ಭಾರತ ಪಾಕಿಸ್ತಾನ ನಡುವೆ ಯದ್ಧದ ಪ್ರಸಂಗ ಎದುರಾದರೇ… ಯುದ್ಧಕ್ಕೆ ನಾವು ರೆಡಿ ಎಂದ ಬೆಳಗಾವಿಯ ಮಾಜಿ ಸೈನಿಕರು..!!! ಭಾರತ ಪಾಕಿಸ್ತಾನ ನಡುವೆ ಯದ್ಧದ ಪ್ರಸಂಗ ಎದುರಾದರೆ ನಾವು ಯುದ್ಧ ಮಾಡಿ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಲು ಸಿದ್ಧರಾಗಿದ್ದೇವೆಂದು ಬೆಳಗಾವಿಯ ಮಾಜಿ ಸೈನಿಕ ಸಂಘನೆಯ ಜಿಲ್ಲಾಧ್ಯಕ್ಷ ಜಗದೀಶ ಪುಜಾರಿ ಹೇಳಿದ್ದಾರೆ. ಇಂದು ಬೆಳಗಾವಿಯಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯನ್ನು ಉದ್ಧೇಶಿಸಿ ಅವರು ಮಾತನಾಡಿದರು. ಬೆಳಗಾವಿಯಲ್ಲಿ ಜಿಲ್ಲೆಯಲ್ಲಿ 36 ಸಾವಿರ ಮಾಜಿ ಸೈನಿಕರಿದ್ದಾರೆ. ಭಾರತದ ಗಡಿಯ …
Read More »Yearly Archives: 2025
ಪಂಚ ಗ್ಯಾರಂಟಿ” ಕಿರುಪುಸ್ತಕ ಬಿಡುಗಡೆ ಜನರ ಜೀವನಮಟ್ಟ ಸುಧಾರಣೆಗೆ “ಗ್ಯಾರಂಟಿ” ಸಹಕಾರಿ: ಸಚಿವ ಸತೀಶ್ ಜಾರಕಿಹೊಳಿ
ಪಂಚ ಗ್ಯಾರಂಟಿ” ಕಿರುಪುಸ್ತಕ ಬಿಡುಗಡೆ ಜನರ ಜೀವನಮಟ್ಟ ಸುಧಾರಣೆಗೆ “ಗ್ಯಾರಂಟಿ” ಸಹಕಾರಿ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ, ಮೇ 5(ಕರ್ನಾಟಕ ವಾರ್ತೆ): ರಾಜ್ಯದ ಸಮಗ್ರ ಅಭಿವೃದ್ಧಿ ಸಾಕಾರಕ್ಕಾಗಿ ರಾಜ್ಯ ಸರಕಾರವು ಜಾರಿಗೆ ತಂದಿರುವ “ಪಂಚ ಗ್ಯಾರಂಟಿ” ಯೋಜನೆಗಳ ಕುರಿತ ಕಿರುಪುಸ್ತಕವನ್ನು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಬಿಡುಗಡೆಗೊಳಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪ್ರಕಟಿಸಲಾಗಿರುವ ಪಂಚ ಗ್ಯಾರಂಟಿ ಕುರಿತ ಕಿರುಪುಸ್ತಕವನ್ನು …
Read More »ದೇವಲತ್ತಿ ಹಾಗೂ ಕಾಮಸಿನಕೊಪ್ಪ ಗ್ರಾಮಗಳ ಜಮೀನುಗಳಲ್ಲಿ ವಿದ್ಯುತ್ ನ್ನು ಈ ಹಿಂದೆ ನೀಡಲಾಗುತ್ತಿದ್ದ ರೀತಿಯಲ್ಲಿ ಒದಗಿಸಬೇಕೆಂದು ಆಗ್ರಹಿಸಿ ತಹಶೀಲ್ದಾರ್ ಅವರಿಗೆ ಮನವಿ
