ಮಂಗಳೂರು, (ಮೇ 29): ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಹತ್ಯೆಯಾಗಿ ತಿಂಗಳು ಕಳೆದಿಲ್ಲ. ಅಷ್ಟರಲ್ಲೇ ಕಡಲನಗರಿ ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದೆ. ನಿನ್(ಮೇ 27) ಮಧ್ಯಾಹ್ನ ಮುಸ್ಲಿಂ ಯುವಕನೊಬ್ಬನನ್ನ ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಅಬ್ದುಲ್ ರಹಿಮಾನ್ (32) (Bantwal Abdul Rehman) ಎಂಬಾತ ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಬಂಟ್ವಾಳ ತಾಲೂಕಿನ ಕೂರಿಯಾಳ ಸಮೀಪದ ಈರಕೋಡಿಯ ಕೊಳತ್ತಮಜಲ್ ನಿವಾಸಿ. ಪಿಕಪ್ ವಾಹನ ಓಡಿಸಿ ಜೀವನ ಸಾಗಿಸುತ್ತಿದ್ದ. ನಿನ್ನೆ (ಮೇ 27) ಒಂದು ಲೋಡ್ ಮರಳು ಬೇಕು ಎಂದು …
Read More »Yearly Archives: 2025
ಮುಂದಿನ ತಿಂಗಳಿನಿಂದ ಅನರ್ಹರಿಗೆ ಗ್ಯಾರಂಟಿ ಯೋಜನೆ ಸಿಗಲ್ವಾ?
ಬೆಂಗಳೂರು, (ಮೇ 28): ಪಂಚ ಗ್ಯಾರಂಟಿಗಳನ್ನ (guarantee scheme) ಐದು ವರ್ಷವೂ ನೀಡುತ್ತೇವೆ ಎನ್ನುವ ವಾಗ್ದಾನದೊಂದಿಗೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಇದೀಗ ಅದೇ ಗ್ಯಾರೆಂಟಿ ಯೋಜನೆಗಳ ಪರಿಷ್ಕರಣೆ ವಿಚಾರ ಸಚಿವರು, ಶಾಸಕರ ನೀಡುತ್ತಿರುವ ಹೇಳಿಕೆಗಳು ಗೊಂದಲವನ್ನ ಸೃಷ್ಟಿಸುತ್ತಿವೆ. ಫಲಾನುಭವಿಗಳಿಗೂ ಈ ರೀತಿಯ ಹೇಳಿಕೆಯಿಂದ ಆತಂಕ ಹೆಚ್ಚಾಗಿದೆ. ಅನರ್ಹರಿಗೆ ಕಡಿವಾಣ ಹಾಕಿ ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆ ಮುಂದುವರಿಸುತ್ತೇವೆ ಎಂಬ ಶಾಸಕರು, ಸಚಿವರ ಗೊಂದಲದ ಹೇಳಿಕೆಗಳು ಇದೇ ಹೊಸದೇನಲ್ಲ. ಆದರೆ ಸಿಎಂ ಸಿದ್ದರಾಮಯ್ಯ …
Read More »KPTCL ಎಇ, ಜೆಇ ಹುದ್ದೆಗಳ ಆಯ್ಕೆಪಟ್ಟಿ ರದ್ದು: ಮರುಪರೀಕ್ಷೆಗೆ ಹೈಕೋರ್ಟ್ ಆದೇಶ
