Breaking News

Yearly Archives: 2025

ಬೇಡಿದ ಭಕ್ತರ ಇಷ್ಟಾರ್ಥ ಈಡೇರಿಸುವ ಗುಡಿಗೇರಿ ದ್ಯಾಮವ್ವ; ದೇವಿಯ ದರ್ಶನಕ್ಕೆ ಹರಿದು ಬರುತ್ತಿದೆ ಭಕ್ತಸಾಗರ

ಹುಬ್ಬಳ್ಳಿ : ಉತ್ತರ ಕರ್ನಾಟಕ ಭಾಗದಲ್ಲಿ ಶಕ್ತಿಪೀಠಗಳಿಗೇನು ಕಮ್ಮಿ ಇಲ್ಲ. ಸವದತ್ತಿ ಯಲ್ಲಮ್ಮ, ಹುಲಿಗಿಯ ಹುಲಿಗೆಮ್ಮ ದೇವಿಯಂತೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ‘ಗುಡಿಗೇರಿ ದ್ಯಾಮವ್ವ’ ದೇವಸ್ಥಾನ ‌ಕೂಡ ಪ್ರಮುಖ ಶಕ್ತಿ ಕೇಂದ್ರವಾಗಿ ಮಾರ್ಪಟ್ಟಿದೆ‌. ದಸರಾ ಸಂದರ್ಭದಲ್ಲಿ ರಾಜ್ಯ ಅಲ್ಲದೇ ಅನ್ಯ ರಾಜ್ಯದ ಭಕ್ತರೂ ದೇವಿಯ ದರ್ಶನ ಪಡೆದುಕೊಂಡು ಪುನೀತರಾಗುತ್ತಿದ್ದಾರೆ. ಗುಡಿಗೇರಿ ದ್ಯಾಮವ್ವ ದೇವಿಯ ಇತಿಹಾಸವು ಶಿಶುನಾಳ ಶರೀಫರ ಕಾಲದಿಂದಲೂ ಪ್ರಚಲಿತದಲ್ಲಿದೆ. ದ್ಯಾಮವ್ವ ದೇವಿ ‘ಶಕ್ತಿದೇವತೆ’ ಆಗಿದ್ದು, ಶರೀಫ ಸಾಹೇಬರ ಭಕ್ತಿಯ …

Read More »

ರಾಜ್ಯದ ಭೂಸ್ವಾಧೀನ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆ ಮತ್ತು ದಕ್ಷತೆಗೆ ಏಕೀಕೃತ ಡಿಜಿಟಲ್ ವ್ಯವಸ್ಥೆ

ರಾಜ್ಯದ ಭೂಸ್ವಾಧೀನ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆ ಮತ್ತು ದಕ್ಷತೆಗೆ ಏಕೀಕೃತ ಡಿಜಿಟಲ್ ವ್ಯವಸ್ಥೆ   ಬೆಂಗಳೂರು: ರಾಜ್ಯಾದ್ಯಂತ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ದಕ್ಷತೆ ಮತ್ತು ನ್ಯಾಯಸಮ್ಮತೆಯನ್ನು ತರುವ ನಿಟ್ಟಿನಲ್ಲಿ ಸರ್ಕಾರ ಏಕೀಕೃತ ಭೂಸ್ವಾಧೀನ ವ್ಯವಸ್ಥೆ ದತ್ತಾಂಶ ಮಾಡ್ಯೂಲ್ ಅನ್ನು ಜಾರಿಗೊಳಿಸಿದೆ. ಇದು ದೇಶದಲ್ಲಿಯೇ ಭೂಸ್ವಾಧೀನ ಪ್ರಕ್ರಿಯೆಯನ್ನು ಆನ್‌ಲೈನ್ ಮೂಲಕ ವ್ಯವಹರಿಸುವ ಏಕಮಾತ್ರ ವ್ಯವಸ್ಥೆಯಾಗಿದ್ದು ಕರ್ನಾಟಕ ರಾಜ್ಯದಲ್ಲಿ ಮಾತ್ರ ಅನುಷ್ಠಾನಗೊಳಿಸಿ ಜಾರಿಗೆ ತರಲಾಗಿರುತ್ತದೆ. ಈ ಸಂಬಂಧ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸುದ್ದಿಗೋಷ್ಟಿ ಉದ್ದೇಶಿಸಿ …

