Breaking News

Yearly Archives: 2025

ಮೈಸೂರು ದಸರಾ: ಎರಡನೇ ಹಂತದ ಸಿಡಿಮದ್ದು ತಾಲೀಮು ಹೇಗಿತ್ತು?

ಮೈಸೂರು: ದಸರಾ ಜಂಬೂ ಸವಾರಿ ದಿನ ನಡೆಯುವ ಸಾಂಪ್ರದಾಯಿಕ ಕುಶಾಲತೋಪಿಗೆ ಗಜಪಡೆ ಹಾಗೂ ಅಶ್ವದಳವನ್ನು ಸಿದ್ಧಗೊಳಿಸುವ, ಸಿಡಿಮದ್ದು ಸಿಡಿಸುವ ಎರಡನೇ ಹಂತದ ತಾಲೀಮು ಇಂದು ನಡೆಯಿತು. ನಗರದ ವಸ್ತು ಪ್ರದರ್ಶನ ಆವರಣದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್​ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ತಾಲೀಮು ನಡೆಸಿದರು. ಅಭಿಮನ್ಯು ನೇತೃತ್ವದ 14 ಆನೆಗಳು ಹಾಗೂ ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸುವ 30 ಅಶ್ವಗಳು ಎರಡನೇ ಹಂತದ ಸಿಡಿಮದ್ದು ತಾಲೀಮಿನಲ್ಲಿ ಭಾಗವಹಿಸಿದವು. ಸಿಡಿಮದ್ದು …

Read More »

ಗೃಹಲಕ್ಷ್ಮಿ ಹಣದಲ್ಲಿ ನಿರ್ಮಿಸಿದ ಮನೆ ಬಾಗಿಲಿನಲ್ಲಿ ಸಿಎಂ

ವಿಜಯನಗರ : ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೆಂಚಮಲ್ಲನಹಳ್ಳಿ ಗ್ರಾಮದ ಸಿಎಂ ಸಿದ್ದರಾಮಯ್ಯ ಕಟ್ಟಾ ಅಭಿಮಾನಿಯಾದ ಮಲ್ಲೇಶಪ್ಪ ತಿಪ್ಪೇಸ್ವಾಮಿ ಹಾಗೂ ಪಾರ್ವತಿ ದಂಪತಿ ತಮ್ಮ ಮನೆಯ ಬಾಗಿಲಿನಲ್ಲಿ ಸಿಎಂ ಸಿದ್ದರಾಮಯ್ಯ ಚಿತ್ರವನ್ನು ಕೆತ್ತಿಸುವ ಮೂಲಕ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಯಾದ ಪಾರ್ವತಮ್ಮರಿಗೆ 30 ಸಾವಿರ ರೂ. ಬಂದಿದ್ದು, ಅದನ್ನು ಕೂಡಿಟ್ಟು ಅದರಿಂದ ಅವರ ಮನೆಗೆ ಹೊಸ ಬಾಗಿಲನ್ನು ನಿರ್ಮಿಸಿದ್ದಾರೆ. ಅದರ ಮೇಲ್ಭಾಗದಲ್ಲಿ ಸಿಎಂ ಸಿದ್ದರಾಮಯ್ಯ ಹೆಸರನ್ನು ಕೆತ್ತಿಸಿದ್ದಾರೆ. ಅದರ ಮಧ್ಯಭಾಗದಲ್ಲಿ ಸಿದ್ದರಾಮಯ್ಯ …

Read More »

ಮೈಸೂರು ದಸರಾ ಭದ್ರತೆಗೆ 6000ಕ್ಕೂ ಹೆಚ್ಚು ಪೊಲೀಸರು, 30 ಸಾವಿರಕ್ಕೂ ಅಧಿಕ ಸಿಸಿಟಿವಿ ಕಣ್ಗಾವಲು