ಬೆಂಗಳೂರು, ಮೇ 28: 2024 ಮೇ 8ರ ಕೆಪಿಸಿಎಲ್ನ (KPCL) ಎಇ, ಜೆಇ ಹುದ್ದೆಗಳ ಆಯ್ಕೆಪಟ್ಟಿ ರದ್ದುಪಡಿಸಿ ಮರುಪರೀಕ್ಷೆಗೆ ಹೈಕೋರ್ಟ್ (High Court) ಬುಧವಾರ ಆದೇಶ ಹೊರಡಿಸಿದೆ. 2024 ಫೆ.18ರಂದು ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಿಗೆ ಮರುಪರೀಕ್ಷೆ ನಡೆಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.ನೆಗೆಟಿವ್ ಮಾರ್ಕಿಂಗ್ ಪ್ರಶ್ನಿಸಿ ಅಭ್ಯರ್ಥಿಗಳು ಹೈಕೋರ್ಟ್ ಮೇಲ್ಮನವಿ ಸಲ್ಲಿಸಿದ್ದರು. ಇಂದು ವಿಚಾರಣೆ ಮಾಡಿದ ಹೈಕೋಟ್ ಮರುಪರೀಕ್ಷೆಗೆ ಆದೇಶಿಸಿದೆ. ಜೊತೆಗೆ ನೆಗೆಟಿವ್ ಮಾರ್ಕಿಂಗ್ ಬಗ್ಗೆ ಪೂರ್ವ ಮಾಹಿತಿ ನೀಡಲು ಸಿಜೆ ಎನ್.ವಿ.ಅಂಜಾರಿಯಾ …
Read More »ಪ್ರತಿ ತಾಲೂಕಿನಲ್ಲೂ ಕನಿಷ್ಟ ಬೆಂಬಲ ಬೆಲೆಯ ಖರೀದಿ ಕೇಂದ್ರ ಸ್ಥಾಪಿಸಲು ಹೈಕೋರ್ಟ್ ಆದೇಶ
ಬೆಂಗಳೂರು, ಮೇ 28: ಪ್ರತಿ ತಾಲೂಕಿನಲ್ಲೂ ಖರೀದಿ ಕೇಂದ್ರ ಸ್ಥಾಪಿಸಲು ಕರ್ನಾಟಕ ಹೈಕೋರ್ಟ್ (High Court) ಬುಧವಾರ ಆದೇಶ ಹೊರಡಿಸಿದೆ. ರೈತ ಸೇನೆ ಸಲ್ಲಿಸಿದ್ದ ಪಿಐಎಲ್ ಅರ್ಜಿ (PIL application) ವಿಚಾರಣೆ ಮಾಡಿದ ಹೈಕೋಟ್, ಕನಿಷ್ಟ ಬೆಂಬಲ ಬೆಲೆಯ ಖರೀದಿ ಕೇಂದ್ರ ಆರಂಭಿಸಲು ಸಿಜೆ ಎನ್.ವಿ.ಅಂಜಾರಿಯಾ ಮತ್ತು ನ್ಯಾ.ಕೆ.ವಿ.ಅರವಿಂದ್ರಿದ್ದ ಪೀಠ ಆದೇಶ ನೀಡಿದೆ.ಜಿಲ್ಲಾಧಿಕಾರಿ ಬೆಳೆಗಳ ಲಭ್ಯತೆಯ ವೈಜ್ಞಾನಿಕ ಅಧ್ಯಯನ ನಡೆಸಬೇಕು. ಅಗತ್ಯವಿದ್ದಷ್ಟು ಕನಿಷ್ಟ ಬೆಂಬಲ ಬೆಲೆಯ ಖರೀದಿ ಕೇಂದ್ರ ಸ್ಥಾಪಿಸಬೇಕು. ಪ್ರತಿ ತಾಲೂಕಿನಲ್ಲೂ ಒಂದು ಖರೀದಿ ಕೇಂದ್ರ …
Read More »ಕನ್ನಡಿಗರ ಪ್ರೀತಿಗೆ ಸದಾ ಋಣಿ’: ಬೆಂಗಳೂರಿಗೆ ಆಗಮಿಸಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
ದೇವನಹಳ್ಳಿ(ಬೆಂಗಳೂರು ಗ್ರಾಮಾಂತರ): ಕನ್ನಡದ ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರ ‘ಹಾರ್ಟ್ ಲ್ಯಾಂಪ್’ ಕಥಾ ಸಂಕಲನ ಇತ್ತೀಚೆಗೆ ಬೂಕರ್ ಪ್ರಶಸ್ತಿ ಪಡೆದಿದೆ. ಈ ಮೂಲಕ ಕನ್ನಡ ಸಾಹಿತ್ಯಕ್ಕೆ ಮೊದಲ ಬಾರಿಗೆ ಈ ಗೌರವ ಸಂದಿದೆ. ದೀಪಾ ಭಾಸ್ತಿ ಅವರು ಈ ಕೃತಿಯನ್ನು ಇಂಗ್ಲಿಷ್ಗೆ ಅನುವಾದಿಸಿದ್ದರು. ಕನ್ನಡ ಕಸ್ತೂರಿ ಕಂಪು ಅಂತಾರಾಷ್ಟ್ರೀಯ ಮಟ್ಟದಲ್ಲೂ ಪಸರಿಸಿದ ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿ ಲಂಡನ್ನಲ್ಲಿ ಪ್ರಶಸ್ತಿ ಸ್ವೀಕರಿಸಿ ಇದೀಗ ಬೆಂಗಳೂರಿಗೆ ಬಂದಿದ್ದಾರೆ.ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ …
Read More »ರಾಜಕಾಲುವೆಗೆ ಬಿದ್ದ ಕಾರು, ಮೃತಪಟ್ಟ ಮಹಿಳೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರ್ಷಧಾರೆಯ ಅಬ್ಬರ ಮುಂದುವರೆದಿದೆ. ಮಳೆ ಅವಾಂತರಕ್ಕೆ ಮಂಗಳೂರಿನಲ್ಲಿ ಕಾರೊಂದು ರಾಜಕಾಲುವೆಗೆ ಬಿದ್ದರೆ, ಮೂಡಬಿದಿರೆಯಲ್ಲಿ ಮಹಿಳೆಯೊಬ್ಬರು ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಗಳೂರಿನ ರಾಷ್ಟ್ರೀಯ ಹೆದ್ದಾರಿ 66ರ ಕೋಡಿಕಲ್ ಕ್ರಾಸ್ ಬಳಿಯ ರಾಜಕಾಲುವೆಗೆ ಸಂಚಾರದಲ್ಲಿದ್ದ ಕಾರೊಂದು ಬಿದ್ದಿರುವ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ. ಕೋಡಿಕಲ್ ಕ್ರಾಸ್ ಬಳಿ ರಾಜಕಾಲುವೆಯ ಹೂಳೆತ್ತುವ ಕಾರ್ಯ ನಡೆಯುತ್ತಿತ್ತು. ಅದಕ್ಕಾಗಿ ರಾಜಕಾಲುವೆ ಬದಿಯಲ್ಲಿ ಬೆಳೆದಿದ್ದ ಪೊದೆಗಿಡಗಳನ್ನು ತೆಗೆದು, ಮರಳು ತುಂಬಿದ …
Read More »ಕಮಲ್ ಹಾಸನ್ ವಿರುದ್ಧ ಪ್ರತಿಭಟನೆ, ಕ್ಷಮೆ ಕೇಳುವಂತೆ ಆಗ್ರಹ
ಬೆಂಗಳೂರು: “ತಮಿಳು ಕನ್ನಡಕ್ಕೆ ಜನ್ಮ ನೀಡಿದೆ” ಎಂಬ ವಿವಾದಿತ ಹೇಳಿಕೆಯ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳು ಹಿರಿಯ ನಟ ಕಮಲ್ ಹಾಸನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರಿಗೂ ದೂರು ನೀಡಲಾಗಿದೆ. ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನದ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೂ ಮುನ್ನ ಕಮಲ್ ಹಾಸನ್ ಮೇಲೆ ನಿಷೇಧ ಹೇರುವ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಭೆ ನಡೆಸಿ ಚರ್ಚಿಸಲು ಮುಂದಾಗಿದೆ. ಕಮಲ್ ಹಾಸನ್ ಮೇಲೆ ಸಂಭಾವ್ಯ ನಿಷೇಧ …
Read More »ಕನ್ನಡ ಭಾಷೆಗೆ ದೀರ್ಘ ಇತಿಹಾಸವಿದೆ C.M.