Read More »

ಮಲ್ಟಿಫ್ಲೆಕ್ಸ್​ಗಳಲ್ಲಿ 200 ರೂ ನಿಗದಿಗೆ ತಡೆ ಆದೇಶ ಪ್ರಶ್ನಿಸಿದ ಮೇಲ್ಮನವಿ ಇಂದು ವಿಚಾರಣೆ

ಬೆಂಗಳೂರು: ಮಲ್ಟಿಫ್ಲೆಕ್ಸ್ ಸೇರಿ ರಾಜ್ಯದ ಚಿತ್ರಮಂದಿರಗಳಲ್ಲಿ ಎಲ್ಲ ಭಾಷೆಯ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂ ಏಕರೂಪದ ದರ ನಿಗದಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ನಿಯಮಗಳಿಗೆ ತಡೆ ನೀಡಿರುವ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಹೈಕೋರ್ಟ್ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿದ್ದು, ಇಂದು ವಿಚಾರಣೆಗೆ ಬರಲಿದೆ. ಕರ್ನಾಟಕ ಸಿನಿಮಾ ನಿಯಂತ್ರಣ (ತಿದ್ದುಪಡಿ) ನಿಯಮಗಳು-2025 ಅಡಿ ನಿಯಮ 55(6)ರ ನಿಯಮಕ್ಕೆ ಹೈಕೋರ್ಟ್​ನ ಏಕ ಸದಸ್ಯ …

Read More »

ದಸರಾ ಪಟ್ಟದ ಗೊಂಬೆಗಳೊಂದಿಗೆ 20 ದೇಶದ ಗೊಂಬೆಗಳ ವಯ್ಯಾರ: ವಿದೇಶ ಸುತ್ತಿ ಬೊಂಬೆಗಳ ಸಂಗ್ರಹಿಸುವುದೇ ದಂಪತಿಯ ಹವ್ಯಾಸ

ದಾವಣಗೆರೆ: ದಸರಾ ಹಬ್ಬದಂದು ಬೊಂಬೆಗಳನ್ನು ಕೂರಿಸುವುದು ಈ ನೆಲದ ಸಂಪ್ರದಾಯ. ಆದರೆ, ಯಾವತ್ತಾದರೂ ನೀವು ವಿದೇಶಿ ಬೊಂಬೆಗಳನ್ನು ಕೂರಿಸಿದ್ದೀರಾ?. ಆದರೆ, ದಾವಣಗೆರೆಯಲ್ಲಿನ ದಂಪತಿಯೊಬ್ಬರು ವಿದೇಶಿ ಬೊಂಬೆಗಳನ್ನು ಕೂರಿಸಿ ದಸರಾ ಆಚರಿಸುತ್ತಿದ್ದಾರೆ. ಆಫ್ರಿಕಾ ಖಂಡದ ಹಲವು ವಿಶೇಷ ಬೊಂಬೆಗಳನ್ನು ತಂದು ಕಳೆದ 13 ವರ್ಷಗಳಿಂದ ದಸರಾ ಹಬ್ಬ ಆಚರಿಸುತ್ತಿದ್ದಾರೆ. ಈ ಗೊಂಬೆ ಕೂರಿಸುವ ಪದ್ಧತಿಯು 18ನೇ ಶತಮಾನದಿಂದ ನಡೆದುಕೊಂಡು ಬಂದಿದೆ. ಇದಕ್ಕೆ ಅದರದ್ದೇ ಆದ ಮಹತ್ವವಿದೆ. ದೇಶ – ವಿದೇಶಗಳನ್ನು ಸುತ್ತುವ ಹವ್ಯಾಸ …

