Breaking News

Yearly Archives: 2025

ವಿವೇಕನಗರ ಪೊಲೀಸ್‌ ಠಾಣೆಯ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಸ್ಪೆಂಡ್

ಬೆಂಗಳೂರು: ಪೊಲೀಸ್ ಠಾಣೆಯಲ್ಲೇ ಯುವಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣ ಸಂಬಂಧ ವಿವೇಕನಗರ ಠಾಣೆಯ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್‌ ಆದೇಶಿಸಿದ್ದಾರೆ. ವಿವೇಕನಗರ ಠಾಣೆ ಪಿಐ ಶಿವಕುಮಾರ್‌ ಹಾಗೂ ಮೂವರು ಸಿಬ್ಬಂದಿ ಅಮಾನತುಗೊಂಡವರು. ಗಲಾಟೆ ಸಂಬಂಧ ದರ್ಶನ್‌ ಎಂಬಾತನನ್ನು ಠಾಣೆಗೆ ಕರೆತಂದು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿತ್ತು. ಗಾಯಗೊಂಡಿದ್ದ ಆತನನ್ನು ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿ ಪುನರ್ವಸತಿ ಕೇಂದ್ರದಲ್ಲಿ ಇರಿಸಲಾಗಿತ್ತು. ಆತ …

Read More »

ಜೈಲಾಧಿಕಾರಿಗಳ ಖಡಕ್ ಎಚ್ಚರಿಕೆಗೆ ಪ್ರತಿಭಟನೆ ಸ್ಥಗಿತಗೊಳಿಸಿದ ಕೈದಿಗಳು

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಬೀಡಿ ಹಾಗೂ ಸಿಗರೇಟ್ ಮಾರಾಟಕ್ಕೆ ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿ, ನಾಲ್ಕು ದಿನಗಳಿಂದ ಕೈದಿಗಳು ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ. ಪ್ರತಿಭಟನೆ ನಿಲ್ಲಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಜೈಲಾಧಿಕಾರಿಗಳು ನೀಡಿದ ಎಚ್ಚರಿಕೆಯು ಕೈದಿಗಳ ಪ್ರತಿಭಟನೆ ತಣ್ಣಗಾಗುವಂತೆ ಮಾಡಿದೆ. ಜೈಲಿನ ನೂತನ ಮುಖ್ಯ ಜೈಲು ಅಧೀಕ್ಷಕರಾಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ಅಂಶುಕುಮಾರ್ ನೇತೃತ್ವದ ತಂಡ ನಿರಂತರ ಶೋಧ ನಡೆಸಿ, ಜೈಲಿನಲ್ಲಿ ನಡೆಯುತ್ತಿದ್ದ ಅಕ್ರಮಗಳಿಗೆ ಕಡಿವಾಣ ಹಾಕಿತ್ತು. ಅವ್ಯಾಹತವಾಗಿ ಬಳಕೆಯಾಗುತ್ತಿದ್ದ ಮೊಬೈಲ್​​ಗಳು, …

Read More »

ಕಬ್ಬಿನ ಟ್ರ್ಯಾಕ್ಟರ್​​ಗೆ ಕಾರು ಡಿಕ್ಕಿ, ಸ್ಥಳದಲ್ಲೇ ನಾಲ್ವರ ದುರ್ಮರಣ

ಬಾಗಲಕೋಟೆ: ಕಬ್ಬು ತುಂಬಿ ನಿಂತಿದ್ದ ಟ್ರ್ಯಾಕ್ಟರ್​​ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ನಾಲ್ವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರ ಬಳಿ ಮಂಗಳವಾರ ತಡರಾತ್ರಿ ಸಂಭವಿಸಿದೆ. ಮೃತಪಟ್ಟ ಯುವಕರನ್ನು ವಿಶ್ವನಾಥ್ (17), ಪ್ರವೀಣ್ (22), ಗಣೇಶ (20) ಹಾಗೂ ಪ್ರಜ್ವಲ್ (17) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಸಿದ್ದಾಪುರ ಗ್ರಾಮದ ನಿವಾಸಿಗಳೆಂದು ತಿಳಿದುಬಂದಿದೆ. ಸಿದ್ದಾಪುರ ಬಳಿರುವ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸುವ ಟ್ರ್ಯಾಕ್ಟರ​ನ್ನು ಬಿಜಾಪುರ-ಬೆಳಗಾವಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿ …

Read More »

ಶೃಂಗೇರಿ ವಿದ್ಯಾಶಂಕರ ದೇವಾಲಯಕ್ಕೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರ ಭೇಟಿ,

