Breaking News

Yearly Archives: 2025

ದಸರಾ ಮಹೋತ್ಸವಕ್ಕೆ ಎಚ್ಚರಿಕೆ ವಹಿಸಿ, ಪೊಲೀಸ್ ಅಧಿಕಾರಿಗಳಿಗೆ ಡಿಜಿ ಅಂಡ್​ ಡಿಐಜಿ ಡಾ.ಸಲೀಂ‌ ಸೂಚನೆ

ಮೈಸೂರು: ದಸರಾ ಮಹೋತ್ಸವ ಉದ್ಘಾಟಕರ ವಿಚಾರದಲ್ಲಿ ವಿವಾದ ಉಂಟಾಗಿರುವುದರಿಂದ ಚಾಮುಂಡಿ ಬೆಟ್ಟದಲ್ಲಿ ನಡೆಯಲಿರುವ ದಸರಾ ಉದ್ಘಾಟನೆ ಸಮಾರಂಭದಲ್ಲಿ ಯಾವುದೇ ಪ್ರತಿಭಟನೆ ಮತ್ತು ಗೊಂದಲ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ಸೂಚನೆ ನೀಡಿದರು. ನಗರ ಪೊಲೀಸ್ ಆಯುಕ್ತರ ಕಚೇರಿ ಸಭಾಂಗಣದಲ್ಲಿ ದಸರಾ ಭದ್ರತೆ ಸಂಬಂಧ ನಡೆದ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಈ ಸೂಚನೆ ನೀಡಿದರು. ಚಾಮುಂಡಿ ಬೆಟ್ಟದಲ್ಲಿ ನಡೆಯಲಿರುವ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರತಿಭಟನೆ …

Read More »

ಸೆಪ್ಟೆಂಬರ್ 17): ದಲಿತ ಮಹಿಳೆಯ (Dalit Woman) ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​​ ಗೆ ((Basanagouda Patil Yatnal)) ಹೈಕೋರ್ಟ್ (Karnataka High Court) ಬಿಗ್ ರಿಲೀಫ್ ನೀಡಿದೆ.

ಬೆಂಗಳೂರು/ಕೊಪ್ಪಳ, (ಸೆಪ್ಟೆಂಬರ್ 17): ದಲಿತ ಮಹಿಳೆಯ (Dalit Woman) ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​​ ಗೆ ((Basanagouda Patil Yatnal)) ಹೈಕೋರ್ಟ್ (Karnataka High Court) ಬಿಗ್ ರಿಲೀಫ್ ನೀಡಿದೆ. ಅಟ್ರಾಸಿಟಿ ಕಾಯ್ದೆಯಡಿ ಕೊಪ್ಪಳದಲ್ಲಿ (Koppal) ದಾಖಲಾಗಿರುವ FIR ಪ್ರಶ್ನಿಸಿ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​​, ಬಸನಗೌ ಪಾಟೀಲ್ ಯತ್ನಾಳ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ಹೊರಡಿಸಿದೆ. ಅಲ್ಲದೇ ಪೊಲೀಸರ ತನಿಖೆಗೆ ಸಹಕರಿಸಲು ಯತ್ನಾಳ್‌ಗೆ …

Read More »

ಮುಂದಿನ ವರ್ಷ ಕರ್ನಾಟಕದಲ್ಲಿ ನಡೆಯುತ್ತೆ ಮತದಾರರ ಪಟ್ಟಿ ಪರಿಷ್ಕರಣೆ​: ರಾಜ್ಯ ಚುನಾವಣಾ ಆಯೋಗ

ಬೆಂಗಳೂರು, ಸೆಪ್ಟೆಂಬರ್​ 17: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ವೇಳೆ ದೊಡ್ಡ ಮತ ಕಳ್ಳತನ (Vote Scam) ನಡೆದಿದೆ ಎಂದಿದ್ದ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಮಾತು ಭಾರಿ ಸಂಚಲನ ಸೃಷ್ಟಿಸಿತ್ತು. ಕಾಂಗ್ರೆಸ್ ನಾಯಕರು ಬಿಜೆಪಿ ಮೇಲೆ ಆರೋಪ ಮಾಡಿದ್ದರು. ಇತ್ತೀಚೆಗೆ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪರಿಷ್ಕರಣೆ ಮಾಡುವುದಾಗಿ ಹೇಳಿದ್ದರು. ಈ ಮಧ್ಯೆ ಕರ್ನಾಟಕದಲ್ಲಿ ಮುಂದಿನ ವರ್ಷ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಯಲಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾ ಆಯೋಗ ತಿಳಿಸಿದೆ. ಮತದಾರರ …

Read More »

ಕಾರವಾರ , ಸೆಪ್ಟೆಂಬರ್17 : ಹಿರಿಯರ ಕಾಲದ ದೇವರ ತೆಂಗಿನಕಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದಲ್ಲಿ ಶುರುವಾದ ಜಗಳ ಸಾವಿನಲ್ಲಿ ಅಂತ್ಯವಾಗಿದೆ.

ಕಾರವಾರ , ಸೆಪ್ಟೆಂಬರ್17 : ಹಿರಿಯರ ಕಾಲದ ದೇವರ ತೆಂಗಿನಕಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದಲ್ಲಿ ಶುರುವಾದ ಜಗಳ ಸಾವಿನಲ್ಲಿ ಅಂತ್ಯವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅಮಶೆಟ್-ಕೊಳಮಾಲ ಗ್ರಾಮದ ನಿವಾಸಿ ಆಗಿರುವ ದೊಂಡು ವರಕ ಮತ್ತು ಅವನ ತಮ್ಮನ ನಡುವೆ ಹಿರಿಯರ ಕಾಲದ ದೇವರ ತೆಂಗಿನಕಾಯಿ ಸಲುವಾಗಿ ಜಗಳವಾಗಿತ್ತು. ಅದು ಇತ್ಯರ್ಥವಾದ ನಂತರವೂ ಕೋಪದಿಂದ ಅಣ್ಣನೊಬ್ಬ ತನ್ನ ತಮ್ಮನ ಹೆಂಡತಿ ಭಾಗ್ಯಶ್ರಿಯನ್ನು ಕಬ್ಬಿಣದ ಪಿಕಾಸಿಯಿಂದ ಹೊಡೆದು ಕೊಂದು ಪರಾರಿಯಾಗಿದ್ದು, ಮೂರು ದಿನಗಳ …

Read More »

ಖ್ಯಾತ ವೈದ್ಯರಾದ ಡಾ. ಗಿರೀಶ ಸೋನವಾಲ್ಕರ್‌ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

ಬೆಳಗಾವಿ: ನಗರದ ಸಿವಿಲ್‌ ಆಸ್ಪತ್ರೆಯ ಐಎಮ್‌ಎ ಆವರಣದಲ್ಲಿ ಬುಧವಾರ ಖ್ಯಾತ ವೈದ್ಯರಾದ ಡಾ. ಗಿರೀಶ ಸೋನವಾಲ್ಕರ್‌ ಅವರ ಹುಟ್ಟುಹಬ್ಬದ ಪ್ರಯುಕ್ತ ಡಾ. ಗಿರೀಶ ಸೋನವಾಲ್ಕರ್‌ ಫೌಂಡೇಶನ್‌ , ಲೇಕವ್ಯೂ ಆಸ್ಪತ್ರೆಯ , ಡಾ. ಗಿರೀಶ ಸೋನವಾಲ್ಕರ್‌ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘ ಹಾಗೂ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ಸೆ. 17 ರಂದು ನಡೆದ ಬೃಹತ್ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಶಾಸಕರಾದ ರಾಜು ಸೇಠ …

Read More »

ಬೌದ್ಧ ಗಯಾವನ್ನು ಸಂಪೂರ್ಣವಾಗಿ ಬೌದ್ಧರಿಗೆ ಹಸ್ತಾಂತರಿಸಿ… ಬೆಳಗಾವಿಯಲ್ಲಿ ಭಾರತೀಯ ಬೌಧ್ಧ ಮಹಾಸಭೆಯ ಪ್ರತಿಭಟನೆ

