Breaking News

Yearly Archives: 2025

ಕೆಎಎಸ್​ ಮುಖ್ಯ ಪರೀಕ್ಷೆಗೆ ಹೊರಡಿಸಿದ್ದ ಅಧಿಸೂಚನೆಗೆ KAT ತಡೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್​ಸಿ) ನಡೆಸುತ್ತಿರುವ 2023-24ನೇ ಸಾಲಿನ ಗ್ರೂಪ್‌ ಎ ಮತ್ತು ಬಿ ವೃಂದದ 384 ಗೆಜೆಟೆಡ್​ ಪ್ರೊಬೇಷನರಿ ಹುದ್ದೆಗಳ ಮುಖ್ಯ ಪರೀಕ್ಷೆಗೆ ಹೊರಡಿಸಿದ್ದ ಅಧಿಸೂಚನೆಗೆ ಕರ್ನಾಟಕ ಆಡಳಿತ ನ್ಯಾಯಮಂಡಳಿ(ಕೆಎಟಿ) ಮತ್ತೆ ತಡೆ ನೀಡಿದೆ. ಪವಿತ್ರ ಮತ್ತಿತರ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಾಂಗ ಸದಸ್ಯ ಎಸ್‌.ವೈ.ವಟವಟಿ ಮತ್ತು ಆಡಳಿತ ಸದಸ್ಯೆ ಡಾ.ಅಮಿತಾ ಪ್ರಸಾದ್‌ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿ ವಿಚಾರಣೆಯನ್ನು ಫೆ.25ಕ್ಕೆ ಮುಂದೂಡಿದೆ. ಅಲ್ಲದೆ, ಕಳೆದ ಜನವರಿ …

Read More »

ಡ್ರಗ್ಸ್ ಪ್ರಕರಣ ಸಂಬಂಧ ರಾಜ್ಯದಲ್ಲಿ 200 ಮಂದಿ ವಿದೇಶಿಗರ ಮೇಲೆ ಕ್ರಮ: ಪರಮೇಶ್ವರ್

ತುಮಕೂರು: ಡ್ರಗ್ಸ್ ಬಳಕೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಇತ್ತೀಚೆಗೆ ಸುಮಾರು 200 ಮಂದಿ ವಿದೇಶಿಗರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಹಲವು ದಿನಗಳಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಕೆಜಿ ಗಟ್ಟಲೆ ಡ್ರಗ್ಸ್ ಅನ್ನು ಈಗಾಗಲೇ ವಶಕ್ಕೆ ಪಡೆದು ಸುಟ್ಟು ಹಾಕಿದ್ದೇವೆ. ಬಹಳ ಕಡೆ ಶಿಕ್ಷೆ ಕೂಡ ಪ್ರಕಟವಾಗಿದೆ ಎಂದು ಮಾಹಿತಿ ನೀಡಿದರು. ಬೆಂಗಳೂರು ಇರಬಹುದು ಅಥವಾ ರಾಜ್ಯದ …

Read More »

ಹೊಸ ಪ್ರವಾಸೋದ್ಯಮ ನೀತಿ: ಮೆಚ್ಚುಗೆ ಸೂಚಿಸಿ ಮುಖ್ಯಮಂತ್ರಿಗಳಿಗೆ ಅಭಿನಂದಿಸಿದ ವಾಣಿಜ್ಯೋದ್ಯಮಿಗಳು, ಸಂಸ್ಥೆಗಳು*

ಹೊಸ ಪ್ರವಾಸೋದ್ಯಮ ನೀತಿ: ಮೆಚ್ಚುಗೆ ಸೂಚಿಸಿ ಮುಖ್ಯಮಂತ್ರಿಗಳಿಗೆ ಅಭಿನಂದಿಸಿದ ವಾಣಿಜ್ಯೋದ್ಯಮಿಗಳು, ಸಂಸ್ಥೆಗಳು* ಸರ್ಕಾರ ಇತ್ತೀಚಿಗೆ ಜಾತಿಗೆ ತಂದಿರುವ ಹೊಸ ಪ್ರವಾಸೋದ್ಯಮ ನೀತಿ ವಾಣಿಜ್ಯೋದ್ಯಮಿಗಳು ಮತ್ತು ವಾಣಿಜ್ಯ ಸಂಘ ಸಂಸ್ಥೆಗಳಿಂದ ಒಕ್ಕೋರಲ ಮೆಚ್ಚುಗೆ ವ್ಯಕ್ತವಾಯಿತು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ವಾಣಿಜ್ಯ ಸಂಘ ಸಂಸ್ಥೆಗಳ ಬಜೆಟ್ ಪೂರ್ವ ಸಭೆಯಲ್ಲಿ ಬಹುತೇಕ ಎಲ್ಲರೂ ಹೊಸ ಪ್ರವಾಸೋದ್ಯಮ ನೀತಿಯನ್ನು ಶ್ಲಾಘಿಸಿದರು. ಈ ನೀತಿ ಏಕ ಕಾಲಕ್ಕೆ ರಾಜ್ಯದ ಆರ್ಥಿಕತೆ ವೃದ್ಧಿಸುವ ಜೊತೆಗೆ ಉದ್ಯಮಗಳ ಬೆಳವಣಿಗೆಗೂ …

