Breaking News

Yearly Archives: 2025

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಯುವ ಕಾಂಗ್ರೆಸ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ‘

 ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಆಯೋಜಿಸಲಾದ ಕೊಪ್ಪಳ ಜಿಲ್ಲಾ ಯುವ ಕಾಂಗ್ರೆಸ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ‘ಯುವ ಶಕ್ತಿ ಪ್ರತಿಜ್ಞೆ’ ಕಾರ್ಯಕ್ರಮದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭಾಗವಹಿಸಿ, ಯುವ ಶಕ್ತಿ ಮತ್ತು ಸಂಘಟನೆಯ ಭವಿಷ್ಯದ ದೃಷ್ಟಿಕೋನವನ್ನು ಹಂಚಿಕೊಂಡರು ಪಕ್ಷದ ಭವಿಷ್ಯ ರೂಪಿಸುವಲ್ಲಿ ಯುವಕರ ಪಾತ್ರ ಅಮೂಲ್ಯ. ಹೊಸ ನೇತೃತ್ವಕ್ಕೆ ಹಾರೈಕೆಗಳು! ಈ ಕಾರ್ಯಕ್ರಮದಲ್ಲಿ ಕೊಪ್ಪಳ ಮಾನ್ಯ ಸಂಸದರು ಶ್ರೀ ರಾಜಶೇಖರ ಹಿಟ್ನಾಳ್ ಅವರು ಹಾಗೂ ಮಾಜಿ ಸಚಿವರಾದ …

Read More »

ಬಸ್ ಬಿಡುವಂತೆ ಆಗ್ರಹಿಸಿ ಸುವರ್ಣಸೌಧದ ಬಳಿ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ

ಬಸ್ ಬಿಡುವಂತೆ ಆಗ್ರಹಿಸಿ ಸುವರ್ಣಸೌಧದ ಬಳಿ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಸಮಯಕ್ಕೆ ಬಾರದ ಬಸ್ ವಿದ್ಯಾರ್ಥಿಗಳೆಲ್ಲ ಠುಸ್ ಮಕ್ಕಳ ದಿನನಿತ್ಯದ ಗೋಳನ್ನು ನೋಡಿದ ಪಾಲಕರ ಮನಸ್ಸು ಕಸ್ ರೋಚ್ಚಿಗೆದ್ದ ವಿದ್ಯಾರ್ಥಿಗಳು ಹಾಗೂ ಪಾಲಕರದಿಂದ ಬೆಂಗಳೂರು ಪುಣೆ ರಾಷ್ಟ್ರೀಯ ಹೆದ್ದಾರಿಗೆ ಬ್ರೇಕ್ ಈ  ಬೆಳಗಾವಿ ತಾಲೂಕಿನ ಕೊಂಡಸಕಪ್ಪ ಗ್ರಾಮಕ್ಕೆ ಬಸ್ ಬಿಡುವಂತೆ ಹಲವಾರು ಬಾರಿ ಮನವಿ ಮಾಡಿದರೂ ಸ್ಪಂದಿಸದ ಕೆಎಸ್ಆರ್ಟಿಸಿ ಅಧಿಕಾರಿಗಳ ವಿರುದ್ಧ ಏಕಾಏಕಿ ಬುಧವಾರ ತಮ್ಮೂರಿಗೆ ಬಸ್ …

Read More »

ಕಿತ್ತೂರು ಕೈ ಶಾಸಕರಿಂದ ಬಿಜೆಪಿಗರ ಅವಹೇಳನ ಆರೋಪ ಶಾಸಕ ಬಾಬಾಸಾಹೇಬ್ ಪಾಟೀಲ್ ಗೃಹ ಕಚೇರಿಗೆ ಮುತ್ತಿಗೆ?!!!

ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ್ ಅವರು ಬಿಜೆಪಿ ಕಾರ್ಯಕರ್ತರನ್ನು ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಇಂದು ಕೈ ಶಾಸಕರ ಗೃಹ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಕೈ ಶಾಸಕರು ಬಹಿರಂಗವಾಗಿ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದರು. ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ್ ಅವರು ಬಿಜೆಪಿ ಕಾರ್ಯಕರ್ತರನ್ನು ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಇಂದು ಶಾಸಕರ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಮುಂದಾಗಿದ್ದಾರೆ. ಈ ಕುರಿತು ಮಾತನಾಡಿದ ಮಾಜಿ ಶಾಸಕ …

Read More »

ಗಡಿಯಲ್ಲಿ ಕನ್ನಡ ಕಡ್ಡಾಯಕ್ಕೆ ವಿರೋಧ… ಅಕ್ಟೋಬರ್ ಮೊದಲ ವಾರದಲ್ಲಿ ಎಂ.ಇ.ಎಸ್. ಪ್ರತಿಭಟನೆ

ಗಡಿಯಲ್ಲಿ ಕನ್ನಡ ಕಡ್ಡಾಯಕ್ಕೆ ವಿರೋಧ… ಅಕ್ಟೋಬರ್ ಮೊದಲ ವಾರದಲ್ಲಿ ಎಂ.ಇ.ಎಸ್. ಪ್ರತಿಭಟನೆ ಗಡಿಭಾಗದಲ್ಲಿ ಶೇ.15ಕ್ಕಿಂತ ಹೆಚ್ಚು ಅನ್ಯ ಭಾಷಿಕರಿರುವಾಗಲೂ ಕನ್ನಡ ಕಡ್ಡಾಯ ಆದೇಶ ಜಾರಿಗೊಳಿಸುತ್ತಿರುವುದನ್ನು ವಿರೋಧಿಸಿ ಆಗಸ್ಟ್ ಮೊದಲವಾರದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಲಾಗುವುದೆಂದು ಮಧ್ಯವರ್ತಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಇಂದು ಬೆಳಗಾವಿಯ ಮಧ್ಯವರ್ತಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಸಭೆಯನ್ನು ಕರೆಯಲಾಗಿತ್ತು. ಮಾಜಿ ಶಾಸಕ ಮನೋಹರ್ ಕಿಣೇಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗಡಿಭಾಗದಲ್ಲಿ ಕನ್ನಡ ಕಡ್ಡಾಯ, …

Read More »

ಹುಬ್ಬಳ್ಳಿ – ಜೋಗ್​ಫಾಲ್ಸ್‌ಗೆ ವಿಶೇಷ ಬಸ್

ಹುಬ್ಬಳ್ಳಿ: ಮಳೆಗಾಲದ ಪ್ರಯುಕ್ತ ವಿಶ್ವವಿಖ್ಯಾತ ಜೋಗ ಜಲಪಾತದ ವೀಕ್ಷಣೆಗೆ ಭಾನುವಾರ ಮತ್ತು ಸಾರ್ವಜನಿಕ ರಜಾ ದಿನಗಳಂದು ಹುಬ್ಬಳ್ಳಿಯ ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ವಿಶೇಷ ಬಸ್​​ಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್.ರಾಮನಗೌಡರ ತಿಳಿಸಿದ್ದಾರೆ. ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ನದಿಗಳು, ಜಲಪಾತಗಳು ಮೈದುಂಬಿ ಹರಿಯುತ್ತಿವೆ. ವಿಶ್ವವಿಖ್ಯಾತ ಜೋಗ ಜಲಪಾತ ಧುಮ್ಮಿಕ್ಕುತ್ತಿದೆ. ಸಾರ್ವಜನಿಕರ ಬೇಡಿಕೆಯ ಮೇರೆಗೆ ಜೋಗ ಜಲಪಾತ ವೀಕ್ಷಿಸಲು ಕುಟುಂಬದವರೊಂದಿಗೆ ಹೋಗಿ ಬರಲು …

Read More »

ಪಂಚಮಸಾಲಿ ಪೀಠಕ್ಕೆ ಜಡಿದಿದ್ದ ಬೀಗ ನಿನ್ನೆಯೇ ಓಪನ್​​: ಕಾಶಪ್ಪನವರ್, ಸ್ವಾಮೀಜಿ ಮಧ್ಯದ ಗುದ್ದಾಟಕ್ಕೆ ತಾತ್ಕಾಲಿಕ ಬ್ರೇಕ್

