮಂತ್ರ: ನೂರಾರು ಸ್ವಾಮೀಜಿಗಳು ಭಾಗಿ: ಸಮಾಜದ ಒಡಕು ತೊಲಗಿಸಲು ಶಪಥ…!

ಹುಬ್ಬಳ್ಳಿ: ಜಾತಿ ಸಮೀಕ್ಷೆಯಲ್ಲಿ ಧರ್ಮದ ಕಾಲಂನಲ್ಲಿ ವೀರಶೈವ – ಲಿಂಗಾಯತ ಅಂತ ಬರೆಯಿಸಿ ಎಂದು ವೀರಶೈವ ಲಿಂಗಾಯತ ಏಕತಾ ಸಮಾವೇಶದಲ್ಲಿ ನೇರೆದಿದ್ದ ನೂರಾರು ಸ್ವಾಮೀಜಿಗಳು ಏಕ ರೂಪದ ನಿರ್ಧಾರ ತಗೆದುಕೊಂಡಿದ್ದಾರೆ. ನಗರದ ನೆಹರೂ ಮೈದಾನದಲ್ಲಿ ಆಯೋಜಿಸಿದ ವೀರಶೈವ – ಲಿಂಗಾಯತ ಏಕತಾ ಸಮಾವೇಶದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ರಾಷ್ಟ್ರೀಯ ವೀರಶೈವ ಲಿಂಗಾಯತ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ, ವೀರಶೈವ – ಲಿಂಗಾಯತ ಸಮಾಜ ಕವಲು ದಾರಿಯಲ್ಲಿದೆ. ಇಡೀ ಜಗತ್ತಿಗೆ ಸಾಮಾಜಿಕ ನ್ಯಾಯ …

Read More »

ಕಮ್ಯೂನಿಸ್ಟ್ ಮನಸ್ಥಿತಿಯ ಸ್ವಾಮೀಜಿಗಳಿಂದ ಹಿಂದೂ ಧರ್ಮದಿಂದ ಲಿಂಗಾಯತರನ್ನು ದೂರ ಮಾಡಲು ಸಂಚು: ಯತ್ನಾಳ್

ಹುಬ್ಬಳ್ಳಿ: ಕೆಲವು ಕಮ್ಯೂನಿಸ್ಟ್ ಮೈಂಡ್‍ಸೆಟ್‍ನ ಸ್ವಾಮೀಜಿಗಳು ಹಿಂದೂ ಧರ್ಮದಿಂದ ಲಿಂಗಾಯತರನ್ನು ದೂರ ಮಾಡಲು ಸಂಚು ಹೂಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದರು. ಹುಬ್ಬಳ್ಳಿಯ ವೀರಶೈವ ಲಿಂಗಾಯತ ಏಕತಾ ಸಮಾವೇಶದ ಬಗ್ಗೆ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ನಡುವಿನ ಸಾಮ್ಯತೆಗಳನ್ನು ಒತ್ತಿ ಹೇಳಿದರು. ದುರಾದೃಷ್ಟವಶಾತ್, ಕೆಲವು ಸ್ವಾಮೀಜಿಗಳು ತಮ್ಮ ಸ್ವಾರ್ಥಕ್ಕಾಗಿ ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ನಡುವೆ ಕಂದಕ ನಿರ್ಮಿಸಲು ಪ್ರಯತ್ನಿಸುತ್ತಿದ್ದಾರೆ. ಈ ಸ್ವಾಮೀಜಿಗಳು …

Read More »