ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಮಂಗಳವಾರ ಮದ್ಯಾಹ್ನ ಪ್ರಕಟವಾಗಲಿದೆ. ರಾಜ್ಯದಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಮಂಗಳವಾರ ಮದ್ಯಾಹ್ನ 1.30 ಕ್ಕೆ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ದ್ವಿತೀಯ ಪಿಯುಸಿ ಪರಿಕ್ಷೆ ಕಳೆದ ಮಾರ್ಚ್ 1 ರಿಂದ ಆರಂಭಗೊಂಡು ಮಾರ್ಚ್ 20 ರಂದು ಮುಕ್ತಾಯಗೊಂಡಿತ್ತು. ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ತ್ವರಿತಗತಿಯಲ್ಲಿ ನಡೆಸಿ ಏಪ್ರಿಲ್ 8ರಂದು ಫಲಿತಾಂಶ ಘೋಷಣೆ ಮಾಡಲಾಗುತ್ತದೆ.ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ನಾಳೆ ಮಧ್ಯಾಹ್ನ 12.30ಕ್ಕೆ ಶಾಲಾ ಶಿಕ್ಷಣ …
Read More »Yearly Archives: 2025
ಲಂಚಕ್ಕಾಗಿ ಕೈದಿ ಮೇಲೆ ಹಲ್ಲೆ:
ಬೆಂಗಳೂರು, (ಏಪ್ರಿಲ್ 07): ಪರಪ್ಪನ ಅಗ್ರಹಾರ ಜೈಲು (parappana agrahara central jail) ಯಾವಾಗಲೂ ಒಂದಲ್ಲಾ ಒಂದು ರೀತಿ ಸುದ್ದಿಯಲ್ಲಿರುತ್ತೆ. ನಟ ದರ್ಶನ್, ವಿಲ್ಸನ್ ಗಾರ್ಡನ್ ನಾಗನಿಗೆ ರಾಜಾತಿಥ್ಯ ಕೊಟ್ಟ ಆರೋಪ ಹೊತಿದ್ದ ಈ ಜೈಲಿನ ವಿರುದ್ಧ ಈಗ ಹೊಸದೊಂದು ಆರೋಪ ಕೇಳಿ ಬಂದಿದೆ. ವಿಚಾರಣಾಧೀನ ಕೈದಿ ಬಳಿ ಲಂಚಕ್ಕೆ ಬೇಡಿಕೆ ಇಡುವುದರ ಜೊತೆಗೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಹೌದು, 2024ರಲ್ಲಿ ಸೊಲದೇವನಹಳ್ಳಿಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಬಂಧಿಸಲ್ಪಟ್ಟ ಹಮೀದ್ ಎಂಬಾತ ಅಕ್ಟೋಬರ್ 4ರಿಂದ …
Read More »ಬೆಳಗಾವಿಯಲ್ಲಿ ಮತ್ತೆ ಅನ್ಯಕೋಮಿನ ಯುವಕನಿಂದ ಹಿಂದೂ ದೇವಸ್ಥಾನಕ್ಕೆ ಕಲ್ಲೇಸೆತ
ಬೆಳಗಾವಿಯಲ್ಲಿ ಮತ್ತೆ ಅನ್ಯಕೋಮಿನ ಯುವಕನಿಂದ ಹಿಂದೂ ದೇವಸ್ಥಾನಕ್ಕೆ ಕಲ್ಲೇಸೆತ ಬೆಳಗಾವಿ ನಗರದ ಪಾಂಗುಳ ಗಲ್ಲಿಯಲ್ಲಿರುವ ಮಂದಿರಕ್ಕೆ ಕಲ್ಲುಎಸೆತ ಬೆಳಗಾವಿ ಉಜ್ವಲ ನಗರದ ನಿವಾಸಿ ಯಾಸೀರ್ ನರಸದಿ(19) ಎಂಬಾತನ ಕೃತ್ಯ ಕಲ್ಲು ಎಸೆದ ಅನ್ಯಕೋಮಿನ ಯುವಕನ ಯಾಸೀರ್ ಗೆ ಧರ್ಮದೇಟು ಕೊಟ್ಟು ಸ್ಥಳೀಯರು ಬಳಿಕ ಅನ್ಯಕೋಮಿನ ಯುವಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಜನ ಕಲ್ಲು ಎಸೆದ ಯುವಕ ಯಾಸೀರ್ ಮಾನಸಿಕ ಅಸ್ವಸ್ಥತನಾಗಿದ್ದಾನೆಂದು ಪೊಲೀಸರ ಮಾಹಿತಿ ಆರೋಪಿಯನ್ನ ಈಗಾಗಲೇ ವಶಕ್ಕೆ ಪಡೆದಿರೋ ಮಾರ್ಕೆಟ್ …
Read More »ಪಂಬನ್ ಸೇತುವೆ- ಭಾರತದ ಮೊದಲ ಲಂಬ ಲಿಫ್ಟ್ ರೈಲ್ವೆ ಸಮುದ್ರ ಸೇತುವೆ