ದೇವಲತ್ತಿ ಹಾಗೂ ಕಾಮಸಿನಕೊಪ್ಪ ಗ್ರಾಮಗಳ ಜಮೀನುಗಳಲ್ಲಿ ವಿದ್ಯುತ್ ನ್ನು ಈ ಹಿಂದೆ ನೀಡಲಾಗುತ್ತಿದ್ದ ರೀತಿಯಲ್ಲಿ ಒದಗಿಸಬೇಕೆಂದು ಆಗ್ರಹಿಸಿ ತಹಶೀಲ್ದಾರ್ ಅವರಿಗೆ ಮನವಿ ಖಾನಾಪೂರ ತಾಲೂಕಿನ ದೇವಲತ್ತಿ ಹಾಗೂ ಕಾಮಸಿನಕೊಪ್ಪ ಗ್ರಾಮಗಳ ರೈತಾಪಿ ವರ್ಗದವರು ಹಾಗೂ ಸಾರ್ವಜನಿಕರು ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಹೆಸ್ಕಾಂ ಇಲಾಖೆಯು ಇದರ ಮೊದಲು ಗ್ರಾಮಗಳ ಜಮೀನುಗಳಲ್ಲಿಯ ವಿದ್ಯುತ್ ನ್ನು ಹೇಗೆ ನೀಡಲಿಗುತ್ತಿತ್ತು ಹಾಗೆಯೇ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು ತದನಂತರದಲ್ಲಿ ತಹಶೀಲ್ದಾರ್ …
Read More »ಕನ್ನಡದಿಂದ ಬ್ಯಾನ್ ಆದ ಸೋನು ನಿಗಮ್
‘ನಮಸ್ಕಾರ.. ನಾನು ಭಾಷೆ, ಸಂಸ್ಕೃತಿ, ಸಂಗೀತ, ಸಂಗೀತಗಾರರು, ಈ ರಾಜ್ಯ ಮತ್ತು ಜನರ ಮೇಲೆ ಅಪರೂಪದ ಪ್ರೀತಿ ಹರಿಸಿರುವೆ. ಅದು ನಾನು ಕರ್ನಾಟಕದಲ್ಲಿದ್ದಾಗ ಮಾತ್ರವಲ್ಲ, ನಾನು ಜಗತ್ತಿನ ಎಲ್ಲಿ ಇದ್ದರೂ ಸಹ. ನಿಜ ಹೇಳಬೇಕೆಂದರೆ, ನಾನು ನನ್ನ ಕನ್ನಡ ಹಾಡುಗಳನ್ನು ಹಿಂದಿ ಸೇರಿ ಇತರ ಭಾಷೆಗಳ ಹಾಡೆಗಳಿಗಿಂತಲೂ ಹೆಚ್ಚು ಗೌರವದಿಂದ ನೋಡಿದ್ದೇನೆ. ಈ ಮಾತಿಗೆ ಸಾಕ್ಷಿಯಾಗಿ ನೂರಾರು ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ನಾನು ಪ್ರತಿಯೊಂದು ಕರ್ನಾಟಕದ ಕಾರ್ಯಕ್ರಮಕ್ಕಾಗಿಯೂ ಒಂದು …
Read More »ಹಾವೇರಿ ಜಿಲ್ಲೆಯಲ್ಲಿ ಕಳೆದ ವರ್ಷ ಅಪಘಾತದಿಂದ 300 ಮಂದಿ ಸಾವು: ಎಸ್ಪಿ ಅಂಶುಕುಮಾರ್
ಹಾವೇರಿ: ಜಿಲ್ಲೆಯಲ್ಲಿ ಅಪಘಾತದಿಂದ ಮೃತಪಟ್ಟವರ ಸಂಖ್ಯೆ 2023ಕ್ಕೆ ಹೋಲಿಸಿದರೆ, 2024ರಲ್ಲಿ ಹೆಚ್ಚಳ ಕಂಡುಬಂದಿದೆ. 2023ರಲ್ಲಿ ಅಪಘಾತದಲ್ಲಿ 280 ಮಂದಿ ಸಾವನ್ನಪ್ಪಿದ್ದರೆ, 2024ರಲ್ಲಿ 300 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ತಿಳಿಸಿದರು. ನಗರದ ತಮ್ಮ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ 48ರಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಕಡಿಮೆಯಾಗಿದೆ. ಅಲ್ಲದೆ, ಮರಣಿಸುವವರ ಸಂಖ್ಯೆಯೂ ಕಡಿಮೆಯಾಗಿದೆ. ಆದರೆ, ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಹೆದ್ದಾರಿಗಳಲ್ಲಿ ಅಪಘಾತಗಳ ಸಂಖ್ಯೆ ಮತ್ತು …
Read More »ದ್ಯಾಮವ್ವ-ದುರ್ಗವ್ವ ಮೂರ್ತಿಗಳನ್ನು ಹೊತ್ತು ಹೊನ್ನಾಟ ಗ್ರಾಮಕ್ಕೆ ಗ್ರಾಮವೇ ಭಂಡಾರಮಯ