ಬೌದ್ಧ ಗಯಾವನ್ನು ಸಂಪೂರ್ಣವಾಗಿ ಬೌದ್ಧರಿಗೆ ಹಸ್ತಾಂತರಿಸಿ… ಬೆಳಗಾವಿಯಲ್ಲಿ ಭಾರತೀಯ ಬೌಧ್ಧ ಮಹಾಸಭೆಯ ಪ್ರತಿಭಟನೆ ಬೌದ್ಧ ಗಯಾವನ್ನು ಸಂಪೂರ್ಣವಾಗಿ ಬೌದ್ಧರಿಗೆ ಹಸ್ತಾಂತರಿಸಿ… ಬೆಳಗಾವಿಯಲ್ಲಿ ಭಾರತೀಯ ಬೌಧ್ಧ ಮಹಾಸಭೆಯ ಪ್ರತಿಭಟನೆ ಜಿಲ್ಲಾಧಿಕಾರಿಗಳ ಮೂಲಕ ಬಿಹಾರ ಸಿಎಂಗೆ ಮನವಿ ಫೆಬ್ರವರಿ 12 ರಂದು ರಾಷ್ಟ್ರವ್ಯಾಪಿ ಆಂದೋಲನ ಮಹಾಬೋಧಿ, ಮಹಾ ವಿಹಾರ, ಬೌದ್ಧ ಗಯಾವನ್ನು ಸಂಪೂರ್ಣವಾಗಿ ಬೌದ್ಧರಿಗೆ ಬಿಟ್ಟು ಕೊಡಬೇಕೆಂದು ಒತ್ತಾಯಿಸಿ ಬೆಳಗಾವಿಯಲ್ಲಿಂದು ಭಾರತೀಯ ಬೌದ್ಧ ಮಹಾಸಭೆಯ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಇಂದು ಬುಧವಾರ ಬೆಳಗಾವಿ …

Read More »

ಸೆ.19ರಂದು ಬಿಡುಗಡೆಯಾಗುತ್ತಿರುವ ಜೊತೆಯಾಗಿ ಹಿತವಾಗಿ – ನಟ ಅಗಸ್ತ್ಯ ಪ್ರೇಕ್ಷಕರ ಬೆಂಬಲ ಕೋರಿಕೆ |

ಸೆ.19ರಂದು ಬಿಡುಗಡೆಯಾಗುತ್ತಿರುವ ಜೊತೆಯಾಗಿ ಹಿತವಾಗಿ – ನಟ ಅಗಸ್ತ್ಯ ಪ್ರೇಕ್ಷಕರ ಬೆಂಬಲ ಕೋರಿಕೆ | ಕನ್ನಡ ಚಲನಚಿತ್ರದಲ್ಲಿ ಬೆಳೆಯಲು ಸಾಕಷ್ಟು ಕಷ್ಟ ಇದೆ. ಇದೇ ಸೆ.19 ರಂದು ರಾಜ್ಯಾದ್ಯಂತ ಜೊತೆಯಾಗಿ ಹಿತವಾಗಿ ಚಿತ್ರ ಬಿಡುಗಡೆಯಾಗಲಿದೆ ಎಂದು ಚಿತ್ರ ನಟ ಅಗಸ್ತ್ಯ ಹೇಳಿದರು. ಬುಧವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಉತ್ತರ ಕರ್ನಾಟಕದ ಚಲನಚಿತ್ರ ಎಂದರೆ ಬೇರೆ ದೃಷ್ಟಿಕೋನದಿಂದ ನೋಡುತ್ತಾರೆ. ಜೊತೆಯಾಗಿ ಹಿತವಾಗಿ ಕನ್ನಡ ಚಲನಚಿತ್ರ ತಂದೆ, ಮಗನ ಬಾಂಧವ್ಯದ ಕುರಿತು ಹಾಗೂ …

Read More »

ಡಿಸಿಸಿ ಬ್ಯಾಂಕ್ ಚುನಾವಣೆ ಬಗ್ಗೆ ಚಿಂತನೆ – ಮರಾಠಾ ಜಾತಿ ಗಣತಿ ಕುರಿತು ವಿಠ್ಠಲ್ ಹಲಗೇಕರ್ ಅಭಿಪ್ರಾಯ |

ಡಿಸಿಸಿ ಬ್ಯಾಂಕ್ ಚುನಾವಣೆ ಬಗ್ಗೆ ಚಿಂತನೆ – ಮರಾಠಾ ಜಾತಿ ಗಣತಿ ಕುರಿತು ವಿಠ್ಠಲ್ ಹಲಗೇಕರ್ ಅಭಿಪ್ರಾಯ | ಡಿಸಿಸಿ ಬ್ಯಾಂಕ್ ಸ್ಪರ್ಧೆ ಮಾಡುವುದರ ಕುರಿತು ಚಿಂತನೆ ನಡೆಸಲಾಗುತ್ತಿದೆ. ಇನ್ನೂ ಸಮಯ ಇದೆ ಎಂದು ಖಾನಾಪುರ ಶಾಸಕ ವಿಠ್ಠಲ್ ಹಲಗೇಕರ್ ಹೇಳಿದರು. ಬುಧವಾರ ಬೆಳಗಾವಿಯಲ್ಲಿ ‌ಸುದ್ದಿಗಾರರೊಂದಿಗೆ ಮಾತನಾಡಿದರು. ಡಿಸಿಸಿ ಬ್ಯಾಂಕ್ ಚುನಾವಣೆಯ ಕುರಿತು ಸ್ಪರ್ಧೆ ನಡೆಸುವ ವಿಚಾರ ಚಿಂತನೆ ನಡೆದಿದೆ. ಆದಷ್ಟು ಶೀಘ್ರದಲ್ಲೇ ತಿಳಿಸಲಾಗುವುದು ಎಂದರು. ಮರಾಠಾ ಸಮಾಜ ಕರ್ನಾಟಕದಲ್ಲಿ …

