ಹು – ಧಾ ಮಹಾನಗರ ಪಾಲಿಕೆ ಮೇಯರ್ , ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಗದ್ದುಗೆಯನ್ನು ಬಿಜೆಪಿ ತನ್ನ ತಕ್ಕೆಗೆ ತಗೆದುಕೊಂಡಿದ್ದು, ಬಿಜೆಪಿಯ ಅಭ್ಯರ್ಥಿಗಳು ಮೇಯರ್ ಹಾಗೂ ಉಪಮೇಯರ್ ಆಗಿ ಹೊರಹೊಮ್ಮಿದ್ದಾರೆ. ಧಾರವಾಡದ ಪಾಲಿಕೆ ಸದಸ್ಯೆಯಾದ ಜ್ಯೋತಿ ಪಾಟೀಲ್ ಮೇಯರ್ ಆಗಿ ಹಾಗೂ ಹುಬ್ಬಳ್ಳಿ ಪಾಲಿಕೆ ಸದಸ್ಯರಾದ ಸಂತೋಷ್ ಚವ್ಹಾನ್ ಉಪಮೇಯರ್ ಆಗಿ ಅಧಿಕೃತವಾಗಿ ಆಯ್ಕೆಯಾಗಿದ್ದಾರೆಂದು ಪ್ರಾದೇಶಿಕ ಆಯುಕ್ತರಾದ ಸಿದ್ದಣ್ಣಾ ಬಿರಾದಾರ ಅವರು ಘೋಷಣೆ ಮಾಡಿದ್ದಾರೆ. …
Read More »Yearly Archives: 2025
ಬರಗೂರು ರಾಮಚಂದ್ರಪ್ಪನವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ; ಎಸ್.ಐ. ಬಿರಾದಾರ
ಬರಗೂರು ರಾಮಚಂದ್ರಪ್ಪನವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ; ಎಸ್.ಐ. ಬಿರಾದಾರ ಬಸವರಾಜ ಕಟ್ಟಿಮನಿ ಕಾದಂಬರಿ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ನಾಡೋಜ ಬರಗೂರು ರಾಮಚಂದ್ರಪ್ಪ ಕುರಿತು ವಿಚಾರ ಸಂಕಿರಣ ಅನ್ಯರ ಪ್ರತಿ ಪ್ರೀತಿ ವಾತ್ಸಲ್ಯವನ್ನು ತೋರಿ ಬದುಕನ್ನು ಅನುಭವಿಸಬೇಕು. ಇಂತಹ ವ್ಯಕ್ತಿತ್ವವನ್ನು ನಾಡೋಜ್ ಬರಗೂರು ರಾಮಚಂದ್ರಪ್ಪನವರು ಹೊಂದಿದ್ದಾರೆಂದು ಕನ್ನಡ ಅಧ್ಯಾಪಕರ ಪರಿಷತ್ತಿನ ಅಧ್ಯಕ್ಷರಾದ ಡಾ. ಎಸ್.ಐ. ಬಿರಾದಾರ ಹೇಳಿದರು. ಬೆಳಗಾವಿಯ ಸಂಗೊಳ್ಳಿರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ಬಸವರಾಜ ಕಟ್ಟಿಮನಿ ಪ್ರತಿಷ್ಠಾನ, …
Read More »ಗೋಡಚಿನಮಲ್ಕಿ ನಿಸರ್ಗ ಜಲಪಾತಕ್ಕೆ ಪ್ರವಾಸಿಗರ ದಂಡು
ಹುಕ್ಕೇರಿ : ಗೋಕಾಕ ತಾಲೂಕಿನ ಗೋಡಚಿನಮಲ್ಕಿ ನಿಸರ್ಗ ಜಲಪಾತಕ್ಕೆ ಪ್ರವಾಸಿಗರ ದಂಡು ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಸಪ್ತನದಿಗಳ ನಾಡು ಬೆಳಗಾವಿ ಜಿಲ್ಲೆಯಲ್ಲಿ ಒಂದೆಡೆ ಪ್ರವಾಹ ಸೃಷ್ಟಿಯಾಗುತ್ತದೆ, ಮತ್ತೊಂದೆಡೆ ಮಾರ್ಕಂಡೇಯ ನದಿ ಉಕ್ಕಿ ಹರಿಯುತ್ತಿರುವದರಿಂದ ಹುಕ್ಕೇರಿ ತಾಲೂಕಿನ ಶಿರೂರ ಜಲಾಶಯದಿಂದ ನೀರು ಹೋರಕ್ಕೆ ಬಿಟ್ಟಿದ್ದರಿಂದ ಗೋಕಾಕ ತಾಲೂಕಿನ ಗೊಡಚಿನಮಲ್ಕಿ ಜಲಪಾತದ ರುದ್ರರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಮುಗಿಬೀಳುತ್ತಿದ್ದಾರೆ. ಗೋಕಾಕ್ನಿಂದ 18 ಕಿ.ಮೀ ದೂರದಲ್ಲಿರುವ ಗೊಡಚಿನಮಲ್ಕಿ ಗ್ರಾಮದಿಂದ ಸುಮಾರು 2.5 …
Read More »ಹುಡುಗಿ ವಿಚಾರ ನಡು ರಾತ್ರಿ ಕಿಡ್ನಾಪ್ ಮಾಡಿ ಹಲ್ಲೆ
ಹುಬ್ಬಳ್ಳಿ: ಹುಡುಗಿ ವಿಚಾರ ನಡು ರಾತ್ರಿ ಕಿಡ್ನಾಪ್ ಮಾಡಿ ಹಲ್ಲೆ ಪ್ರೀತಿ ಮಾಯೆ ಹುಷಾರು ಕಣ್ಣೀರ್ ಮಾರೋ ಬಜಾರ್ ಎಂಬ ಸಾಂಗ್ ನಾವೆಲ್ಲ ಕೇಳಿದ್ದೇವೆ ಪ್ರೀತಿಗೋಸ್ಕರ ಪ್ರಾಣ ಕೊಟ್ಟಿರೋರು, ಪ್ರಾಣ ತೆಗಿದಿರೋರ್ ಬಗ್ಗೆ ನಾವೆಲ್ಲ ನೋಡಿದ್ದೇವೆ, ಅದೇ ರೀತಿ ಇಲ್ಲೊಬ್ಬ ಪ್ರೀತಿ ವಿಚಾರಕ್ಕೇ ಯಮನ ಮನೆಯ ಬಾಗಿಲನ್ನು ತಟ್ಟಿ ಬಂದಿದ್ದಾನೆ,ಹಾಗಾದ್ರೆ ಯಾರಾತ ಏನು ಆತನ ಲವ್ ಸ್ಟೋರಿ ಅಂತೀರಾ ಹಾಗಾದ್ರೆ ಈ ಸ್ಟೋರಿ ನೋಡಿ. ಹೀಗೆ ಆಸ್ಪತ್ರೆಯ ಬೆಡ್ ಮೇಲೆ …
Read More »ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ
ಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಂತ್ರಸ್ತೆ ಯುವತಿ ಮಗುವಿಗೆ ಜನ್ಮ ನೀಡಿದ್ದಾಳೆ. ಕೃಷ್ಣ ಜೆ ರಾವ್ ಎನ್ನುವಾತ ಮದುವೆಯಾಗುವುದಾಗಿ ಯುವತಿಗೆ ನಂಬಿಸಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಬಳಿಕ ಯುವತಿ ಗರ್ಭಿಣಿಯಾಗಿರುವುದು ಗೊತ್ತಾಗುತ್ತಿದ್ದಂತೆಯೇ ಕೈಕೊಟ್ಟಿದ್ದಾನೆ. ಈ ಸಂಬಂಧ ಯುವತಿ ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಂತೆಯೇ ಕೃಷ್ಣ ನಾಪತ್ತೆಯಾಗಿದ್ದು, ಇದೀಗ ಗರ್ಭಿಣಿ ಯುವತಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ …
Read More »ಬನ್ನೇರುಘಟ್ಟ ಅರಣ್ಯ ವಲಯದಲ್ಲಿ ಜಿಂಕೆ ಮಾಂಸ ಕಟ್ ಮಾಡುತ್ತಿದ್ದವ ಅರೆಸ್ಟ್
