ಬೆಳಗಾವಿ: ಯೋಗೀಶ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾಗಿರುವ ಹಿನ್ನೆಲೆಯಲ್ಲಿ ಶರಣಾಗುವಂತೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಕುರಿತು ಬೆಳಗಾವಿಯಲ್ಲಿಂದು ಶಾಸಕ ವಿನಯ ಕುಲಕರ್ಣಿ ಪ್ರತಿಕ್ರಿಯಿಸಿದ್ದು, ನ್ಯಾಯಾಲಯದ ತೀರ್ಮಾನಕ್ಕೆ ತಲೆಬಾಗಬೇಕಾಗುತ್ತದೆ. ಶುಕ್ರವಾರ ನಾನು ಬೆಂಗಳೂರು ನ್ಯಾಯಾಲಯಕ್ಕೆ ಹಾಜರಾಗುತ್ತೇನೆ. ಮುಂದೆ ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮುಂದುವರೆಸುತ್ತೇನೆ ಎಂದರು. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪ್ರಕರಣದ ಹಿಂದೆ ಕಾಣದ ಕೈಗಳ ಕೈವಾಡವಿರುವ ಆರೋಪಕ್ಕೆ, ಅದು ಸಹಜವಾಗಿ ಇದ್ದೇ ಇರುತ್ತದೆ. ಬಲಿಷ್ಠ ನಾಯಕರ …
Read More »Yearly Archives: 2025
ಡೆತ್ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ
ಚಿಕ್ಕೋಡಿ: ಯುವಕನೊಬ್ಬ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಥಣಿ ತಾಲೂಕಿನ ಕಕಮರಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗುರುರಾಜ (28) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಡೆತ್ನೋಟ್ನಲ್ಲಿ ಮೂವರ ಹೆಸರನ್ನು ಬರೆದಿಟ್ಟು ಯಾರೂ ಇಲ್ಲದ ವೇಳೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸುದ್ದಿ ತಿಳಿದು ಸ್ಥಳಕ್ಕೆ ಬಂದ ಐಗಳಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿದರು. ಈ ಕುರಿತು ಬೆಳಗಾವಿ ಎಸ್ಪಿ ಭೀಮಶಂಕರ್ ಗುಳೇದ ಮಾಹಿತಿ ನೀಡಿ, “ಡೆತ್ನೋಟ್ ಬರೆದಿಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ …
Read More »ಧಾರವಾಡದ ಕ್ಯಾರಕೊಪ್ಪದಲ್ಲಿ ಶಿಕ್ಷಕರ ಮನೆಗೆ ಕನ್ನ…. 70 ಗ್ರಾಂ ಚಿನ್ನಾಭರಣ, ನಗದು ಲೂಟಿ
