ಬೆಳಗಾವಿ ತಾಲ್ಲೂಕಿನ ಪಿಕೆಪಿಎಸ್ ಆಡಳಿತ ಮಂಡಳಿಯ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ ತಾಲ್ಲೂಕಿನ ಸಂಭಾವ್ಯ ಅಭ್ಯರ್ಥಿಯನ್ನು ಅವಿರೋಧವಾಗಿ ಆಯ್ಕೆ ಮಾಡಲು ನಿರ್ಧಾರ ವಿಪ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ನಾಯಕ ರಾಹುಲ್ ಜಾರಕಿಹೊಳಿ, ಕುಲಗೋಡೆ ಭಾಗಿ ಬೆಳಗಾವಿ- ಮುರಗೋಡ ಅಜ್ಜನವರ ಕೃಪಾಶೀರ್ವಾದದಿಂದ ರೈತರಿಗಾಗಿಯೇ ನೂರು ವರ್ಷಗಳ ಹಿಂದೆಯೇ ಸ್ಥಾಪಿತಗೊಂಡಿರುವ ಬೆಳಗಾವಿ ಡಿಸಿಸಿ ಬ್ಯಾಂಕಿನ ಹಿತರಕ್ಷಣೆಗೆ ನಾವುಗಳು ಬದ್ಧರಿದ್ದು, ಮುಂದಿನ ದಿನಗಳಲ್ಲಿ ರೈತರಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ದೊರಕಿಸಿಕೊಡುವುದಾಗಿ …
Read More »Yearly Archives: 2025
ಭೂಮಿ ಇರೋವರೆಗೂ ಬಸವಣ್ಣನವರ ವಿಚಾರಧಾರೆಗಳನ್ನ ಕಾಪಾಡಬೇಕು: ಬಸವ ಸಂಸ್ಕೃತಿ ಅಭಿಯಾನದಲ್ಲಿ ಸತೀಶ ಜಾರಕಿಹೊಳಿ
ಬೆಳಗಾವಿ: “ಭೂಮಿ ಇರುವವರೆಗೆ ಬಸವಣ್ಣನವರ ವಿಚಾರಗಳನ್ನು ಕಾಪಾಡುವ ಪ್ರಯತ್ನ ಮಾಡಬೇಕಿದೆ. ದೇಶದಲ್ಲಿ ಮೂಲ ವಿಚಾರ ಮತ್ತು ಇತಿಹಾಸವನ್ನು ತಿರುಚುವ ಕೆಲಸ ಸಾವಿರಾರು ವರ್ಷಗಳಿಂದ ನಡೆಯುತ್ತಿದೆ. ಅಂತಹ ಸಂದರ್ಭದಲ್ಲಿ ಅದನ್ನು ಉಳಿಸುವ ಕೆಲಸ ಬಸವ ಸಂಸ್ಕೃತಿ ಅಭಿಯಾನದ ಮೂಲಕ ನಡೆಯುತ್ತಿರುವುದು ಶ್ಲಾಘನೀಯ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಬೆಳಗಾವಿಯ ನಾಗನೂರು ರುದ್ರಾಕ್ಷಿ ಮಠದ ಎಸ್.ಜಿ.ಬಿ.ಐ.ಟಿ. ಕಾಲೇಜಿನ ಆವರಣದಲ್ಲಿ ಬಸವ ಸಂಸ್ಕೃತಿ ಅಭಿಯಾನದ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. …
Read More »ಕರ್ನಾಟಕ ಅನುಸೂಚಿತ ಜಾತಿ ಮತ್ತು ಪಂಗಡಗಳ ಕಾಯ್ದೆ ಪ್ರಶ್ನಿಸಿ ಅರ್ಜಿ: ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್