ಬಾಗಲಕೋಟೆ, ಜುಲೈ 16: ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸಂಗಮದ ಪಂಚಮಸಾಲಿ ಪೀಠಕ್ಕೆ (Panchamasali Peetha) ಬೀಗ ಜಡಿದಿದ್ದು, ಹೊಸ ಚರ್ಚೆ ಹುಟ್ಟು ಹಾಕಿತ್ತು. ಇದು ಕಾಂಗ್ರೆಸ್‌ ನಾಯಕ ವಿಜಯಾನಂದ ಕಾಶಪ್ಪನವರ (Vijayanand Kashappanavar) ಮತ್ತು ಪಂಚಮಸಾಲಿ ಶ್ರೀಗಳ ಮಧ್ಯೆ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿತ್ತು. ಇಂದು ಕೂಡ ಪೀಠದ ಎದುರು ಪೊಲೀಸ್ ಬಿಗಿಭದ್ರತೆ ಒದಗಿಸಲಾಗಿದ್ದು, ಪೀಠಕ್ಕೆ ಜಡಿದಿದ್ದ ಬೀಗವನ್ನು ನಿನ್ನೆಯೇ ತೆರೆಯಲಾಗಿದೆ. ಆ ಮೂಲಕ ಇಬ್ಬರ ಮಧ್ಯೆದ ಗುದ್ದಾಟ ತಾತ್ಕಾಲಿಕ ಸುಖಾಂತ್ಯ ಕಂಡಿದೆ. ಕಳೆದ ನಾಲ್ಕು ದಿನದ ಹಿಂದೆಯೇ …

Read More »

ಲಾಲ್ ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಚೆನ್ನಮ್ಮ, ರಾಯಣ್ಣಿಗೆ ಗೌರವ

ಬೆಂಗಳೂರು, (ಜುಲೈ 15): ಸ್ವಾತಂತ್ರ್ಯೋತ್ಸವ (Independence Day) ಮತ್ತು ಗಣರಾಜ್ಯೋತ್ಸವ ಅಂಗವಾಗಿ ಪ್ರತಿ ವರ್ಷ ಒಂದೊಂದು ರೀತಿಯ ವಿಷಯವಸ್ತುವಿನ ಆಧಾರದಲ್ಲಿ ತೋಟಗಾರಿಕೆ ಇಲಾಖೆ ಬೆಂಗಳೂರಿನ (Bengaluru) ಸಸ್ಯಕಾಶಿ ಲಾಲ್​​ಬಾಗ್​​ನಲ್ಲಿ ಫಲಪುಷ್ಪ ಪ್ರದರ್ಶನ (Lalbagh Flower Show) ಆಯೋಜಿಸುತ್ತದೆ. ಅದರಂತೆ, ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಪ್ರತಿವರ್ಷದಂತೆ ಈ ವರ್ಷವೂ ಸಹ ಲಾಲ್ ಬಾಗ್​​ ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಇಲಾಖೆ ಸಿದ್ದತೆ ನಡೆಸಿದ್ದು, ಇದೇ ಆಗಸ್ಟ್ 7ರಿಂದ ಆಗಸ್ಟ್ 18ರ ವರೆಗೆ ಹಮ್ಮಿಕೊಳ್ಳಲಾಗಿದೆ. ಈ …

Read More »

ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ರೈಲು ರಾಮನಾಥಪುರಂವರೆಗೆ ಸಂಚಾರ

ಹುಬ್ಬಳ್ಳಿ, ಜುಲೈ 15: ದಕ್ಷಿಣ ರೈಲ್ವೆಯಲ್ಲಿನ ಕಾರ್ಯಾಚರಣೆಯ ನಿರ್ಬಂಧಗಳನ್ನು ಗಮನದಲ್ಲಿಟ್ಟುಕೊಂಡು, 07355/07356 ಸಂಖ್ಯೆಯ ಎಸ್ಎಸ್ಎಸ್ ಹುಬ್ಬಳ್ಳಿ – ರಾಮೇಶ್ವರಂ – ಎಸ್ಎಸ್ಎಸ್ ಹುಬ್ಬಳ್ಳಿ (Hubballi-Rameswaram Train) ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲಿನ ಸಂಚಾರದ ಅವಧಿಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ (South Western Railway). ಈ ವಿಶೇಷ ರೈಲು ತನ್ನ ಹಿಂದಿನ ನಿಗದಿತ ನಿಲ್ದಾಣವಾದ ರಾಮೇಶ್ವರಂ ಬದಲಿಗೆ ರಾಮನಾಥಪುರಂನಲ್ಲಿ ತನ್ನ ಪ್ರಯಾಣವನ್ನು ಕೊನೆಗೊಳಿಸಲಿದೆ ಮತ್ತು ಅಲ್ಲಿಂದಲೇ ವಾಪಸ್​ …