Read More »

9 ವಿ.ವಿ. ಮುಚ್ಚುವುದು ಸರ್ಕಾರದ ಅವಿವೇಕತನ ಗ್ಯಾರಂಟಿ ಭ್ರಮೆಯಿಂದ ಹೊರಬಂದು ರೈತರಿಗೆ ಸಮರ್ಪಕ ವಿದ್ಯುತ್ ಪೂರೈಸಲಿ; ಬಿ.ವೈ. ವಿಜಯೇಂದ್ರ

9 ವಿ.ವಿ. ಮುಚ್ಚುವುದು ಸರ್ಕಾರದ ಅವಿವೇಕತನ ಗ್ಯಾರಂಟಿ ಭ್ರಮೆಯಿಂದ ಹೊರಬಂದು ರೈತರಿಗೆ ಸಮರ್ಪಕ ವಿದ್ಯುತ್ ಪೂರೈಸಲಿ; ಬಿ.ವೈ. ವಿಜಯೇಂದ್ರ 9 ವಿ.ವಿ. ಮುಚ್ಚುವುದು ಸರ್ಕಾರದ ಅವಿವೇಕತನ ಗ್ಯಾರಂಟಿ ಭ್ರಮೆಯಿಂದ ಹೊರಬಂದು ರೈತರಿಗೆ ಸಮರ್ಪಕ ವಿದ್ಯುತ್ ಪೂರೈಸಲಿ ಬೆಂಗಳೂರಿನ ಬಗ್ಗೆ ಡಿಕೆಶಿ ಹೇಳಿಕೆ ದುರದೃಷ್ಟಕರ ಬಿ.ವೈ. ವಿಜಯೇಂದ್ರ ಹೇಳಿಕೆ ಆರ್ಥಿಕ ಮುಗ್ಗಟ್ಟನ್ನು ಮುಂದೆ ಮಾಡಿ ಸರ್ಕಾರ 9 ವಿವಿ ಗಳನ್ನು ಮುಚ್ಚಲು ಕೈಗೊಂಡಿರುವುದು ಅವಿವೇಕತನದ ನಿರ್ಧಾರವೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ …

Read More »

ಫೋನ್ ಪೇ ಮೂಲಕ ಲಂಚ ಪಡೆಯುತ್ತಿದ್ದ ಮಹಿಳಾ ಇನ್ಸ್​ಪೆಕ್ಟರ್​​ವೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ

ಬೆಂಗಳೂರು: ಸ್ಲಂ ಬೋರ್ಡ್ ವತಿಯಿಂದ ಮನೆ ಪಡೆಯಲು ಸಲ್ಲಿಸಲಾಗಿದ್ದ ಜಾತಿ ಪ್ರಮಾಣ ಪತ್ರದ ನೈಜತೆ ಪರಿಶೀಲಿಸಲು ದೂರುದಾರರ ಬಳಿ ಲಂಚಕ್ಕೆ ಬೇಡಿಕೆ ಇಟ್ಟ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದಲ್ಲಿ (ಡಿಸಿಆರ್​​ಇ) ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಇನ್ಸ್​ಪೆೆಕ್ಟರ್​ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ಧಾರೆ. ದೇವರಬೀಸನಹಳ್ಳಿ ನಿವಾಸಿ ಲೊಕೇಶ್ ಎಂಬವರು ನೀಡಿದ ದೂರಿನ ಮೇರೆಗೆ ಡಿಸಿಆರ್​​ಇ ಇನ್‌ಸ್ಪೆಕ್ಟರ್ ಗೀತಾ ಹಾಗೂ ಖಾಸಗಿ ವ್ಯಕ್ತಿ ರಿಚರ್ಡ್ ಅವರನ್ನು ಬಂಧಿಸಲಾಗಿದೆ. ಕೊಳೆಗೇರಿ ನಿಗಮದ ವತಿಯಿಂದ ಮನೆ ಪಡೆಯಲು …