ಧಾರವಾಡದ ಕ್ಯಾರಕೊಪ್ಪದಲ್ಲಿ ಶಿಕ್ಷಕರ ಮನೆಗೆ ಕನ್ನ…. 70 ಗ್ರಾಂ ಚಿನ್ನಾಭರಣ, ನಗದು ಲೂಟಿ ರಜೆ ಮೇಲೆ ಬೇರೆ ಊರಿಗೆ ತೆರಳಿದ್ದ ಇಬ್ಬರು ಶಿಕ್ಷಕರ ಮನೆಗಳಿಗೆ ಕನ್ನ ಹಾಕಿದ ಚಾಲಾಕಿ ಖದೀಮ ಕಳ್ಳರು, ಮನೆಯಲ್ಲಿದ್ದ ಚಿನ್ನ ಹಾಗೂ ನಗದು ದೋಚಿಕೊಂಡು ಪರಾರಿಯಾದ ಘಟನೆ ಧಾರವಾಡದ ಕ್ಯಾರಕೊಪ್ಪ ಗ್ರಾಮದ ಬಳಿ ನಡೆದಿದೆ. ಧಾರವಾಡ ತಾಲೂಕಿನ ಕ್ಯಾರಕೊಪ್ಪ ಗ್ರಾಮದ ರಸ್ತೆಯಲ್ಲಿರುವ ಲೋಕನಾಥ್ ಮತ್ತು ಸೋಮನಗೌಡ ಪಾಟೀಲ್ ಎನ್ನುವವರ ಮನೆಯಲ್ಲೇ ಕಳ್ಳತನವಾಗಿದೆ. ಇಬ್ಬರು ವೃತಿಯಲ್ಲಿ ಶಿಕ್ಷಕರಾಗಿದ್ದು, …
Read More »ಉದ್ಯಮಿ ಶಾಂತೇಶ ಕಳಸಗೊಂಡರಿಗೆಉದ್ಯೋಗ ರತ್ನ ಪ್ರಶಸ್ತಿ
ಉದ್ಯಮಿ ಶಾಂತೇಶ ಕಳಸಗೊಂಡರಿಗೆಉದ್ಯೋಗ ರತ್ನ ಪ್ರಶಸ್ತಿ: ಹೊಸ ಕನಸು ಬಿಚ್ಚಿಟ್ಟ ಶಾಂತೇಶ ಕಳಸಗೊಂಡ ವಿಜಯಪುರ: ಉತ್ತರ ಕರ್ನಾಟಕದ ೧೦ ಸಾವಿರ ಯುವಕರಿಗೆ ಹೊಟೇಲ್ ಉದ್ಯಮದಲ್ಲಿ ಉದ್ಯೋಗ ಕೊಡಿಸುವ ಗುರಿ ಹೊಂದಿದ್ದೇನೆ. ಅಲ್ಲದೇ, ಈ ಭಾಗದ ಯುವಕರನ್ನು ಹೊಟೇಲ್ ಉದ್ಯಮದತ್ತ ಸೆಳೆಯಲು ಹೊಟೇಲ್ ಮ್ಯಾನೇಜಮೆಂಟ್ ಕೋರ್ಸ್ ತರಬೇತಿ ನೀಡಲು ಕಾರ್ಯೋನ್ಮುಖರಾಗಿರುವುದಾಗಿ ಉದ್ಯೋಗ ರತ್ನ ಪ್ರಶಸ್ತಿ ಪುರಸ್ಕೃತ ನಗರದ ಶುಭಶ್ರೀ ಗ್ರುಪ್ಸ್ ವ್ಯವಸ್ಥಾಪಕ ನಿರ್ದೇಶಕ ಶಾಂತೇಶ ಕಳಸಗೊಂಡ ಹೇಳಿದರು. ಇಂದು ಮಂಗಳವಾರ ನಗರದಲ್ಲಿ …
Read More »ರಾರಾಜಿಸಿದ 900 ಮೀಟರ್ ಉದ್ದದ ತ್ರಿವರ್ಣ ಧ್ವಜ, ನಿಪ್ಪಾಣಿಯಲ್ಲಿ ಬೃಹತ್ ತಿರಂಗಾ ಯಾತ್ರೆ
ರಾರಾಜಿಸಿದ 900 ಮೀಟರ್ ಉದ್ದದ ತ್ರಿವರ್ಣ ಧ್ವಜ, ನಿಪ್ಪಾಣಿಯಲ್ಲಿ ಬೃಹತ್ ತಿರಂಗಾ ಯಾತ್ರೆ ಚಿಕ್ಕೋಡಿ:ಭಾರತ ಸೇನೆಯು ಪಾಕಿಸ್ತಾನದ ವಿರುದ್ಧ ಕೈಗೊಂಡ ಅಪರೇಶನ್ ಸಿಂಧೂರ ಯಶಸ್ವಿಯಾದ ಹಿನ್ನೆಲೆಯಲ್ಲಿ ನಿಪ್ಪಾಣಿ ನಗರದಲ್ಲಿ ಬೃಹತ್ ತಿರಂಗಾ ಯಾತ್ರೆ ಜರುಗಿತು. ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ, ಭಾರತಾಂಬೆ ಭಾವಚಿತ್ರಕ್ಕೆ ಸ್ಥಳೀಯ ವಿರೂಪಾಕ್ಷಲಿಂಗ ಸಮಾಧಿ ಮಠದ ಪ್ರಾಣಲಿಂಗ ಸ್ವಾಮೀಜಿ, ಆರುಣಾನಂದ ಸ್ವಾಮೀಜಿ, ಬಸವಪ್ರಸಾದ ಜೊಲ್ಲೆ ನಗರಸಭೆ ಅಧ್ಯಕ್ಷೆ ಸೋನಾಲಿ ಕೊಠಡಿಯಾ, ಉಪಾಧ್ಯಕ್ಷ ಸಂತೋಷ ಸಾಂಗಾವಕರ ಮತ್ತು ಗಣ್ಯರು …