ಬೆಂಗಳೂರು: ರಾಜ್ಯದಲ್ಲಿ ಎಸ್ಸಿ – ಎಸ್ಟಿ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕರ್ನಾಟಕ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳು ಮತ್ತು ಸರ್ಕಾರದ ಅಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯ್ದೆ-2022 ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ಸಂಬಂಧ ಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಅಲ್ಲದೇ, ಈ ಕಾಯಿದೆ ಆಧರಿಸಿ ಬಿಬಿಎಂಪಿಯಲ್ಲಿನ 92 ಸಹಾಯಕ ಸಿವಿಲ್ …
Read More »ಹೊಸ ಬದುಕಿಗೆ ಕಾಲಿಟ್ಟ ಅಂಧರು; ಆಶೀರ್ವದಿಸಿದ ಕುಟುಂಬಸ್ಥರು, ಗ್ರಾಮಸ್ಥರು
ರಾಯಚೂರು : ಮದುವೆ ಎಂಬುದು ಸ್ವರ್ಗದಲ್ಲೇ ನಿಶ್ಚಯವಾಗಿರುತ್ತೆ ಎನ್ನುವ ಮಾತಿದೆ. ಆದರೆ, ಅಪ್ಪ-ಅಮ್ಮ ಇಲ್ಲದ, ವಿಶೇಷ ವ್ಯಕ್ತಿ ತಾನು ವಿವಾಹ ಆಗಬೇಕು ಎನ್ನುವ ಹಂಬಲದೊಂದಿಗೆ ಕಳೆದ ಮೂರು ವರ್ಷಗಳಿಂದ ವಧುವಿಗಾಗಿ ಹುಡುಕಾಟ ನಡೆಸುತ್ತಿದ್ದರೂ ವಧುವೇ ಸಿಕ್ಕಿರಲಿಲ್ಲ. ಆದರೆ, ಕೆಲಸಕ್ಕಾಗಿ ತೆರಳಿದಾಗ ಕಂಕಣ ಭಾಗ್ಯ ಕೂಡಿ ಬಂದಿದ್ದು, ಗ್ರಾಮಸ್ಥರೆಲ್ಲರೂ ಸೇರಿಕೊಂಡು ಅಪರೂಪದ ವಿವಾಹದ ಆರತಕ್ಷತೆ ನೆರವೇರಿಸಿದ್ದಾರೆ. ಇದು ದಿವ್ಯಾಂಗರ ಶುಭ ವಿವಾಹ: ನವದಂಪತಿಯ ಹೆಸರು ರಂಗಪ್ಪ ಹಾಗೂ ನಾರಾಯಣಮ್ಮ. ಇವರಿಬ್ಬರು ಹುಟ್ಟಿನಿಂದ ಕಣ್ಣು ಕಾಣದವರು. …
Read More »ನಟ ವಿಷ್ಣುವರ್ಧನ್, ನಟಿ ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ ಸಂಪುಟ ಸಭೆ ತೀರ್ಮಾನ
ಬೆಂಗಳೂರು: ನಟ ವಿಷ್ಣುವರ್ಧನ್ ಹಾಗೂ ನಟಿ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ಬದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ನಟ ವಿಷ್ಣುವರ್ಧನ್ಗೆ ಮರಣೋತ್ತರ ಕರ್ನಾಟಕ ರತ್ನ ನೀಡುವಂತೆ ಭಾರತಿ ವಿಷ್ಣುವರ್ಧನ್, ಅನಿರುದ್ದ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕರ್ನಾಟಕ ರತ್ನ ನೀಡುವಂತೆ ಒತ್ತಾಯಿಸಿದ್ದರು. ಜೊತೆಗೆ ವಿಷ್ಣು ಅಭಿಮಾನಿಗಳು ಈ …
Read More »ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸುವ ಸಂಬಂಧ ಸುಗ್ರೀವಾಜ್ಞೆ ಅಗತ್ಯತೆ ಬಗ್ಗೆ ಸರ್ಕಾರಕ್ಕೆ ಜಿಜ್ಞಾಸೆ!
ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇವಿಎಂ ಬದಲು ಮತಪತ್ರಗಳ ಬಳಸಲು ಅನುವು ಮಾಡುವ ನಿಯಮ ತಿದ್ದುಪಡಿಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಗೊಂದಲ ಉಂಟಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಮತಪತ್ರ ಬಳಸಲು ಕಾಂಗ್ರೆಸ್ ಸರ್ಕಾರ ಈಗಾಗಲೇ ತೀರ್ಮಾನಿಸಿದೆ. ಆ ನಿಟ್ಟಿನಲ್ಲಿ ನಿಯಮ ತಿದ್ದುಪಡಿಗೆ ಮುಂದಾಗಿದೆ. ಈ ಸಂಬಂಧ ಈಗಾಗಲೇ ನಾಲ್ಕು ಪ್ರತ್ಯೇಕ ಕರಡು ವಿಧೇಯಕವನ್ನು ರೂಪಿಸಿದೆ. ನಾಲ್ಕು ಕಾಯ್ದೆಗಳಿಗೆ ತಿದ್ದುಪಡಿ ತಂದರೆ ಮಾತ್ರ ರಾಜ್ಯ …
Read More »ಪ್ರಿಯಕರನ ಜೊತೆ ಸೇರಿ ತಾಯಿಯಿಂದಲೇ ಮಗಳ ಕೊಲೆ: ಕಠಿಣ ಶಿಕ್ಷೆಗೆ ಸಂಬಂಧಿಕರ ಆಗ್ರಹ
ಹಾವೇರಿ: ಪ್ರಪಂಚದಲ್ಲಿ ಕೆಟ್ಟ ತಂದೆ ಇರಬಹುದು. ಆದ್ರೆ ಕೆಟ್ಟ ತಾಯಿ ಇರಲು ಸಾಧ್ಯವಿಲ್ಲ ಎನ್ನುವ ಮಾತಿದೆ. ಆದರೆ ಈ ಮಾತಿಗೆ ಅಪವಾದ ಎಂಬಂತೆ ನಡೆದುಕೊಂಡಿದ್ದಾಳೆ ಜಿಲ್ಲೆಯ ರಾಣೆಬೆನ್ನೂರಿನ ಮಹಿಳೆ. ಅನಾಥ ಶವವೆಂದು ಪೊಲೀಸರು ಅಂತ್ಯಕ್ರಿಯೆ ಮಾಡಿದ್ದರು. ಗುರುವಾರ ಬಾಲಕಿಯ ತಂದೆ ಮತ್ತು ಸಂಬಂಧಿಕರು ಸಮಾಧಿ ಸ್ಥಳಕ್ಕೆ ಆಗಮಿಸಿ ವಿಧಿವಿಧಾನ ನೆರವೇರಿಸಿದರು. ಪ್ರಕರಣ ಯಲ್ಲಾಪುರ ಬಳಿಯ ತುಂಗಾ ಮೇಲ್ದಂಡೆ ಕಾಲುವೆಯಲ್ಲಿ ಅಗಸ್ಟ್ 2 ರಂದು ಸುಮಾರು ನಾಲ್ಕು ವರ್ಷದ ಹೆಣ್ಣುಮಗುವಿನ ಶವ ಪತ್ತೆಯಾಗಿತ್ತು. …
Read More »ಕಳ್ಳರಿಂದ 2 ಕೆ.ಜಿ ಬಂಗಾರ ಜಪ್ತಿ ಮಾಡಿ, 250 ಗ್ರಾಂ ಲೆಕ್ಕ ತೋರಿಸಿದ ಪೊಲೀಸಪ್ಪನ ವಿರುದ್ಧ ಐಜಿಪಿಗೆ ದೂರು!
ಕಳ್ಳರಿಂದ 2 ಕೆ.ಜಿ ಬಂಗಾರ ಜಪ್ತಿ ಮಾಡಿ, 250 ಗ್ರಾಂ ಲೆಕ್ಕ ತೋರಿಸಿದ ಪೊಲೀಸಪ್ಪನ ವಿರುದ್ಧ ಐಜಿಪಿಗೆ ದೂರು! ಬೆಂಗಳೂರು (ಸೆ.11): ಕಳ್ಳತನ ಪ್ರಕರಣಗಳ ತನಿಖೆ ವೇಳೆ ಕಳ್ಳರಿಂದ ವಶಪಡಿಸಿಕೊಂಡಿದ್ದ ಚಿನ್ನವನ್ನು ಕದ್ದ ಆರೋಪದ ಮೇಲೆ ಸೂರ್ಯನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂಜೀವ್ ಕುಮಾರ್ ಮಹಾಜನ್ ಮತ್ತು ಅವರ ಕ್ರೈಂ ಸಿಬ್ಬಂದಿ ವಿರುದ್ಧ ಕೇಂದ್ರ ವಲಯ ಐಜಿಪಿ ಲಾಬೂರಾಮ್ ಅವರಿಗೆ ದೂರು ನೀಡಲಾಗಿದೆ. ಸಾಮಾಜಿಕ ಕಾರ್ಯಕರ್ತ ಹಾಗೂ ವಕೀಲ ವೆಂಕಟಾಚಲಪತಿ ಈ …
Read More »ಬೆಳಗಾವಿಯ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಕಬ್ಬು ಉತ್ಪಾದನೆ ಹೆಚ್ಚಿಸುವ ಕುರಿತು ಒಂದು ದಿನದ ವಿಚಾರ ಸಂಕಿರಣ….