Read More »

ಕರ್ನಾಟಕದ ಶಾಲೆಗಳಲ್ಲಿ U ಶೇಪ್​ನಲ್ಲಿ ಕುಳಿತುಕೊಳ್ಳುವ ವ್ಯವಸ್ಥೆಗೆ ಒತ್ತಾಯ: ಸಚಿವ ಮಧು ಬಂಗಾರಪ್ಪಗೆ ಪತ್ರ

ಬೆಂಗಳೂರು, ಜುಲೈ 16: ಇನ್ಮುಂದೆ ಶಾಲೆಗಳಲ್ಲಿ ಲಾಸ್ಟ್ ಬೆಂಚ್, ಫಸ್ಟ್ ಬೆಂಚ್​ ವಿದ್ಯಾರ್ಥಿಗಳು ಎಂಬ ವಿಧಾನಕ್ಕೆ ಬ್ರೇಕ್ ಬೀಳುವ ಸಾಧ್ಯತೆ ಇದೆ. ಸಿನಿಮಾ ಒಂದರ ಪ್ರೇರಣೆ ಪಡೆದು ಈಗಾಗಲೇ ಕೇರಳದಲ್ಲಿನ ಶಾಲೆಗಳಲ್ಲಿ ಅರ್ಧವೃತ್ತಾಕಾರದಲ್ಲಿ ಕುಳಿತುಕೊಳ್ಳುವ ವ್ಯವಸ್ಥೆಯನ್ನು (U-shaped seating arrangement) ಜಾರಿಗೆ ತರಲಾಗಿದೆ. ಇದೀಗ ಇದೇ ಮಾದರಿಯನ್ನು ಕರ್ನಾಟಕದ (Karnataka) ಶಾಲೆಗಳಲ್ಲಿಯೂ ಜಾರಿ ಮಾಡುವಂತೆ ಒತ್ತಾಯ ಕೇಳಿ ಬರುತ್ತಿದೆ. ಈ ಕುರಿತಾಗಿ ಮಕ್ಕಳ ಹಕ್ಕುಗಳ ಹೋರಾಟಗಾರರು ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. …

Read More »

ಧಾರವಾಡ ಜಿಲ್ಲೆಯ ನೂತನ ಎಸ್‌ಪಿಯಾಗಿ ಗುಂಜನ್ ಆರ್ಯ, ಅಧಿಕಾರ ಸ್ವೀಕಾರ….ನಿರ್ಗಮಿತ ಎಸ್‌ಪಿ ಗೋಪಾಲ್ ಬ್ಯಾಕೋಡ್‌ರಿಂದ ಅಧಿಕಾರ ಹಸ್ತಾಂತರ.

ಧಾರವಾಡ ಜಿಲ್ಲೆಯ ನೂತನ ಎಸ್‌ಪಿಯಾಗಿ ಗುಂಜನ್ ಆರ್ಯ, ಅಧಿಕಾರ ಸ್ವೀಕಾರ….ನಿರ್ಗಮಿತ ಎಸ್‌ಪಿ ಗೋಪಾಲ್ ಬ್ಯಾಕೋಡ್‌ರಿಂದ ಅಧಿಕಾರ ಹಸ್ತಾಂತರ. 2018ನೇ ಬ್ಯಾಚ್ ಐಪಿಎಸ್ ಅಧಿಕಾರಿ ಗುಂಜನ್ ಆರ್ಯ ಅವರು ಈಗ ಧಾರವಾಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಂಗಳವಾರ ಸಂಜೆ ಅಧಿಕಾರ ಸ್ವೀಕರಿಸಿದ್ದು, ನಿರ್ಗಮಿತ ಎಸ್‌ಪಿ ಗೋಪಾಲ್ ಬ್ಯಾಕೋಡ್ ಅವರು ಅಧಿಕಾರ ಹಸ್ತಾಂತರ ಮಾಡಿದರು.‌ ಗುಂಜನ್ ಆರ್ಯ ಅವರು ಮೂಲತಃ ಮಧ್ಯಪ್ರದೇಶ ರಾಜ್ಯದವರು, 2018ರ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದಾರೆ. ಈ …

Read More »