ಧಾರವಾಡ: ಉತ್ತರ ಕರ್ನಾಟಕದಲ್ಲಿ ಜಾತ್ರಾ ಸಂಭ್ರಮವಿದೆ. ಅದರಲ್ಲೂ ಗ್ರಾಮೀಣ ಭಾಗದಲ್ಲಿ ಗ್ರಾಮದೇವಿಯರ ಜಾತ್ರೆಗಳು ಅದ್ಧೂರಿಯಾಗಿ ನಡೆಯುತ್ತಿವೆ. ಧಾರವಾಡದ ತಾಲೂಕಿನ ಯಾದವಾಡ ಗ್ರಾಮದಲ್ಲಿ 21 ವರ್ಷಗಳ ಬಳಿಕ ಜಾತ್ರೆ ನಡೆಯುತ್ತಿದೆ. ಗ್ರಾಮದೇವತೆಗಳ ಜಾತ್ರೋತ್ಸವದ ಸಂಭ್ರಮ ಮನೆಮಾಡಿದ್ದು, ಇಂದು ಬೀದಿಬೀದಿಗಳಲ್ಲಿ ನಡೆದ ಹೊನ್ನಾಟ ಇಡೀ ಗ್ರಾಮವನ್ನೇ ಭಂಡಾರಮಯಗೊಳಿಸಿತು. ಯಾವುದೇ ರೀತಿಯ ಭೇದಭಾವವಿಲ್ಲದೆ ಗ್ರಾಮಸ್ಥರೆಲ್ಲರೂ ಸಡಗರದಲ್ಲಿ ಪಾಲ್ಗೊಂಡು ಗಮನ ಸೆಳೆದರು. 21 ವರ್ಷಗಳ ಗ್ರಾಮದೇವತೆಗಳಾದ ದ್ಯಾಮವ್ವ-ದುರ್ಗವ್ವ ದೇವತೆಗಳ ಜಾತ್ರೆ ನಡೆಯುತ್ತಿರುವುದರಿಂದ ಗ್ರಾಮದಲ್ಲಿ ವಿಶೇಷ ಸಂಭ್ರಮ …
Read More »ಕಾರವಾರ: ಪಹಲ್ಗಾಮ್ ದಾಳಿಗೆ ಮರುಗಿದ ಪುಟಾಣಿಗಳು; ಸ್ಕೇಟಿಂಗ್, ಮೊಂಬತ್ತಿ ಹಿಡಿದು ಶ್ರದ್ಧಾಂಜಲಿ
ಕಾರವಾರ (ಉತ್ತರಕನ್ನಡ): ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಬಲಿಯಾದ ಪ್ರವಾಸಿಗರ ಆತ್ಮಕ್ಕೆ ಶಾಂತಿ ಕೋರಿ ಎರಡು ಗಂಟೆಗಳ ಕಾಲ ನಗರದ ಮಿತ್ರ ಸಮಾಜದ ಆವರಣದಲ್ಲಿ ಭಾನುವಾರ ಪುಟಾಣಿಗಳು ಸ್ಕೇಟಿಂಗ್ ಮಾಡಿದರು. ಹಣಬರ್ ಸ್ಕೇಟಿಂಗ್ ಕ್ಲಬ್ನ ವತಿಯಿಂದ ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಮೃತಪಟ್ಟವರನ್ನು ಸ್ಮರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕ್ಲಬ್ನ ಸುಮಾರು 200 ಮಕ್ಕಳು ಕ್ಯಾಂಡಲ್ ಹಿಡಿದು ಭಾರತದ ಭೂಪಟ ರಚನೆ ಮಾಡಿ, ಅದರ ಸುತ್ತ ಸ್ಕೇಟಿಂಗ್ ಮಾಡುವ ಮೂಲಕ ಮೃತರನ್ನು ಸ್ಮರಿಸಿದರು.ಕಾರ್ಯಕ್ರಮಕ್ಕೆ ಕಾರವಾರ-ಅಂಕೋಲಾ …
Read More »ಸಂಕ್ರಾಂತಿಯವರೆಗೆ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಇಲ್ಲ, ರಾಜಕೀಯ ನಾಯಕರಿಗೆ ಅಪಮೃತ್ಯು : ಕೋಡಿಮಠದ ಶ್ರೀ ಭವಿಷ್ಯ