ಬೆಳಗಾವಿಯ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಕಬ್ಬು ಉತ್ಪಾದನೆ ಹೆಚ್ಚಿಸುವ ಕುರಿತು ಒಂದು ದಿನದ ವಿಚಾರ ಸಂಕಿರಣ…. ಬೆಳಗಾವಿಯ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಕಬ್ಬು ಉತ್ಪಾದನೆ ಹೆಚ್ಚಿಸುವ ಒಂದು ದಿನದ ವಿಚಾರ ಸಂಕಿರಣ ರಾಜ್ಯದ ವಿವಿಧ ಕೃಷಿ ತಜ್ಞರಿಂದ ವಿಚಾರ ಮಂಡನೆ ಸಕ್ಕರೆ ಕಾರ್ಖಾನೆಗಳ ಕಬ್ಬು ವಿಭಾಗದ ಅಧಿಕಾರಿಗಳು ಭಾಗಿ ಇತ್ತೀಚಿನ ವರ್ಷಗಳಲ್ಲಿ ಮಣ್ಣಿನ ಫಲವತ್ತತೆಗೆ ಒತ್ತು ಕೊಡದೇ ಕೃಷಿಯಲ್ಲಿ ಕೇವಲ ಹೆಚ್ಚಿನ ಪ್ರಮಾಣದಲ್ಲಿ ರಸಾಯನಿಕ ಗೊಬ್ಬರಗಳನ್ನು ಬಳಕೆ ಮಾಡುವುದು ಮತ್ತು …
Read More »ಸುವರ್ಣಸೌಧದ ಎದುರಿನ ಪ್ರಮುಖ ಸರ್ವಿಸ್ ರಸ್ತೆ ಯಲ್ಲಿ ಘನತ್ಯಾಜ್ಯ ವಸ್ತುಗಳ ಸಾಮ್ರಾಜ್ಯ
ಗ್ರಾಮ ಪಂಚಾಯತಿಯ ನಿರ್ಲಕ್ಷ ಹಲಗಾ ಗ್ರಾಮದ ಸರ್ವಿಸ್ ರಸ್ತೆಯಲ್ಲಿ ಘನತ್ಯಾಜ್ಯ ವಸ್ತುಗಳ ಸಾಮ್ರಾಜ್ಯ…… ಹಲಗಾ ಗ್ರಾಮದ ಸರ್ವಿಸ್ ರಸ್ತೆಯಲ್ಲಿ ತ್ಯಾಜ್ಯ ವಸ್ತುಗಳ ಸಾಮ್ರಾಜ್ಯಸ್ವಚ್ಛತೆಯನ್ನು ಕೈಗೊಳ್ಳದ ಗ್ರಾಮ ಪಂಚಾಯಿತಿದುರ್ವಾಸನೆಯ ಮಧ್ಯದಲ್ಲಿ ತೆರಳುವ ಸಾರ್ಜನಿಕರು ಸುವರ್ಣಸೌಧದ ಎದುರಿನ ಪ್ರಮುಖ ಸರ್ವಿಸ್ ರಸ್ತೆ ಗ್ರಾಮ ಪಂಚಾಯತಿಯವರ ನಿರ್ಲಕ್ಷದಿಂದ ಸುವರ್ಣಸೌಧಕ್ಕೆ ತೆರಳುವ ಹಲಗಾ ಗ್ರಾಮದ ಸರ್ವಿಸ್ ರಸ್ತೆಯಲ್ಲಿ ಘನತ್ಯಾಜ್ಯ ವಸ್ತುಗಳ ಸಾಮ್ರಾಜ್ಯವಾಗಿ ಹೋಗಿದೆ. ದುರ್ವಾಸನೆಯ ಮಧ್ಯದಲ್ಲಿ ಸಾರ್ಜನಿಕರು ಮೂಗಿನ ಮೇಲೆ ಕೈ ಇಟ್ಟುಕೊಂಡು ಅಲೆದಾಡುವ ಪ್ರಸಂಗ …
Read More »
Laxmi News 24×7