ಹುಬ್ಬಳ್ಳಿ: ತಮಿಳುನಾಡಿನ ರಾಮೇಶ್ವರಂನಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಪಂಬನ್ ಸಮುದ್ರ ಸೇತುವೆಯನ್ನು ಉದ್ಘಾಟಿಸಿದ್ದಾರೆ. ಇದರೊಂದಿಗೆ, ಹುಬ್ಬಳ್ಳಿ ಹಾಗೂ ರಾಮೇಶ್ವರಂ ನಡುವೆ ರೈಲು ಸಂಚಾರ ಆರಂಭಗೊಳ್ಳಲಿದೆ. ಸೇತುವೆಯು ಭೂಮಿ ಮತ್ತು ರಾಮೇಶ್ವರಂ ದ್ವೀಪದ ನಡುವೆ ರೈಲು ಸಂಪರ್ಕ ಒದಗಿಸುತ್ತದೆ. ರಾಮನವಮಿಯ ಶುಭ ಸಂದರ್ಭದಲ್ಲಿ ಸೇತುವೆ ಉದ್ಘಾಟನೆಯಾಗಿದ್ದು, ಇದು ಭಾರತದ ಮೊದಲ ಲಂಬ ಲಿಫ್ಟ್ ರೈಲ್ವೆ ಸಮುದ್ರ ಸೇತುವೆಯಾಗಿದೆ. ಈ ಮೊದಲು ಕಾರ್ಯಾಚರಣೆಯ ಕಾರಣಾಂತರಗಳಿಂದ ರದ್ದುಗೊಳಿಸಲಾಗಿದ್ದ ಹುಬ್ಬಳ್ಳಿ-ರಾಮೇಶ್ವರಂ ನಡುವಿನ ಸಾಪ್ತಾಹಿಕ …
Read More »ನೀರಾವರಿ ನಿಗಮದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ
ಮೈಸೂರು: ಲಂಚ ಸ್ವೀಕರಿಸುತ್ತಿದ್ದ ನಂಜನಗೂಡು ಕಾವೇರಿ ನೀರಾವರಿ ನಿಗಮ ನಿಯಮಿತದ ಕಾರ್ಯಪಾಲಕ ಅಭಿಯಂತರ ಮತ್ತು ಅಕೌಂಟ್ ಸೂಪರಿಂಟೆಂಡೆಂಟ್ ಅವರನ್ನು ಸೋಮವಾರ ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಈ ಅಧಿಕಾರಿಗಳು 1.45 ಲಕ್ಷ ರೂ.ಲಂಚದ ಹಣ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ. ಕಾರ್ಯಪಾಲಕ ಅಭಿಯಂತರ ಕಾವೇರಿ ರಂಗನಾಥ್ ಮತ್ತು ಅಕೌಂಟ್ ಸೂಪರಿಂಟೆಂಡೆಂಟ್ ಉಮಾ ಮಹೇಶ್ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಮರಾಜನಗರದ ಅಬ್ದುಲ್ ಅಜೀಜ್ ಎಂಬವರಿಂದ ಅಧಿಕಾರಿಗಳು 1.45 ಲಕ್ಷ ರೂ. ಲಂಚ …
Read More »ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್, ಏಪ್ರಿಲ್ 15ರ ಒಳಗಾಗಿ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತು. ವಕೀಲರ ವಾದ: ವಿಚಾರಣೆ ವೇಳೆ ಅರ್ಜಿದಾರರ …
Read More »ಇನ್ಮುಂದೆ ಹಾವೇರಿ ನಿಲ್ದಾಣದಲ್ಲೂ ವಂದೇ ಭಾರತ್ ಎಕ್ಸ್ಪ್ರೆಸ್ ನಿಲುಗಡೆ
ಹುಬ್ಬಳ್ಳಿ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಇನ್ಮುಂದೆ ಹಾವೇರಿ ನಿಲ್ದಾಣದಲ್ಲಿಯೂ ನಿಲುಗಡೆಯಾಗಲಿದೆ. ರೈಲು ಸಂಖ್ಯೆ 20661/20662 ಕೆಎಸ್ಆರ್ ಬೆಂಗಳೂರು-ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲನ್ನು ಹಾವೇರಿಯ ಶ್ರೀ ಮಹದೇವಪ್ಪ ಮೈಲಾರ ರೈಲ್ವೆ ನಿಲ್ದಾಣದಲ್ಲಿ ಪ್ರಾಯೋಗಿಕವಾಗಿ ಎರಡು ನಿಮಿಷಗಳ ನಿಲುಗಡೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ. ಏಪ್ರಿಲ್ 11ರಿಂದ ಧಾರವಾಡದಿಂದ ಬೆಂಗಳೂರಿಗೆ ತೆರಳುವ ರೈಲು ಸಂಖ್ಯೆ 20662 ಹಾಗೂ ಏಪ್ರಿಲ್ 12ರಿಂದ ಬೆಂಗಳೂರಿನಿಂದ ಧಾರವಾಡಕ್ಕೆ ಆಗಮಿಸುವ ರೈಲು …