ನೆಲಮಂಗಲ, ಜೂನ್ 29: ಕಾಡುಪ್ರಾಣಿಗಳನ್ನು ಕೊಂದು ಮಾರಾಟ ಮಾಡುತ್ತಿದ್ದ ಜಾಲ ಬೆಂಗಳೂರಿನಲ್ಲಿ (Bengaluru) ಪತ್ತೆಯಾಗಿದೆ. ಬನ್ನೇರುಘಟ್ಟ ಅರಣ್ಯ ವಲಯದಲ್ಲಿ (Bannerghatta Forest Zone) ಜಿಂಕೆ ಮಾಂಸ ಕತ್ತರಿಸುತ್ತಿದ್ದಾಗ ಕಗ್ಗಲೀಪುರ ಅರಣ್ಯಾಧಿಕಾರಿಗಳು ದಾಳಿ ಮಾಡಿದ್ದು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಪ್ರತಾಪ್ (31) ಬಂಧಿತ ಆರೋಪಿ. ಬನ್ನೇರುಘಟ್ಟ ಅರಣ್ಯ ವಲಯದಲ್ಲಿ ಶೆಡ್ ನಿರ್ಮಿಸಿಕೊಂಡು ಆರೋಪಿ ಪ್ರತಾಪ್ ಸೇರಿದಂತೆ ನಾಲ್ವರು ಪ್ರಾಣಿಗಳ ಮಾಂಸ ಕತ್ತರಿಸುತ್ತಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಕಗ್ಗಲಿಪುರ ಅರಣ್ಯಾಧಿಕಾರಿಗಳು ದಾಳಿ ಮಾಡಿದ್ದಾರೆ. …
Read More »ಕರ್ತವ್ಯನಿರತ ಫಾರೆಸ್ಟ್ ಗಾರ್ಡ್ ನಾಪತ್ತೆ
ಚಿಕ್ಕಮಗಳೂರು: ಕಡೂರು ತಾಲೂಕಿನ ಸಖರಾಯಪಟ್ಟಣ ಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಫಾರೆಸ್ಟ್ ಗಾರ್ಡ್ ದಿಢೀರ್ ನಾಪತ್ತೆಯಾಗಿದ್ದಾರೆ. ಶರತ್ (33) ನಾಪತ್ತೆಯಾದ ಫಾರೆಸ್ಟ್ ಗಾರ್ಡ್. ಕರ್ತವ್ಯಕ್ಕೆ ತೆರಳಿದ್ದ ಮಗ ಕಳೆದ ಮೂರು ದಿನದಿಂದ ಮನೆಗೆ ಬಾರದೇ ಇದ್ದಾಗ ಗಾಬರಿಗೊಂಡ ಪೋಷಕರು ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಾಪತ್ತೆಯಾಗಿರುವ ಫಾರೆಸ್ಟ್ ಗಾರ್ಡ್ ಪತ್ತೆಗೆ ಪೊಲೀಸರು ಅರಣ್ಯದಲ್ಲಿ ಮೂರು ದಿನದಿಂದ ಹುಡುಕಾಟ ನಡೆಸುತ್ತಿದ್ದಾರೆ. ಸಖರಾಯಪಟ್ಟಣದ ಅರಣ್ಯ ಪ್ರದೇಶ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲೂ ಹುಡುಕಾಟ ನಡೆಸಲಾಗುತ್ತಿದೆ. ನೀಲಗಿರಿ …
Read More »ಡಿಕೆಶಿಗೆ ಮುಂದಿನ ಎರಡ್ಮೂರು ತಿಂಗಳಲ್ಲಿ ಸಿಎಂ ಸ್ಥಾನ ? ಇಕ್ಬಾಲ್ ಹುಸೇನ್
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮುಂದಿನ ಎರಡ್ಮೂರು ತಿಂಗಳಲ್ಲಿ ಮುಖ್ಯಮಂತ್ರಿಯಾಗುವ ಅವಕಾಶ ಸಿಗಬಹುದು ಎಂದು ಕಾಂಗ್ರೆಸ್ ಶಾಸಕ ಹೆಚ್.