ಮೈಸೂರು: ಈ ಬಾರಿ ನಾಡಹಬ್ಬ ದಸರಾ ಮಹೋತ್ಸವಕ್ಕೆ ಎರಡು ಹಂತದ ಭದ್ರತೆ ಮಾಡಿಕೊಳ್ಳಲಾಗಿದೆ. ಸೆ.22 ರಿಂದ 29ನೇ ತಾರೀಕಿನವರೆಗೆ ಮೊದಲ ಹಂತದ ಭದ್ರತೆ ಮತ್ತು ಸೆ.30 ರಿಂದ ಅ.2ರವರೆಗೆ ಎರಡನೇ ಹಂತದ ಜಂಬೂಸವಾರಿ ಭದ್ರತೆ ಏರ್ಪಡಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ತಿಳಿಸಿದರು. ಇಂದು ಖಾಸಗಿ ಹೋಟೆಲ್​​ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ದಸರಾದ ಜಂಬೂಸವಾರಿ ಮೆರವಣಿಗೆ ಹಾಗೂ ಸುರಕ್ಷತೆ, ಸುಗಮ ಮತ್ತು ಸಾಂಪ್ರದಾಯಿಕ ದಸರಾ ಆಚರಣೆಯ ಸಿದ್ಧತೆ ಹಾಗೂ ಜಂಬೂಸವಾರಿ …

Read More »

ಬೆಳಗಾವಿ ಪ್ರತಿ ವರ್ಷದಂತೆ ಈ ವರ್ಷವೂ 98ನೇ ನಾಡ ಹಬ್ಬ ಉತ್ಸವವನ್ನು ಸೆ.22ರಿಂದ ಸೆ.26ರವರೆಗೆ ನಗರದ ಕನ್ನಡ ಸಾಹಿತ್ಯ ‌ಭವನದಲ್ಲಿ ಆಯೋಜಿಸಲಾಗಿದೆ

ಬೆಳಗಾವಿ ಪ್ರತಿ ವರ್ಷದಂತೆ ಈ ವರ್ಷವೂ 98ನೇ ನಾಡ ಹಬ್ಬ ಉತ್ಸವವನ್ನು ಸೆ.22ರಿಂದ ಸೆ.26ರವರೆಗೆ ನಗರದ ಕನ್ನಡ ಸಾಹಿತ್ಯ ‌ಭವನದಲ್ಲಿ ಆಯೋಜಿಸಲಾಗಿದೆ ಎಂದು ನಾಡಹಬ್ಬದ ಪ್ರಧಾನ ಕಾರ್ಯದರ್ಶಿ ಡಾ. ಸಿ.ಕೆ.ಜೋರಾಪೂರ ಹೇಳಿದರು. ಶುಕ್ರವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬೆಳಗಾವಿಯಲ್ಲಿ ನಡೆಸುವ ನಾಡಹಬ್ಬಕ್ಕೆ ತನ್ನದೆಯಾದ ಇತಿಹಾಸ ಇದೆ. ಪ್ರಚಲಿತ ವಿಷಯವನ್ನು ಮುಂದಿಟ್ಟುಕೊಂಡು ಚಿಂತನೆ ಮಾಡುವ ಕೆಲಸ ಮಾಡುತ್ತಿದ್ದೇವೆ ಎಂದರು. ಸೆ.22 ರಂದು ಸಂಜೆ 6ಕ್ಕೆ ನಾಡದೇವಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ …

Read More »

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆ*

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆ* ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದು ಕೊರತೆ ಸಭೆಯಲ್ಲಿ ಪಿ ಐ ಗುರುಶಾಂತ ಗೌಡ ದಾಶ್ಯಾಳ ಮಾತನಾಡಿ ಸಮಾಜದಲ್ಲಿ ಶಾಂತತೆ ಇರಬೇಕಾದರೆ ಜನರ ಸಹಕಾರ ಬೇಕು ಅಂತ ಹೇಳಿದರು. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಣ್ಣ- ಪುಟ್ಟ ಪ್ರಕರಣಗಳನ್ನು ಹೊರತು ಪಡಿಸಿ ಈ ವರ್ಷ ಯಾವುದೇ …