Read More »

ಕರ್ನಾಟಕ ಜಾತಿ ಗಣತಿಯಲ್ಲಿ ಕ್ರಿಶ್ಚಿಯನ್ ಸೇರಿಸಿದ ಬಗ್ಗೆ ಬಿಜೆಪಿ ನಾಯಕರು ಖಂಡನೆ |

ಕರ್ನಾಟಕ ಜಾತಿ ಗಣತಿಯಲ್ಲಿ ಕ್ರಿಶ್ಚಿಯನ್ ಸೇರಿಸಿದ ಬಗ್ಗೆ ಬಿಜೆಪಿ ನಾಯಕರು ಖಂಡನೆ | ಹಿಂದೂ ಜಾತಿಗಳ ನಡುವೆ ಕ್ರಿಶ್ಚಿಯನ್ ಸೇರಿಸಿ ಸರಕಾರ ಧರ್ಮ ಒಡೆಯುವ ಹುನ್ನಾರ ನಡೆಸಿದೆ ಎಂದು ಮಾಜಿ ವಿಧಾನ ಪರಿಷತ್ತಿನ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು. ಬುಧುವಾರ ಗಾಂಧಿ ಭವನದಲ್ಲಿ ಹಿಂದೂ ಜಾಗೃತ ವೇದಿಕೆ ಸಮಾವೇಶದಲ್ಲಿ ಮಾತನಾಡಿದರು. ರಾಜ್ಯ ಸರಕಾರ ಜಾತಿ ಗಣತಿಯಲ್ಲಿ ಎಲ್ಲ ಹಿಂದೂ ಸಮಾಜದಲ್ಲಿ ಕ್ರಿಶ್ಚಿಯನ್ ಸಮಾಜ ಸೇರಿಸಿ ಹುಚ್ಚು ಸಾಹಸ ಮಾಡಿದೆ. ಹಿಂದೂ …

Read More »

ಚಡಚಣದಲ್ಲಿ ಅತಿದೊಡ್ಡ ಬ್ಯಾಂಕ್ ದರೋಡೆ: SBI ಮ್ಯಾನೇಜರ್, ಕ್ಯಾಶಿಯರ್ ಕೈಕಾಲು ಕಟ್ಟಿ, ಕೂಡಿ ಹಾಕಿ ನಗದು ದೋಚಿ ದುಷ್ಕರ್ಮಿಗಳು ಪರಾರಿ

ವಿಜಯಪುರ: ಮನಗೂಳಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ ಮಾಸುವ ಮುನ್ನವೇ ವಿಜಯಪುರ ಜಿಲ್ಲೆಯಲ್ಲಿ ಮತ್ತೊಂದು ಬ್ಯಾಂಕ್ ಕಳ್ಳತನ ಪ್ರಕರಣ ವರದಿಯಾಗಿದೆ. ಜಿಲ್ಲೆಯ ಚಡಚಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಲ್ಲಿ ಈ ದರೋಡೆ ನಡೆದಿದೆ ಎಂದು ವಿಜಯಪುರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ತಿಳಿಸಿದ್ದಾರೆ. ಘಟನೆಯ ಹಿನ್ನೆಲೆ: ಮುಖಕ್ಕೆ ಮುಸುಕು ಹಾಕಿಕೊಂಡು ಹಾಗೂ ಮಿಲಿಟರಿ ಮಾದರಿ ಬಟ್ಟೆ ಹಾಕಿಕೊಂಡು ಬಂದ ದರೋಡೆಕೋರರು ಚಡಚಣ ಪಟ್ಟಣದ ಎಸ್​​​ಬಿಐ ಬ್ಯಾಂಕ್ ಮ್ಯಾನೇಜರ್, ಕ್ಯಾಶಿಯರ್ …

Read More »