ಬಾಗಲಕೋಟೆ : ರಾಜ್ಯ ರಾಜಕೀಯದಲ್ಲಿ ಸಂಕ್ರಾಂತಿಯವರೆಗೆ ಯಾವುದೇ ಬದಲಾವಣೆ ಆಗಲ್ಲ. ವಾಯು, ಭೂ, ಜಲ, ಅಗ್ನಿ ಸುನಾಮಿಗಳು ಸಂಭವಿಸಲಿವೆ. ಹಿಮಾಲಯದಲ್ಲಿ ಸುನಾಮಿ ಆಗುತ್ತೆ, ಅಲ್ಲಿಂದ ಅದು ಡೆಲ್ಲಿಗೆ ಬರುತ್ತದೆ. ಜಗತ್ತಿನ ಎರಡು ಮೂರು ಜನ ಮಹಾನ್ ರಾಜಕೀಯ ನಾಯಕರಿಗೆ ಅಪಮೃತ್ಯುವಿದೆ (ಅಕಾಲಿಕ ಸಾವು) ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಅವರು ನವನಗರದ ಸೆಕ್ಟರ್ ನಂಬರ್ 25ರಲ್ಲಿ ಕೃಷಿಯೇತರ ಪತ್ತಿನ ಸಹಕಾರಿ ಸಂಘದ ಬ್ಯಾಂಕಿನ ನೂತನ …
Read More »ರಸ್ತೆಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಖಾಸಗಿ ಕಂಪನಿ ಉದ್ಯೋಗಿ ಬಂಧನ
ಬೆಂಗಳೂರು: ಹಿಂದಿನಿಂದ ದ್ವಿಚಕ್ರ ವಾಹನದಲ್ಲಿ ಬಂದು ರಸ್ತೆಯಲ್ಲಿ ಸಾಗುತ್ತಿದ್ದ ಯುವತಿಯನ್ನು ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಮಾರತ್ ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಕಂಪನಿಯೊಂದರ ಉದ್ಯೋಗಿ ಶ್ರೀಕಾಂತ್ (32) ಬಂಧಿತ ಆರೋಪಿ. ಏಪ್ರಿಲ್ 30ರಂದು ರಾತ್ರಿ 11:30ರ ಸುಮಾರಿಗೆ ಇಕೋ ವರ್ಲ್ಡ್ ಮೇನ್ ಗೇಟ್ ಬಳಿ ಯುವತಿಯನ್ನು ಆರೋಪಿ ಹಿಂದಿನಿಂದ ಸ್ಪರ್ಶಿಸಿದ್ದಾನೆ. ಈ ಕುರಿತು 23 ವರ್ಷದ ಯುವತಿ ನೀಡಿದ್ದ ದೂರಿನನ್ವಯ ಮಾರತ್ ಹಳ್ಳಿ ಠಾಣೆಯಲ್ಲಿ ಪ್ರಕರಣ …
Read More »ನೀಟ್ ಪರೀಕ್ಷೆಯಲ್ಲೂ ಜನಿವಾರ ತೆಗೆಸಿದ ಆರೋಪ: ಕಲಬುರಗಿಯಲ್ಲಿ ರಸ್ತೆಯಲ್ಲೇ ಕುಳಿತು ಆಕ್ರೋಶ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ
ಕಲಬುರಗಿ: ಬೀದರ್ನಲ್ಲಿ ಇತ್ತೀಚೆಗೆ ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗೆ ಜನಿವಾರ ತೆಗೆಸಿದ್ದ ಪ್ರಕರಣ ಮಾಸುವ ಮುನ್ನವೇ ಕಲಬುರಗಿಯಲ್ಲಿ ಅದೇ ರೀತಿಯ ಆರೋಪ ಕೇಳಿಬಂದಿದೆ. ಭಾನುವಾರ ನೀಟ್ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗೆ ಜನಿವಾರ ತೆಗೆಯುವಂತೆ ಹೇಳಲಾಗಿದೆ ಎಂದು ಆರೋಪಿಸಲಾಗಿದೆ. ಬೇಕೇ ಬೇಕು.. ನ್ಯಾಯ ಬೇಕು ಅಂತ ಘೋಷಣೆ ಕೂಗುತ್ತ ನಿಂತಿರೋ ಹಿಂದೂ ಕಾರ್ಯಕರ್ತರು.. ಮತ್ತೊಂದೆಡೆ, ಜನಿವಾರವನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ವಿದ್ಯಾರ್ಥಿಯ ತಂದೆ.. ಈ ದೃಶ್ಯ ಕಂಡು ಬಂದಿದ್ದು …
Read More »