Read More »

ಹಪ್ತಾ ಕೊಡದೇ ಇದ್ದಿದ್ದಕ್ಕೆ ಮಾಜಿ ಸೈನಿಕನ ಮೇಲೆ ಹಲ್ಲೆ; ಧಾರವಾಡ ಪೊಲಿಸರ ಮೇಲೆ ಗಂಭೀರ ಆರೋಪ

ಧಾರವಾಡ, ಸೆಪ್ಟೆಂಬರ್ 29:  ಸೇನೆಯಿಂದ ನಿವೃತ್ತಿಹೊಂದಿದ್ದ ಸೈನಿಕರೊಬ್ಬರು  ಧಾರವಾಡದಲ್ಲಿ ವಿದ್ಯಾರ್ಥಿಗಳಿಗಾಗಿ ಪಿಜಿ ಮತ್ತು ಮೆಸ್ ನಡೆಸುತ್ತಿದ್ದರು. ಕಡಿಮೆ ದರದಲ್ಲಿ ಊಟ, ವಸತಿ ಕೊಡುತ್ತಿದ್ದರು.  ಆದರೆ ಅವರ ಮೇಲೆ ಕಳೆದ ರಾತ್ರಿ ಅಟ್ಯಾಕ್ ಆಗಿದ್ದು, ಎಂಟರಿಂದ ಹತ್ತು ಜನ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ಕೃತ್ಯ ಎಸಗಿದವರು ಸ್ವತಃ ಪೊಲೀಸರೇ.  ಹಪ್ತಾ ಕೊಡದೇ ಇದ್ದಿದ್ದಕ್ಕೆ ಪೊಲೀಸರು ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ಮಾಜಿ ಸೈನಿಕ ಆರೋಪ ಮಾಡಿದ್ದಾರೆ. ಮಾಜಿ ಸೈನಿಕನ ಮೇಲೆ ಪೊಲೀಸರಿಂದ ದುಂಡಾವರ್ತನೆ ಆರೋಪ ದೇಶ …

Read More »

ಶ್ರೀಲಂಕಾದಿಂದ ಅಕ್ರಮವಾಗಿ ವಲಸೆ ಬಂದ ಮೂವರು ವಲಸಿಗರುಪೊಲೀಸ್ ವಶಕ್ಕೆ

ಬೆಂಗಳೂರು, ಸೆಪ್ಟೆಂಬರ್ 29: ವಿದೇಶೀಯರು ಅಕ್ರಮವಾಗಿ ಬೆಂಗಳೂರಿಗೆ (Bengaluru) ಬಂದು ನೆಲಸುವ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲೇ, ಶ್ರಿಲಂಕಾದಿಂದ ಬಂದ ಮೂವರು ಅಕ್ರಮ ವಲಸಿಗರನ್ನು (Illegal Immigrants) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈಗಾಗಲೇ ಇಂತಹ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ. ಪಾಕಿಸ್ತಾನದಿಂದ, ಬಾಂಗ್ಲಾದಿಂದ ಬಂದಿದ್ದ ಅಕ್ರಮ ವಲಸಿಗರನ್ನು ಕೆಲವು ತಿಂಗಳ ಹಿಂದೆ ಬಂಧಿಸಲಾಗಿತ್ತು. ಈಗ ಶ್ರೀಲಂಕಾ ಅಕ್ರಮ ವಲಸಿಗರ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದೇಶಿಗರು ಅಕ್ರಮವಾಗಿ ಬೆಂಗಳೂರಿಗೆ ಬಂದಿದ್ದು ಹೇಗೆ? ಶ್ರೀಲಂಕಾದಿಂದ ಅಕ್ರಮವಾಗಿ ವಲಸೆ …

Read More »

ಅ.1ರಿಂದ ಇರಲ್ಲ ವರ್ಕ್ ಫ್ರಮ್ ಹೋಮ್: ಬೆಂಗಳೂರಲ್ಲಿ ಟ್ರಾಫಿಕ್​ ಡಬಲ್​?