Read More »

ಜಿ.ಬಿ ಸಿಂಡ್ರೋಮ್ ರೋಗದ ಬಗ್ಗೆ ಭಯ ಬೇಡ ; ಮುನ್ನೆಚ್ಚರಿಕೆ ವಹಿಸಿ : ಜಿಪಂ ಸಿಇಒ ರಾಹುಲ್ ಶಿಂಧೆ*

*ಬೆಳಗಾವಿ (ಪೆ.21)*: ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ ಆರೋಗ್ಯ ಇಲಾಖೆಯ “ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮ”ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ಯೂಲೈನ್ ಬೇರಿ ಜಿ.ಬಿ ಸಿಂಡ್ರೋಮ್ ಅಪರೂಪದ ನರ ವೈಜ್ಞಾನಿಕ ಅಸ್ವಸ್ಥತೆಯಾಗಿದ್ದು, ದೇಹದ ಪ್ರತಿರಕ್ಷಣಾ ವ್ಯವಸ್ಥೆಯು ಬಾಹ್ಯ ನರಗಳ ಮೇಲೆ ತಪ್ಪಾಗಿ ದಾಳಿ ಮಾಡುತ್ತದೆ. ಈ ಸ್ಥಿತಿಯು ನರ ದೌರ್ಬಲ್ಯ, ಮರಗಟ್ಟುವಿಕೆ ಮತ್ತು ತೀವ್ರತರವಾದ ಪ್ರಕರಣಗಳಲ್ಲಿ ಪಾರ್ಶ್ವವಾಯುವಿಗೆ ಕಾರಣವಾಗಬಹುದು ಈ ರೋಗದ ಲಕ್ಷಣಗಳು …

Read More »

ಬೆಳಗಾವಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನಾಪ್ ಪ್ರಕರಣ : 24 ಗಂಟೆಯಲ್ಲೇ ಆರೋಪಿಗಳ ಬಂಧನ

ಬೆಳಗಾವಿ : ರಿಯಲ್ ಎಸ್ಟೇಟ್ ಉದ್ಯಮಿ ಅಪಹರಣ ಪ್ರಕರಣ ದಾಖಲಾದ 24 ಗಂಟೆಯ ಒಳಗೆ ಅಪಹರಣಕ್ಕೊಳಗಾದ ವ್ಯಕ್ತಿಯನ್ನು ಪೊಲೀಸರು ರಕ್ಷಿಸಿದ್ದಾರೆ. ಅಪಹರಣ ಮಾಡಿದ್ದ ನಾಲ್ಕು ಜನ ಆರೋಪಿಗಳನ್ನು ಬಂಧಿಸಿದ್ದು, ಕಿಡ್ನಾಪ್ ಪ್ರಕರಣ ಸುಖಾಂತ್ಯವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್​, “ಮೂಡಲಗಿ ತಾಲ್ಲೂಕಿನ ರಾಜಾಪುರ ಗ್ರಾಮದ ಉದ್ಯಮಿ ಬಸವರಾಜ್​ ಅಂಬಿ ಅವರನ್ನು ಕಿಡ್ನಾಪ್ ಮಾಡಲಾಗಿತ್ತು. ಅವರ ಪತ್ತೆಗಾಗಿ ಘಟಪ್ರಭಾ ಪೊಲೀಸರು ಹಾಗೂ ನಿಪ್ಪಾಣಿ …

Read More »