ಬೆಂಗಳೂರು: ಕನ್ನಡ ಭಾಷೆಗೆ ದೀರ್ಘಕಾಲದ ಇತಿಹಾಸವಿದೆ, ಪಾಪ ಕಮಲ್ ಹಾಸನ್ ಅವರಿಗೆ ತಿಳಿದಿರುವಂತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೆಪಿಸಿಸಿಯ ಮಾಜಿ ಸೈನಿಕ ವಿಭಾಗದ ವತಿಯಿಂದ ನಗರದ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ಆಯೋಜಿಸಿದ್ದ “ಜೈ ಹಿಂದ್ ಸಭಾ” ಕಾರ್ಯಕ್ರಮದಲ್ಲಿ ಭಾಗಿಯಾಗಿ ತೆರಳುವ ಮುನ್ನ ಅವರು ಮಾತನಾಡಿದರು. ಕಮಲ್ ಕ್ಷಮೆಯಾಚನೆಗೆ ವಿಜಯೇಂದ್ರ ಒತ್ತಾಯ: ಕಮಲ್ ಹಾಸನ್ ಹೇಳಿಕೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಕ್ಸ್ ಪೋಸ್ಟ್ ಮಾಡಿ, ಮಾತೃಭಾಷೆಯನ್ನು ಪ್ರೀತಿಸಬೇಕು, ಆದರೆ ಅದರ ಹೆಸರಿನಲ್ಲಿ …
Read More »ಬಳ್ಳಾರಿ ಜೈಲಿನಲ್ಲಿ ಶಿವಮೊಗ್ಗ ಹರ್ಷ ಕೊಲೆ ಪ್ರಕರಣದ ಆರೋಪಿಗಳ ತಕರಾರು
ಬಳ್ಳಾರಿ: “ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳಿಬ್ಬರೂ ಎರಡು ದಿನಗಳ ಹಿಂದೆ ಜೈಲಿನಲ್ಲಿ ತಕರಾರು ತೆಗೆದು ಗಲಾಟೆ ಮಾಡಿದ್ದಾರೆ. ಸದ್ಯ ಇಬ್ಬರಿಗೂ ಎಚ್ಚರಿಕೆ ನೀಡಿ ಪ್ರತ್ಯೇಕವಾಗಿ ಇರಿಸಲಾಗಿದೆ” ಎಂದು ಬಳ್ಳಾರಿ ಕೇಂದ್ರ ಕಾರಾಗೃಹದ ಅಧೀಕ್ಷಕಿ ಲತಾ ತಿಳಿಸಿದ್ದಾರೆ. ಹರ್ಷ ಕೊಲೆ ಪ್ರಕರಣದ ಹತ್ತು ಜನ ಆರೋಪಿಗಳ ಪೈಕಿ ಜಿಲಾನ್ ಹಾಗೂ ಸೈಯದ್ ನಿಹಾಲ್ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿದ್ದಾರೆ. ಈ ಇಬ್ಬರೂ ಜೈಲಿನ ಸಿಬ್ಬಂದಿ, ಅಧಿಕಾರಿಗಳ ಜೊತೆ ನಿತ್ಯ ಜಗಳ …
Read More »ಕೆಮಿಕಲ್ ಮಿಶ್ರಿತ ಭಂಡಾರ ಮಾರಾಟ ಮಾಡಿದರೇ ಕಠಿಣ ಕ್ರಮ; ಗೋಕಾಕ್ ಪಿ.ಎಸ್.ಐ ಕೆ.ವಾಲಿಕರ ಎಚ್ಚರಿಕೆ
ಕೆಮಿಕಲ್ ಮಿಶ್ರಿತ ಭಂಡಾರ ಮಾರಾಟ ಮಾಡಿದರೇ ಕಠಿಣ ಕ್ರಮ; ಗೋಕಾಕ್ ಪಿ.ಎಸ್.ಐ ಕೆ.ವಾಲಿಕರ ಎಚ್ಚರಿಕೆ ಗೋಕಾಕ : ಕೆಮಿಕಲ್ ಮಿಶ್ರಿತ ಭಂಡಾರ ಮಾರಾಟ ಮಾಡಿದ್ದು ಕಂಡು ಬಂದಲ್ಲಿ ಅಥವಾ ಯಾರಾದರೂ ಮಾರಾಟ ಮಾಡುತಿದ್ದರೆ ಇವತ್ತಿನಿಂದಲ್ಲೆ ನಿಲ್ಲಿಸಬೇಕೆಂದು ಗೋಕಾಕ ನಗರಸಭೆ ಮತ್ತು ಶಹರ ಪೋಲಿಸ್ ಠಾಣೆಯ ನೇತೃತ್ವದಲ್ಲಿ ನಗರಸಭೆ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಮುಂಬರುವ ಗೋಕಾಕ ಗ್ರಾಮದೇವತೆ ಜಾತ್ರೆಯಲ್ಲಿ ಭಂಡಾರ ಮಾರಾಟಗಾರರ ಸಭೆಯಲ್ಲಿ ಪಿಎಸ್ಐ ಕೆ,ವಾಲಿಕಾರ ಖಡಕ ಎಚ್ಚರಿಕೆ ನೀಡಿದರು. ಗೋಕಾಕ ಗ್ರಾಮದೇವತೆಯ …
Read More »