ಬೆಂಗಳೂರು, ಸೆಪ್ಟೆಂಬರ್​ 29: ಅಕ್ಟೋಬರ್ 1ರಿಂದ ಬಹುತೇಕ ಖಾಸಗಿ ಕಂಪನಿಗಳ ವರ್ಕ್ ಫ್ರಮ್ ಹೋಮ್ (Work from Home) ಅಂತ್ಯವಾಗಲಿದ್ದು, ರಾಜಧಾನಿ ಬೆಂಗಳೂರಿನಲ್ಲಿ (Bengaluru) ಟ್ರಾಫಿಕ್​ ಡಬಲ್​ ಆಗುವ ಸಾಧ್ಯತೆ ಹೆಚ್ಚಿದೆ. ಉದ್ಯೋಗಿಗಳು ಕಚೇರಿಗೇ ಹೋಗಿ ಕೆಲಸ ಮಾಡಬೇಕಿರುವ ಕಾರಣ ವಾಹನಗಳ ಓಡಾಟದ ಸಂಖ್ಯೆಯೂ ಸಹಜವಾಗಿ ಹೆಚ್ಚಲಿದೆ. ಅಂದಾಜಿನ ಪ್ರಕಾರ ಔಟರ್​ ರಿಂಗ್​ ರೋಡ್​ ಒಂದರಲ್ಲಿಯೇ ಪ್ರತಿನಿತ್ಯ 10 ಲಕ್ಷ ಉದ್ಯೋಗಿಗಳು ಓಡಾಡುವ ನಿರೀಕ್ಷೆ ಇದೆ.ಬೆಂಗಳೂರಿನ ಬಹುತೇಕ ಖಾಸಗಿ ಕಂಪನಿಗಳು ವರ್ಕ್​ ಫ್ರಮ್​ ಹೋಮ್​ ಸೌಲಭ್ಯ ಹಿಂಪಡೆಯಲು …

Read More »

ಇದು ಸೋಲಲ್ಲ, ಗೆಲುವಿನ ಮುಂದೂಡಿಕೆಯಷ್ಟೇ.

ಪ್ರತಿರೋಧವೇ ಇಲ್ಲವೆಂದು ಪ್ರಭುತ್ವದಿಂದ ಬೀಗುತಿದ್ದ ನೆಲದಲ್ಲಿ ಪ್ರಜಾಪ್ರಭುತ್ವವನ್ನು ಪ್ರತಿಷ್ಠಾಪಿಸಿದ ಶ್ರೇಯಸ್ಸು ಸತೀಶಣ್ಣನವರಿಗೆ ಸಲ್ಲುತ್ತದೆ. ಚುನಾವಣೆಯಲ್ಲಿ ಸೋತರೂ ಪ್ರಜಾಪ್ರಭುತ್ವವನ್ನು ಗೆಲ್ಲಿಸಿದ ಕೀರ್ತಿ ನಿಮ್ಮದಾಗಿದ್ದು ಈ ಫಲಿತಾಂಶದಿಂದ ಧೃತಿಗೆಡಬೇಕಾಗಿಲ್ಲ. ಇದು ಸೋಲಲ್ಲ, ಗೆಲುವಿನ ಮುಂದೂಡಿಕೆಯಷ್ಟೇ.   ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ಈ ಬಾರಿ ರಾಜಕೀಯ ಜಿದ್ದಾಜಿದ್ದಿಗಿಂತ ಪ್ರತಿಷ್ಠೆಯ ಕಣವಾಗಿತ್ತು,ಆಯಾ ಪಕ್ಷದ ಕಾರ್ಯಕರ್ತರಿಗೇ ಗೊಂದಲದ ಗುಡಾಗಿತ್ತು, ಈ ಚುನಾವಣೆ ಮೇಲೆ ಇಡೀ ರಾಜ್ಯದ ಕಣ್ಣಿತ್ತು,ಲೋಕೋಪಯೋಗಿ ಸಚಿವರ ಜಾಣ ನಡೆ,ರಮೇಶ್ ಕತ್ತಿಯವರ …