ವ್ಹೀಲ್ ಚೇರ್​ನಲ್ಲಿ ಸಿಎಂ ಸಿದ್ದರಾಮಯ್ಯ ಓಡಾಟ ಈ ಬಾರಿ ಕುಳಿತೇ ಬಜೆಟ್ ಮಂಡಿಸುವ ಸಾಧ್ಯತೆ

ಬೆಂಗಳೂರು: ಮೊಣಕಾಲು ನೋವಿನ ಕಾರಣ ಕಳೆದ 20 ದಿನಗಳಿಂದ ಸಿಎಂ ಸಿದ್ದರಾಮಯ್ಯ ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರವೇ ಉಳಿದಿದ್ದಾರೆ. ಅವರ ಮೊಣಕಾಲಿಗೆ ಬೆಲ್ಟ್ ಹಾಕಲಾಗಿದೆ. ವೈದ್ಯರ ಸಲಹೆಯಂತೆ ಓಡಾಟ ನಿಲ್ಲಿಸಿದ್ದಾರೆ. ಇನ್ನೂ ಆರು ವಾರ ವಿಶ್ರಾಂತಿ ಪಡೆಯಲು ಸಲಹೆ ನೀಡಲಾಗಿದ್ದು, ಈ ಬಾರಿ ತಮ್ಮ 16ನೇ ಆಯವ್ಯಯವನ್ನು ಬಹುತೇಕ ಕುಳಿತುಕೊಂಡೇ ಮಂಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಸಿಎಂ ಕಳೆದ ಮೂರು ವಾರದಿಂದ ಮೊಣಕಾಲಿನ ನೋವಿನಿಂದ ಬಳಲುತ್ತಿದ್ದಾರೆ. ಫೆ.2ರಂದು ಮೊಣಕಾಲು ನೋವಿನ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ …

Read More »

ಗಡ್ಕರಿ ಪ್ರಧಾನಿಯಾದರೆ ಒಳ್ಳೆಯದು: ಸಂತೋಷ್ ಲಾಡ್

ದಾವಣಗೆರೆ: ”ನಿತಿನ್ ಗಡ್ಕರಿಯವರು ಈ ದೇಶದ ಪ್ರಧಾನಿಯಾದರೆ ಒಳ್ಳೆಯದಾಗುತ್ತದೆ. ಬಿಜೆಪಿ ಈ ದೇಶದಲ್ಲಿ ಅಧಿಕಾರ, ಆಡಳಿತದಲ್ಲಿ ಇರಬಾರದು ಎಂಬುದು ನನ್ನ ಅಭಿಪ್ರಾಯ. ಆದರೆ ಜನಮನ್ನಣೆ ಅವರಿಗೆ ಸಿಕ್ಕಿದೆ. ಮುಂದಿನ ನಾಲ್ಕು ವರ್ಷಗಳ ಅವಧಿಯಲ್ಲಿ ಬೇರೆಯವರಿಗೆ ಪ್ರಧಾನಿ ಹುದ್ದೆ ಕೊಟ್ಟರೆ ದೇಶ ಒಂದು ದಿಕ್ಕಿನಲ್ಲಿ ಹೋಗಬಹುದು” ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ದಾವಣಗೆಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ನಾಯಕರನ್ನು ಟೀಕಿಸಿದರೆ ರಾಜ್ಯದಲ್ಲಿ ಸಚಿವರಿಗೆ ಅವರ ಸ್ಥಾನ ಉಳಿಯುತ್ತದೆ …

Read More »

ಸಂಗೊಳ್ಳಿ ರಾಯಣ್ಣ ಮತ್ತು ಬಸವೇಶ್ವರ್ ಸೌಹಾರ್ದ ಸೊಸೈಟಿ ಠೇವಣಿ ಮರಳಿಸಲು ಆಗ್ರಹ

ಸಂಗೊಳ್ಳಿ ರಾಯಣ್ಣ ಮತ್ತು ಬಸವೇಶ್ವರ್ ಸೌಹಾರ್ದ ಸೊಸೈಟಿ ಠೇವಣಿ ಮರಳಿಸಲು ಆಗ್ರಹ ವಾರದೊಳಗಾಗಿ ಸಮಸ್ಯೆ ಬಗೆಹರಿಸದಿದ್ದರೆ ಮಾರ್ಚ್ 3 ರಿಂದ ಹೋರಾಟ – ನ್ಯಾಯವಾದಿ ಎನ್.ಆರ್. ಲಾತೂರ್ ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಸೌಹಾರ್ದ ಸಹಕಾರಿ ಸೊಸೈಟಿ ಮತ್ತು ಬಸವೇಶ್ವರ ಸೌಹಾರ್ದ ಸೊಸೈಟಿಯಲ್ಲಿ ಠೇವಣಿ ಇಟ್ಟಿದ್ದ ಹಣವನ್ನು ಗ್ರಾಹಕರ ನ್ಯಾಯಾಲಯದ ಆದೇಶದಂತೆ ಮರಳಿಸಬೇಕೆಂದು ಗ್ರಾಹಕರು ನ್ಯಾಯವಾದಿಗಳ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು ಬೆಳಗಾವಿಯ ಜಿಲ್ಲಾಧಿಕಾರಿಗಳ …

Read More »