ಸೂಪರ್ ಹೀರೋ ತೇಜ್ ಸಜ್ಜಾ ನಟನೆಯ ಮಿರಾಯ್ ಸಿನಿಮಾದ ಮೊದಲ ಹಾಡಿಗೆ ಭರ್ಜರಿ ರೆಸ್ಪಾನ್ಸ್ ‘ಹನುಮಾನ್’ ಖ್ಯಾತಿಯ ನಟ ತೇಜ್ ಸಜ್ಜಾ ನಟನೆಯ ‘ಮಿರಾಯ್’ ಚಿತ್ರ ಮೂಲಕ ಬರಲು ಸಜ್ಜಾಗಿದ್ದಾರೆ. ‘ಹನುಮಾನ್’ ಚಿತ್ರ ಆದ್ಮೇಲೆ ಮಾಡಿರೋ ಮತ್ತೊಂದು ಸೂಪರ್ ಹೀರೋ ಚಿತ್ರವೇ ಇದಾಗಿದೆ. ಬಹುಭಾಷೆಯಲ್ಲಿಯೇ ಬರುತ್ತಿರುವ ಈ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದ್ದು, ಭರ್ಜರಿ ಪ್ರತಿಕ್ರಿಯೆ ಪಡೆದುಕೊಂಡಿದೆ. ವೈಬ್ ಐತೆ ಬೇಬಿ ಎಂದು ನಾಯಕ ತೇಜ್ ಸಜ್ಜಾ ಮತ್ತು ರಿತಿಕಾ …
Read More »Yearly Archives: 2025
ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್..
ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್.. ರಾಣಾ-ಪ್ರಿಯಾಂಕಾ ಜೋಡಿಯ ಏಳುಮಲೆ ಸಿನಿಮಾದ ಮೆಲೋಡಿ ಹಾಡು ರಿಲೀಸ್* ನಿರ್ದೇಶಕರು ಸಿನಿಮಾ ನಿರ್ಮಾಣ ಮಾಡುವ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ಕೊಡುತ್ತಿದ್ದಾರೆ. ಅಂತೆಯೇ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಏಳುಮಲೆ ಚಿತ್ರಕ್ಕೆ ಪುನೀತ್ ರಂಗಸ್ವಾಮಿ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಈ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ಏಳುಮಲೆ ಚಿತ್ರದ ಯಾವಾಗ ಎಂಬ ಮೆಲೋಡಿ ಹಾಡು …
Read More »ಧರ್ಮಸ್ಥಳ ಅರಣ್ಯದಲ್ಲಿ ಸಮಾಧಿ: ತನಿಖೆ ಬಳಿಕ ಕ್ರಮ- ಈಶ್ವರ ಖಂಡ್ರೆ
ಬೀದರ್ : ಧರ್ಮಸ್ಥಳ ಸುತ್ತಮುತ್ತ ಮೀಸಲು ಅರಣ್ಯದೊಳಗೆ ಸಮಾಧಿ ಅಗೆಯುತ್ತಿರುವ ಎಸ್.ಐ.ಟಿ.ಗೆ ಕೆಲವೆಡೆ ಮಾನವರ ಅಸ್ಥಿ ಸಿಕ್ಕಿದ್ದು, ತನಿಖೆ ಮುಗಿದ ಬಳಿಕ ಅಕ್ರಮವಾಗಿ ಶವ ಹೂತಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಬೀದರ್ ನಲ್ಲಿಂದು ಕರ್ನಾಟಕ ಮಾಧ್ಯಮ ಅಕಾಡಮಿ ಆಯೋಜಿಸಿದ್ದ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಣ್ಯದಲ್ಲಿ ಅಕ್ರಮವಾಗಿ ಶವ ಹೂತಿರುವುದು ದೃಢಪಟ್ಟರೆ, …