Read More »

ಬೆಂಗಳೂರಲ್ಲಿ 9.93 ಕೋಟಿ ರೂ ಮೌಲ್ಯದ ಮಾದಕ ಪದಾರ್ಥ ಜಪ್ತಿ: 7 ಜನರ ಬಂಧನ

ಬೆಂಗಳೂರು : ಇಬ್ಬರು ವಿದೇಶಿ ಪ್ರಜೆಗಳ ಸಹಿತ 7 ಜನ ಆರೋಪಿಗಳನ್ನ ಬಂಧಿಸಿರುವ ಬೆಂಗಳೂರು ಪೊಲೀಸರು ಬರೋಬ್ಬರಿ 9.93 ಕೋಟಿ ರೂ ಮೌಲ್ಯದ ವಿವಿಧ ಮಾದಕ ಪದಾರ್ಥಗಳನ್ನ ಜಪ್ತಿ ಮಾಡಿದ್ದಾರೆ. ಒಟ್ಟು 3 ಕೆ.ಜಿ 858 ಗ್ರಾಂ ಎಂಡಿಎಂಎ ಕ್ರಿಸ್ಟೆಲ್, 41 ಗ್ರಾಂ ಎಕ್ಸ್‌ಟಸಿ ಪಿಲ್ಸ್, 1 ಕೆ.ಜಿ 82 ಗ್ರಾಂ ಹೈಡ್ರೋಗಾಂಜಾ, 6 ಕೆ.ಜಿ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ 1 ಕಾರು ಮತ್ತು 1 ದ್ವಿಚಕ್ರ ವಾಹನವನ್ನು ವಶಕ್ಕೆ …

Read More »

ಮಲೆನಾಡ ದಸರಾ: ಯುವ ದಸರಾದ ರಂಗು ಹೆಚ್ಚಿಸಿದ ನಟ ಶಿವಣ್ಣನ ಡ್ಯಾನ್ಸ್​, ಸಾಂಗ್ಸ್​

ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಮೈಸೂರಿನಂತೆ ಅದ್ಧೂರಿ ದಸರಾ ಕಾರ್ಯಕ್ರಮವನ್ನು ಮಹಾನಗರ ಪಾಲಿಕೆ ವತಿಯಿಂದ ಪ್ರತಿ ವರ್ಷ ನಡೆಸಿಕೊಂಡು ಬರಲಾಗುತ್ತಿದೆ. ಅದರಂತೆ ನಡೆದ ಯುವ ದಸರಾ ಕಾರ್ಯಕ್ರಮದಲ್ಲಿ ಹ್ಯಾಟ್ರಿಕ್​​ ಹಿರೋ ಶಿವರಾಜ್​ ಕುಮಾರ್​​ ಅವರು ಭಾಗವಹಿಸಿದ್ದು ನೆರೆದಿದ್ದವರನ್ನು ಪುಲ್ ಖುಷಿ ಆಗುವಂತೆ ಮಾಡಿತು. ಯುವ ದಸರಾದ ನಿಮಿತ್ತ ಖ್ಯಾತ ಹಿನ್ನೆಲೆ ಗಾಯಕ ಹೇಮಂತ್​​ ಹಾಗೂ ಅನನ್ಯ ಭಟ್​​ ಅವರ ಸಂಗೀತ ರಸಸಂಜೆ ಕಾರ್ಯಕ್ರಮ ಎಲ್ಲರನ್ನು ಮಂತ್ರ ಮುಗ್ಧರನ್ನಾಗಿಸಿತು. ಶಿವಮೊಗ್ಗದ ಅಲ್ಲಮ ಪ್ರಭು …

Read More »