ಎ. ಇಕ್ಬಾಲ್ ಹುಸೇನ್ ಹೇಳಿದ್ದಾರೆ. ರಾಮನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ಈ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ನಮ್ಮ (ಕಾಂಗ್ರೆಸ್ನ) ಶಕ್ತಿ ಏನಿತ್ತು ಎಂದು ನಿಮಗೆಲ್ಲರಿಗೂ ತಿಳಿದಿದೆ. ಈ ವಿಜಯವನ್ನು ಸಾಧಿಸಲು ಯಾರು ಹೋರಾಟ, ಬೆವರು ಸುರಿಸಿದರು ಮತ್ತು ಶ್ರಮ ಹಾಕಿದರು ಅನ್ನೋದು ಎಲ್ಲರಿಗೂ ತಿಳಿದಿದೆ. ಅವರ (ಶಿವಕುಮಾರ್) ತಂತ್ರ …
Read More »ಆರೋಪಿಗಳನ್ನು ಕರೆತರುವಾಗ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಪಿಎಸ್ಐ ಸಾವು
ಬೆಂಗಳೂರು: ಪ್ರಕರಣವೊಂದರ ಆರೋಪಿಗಳನ್ನು ಬಂಧಿಸಿ ಕರೆತರುವಾಗ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಪಿಎಸ್ಐ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ತಲಘಟ್ಟಪುರ ಠಾಣೆಯ ಸಬ್ ಇನ್ಸ್ಪೆಕ್ಟರ್ ಮೆಹಬೂಬ್ ಗುಡ್ಡಹಳ್ಳಿ (40) ಸಾವನ್ನಪ್ಪಿದ ಅಧಿಕಾರಿ. ಜೂನ್ 24ರಂದು ನಸುಕಿನ 2:30ರ ಸುಮಾರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂರ್ಯನಗರ ಬಳಿ ಸಂಭವಿಸಿದ್ದ ಅಪಘಾತದಲ್ಲಿ ಮೆಹಬೂಬ್ ಅವರು ತೀವ್ರವಾಗಿ ಗಾಯಗೊಂಡಿದ್ದರು. ಮಾದಕ ಪದಾರ್ಥಗಳ ಪ್ರಕರಣದ ಆರೋಪಿಗಳನ್ನು ಬಂಧಿಸಿ ಕರೆತರುತ್ತಿದ್ದಾಗ ಮೆಹಬೂಬ್ ಅವರ ಕಾರಿಗೆ ಟ್ರಕ್ ಡಿಕ್ಕಿಯಾಗಿತ್ತು. ಅಪಘಾತದ ಬಳಿಕ ಟ್ರಕ್ …
Read More »88ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಬೂಕರ್ ಪ್ರಶಸ್ತಿ ಪಡೆದ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ
88ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಬೂಕರ್ ಪ್ರಶಸ್ತಿ ಪಡೆದ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ ಬಳ್ಳಾರಿ ಜಿಲೆಯ ಸಂಡೂರಿನಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಭೆಯಲ್ಲಿ ಸಾಹಿತಿ ಭಾನು ಮುಷ್ತಾಕ್ ಅವರನ್ನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ನಡೆಯಲಿದೆ
Read More »