Read More »ಜಿಲ್ಲಾ ಪಂಚಾಯತ ತಾಲೂಕು ಪಂಚಾಯತ್ ಚುನಾವಣೆಯನ್ನು ಈ ವರ್ಷಾಂತ್ಯದಲ್ಲಿ ಮಾಡುತ್ತೇವೆ. ಮೀಸಲಾತಿ ಪ್ರಕ್ರಿಯೇ ನಡೆಯುತ್ತಿದೆ
ಜಿಲ್ಲಾ ಪಂಚಾಯತ ತಾಲೂಕು ಪಂಚಾಯತ್ ಚುನಾವಣೆಯನ್ನು ಈ ವರ್ಷಾಂತ್ಯದಲ್ಲಿ ಮಾಡುತ್ತೇವೆ. ಮೀಸಲಾತಿ ಪ್ರಕ್ರಿಯೇ ನಡೆಯುತ್ತಿದೆ ಎರಡ್ಮೂರು ತಿಂಗಳಲ್ಲಿ ನೋಟಿಫಿಕೇಶನ್ ಆಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮೀಸಲಾತಿಯನ್ನು ಮಾಡುತ್ತೇವೆ ಎಂದು ಹೈಕೋರ್ಟ್ ಮುಂದೆ ಒಪ್ಪಿದ್ದೇವೆ. ಅದರ ಆಂತರಿಕ ಕೆಲಸ ನಡೆಯುತ್ತಿದೆ. ಈ ವರ್ಷದಲ್ಲಿಯೆ ನಾವು ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ್ ಚುನಾವಣೆಯನ್ನು ಮಾಡುತ್ತೇವೆ ಎಂದರು. ಸವದತ್ತಿ ಶಾಲೆಯ ನೀರಿನ …
Read More »ಹೊಬ್ಬರ ಕೊರತೆಯ ಹಿನ್ನಲೆ, ನ್ಯಾನೋ ಯೂರಿಯಾ ಮೊರೆ ಹೋದ ರೈತ….ಮುಗದ ಗ್ರಾಮದ ಮಲ್ಲಪ್ಪ ತನ್ನ ಕಬ್ಬು ಬೆಳೆಗೆ ನ್ಯಾನೋ ಯೂರಿಯಾ ಸಿಂಪಡಣೆ.
ಹೊಬ್ಬರ ಕೊರತೆಯ ಹಿನ್ನಲೆ, ನ್ಯಾನೋ ಯೂರಿಯಾ ಮೊರೆ ಹೋದ ರೈತ….ಮುಗದ ಗ್ರಾಮದ ಮಲ್ಲಪ್ಪ ತನ್ನ ಕಬ್ಬು ಬೆಳೆಗೆ ನ್ಯಾನೋ ಯೂರಿಯಾ ಸಿಂಪಡಣೆ. – ರಾಜ್ಯದಲ್ಲಿ ಅನ್ನದಾತರಿಗೆ ಯೂರಿಯಾ ಗೊಬ್ಬರ ಕೊರತೆಯ ಉದ್ಭವುಸಿದ್ದು ರೈತರು ಪರದಾಡುತ್ತಿದ್ದಾರೆ. ಆದರೆ ಇಲ್ಲೊಬ್ಬರು ರೈತರು ನ್ಯಾನೋ ಯೂರಿಯಾ ಗೊಬ್ಬರ ಬಳಸಿ ಉತ್ತಮ ಬೆಳೆ ನಿರೀಕ್ಷೆಯಲ್ಲಿದ್ದಾರೆ. ಹೌದು ಧಾರವಾಡ ತಾಲೂಕಿನ ಮುಗದ ಗ್ರಾಮದ ಮಲ್ಲಪ್ಪ ಸಿರಿಮಣ್ಣವರ ಇವರ ಹೊಲದಲ್ಲಿ ಯೂರಿಯಾ ಗೊಬ್ಬರ ಬದಲು, ನ್ಯಾನೋ ಯೂರಿಯಾ ಗೊಬ್ಬರವನ್ನು …