ಶೃಂಗೇರಿ ವಿದ್ಯಾಶಂಕರ ದೇವಾಲಯಕ್ಕೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರ ಭೇಟಿ, ಜನ ಸಾಮಾನ್ಯರಂತೆ ಪ್ರಸಾದ್ ಸ್ವೀಕರಿಸಿದ್ರು ಸರಳತೆ ಸಾಹುಕಾರ. ಚಿಕ್ಕಮಗಳೂರು: 14ನೇ ಶತಮಾನದಲ್ಲಿ ನಿರ್ಮಿಸಲಾದ, ಹೊಯ್ಸಳ ಮತ್ತು ದ್ರಾವಿಡ ವಾಸ್ತುಶಿಲ್ಪ ಶೈಲಿಗಳ ಸಂಯೋಜನೆಯ ಅತ್ಯದ್ಭುತ ಶೃಂಗೇರಿಯ ವಿದ್ಯಾಶಂಕರ ದೇವಾಲಯಕ್ಕೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭೇಟಿ ನೀಡಿ, ದೇವರ ಆಶೀರ್ವಾದ ಪಡೆದರು. ನಂತರ ಜನಸಾಮಾನ್ಯರಂತೆ ಪ್ರಸಾದ್ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸ್ನೇಹಿತರಾರ ಪ್ರಶಾಂತ್ ಜೋರಾಪುರ, ಚಂದ್ರಶೇಖರ ರೆಡ್ಡಿ ಅವರು ಜೊತೆ …

Read More »

ಸುಳಗಾ ಗ್ರಾಮದಲ್ಲಿ ರಸ್ತೆಗಳ ನಿರ್ಮಾಣಕ್ಕೆ ಭೂಮಿ ಪೂಜೆ

ಸುಳಗಾ ಗ್ರಾಮದಲ್ಲಿ ರಸ್ತೆಗಳ ನಿರ್ಮಾಣಕ್ಕೆ ಭೂಮಿ ಪೂಜೆ ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳಗಾ(ಯು) ಗ್ರಾಮದಲ್ಲಿನ ರಸ್ತೆಗಳ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಸೋಮವಾರ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸೇರಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಪ್ರಯತ್ನದ ಫಲವಾಗಿ ಮಂಜೂರಾಗಿರುವ ಸುಮಾರು 50 ಲಕ್ಷ ರೂ,ಗಳ ವೆಚ್ಚದಲ್ಲಿ ರಸ್ತೆಗಳ ನಿರ್ಮಾಣ ಮಾಡಲಾಗುತ್ತಿದ್ದು, ನಿಗದಿತ ಸಮಯದಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಹಾಗೂ …

Read More »

ಶಾಸಕ ಆಸಿಫ್ ಸೇಠ್ ಅವರಿಂದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಗೆ ಚಾಲನೆ!

ಶಾಸಕ ಆಸಿಫ್ ಸೇಠ್ ಅವರಿಂದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಗೆ ಚಾಲನೆ! 2025–26ನೇ ಸಾಲಿನ ಬೆಳಗಾವಿ ನಗರ ವಲಯದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಗಳ ಕಾರ್ಯಕ್ರಮವು ನಗರದ ಕ್ಯಾಂಪ್ ಪ್ರದೇಶದಲ್ಲಿರುವ ಮರಾಠಿ ವಿದ್ಯಾ ನಿಕೇತನ ಶಾಲೆಯಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಶಾಸಕ ಆಸಿಫ್ ಸೇಠ್ ಅವರು ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿ, ಕಲೆ, ಸಂಸ್ಕೃತಿ, ಸಾಹಿತ್ಯ, ಸಂಗೀತ, ನೃತ್ಯ …

Read More »

ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ

ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ಉದ್ಘಾಟನೆ ನೆರವೇರಿಸಲಾಯಿತು. ಈ ಸುಂದರ ಸಂದರ್ಭದಲ್ಲಿ ಗ್ರಾಮಸ್ಥರು ಮತ್ತು ಸಂಘದ ವತಿಯಿಂದ ನೀಡಿದ ಆತ್ಮೀಯ ಗೌರವ ಸನ್ಮಾನವನ್ನು ಸ್ವೀಕರಿಸಿದೆ. ರೈತರ ಏಳಿಗೆಗಾಗಿ ಈ ಸಂಘವು ಸದಾ ಶ್ರಮಿಸಲಿ. ಹೈನುಗಾರರ ಮತ್ತು ರೈತರ ಆರ್ಥಿಕ ಪ್ರಗತಿಗೆ ಸಹಕಾರಿಯಾಗಲಿ ಹಾಗೂ ಉತ್ತಮವಾಗಿ ಕಾರ್ಯನಿರ್ವಹಿಸಲಿ ಎಂದು ಶುಭ ಹಾರೈಸುತ್ತೇನೆ. ಈ ವೇಳೆ ಸಂಘ’ದ ಅಧ್ಯಕ್ಷರು, ಸರ್ವ ಸದಸ್ಯರು, ಸ್ಥಳೀಯ …

Read More »

12 ಅಧಿವೇಶನಗಳಲ್ಲಿ ಉತ್ತರ ಕರ್ನಾಟಕದ ಬಗ್ಗೆ ಇಂತಿಂಥ ವಿಷಯಗಳು ಚರ್ಚೆಯಾಗಿ, ಅನುಷ್ಠಾನಕ್ಕೆ ತರಲಾಗಿದೆ ಎಂಬುದನ್ನು ಸಿಎಂ ಸಿದ್ದರಾಮಯ್ಯ ಅವರು ಬಹಿರಂಗಪಡಿಸಬೇಕು ಎಂದು ಅಶೋಕ ಚಂದರಗಿ ಆಗ್ರಹಿಸಿದ್ದಾರೆ.