Read More »ಯತ್ನಾಳ್ ಉಚ್ಚಾಟನೆಗೆ ಉತ್ತರ ಕರ್ನಾಟಕದ ಜನರು ಸಂದರ್ಭಾನುಸಾರವಾಗಿ ಉತ್ತರ ಕೊಡುತ್ತಾರೆ ಎಂದ ಸವದಿ
ಚಿಕ್ಕೋಡಿ (ಬೆಳಗಾವಿ) : ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕ ಭಾಗದಲ್ಲಿ ಚಿಂತನೆ ಪ್ರಾರಂಭವಾಗಿದೆ. ಸಂದರ್ಭಾನುಸಾರವಾಗಿ ಬಿಜೆಪಿಗೆ ಏನು ಉತ್ತರ ಕೊಡಬೇಕು ಅದನ್ನು ಮುಂದೆ ಈ ಭಾಗದ ಜನ ಕೊಡುತ್ತಾರೆ ಎಂದು ಪರೋಕ್ಷವಾಗಿ ಬಿಜೆಪಿ ನಾಯಕರಿಗೆ ಅಥಣಿ ಶಾಸಕ ಲಕ್ಷ್ಮಣ್ ಸವದಿ ಎಚ್ಚರಿಕೆ ನೀಡಿದರು. ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಯ ಚಾಕ್ವೆಲ್ ಕಮ್ ಪಂಪ್ ಹೌಸ್ ನಿರ್ಮಾಣ ಹಂತಕ್ಕೆ ಪೂಜೆ ನೆರವೇರಿಸಿದ ಬಳಿಕ, ಮಾಧ್ಯಮದವರೊಂದಿಗೆ …
Read More »ಲಾಡ್ ಅವರಿಗೆ ತಮ್ಮ ಕ್ಷೇತ್ರವೇ ಕಾಣೋದಿಲ್ಲ: ಬೆಲ್ಲದ
ಲಾಡ್ ಅವರಿಗೆ ತಮ್ಮ ಕ್ಷೇತ್ರವೇ ಕಾಣೋದಿಲ್ಲ: ಶಾಸಕ ಬೆಲ್ಲದ ತಿರುಗೇಟು. ….ಬಿಜೆಪಿ ಮೋದಿ ವಿರುದ್ಧವೇ ಜನಾಕ್ರೋಶ ಯಾತ್ರೆ ಮಾಡುತ್ತಿದೆ ಎಂದಿದ್ದ ಸಚಿವ ಲಾಡ್ಗೆ ಬೆಲ್ಲದ ಟಾಂಗ್… ಬಿಜೆಪಿ ಮೋದಿ ವಿರುದ್ಧವೇ ಜನಾಕ್ರೋಶ ಯಾತ್ರೆ ಮಾಡುತ್ತಿದೆ ಎಂಬ ಸಚಿವ ಸಂತೋಷ ಲಾಡ್ ಹೇಳಿಕೆಗೆ ಪ್ರತಿಕ್ರಿಯೆಪ್ರತಿಕ್ರಿಯೆಯಾಗಿ ನಿಒಡ ಲಾಡ್ ಹೇಳಿಕೆಗೆ, ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಅವರು ಸಚಿವ ಲಾಡ್ ಅವರಿಗೆ ತಿರುಗೇಟು ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಸಂತೋಷ …
Read More »ಬಂಡೀಪುರ ರಸ್ತೆ ಗದ್ದಲ: ಪ್ರಿಯಾಂಕಾ, ರಾಹುಲ್ ಲಾಬಿಗೆ ಮಣಿಯಬೇಡಿ: ಲಹರ್ ಸಿಂಗ್ ಆಗ್ರಹ
ಬೆಂಗಳೂರು, ಏಪ್ರಿಲ್ 7: ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi), ಮಾಜಿ ವಯನಾಡ್ ಸಂಸದ ರಾಹುಲ್ ಗಾಂಧಿ (Rahul Gandhi) ಹಾಗೂ ಕೇರಳ ಸರ್ಕಾರದ (Kerala Government) ಲಾಬಿಗೆ ಮಣಿದು ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ವಾಹನ ಸಂಚಾರಕ್ಕೆ (Bandipura Forest Night Travaling) ಅವಕಾಶ ನೀಡಬಾರದು ಎಂದು ಬಿಜೆಪಿ ಸಂಸದ ಲಹರ್ ಸಿಂಗ್ ಸಿರೋಯಾ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿರುವ …
Read More »