Read More »ಬೆಳಗಾವಿ ರಾಜ್ಯದ ಅತಿ ಹೆಚ್ಚು ವಿಸ್ತೀರ್ಣ ಹೊಂದಿದ ದೊಡ್ಡ ಜಿಲ್ಲೆ ಷ್ಟಾಚಾರ ಮುಕ್ತ ಜಿಲ್ಲೆಯಾಗಿಸುವ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು: ಲೋಕಾಯುಕ್ತ ನ್ಯಾಯಮೂರ್ತಿ
ಬೆಳಗಾವಿ ರಾಜ್ಯದ ಅತಿ ಹೆಚ್ಚು ವಿಸ್ತೀರ್ಣ ಹೊಂದಿದ ದೊಡ್ಡ ಜಿಲ್ಲೆಯಾಗಿದ್ದು, ಆಡಳಿತಾತ್ಮಕವಾಗಿ ಸುಧೀರ್ಘವಾದ ಕ್ಷೇತ್ರವಾಗಿದೆ. ಜಿಲ್ಲೆಯನ್ನು ಮಾದರಿ, ಭ್ರಷ್ಟಾಚಾರ ಮುಕ್ತ ಜಿಲ್ಲೆಯಾಗಿಸುವ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಗೌರವಾನ್ವಿತ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್.ಪಾಟೀಲ ಅವರು ನುಡಿದರು. ಸುವರ್ಣ ವಿಧಾನ ಸೌಧದ ಸೆಂಟ್ರಲ್ ಹಾಲ್ ನಲ್ಲಿ ಬುಧವಾರ (ಆ.06) ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಲೋಕಾಯುಕ್ತ ಪ್ರಕರಣಗಳ ವಿಲೇವಾರಿ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯ …
Read More »ಧಾರವಾಡ: ಬಾಲಗರ್ಭಿಣಿ ಪ್ರಕರಣಗಳು ಹೆಚ್ಚಳ
ಧಾರವಾಡ: ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಬಾಲಕಿಯರು ಆಕರ್ಷಣೆಗೊಳಗಾಗಿ ಪ್ರೇಮ ಪ್ರಕರಣಗಳಲ್ಲಿ ಸಿಲುಕಿ ಗರ್ಭ ಧರಿಸುತ್ತಿರುವ ಪ್ರಕರಣಗಳು ಕೇಳಿ ಬರುತ್ತಿವೆ. ಇಂಥ ಅನೇಕ ಪ್ರಕರಣಗಳು ವರದಿಯಾಗುತ್ತಿವೆ. ಧಾರವಾಡದಲ್ಲಿ ಬಾಲಗರ್ಭಿಣಿಯರ ಪ್ರಕರಣಗಳು ಹೆಚ್ಚುತ್ತಿದ್ದು, ಇದರಲ್ಲಿ ಪ್ರೇಮ ಪ್ರಕರಣಗಳೇ ಅಧಿಕ. ಆರ್ಸಿಎಚ್ ದತ್ತಾಂಶದ ಪ್ರಕಾರ 2023-24ರಲ್ಲಿ 111 ಹಾಗೂ 2024-25ರಲ್ಲಿ 31 ಪ್ರಕರಣಗಳು ದಾಖಲಾಗಿವೆ. ಈ ಅಂಕಿ-ಅಂಶಗಳಿಂದ ಪಾಲಕರಲ್ಲಿ ಆತಂಕ ಹೆಚ್ಚಾಗಿದೆ. ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾ ಜಾವೂರು, “ಸಾಕಷ್ಟು …
Read More »ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಪ್ರಕರಣದಲ್ಲಿ ಐದನೇ ಆರೋಪಿಯನ್ನು ಕೊಪ್ಪಳದಲ್ಲಿ ಬಂಧಿಸಲಾಗಿದೆ.
ಗಂಗಾವತಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರ ಹೇಳಿಕೆಯನ್ನು ಉಲ್ಲೇಖಿಸಿ ನಟಿ ರಮ್ಯಾ ಮಾಡಿದ್ದ ಪೋಸ್ಟ್ಗೆ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ ಮತ್ತೋರ್ವ ಆರೋಪಿಯನ್ನು ಪೊಲೀಸರು ಕೊಪ್ಪಳದಲ್ಲಿ ಬಂಧಿಸಿದ್ದಾರೆ. ಕಾರಟಗಿ ತಾಲೂಕಿನ ಸಿಂಗನಾಳ ಗ್ರಾಮದ ಮಂಜುನಾಥ್ ಎಂಬಾತನನ್ನು ಬೆಂಗಳೂರಿನ ಸೈಬರ್ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಐದನೇ ಆರೋಪಿ ಬಂಧನವಾಗಿದೆ. 40 ಕ್ಕೂ ಹೆಚ್ಚು ಜನರ ಮೇಲೆ ದೂರು ದಾಖಲಾಗಿದ್ದು, ಪತ್ತೆಗಾಗಿ …
Read More »ಮನೆಯ ಶೌಚಾಲಯದಲ್ಲಿ ಪ್ರತ್ಯಕ್ಷವಾದ ಚಿರತೆ
ಹಾವೇರಿ: ಜಿಲ್ಲೆಯ ರಾಣೆಬೆನ್ನೂರಿನ ನಾಡಿಗೇರ್ ಓಣಿಯ ಮನೆಯ ಶೌಚಾಲಯದೊಳಗೆ ಪ್ರತ್ಯಕ್ಷವಾಗಿದ್ದ ಚಿರತೆಯನ್ನು ಕೊನೆಗು ಸೆರೆಹಿಡಿಯಲಾಯಿತು. ಪಿ.ಟಿ.ಕಾಕಿ ಎಂಬವರ ಮನೆಯ ಶೌಚಾಲಯದಲ್ಲಿ ಚಿರತೆ ಅವಿತು ಕುಳಿತಿತ್ತು. ಡ್ರೋನ್ ಕ್ಯಾಮೆರಾ ಮತ್ತು ಬಲೆ, ಅರವಳಿಕೆ ನೀಡಿ ಸೆರೆ ಹಿಡಿಯಲಾಗಿದೆ. ನಿರಂತರ ಎಂಟು ಗಂಟೆಗಳ ಕಾರ್ಯಾಚರಣೆ ಬಳಿಕ ಚಿರತೆಯನ್ನು ಸೆರೆಹಿಡಿಯಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಇತರರು ಅರಿವಳಿಕೆ ಚುಚ್ಚು ಮದ್ದು ನೀಡಿ ಚಿರತೆಯನ್ನು ಬೋನಿನಲ್ಲಿ ಹಾಕಿಕೊಂಡು ಸ್ಥಳದಿಂದ ರವಾನಿಸಿದ್ದಾರೆ. ಕಾರ್ಯಾಚರಣೆ ಬಗ್ಗೆ ಮಾತನಾಡಿದ ಅರಿವಳಿಕೆ …
Read More »ಗದಗದಲ್ಲಿ ಇನ್ನೂ ನಿಂತಿಲ್ಲ ಯೂರಿಯಾ ಕೊರತೆ
ಗದಗ, ಆಗಸ್ಟ್ 6: ಯೂರಿಯಾ (Urea) ಗೊಬ್ಬರಕ್ಕಾಗಿ ಶಾಲೆಬಿಟ್ಟು ರೈತರ ಮಕ್ಕಳ ಸರದಿ ಸಾಲು. ಕೈಯಲ್ಲಿ ಆಧಾರ್ ಕಾರ್ಡ್ ಹಿಡಿದುಕೊಂಡು, ‘ನಾವೂ ರೈತರ ಮಕ್ಕಳು, ನಮಗೊಂದು ಯೂರಿಯಾ ಗೊಬ್ಬರ ಕೊಡಿ’ ಎಂದು ಸಾಲಿನಲ್ಲಿ ನಿಂತಿರುವ ಮಕ್ಕಳು. ನಸುಕಿನ ನಾಲ್ಕು ಗಂಟೆಗೇ ಬಂದ ಮಕ್ಕಳು, ರೈತರು, ಅನ್ನ, ನೀರು, ನಿದ್ದೆ ಇಲ್ಲದೇ ಗೊಬ್ಬರಕ್ಕಾಗಿ ಪರದಾಡುತ್ತಿರುವುದು. ಈ ಎಲ್ಲ ದೃಶ್ಯಗಳು ಕಂಡಿದ್ದು, ಗದಗ (Gadag) ಜಿಲ್ಲೆಯಲ್ಲಿ. ಗದಗ ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರ ಗೋಳಾಟ ಇನ್ನೂ ನಿಂತಿಲ್ಲ. ಸರ್ಕಾರ ಗೊಬ್ಬರ ಕೊರತೆ …
Read More »
Laxmi News 24×7