Read More »ಉಗಾರ್ – ಮಂಗಸೂಳಿ ಬಸ್ ಸಂಚಾರಕ್ಕೆ ಶಾಸಕ ರಾಜು ಕಾಗೆ ಚಾಲನೆ
ಉಗಾರ್ – ಮಂಗಸೂಳಿ ಬಸ್ ಸಂಚಾರಕ್ಕೆ ಶಾಸಕ ರಾಜು ಕಾಗೆ ಚಾಲನೆ ಕಾಗವಾಡ : ರಾಜ್ಯ ಸರ್ಕಾರದ ಸಾರಿಗೆ ಇಲಾಖೆ ವತಿಯಿಂದ ಪ್ರತಿಯೊಬ್ಬರಿಗೆ ಬಸ್ಸ ಸೇವೆ ನೀಡಲು ವಿಶೇಷವಾಗಿ ಶ್ರಮಿಸುತ್ತಿದೆ ಅದರಲ್ಲಿ ಹೊಸದಾಗಿ ಉಗಾರ-ಮಂಗಸುಳಿ, ಈ ಮಾರ್ಗದಲ್ಲಿ ಅನೇಕ ಪ್ರಯಾಣಿಕರ ಬೇಡಿಕೆ ಗಮನದಲ್ಲಿ ತೆಗೆದುಕೊಂಡು ಪ್ರಾರಂಭಿಸಲಾಗಿದೆ ಎಂದು ಶಾಸಕ ರಾಜು ಕಾಗೆ ಹೇಳಿದರು. ಸೋಮವಾರ ರಂದು ಉಗಾರ-ಮಂಗಸೂಳಿ ಮಾರ್ಗದಲ್ಲಿ ಪ್ರಾರಂಭಿಸಿದ್ದು ಇದರ ಪೂಜೆ ವಿಜಯಪುರ ಜ್ಞಾನಯೋಗ ಆಶ್ರಮದ ಬಸವಲಿಂಗ ಸ್ವಾಮೀಜಿ …
Read More »ಸಿಎಂ-ಡಿಸಿಎಂಗೆ ಹೈಕಮಾಂಡ್ ಬುಲಾವ್,ಸತೀಶ್ ಜಾರಕಿಹೊಳಿ ಕೂಡ ದೆಹಲಿ ಪ್ರಯಾಣ
ಸಿಎಂ-ಡಿಸಿಎಂಗೆ ಹೈಕಮಾಂಡ್ ಬುಲಾವ್ ಬೆನ್ನಲ್ಲೆ… ಆರ್ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಮತ್ತು 11 ಜನರ ಸಾವಿನ ಬಗ್ಗೆ ಕೇಳಲು ಹೈಕಮಾಂಡಗೆ ಹಕ್ಕಿದೆ… ಸಚಿವ ಸತೀಶ್ ಜಾರಕಿಹೊಳಿ ಕೂಡ ದೆಹಲಿ ಪ್ರಯಾಣ…ಹಲವು ಅನುಮಾನಗಳಿಗೆ ಎಡೆ… ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿ ತಲುಪಿದ್ದಾರೆ ಮತ್ತು ನಿನ್ನೆ ಬೆಂಗಳೂರಲ್ಲಿದ್ದ ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ ಸಹ ದೆಹಲಿಗೆ ತೆರಳಿದ್ದು, ಚರ್ಚಾಗ್ರಾಸವಾಗಿದೆ. ದೆಹಲಿಯಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಸಚಿವ …
Read More »ಹುಬ್ಬಳ್ಳಿ: ಫಿಶ್ ಮಾರ್ಕೆಟ್ ತೆರವಿಗೆ ವ್ಯಾಪಾರಸ್ಥರ ವಿರೋಧ