ಬೆಳಗಾವಿ: ವಿಧಾನಮಂಡಲದ ಚಳಿಗಾಲ ಅಧಿವೇಶನಕ್ಕೆ ಇನ್ನೇನು ಆರು ದಿನ ಮಾತ್ರ ಬಾಕಿ ಉಳಿದಿವೆ. ಪ್ರತಿವರ್ಷದಂತೆ ರಾಜ್ಯ ಸರ್ಕಾರ ಪ್ರವಾಸಕ್ಕೆ ಬಂದಂತೆ ಬಂದು ಹೋಗಬಾರದು. ಕಾಟಾಚಾರದ ಅಧಿವೇಶನ ಅವಶ್ಯಕತೆ ಇಲ್ಲ. ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಮಾತ್ರ ಚರ್ಚಿಸಿ, ಇದೇ ಅಧಿವೇಶನದಲ್ಲಿ ಅದನ್ನು ಅನುಷ್ಠಾ‌ನಕ್ಕೆ ತರುವ ನಿರ್ಣಯ ಕೈಗೊಳ್ಳಬೇಕು. ಜೊತೆಗೆ ಇಲ್ಲಿಯವರೆಗೆ ಕೈಗೊಂಡ ನಿರ್ಣಯಗಳ ವರದಿ ಮಂಡಿಸಬೇಕು ಎಂದು ಇಲ್ಲಿನ ಜನರು ಆಗ್ರಹಿಸುತ್ತಿದ್ದಾರೆ. ಹೌದು, 2006ರಲ್ಲಿ ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಪರಾಕಾಷ್ಠೆಗೆ …

Read More »

ಸಿಎಂ‌ – ಡಿಸಿಎಂ ಎರಡನೇ ಬ್ರೇಕ್ ಫಾಸ್ಟ್​ಗೂ ನನ್ನನ್ನು ಕರೆದಿಲ್ಲ ಎಂದು ಸಚಿವ ಜಿ ಪರಮೇಶ್ವರ್

ಬೆಂಗಳೂರು: ಅಗತ್ಯ ಬಿದ್ದರೆ ನಮ್ಮ ಮನೆಗೂ ಬ್ರೇಕ್ ಫಾಸ್ಟ್​ಗೆ ಕರೆಯುತ್ತೇನೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ಮನೆಯಲ್ಲಿ ಸಿಎಂ ಬ್ರೇಕ್ ಫಾಸ್ಟ್ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಪಕ್ಷದಲ್ಲಿ ಎಲ್ಲವೂ ತಿಳಿಯಾಗಿದೆ. ಈಗ ಸಂತೋಷದ ವಾತಾವರಣವಿದೆ. ಸಿಎಂ‌-ಡಿಸಿಎಂ ಎರಡನೇ ಬ್ರೇಕ್ ಫಾಸ್ಟ್​ಗೂ ನನ್ನನ್ನು ಕರೆದಿಲ್ಲ. ಸದ್ಯಕ್ಕೆ ಅವರು ಇಬ್ಬರೇ ತಿಂಡಿ ತಿನ್ನುತ್ತಿದ್ದಾರೆ. ನಮ್ಮನ್ನೂ ಕರೆದರೆ ನಾವೂ ತಿಂಡಿ ತಿನ್ನಲು ಹೋಗುತ್ತೇವೆ. ಅಗತ್ಯ ಬಿದ್ದರೆ …

Read More »

ಬ್ಲೇಡ್​ನಿಂದ ಮಹಿಳೆ ಕುತ್ತಿಗೆ ಮೇಲೆ ದಾಳಿ ಮಾಡಿ ಚಿನ್ನಾಭರಣ, ನಗದು ಕದ್ದು ಪರಾರಿ

ಕಲಬುರಗಿ: ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಮನೆಯಲ್ಲಿ ಮಲಗಿದ್ದ ಮಹಿಳೆಯ ಕುತ್ತಿಗೆಗೆ ದುಷ್ಕರ್ಮಿಗಳು ಬ್ಲೇಡ್​ನಿಂದ ದಾಳಿ ಮಾಡಿ ಕೊರಳಲ್ಲಿದ್ದ ಚಿನ್ನಾಭರಣ ಹಾಗೂ ಮನೆಯಲ್ಲಿದ್ದ ನಗದು ದೋಚಿ ಪರಾರಿಯಾದ ಘಟನೆ ನಡೆದಿದೆ. ಅಮೀರ್ ಬಿ. ಪಟೇಲ್ ದುಷ್ಕರ್ಮಿಗಳ ದಾಳಿಗೆ ಒಳಗಾದ ಮಹಿಳೆ. ತೀವ್ರ ರಕ್ತಸ್ರಾವದಿಂದ ಬಳಲಿದ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಮೀರ್ ಬಿ ಪಟೇಲ್ ಅವರ ಮಗ ಹೈದರಾಬಾದ್​ನಲ್ಲಿ ಕೆಲಸ ಮಾಡುವ …

Read More »