Read More »

ಹುಬ್ಬಳ್ಳಿ ವೀರಶೈವ ಸಮಾವೇಶಕ್ಕೆ ಪಂಚಮಸಾಲಿಗರು ಹೋಗಬಾರದು: ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆ

ಹುಬ್ಬಳ್ಳಿ ವೀರಶೈವ ಸಮಾವೇಶಕ್ಕೆ ಪಂಚಮಸಾಲಿಗರು ಹೋಗಬಾರದು: ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆ ಬೆಳಗಾವಿ: “ಹುಬ್ಬಳ್ಳಿಯಲ್ಲಿ ಶುಕ್ರವಾರ (ಇಂದು) ನಡೆಯಲಿರುವ ಅಖಿಲ ಭಾರತ ವೀರಶೈವ ಮಹಾಸಭಾ ಸಮಾವೇಶಕ್ಕೆ ಪಂಚಮಸಾಲಿ ಸಮಾಜದವರು ಯಾರೂ ಹೋಗಬಾರದು” ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಗುರುವಾರ ಕರೆ ನೀಡಿದ್ದಾರೆ. ಬೆಳಗಾವಿಯಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸ್ವಾಮೀಜಿ ಅವರು, “ನಮ್ಮ ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಅಖಿಲ ಭಾರತ ವೀರಶೈವ ಮಹಾಸಭಾ ನಮಗೆ ಸಹಕಾರ …

Read More »

ಶ್ರೀ ವಿಶ್ವಕರ್ಮ ಸ್ತೋತ್ರಗಳನ್ನು ಅನುಸರಿಸಿ ಸಧೃಡ ಸಮಾಜ ನಿರ್ಮಾಣಕ್ಕೆ ಮುಂದಾಗಿ ಶ್ರೀ ಪ್ರಮೋದ ಮಹಾಸ್ವಾಮೀಗಳು ಹೇಳಿಕೆ

ಶ್ರೀ ವಿಶ್ವಕರ್ಮ ಸ್ತೋತ್ರಗಳನ್ನು ಅನುಸರಿಸಿ ಸಧೃಡ ಸಮಾಜ ನಿರ್ಮಾಣಕ್ಕೆ ಮುಂದಾಗಿ ಶ್ರೀ ಪ್ರಮೋದ ಮಹಾಸ್ವಾಮೀಗಳು ಹೇಳಿಕೆ ಪುರಾಣಗಳ ಪ್ರಕಾರ ಶ್ರೀ ವಿಶ್ವಕರ್ಮ ಅವರು ಜಗತ್ತಿನ ಸೃಷ್ಟಿಕರ್ತರಾಗಿದ್ದಾರೆ, ವಿಶ್ವಕರ್ಮ ಸ್ತೋತ್ರಗಳನ್ನು ತಿಳಿದುಕೊಂಡು ಅವುಗಳನ್ನು ಅನುಸರಿಸುವುದರ ಮೂಲಕ ಸುಂದರ, ಸಧೃಡ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕಿತ್ತೂರಿನ ಶ್ರೀ ವಿಶ್ವಕರ್ಮ ಏಕದಂಡಗಿ ಶ್ರೀ ಮಠದ ಶ್ರೀ ಸರಸ್ವತಿ ಪೀಠಾಧೀಶರಾದ ಶ್ರೀ ಆರ್. ಪ್ರಮೋದ ಮಹಾಸ್ವಾಮಿಗಳು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು …

Read More »

ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ.

ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ. – ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಧಾರವಾಡ ವಾರ್ಡ ನಂಬರ 10ರ ಶಿವಶಕ್ತಿ ನಗರದ ಕೊಳಚೆ ಪ್ರದೇಶದಲ್ಲಿ ವಾಸಿಸುತ್ತಿರುವ 26 ಕುಟುಂಬಗಳು ಸೇರಿ ಅಂಜನೇಯ ನಗರದ 15 ಫಲಾನುಭವಿಗಳ ಕುಟುಂಬಕ್ಕೆ ವಿಧಾನ ಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಅವರು ಹಕ್ಕು ಪತ್ರ …

Read More »

ನಮ್ಮ ಭೂಮಿ ನಮ್ಮ ತೋಟ ಯೋಜನೆ ಜಾಗಕ್ಕಾಗಿ ಪ್ರತಿಭಟನೆ

ನಮ್ಮ ಭೂಮಿ ನಮ್ಮ ತೋಟ ಯೋಜನೆ ಜಾಗಕ್ಕಾಗಿ ಪ್ರತಿಭಟನೆ ಚಿಕ್ಕೋಡಿ: ತಾಲೂಕಿನ ಕೇರೂರ ಗ್ರಾಮದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ “ನಮ್ಮ ಭೂಮಿ ನಮ್ಮ ತೋಟ ಯೋಜನೆ ಜಾಗಕ್ಕಾಗಿ ಕೇರೂರ ಗ್ರಾಮ ಪಂಚಾಯತ ಮುಂದೆ ಪ್ರತಿಭಟನೆ ನಡೆಯಿತು. ಕಳೆದ 19 ವರ್ಷಗಳ ಹಿಂದೆ ಸುಮಾರು 184 ಕ್ಕೂ ಹೆಚ್ಚು ಜನರಿಗೆ ಹಕ್ಕು ಪತ್ರ ನೀಡಿಲಾಗಿತ್ತು.ಆದ್ರೆ ಇನ್ನೂವರೆಗೆ ಜಾಗ ನೀಡಿಲ್ಲ,ಜಾಗ ನೀಡುವಂತೆ ಪ್ರತಿಭಟನೆಗಾರರು ಆಗ್ರಹಿಸಿದರು. ಇನ್ನೂ ಪ್ರತಿಭಟನಾ ಸ್ಥಳಕ್ಕೆ ಚಿಕ್ಕೋಡಿ ತಾಲೂಕಾ ಪಂಚಾಯತ …

Read More »

ವಿಜಯಪುರ ;ಟಿಪ್ಪರ ಹಾಗೂ ಬೈಕ್ ಮಧ್ಯೆ ಡಿಕ್ಕಿ: ಬೈಕ್ ಸವಾರನ ದುರ್ಮರಣ

ವಿಜಯಪುರ ;ಟಿಪ್ಪರ ಹಾಗೂ ಬೈಕ್ ಮಧ್ಯೆ ಡಿಕ್ಕಿ: ಬೈಕ್ ಸವಾರನ ದುರ್ಮರಣ ಟಿಪ್ಪರ ಹಾಗೂ ಬೈಕ್ ಮಧ್ಯೆ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ನಗರದ ರೇಡಿಯೋ ಕೇಂದ್ರ ಬಳಿ ನಡೆದಿದೆ. ಜಾಧವ್ ಮೃತಪಟ್ಟಿರುವ ಬೈಕ್ ಸವಾರ. ಇನ್ನು ಅಪಘಾತದ ಬಳಿಕ ಟಿಪ್ಪರ ಸ್ಥಳದಲ್ಲಿಯೇ ಬಿಟ್ಟು ಚಾಲಕ ಎಸ್ಕೇಪ್ ಆಗಿದ್ದಾನೆ. ಅಲ್ಲದೇ, ಜಾಧವ್ ಟಿಪ್ಪರ ಗಾಲಿಗೆ ಸಿಲುಕಿಕೊಂಡು ನುಜ್ಜುಗುಜ್ಜಾಗಿದ್ದಾನೆ. ಸ್ಥಳಕ್ಕೆ ಪೊಲೀಸ ಭೇಟಿ ನೀಡಿ ಪರಿಶೀಲನೆ …

Read More »