ಹುಬ್ಬಳ್ಳಿ: ಫಿಶ್ ಮಾರ್ಕೆಟ್ ತೆರವಿಗೆ ವ್ಯಾಪಾರಸ್ಥರ ವಿರೋಧ ಬೆಳ್ಳಂ ಬೆಳಗ್ಗೆ ಹುಬ್ಬಳ್ಳಿಯ ಗಣೇಶಪೇಟ್ ಫಿಶ್ ಮಾರ್ಕೆಟ್ದಲ್ಲಿ ಪಾಲಿಕೆ ಜೆಸಿಬಿ ಸದ್ದು ಮಾಡಿದೆ. ಹಲವಾರು ದಿನಗಳಿಂದ ನೋಟಿಸ್ ನೀಡಿದ್ರೂ ಕೂಡ ವ್ಯಾಪಾರಸ್ಥರ ಅಂಗಡಿಗಳನ್ನು ತೆಗೆದುಕೊಂಡಿರಲಿಲ್ಲ. ಅದಕ್ಕಾಗಿ ಇಂದು ಪಾಲಿಕೆ ಅಧಿಕಾರಿಗಳು ಫೀಲ್ಡ್ಗೆ ಇಳಿದು, ಫಿಶ್ ಮಾರ್ಕೆಟ್ ತೆರವಿಗೆ ನಿಂತಿದ್ದಾರೆ. ಅದಕ್ಕೆ ವ್ಯಾಪಾರಸ್ಥರು ವಿರೋಧ ಮಾಡುತ್ತಿದ್ದಾರೆ. ಸ್ಮಾರ್ಟ್ ಸಿಟಿ ಅಡಿಯಲ್ಲಿ ಹೊಸದಾಗಿ ಫೀಶ್ ಮಾರ್ಕೆಟ್ ನಿರ್ಮಾಣ ಮಾಡಿದ್ದಾರೆ. ಆದ್ರೆ ಈ ಎಲ್ಲ ವ್ಯಾಪಾರಸ್ಥರು …
Read More »ರೇಷನ್ ಕಾರ್ಡ್ನಿಂದ ಏನೆಲ್ಲಾ ಪ್ರಯೋಜನ?:
ಬೆಂಗಳೂರು: ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಅನುಕೂಲ ಕಲ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಅದರಲ್ಲಿ ಪ್ರಮುಖವಾಗಿ ಪಡಿತರ ಚೀಟಿಯೂ ಒಂದು. ರೇಷನ್ ಕಾರ್ಡ್ ಇದ್ದರೆ ಆಯಾ ಕಾರ್ಡ್ಗಳನ್ನು ಅನುಸರಿಸಿ ಬಡ ಮತ್ತು ಮಧ್ಯಮ ವರ್ಗದವರಿಗೆ ಕಡಿಮೆ ದರದಲ್ಲಿ ಅಕ್ಕಿ, ಬೇಳೆ, ಗೋಧಿ, ಸಕ್ಕರೆ ಸೇರಿ ಹಲವು ಆಹಾರ ಪದಾರ್ಥಗಳು ದೊರೆಯುತ್ತದೆ. ಬಿಪಿಎಲ್ ಕಾರ್ಡ್ದಾರರ ಕುಟುಂಬಕ್ಕೆ ಅಕ್ಕಿ, ಗೋಧಿ, ಸಕ್ಕರೆ ಮತ್ತಿತರ ಆಹಾರ ಪದಾರ್ಥಿಗಳು …
Read More »ಕಾಲ್ತುಳಿತ ಘಟನೆ ಸರ್ಕಾರಕ್ಕೆ ಕೆಟ್ಟ ಹೆಸರು ತಂದಿದೆ,: ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು: ಸರ್ಕಾರಕ್ಕೆ ಕಾಲ್ತುಳಿತ ಘಟನೆಯಿಂದ ಕೆಟ್ಟ ಹೆಸರು ಬಂದಿದೆ. ಯಾರು ಮುಂದೆ ಮಾಡೋಕೆ ಹೋದರೋ ಗೊತ್ತಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದರು. ಸೋಮವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಘಟನೆಯಲ್ಲಿ ಲೋಪಗಳು ಹೇಗಾಯ್ತು ಎಂಬುದು ತನಿಖೆಯಿಂದ ಹೊರ ಬರಬೇಕು. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮ್ಯಾಜಿಸ್ಟ್ರೇಟ್ ತನಿಖೆ ಆಗ್ತಿದೆ. ಕಾಲ್ತುಳಿತ ಪ್ರಕರಣ ಉದ್ದೇಶಪೂರ್ವಕವಲ್ಲ. ಸಿಐಡಿ ತನಿಖೆಯೂ ನಡೆಯುತ್ತಿದೆ. ಘಟನೆಯ ಬಗ್ಗೆ ವಿಸ್ತಾರವಾದ ವರದಿ ಕೊಡಬೇಕಲ್ಲ. ಹಿಂದಿನ ರಾತ್ರಿಯಿಂದ …
Read More »
Laxmi News 24×7